Homeಮುಖಪುಟಕರ್ಪೂರಿ ಠಾಕೂರ್‌ಗೆ 'ಭಾರತ ರತ್ನ' ಘೋಷಣೆ: ಬಿಜೆಪಿಯ ಓಟ್‌ ಬ್ಯಾಂಕ್ ತಂತ್ರ?

ಕರ್ಪೂರಿ ಠಾಕೂರ್‌ಗೆ ‘ಭಾರತ ರತ್ನ’ ಘೋಷಣೆ: ಬಿಜೆಪಿಯ ಓಟ್‌ ಬ್ಯಾಂಕ್ ತಂತ್ರ?

- Advertisement -
- Advertisement -

ಸಮಾಜವಾದಿ ನಾಯಕ, ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ‘ಭಾರತ ರತ್ನ’ ಪ್ರಶಸ್ತಿ ನೀಡಲಾಗುವುದು ಎಂದು ರಾಷ್ಟ್ರಪತಿ ಭವನ ಮಂಗಳವಾರ ಪ್ರಕಟಿಸಿದೆ.

ಕರ್ಪೂರಿ ಠಾಕೂರ್ ಅವರ ಜನ್ಮ ಶತಮಾನೋತ್ಸವ ಆಚರಣೆಯ ಒಂದು ದಿನ ಮೊದಲು ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಅತ್ಯುನ್ನತ ಪ್ರಶಸ್ತಿ ಘೋಷಣೆ ಮಾಡಿದ್ದಾರೆ.

ಸ್ವಾತಂತ್ರ ಹೋರಾಟಗಾರರಾಗಿದ್ದ ಕರ್ಪೂರಿ ಠಾಕೂರ್ ಅವರು, ಶಿಕ್ಷಣ, ರಾಜಕೀಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದರು. ಎರಡು ಬಾರಿ ಬಿಹಾರದ ಮುಖ್ಯಮಂತ್ರಿಯಾಗಿದ್ದರು. ದೇಶದ ಪ್ರಮುಖ ರಾಜಕಾರಣಿಗಳಾದ ಲಾಲು ಪ್ರಸಾದ್ ಯಾದವ್, ಬಿಹಾರ ಸಿಎಂ ನಿತೀಶ್ ಕುಮಾರ್, ರಾಮ್‌ ವಿಲಾಸ್ ಪಾಸ್ವಾನ್ ಹಾಗೂ ಸುನಿಲ್ ಕುಮಾರ್ ಮೋದಿ ರಾಜಕೀಯದಲ್ಲಿ ಕರ್ಪೂರಿ ಠಾಕೂರ್ ಅವರ ಶಿಷ್ಯಂದಿರು.

ಕರ್ಪೂರಿ ಠಾಕೂರ್ ಹುಟ್ಟಿದ್ದು 1924ರ ಜನವರಿ 24ರಂದು. ತಂದೆ ಶ್ರೀ ಕೋಗುಲ್‌ ಠಾಕೂರ್, ತಾಯಿ ರಾಮ್‌ದುಲಾರಿ ದೇವಿ. ಅವರ ತಂದೆ ಕ್ಷೌರಿಕ ವೃತ್ತಿ ಮಾಡುತ್ತಿದ್ದರು. ಕೃಷಿಕರೂ ಆಗಿದ್ದರು.

ಬಿಎ ಪದವಿ ಪಡೆದು ತಮ್ಮ ಹಳ್ಳಿಯಲ್ಲಿ ಶಿಕ್ಷಕರಾಗಿದ್ದ ಠಾಕೂರ್ ಅವರು, ಕ್ವಿಟ್‌ ಇಂಡಿಯಾ ಚಳವಳಿ ಪ್ರಾರಂಭವಾದಾಗ ಅದರಲ್ಲಿ ಪಾಲ್ಗೊಂಡಿದ್ದರು. ಜಯಪ್ರಕಾಶ್ ನಾರಾಯಣ್ ರಚಿಸಿದ್ದ ‘ಆಜಾದ್ ದಾಸ್ತಾ’ದ ಸಕ್ರಿಯ ಸದಸ್ಯರಾಗಿದ್ದರು. ಕ್ವಿಟ್‌ ಇಂಡಿಯಾ ಚಳವಳಿ ಸಂದರ್ಭದಲ್ಲಿ 26 ತಿಂಗಳು ಅವರು ಜೈಲುವಾಸ ಅನುಭವಿಸಿದ್ದರು. ಸ್ವಾತಂತ್ರ್ಯ ಬರುವ ಮೊದಲು ಎರಡು ಸಲ ಹಾಗೂ ಬಂದ ನಂತರ 18 ಸಲ ಅವರು ಜೈಲು ಶಿಕ್ಷೆಗೆ ಒಳಗಾಗಿದ್ದರು.

ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ 1952ರಲ್ಲಿ ಬಿಹಾರದ ತೈಪುರ್ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಠಾಕೂರ್, ಮೊದಲ ಬಾರಿಗೆ ಗೆಲುವು ದಾಖಲಿಸಿದ್ದರು. 1967ರಲ್ಲಿ ಮಹಾಮಾಯಾ ಪ್ರಸಾದ್ ಅವರ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದರು. 1970ರಲ್ಲಿ ಕರ್ಪೂರಿ ಠಾಕೂರ್ ಅವರ ನೇತೃತ್ವದ ಸರ್ಕಾರ ಬಿಹಾರದಲ್ಲಿ ಅಧಿಕಾರಕ್ಕೆ ಬಂದಿತ್ತು.

ತನ್ನ ರಾಜಕೀಯ ಅವಧಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಕರ್ಪೂರಿ ಠಾಕೂರ್ ಹಲವು ಕೊಡುಗೆಗಳನ್ನು ನೀಡಿದ್ದರು. ಆ ಮೂಲಕ ಮಧ್ಯಮ ಮತ್ತು ಬಡ ವರ್ಗದ ಯುವಜನರಿಗೆ ಸಹಾಯ ಮಾಡಿದ್ದರು. ಕರ್ಪೂರಿ ಠಾಕೂರ್ ಅವರು ಮೆಟ್ರಿಕ್ಯುಲೇಷನ್ ತೇರ್ಗಡೆಯಾಗಲು ಇದ್ದ ಇಂಗ್ಲಿಷ್‌ನ ಅಗತ್ಯವನ್ನು ತಪ್ಪಿಸಿದ್ದರು. ಎಂಟನೇ ತರಗತಿಯವರೆಗೆ ಉಚಿತ ಶಿಕ್ಷಣ ಸೌಲಭ್ಯ ಕಲ್ಪಿಸಿದ್ದರು. ಉರ್ದು ಭಾಷೆಗೆ ಬಿಹಾರದಲ್ಲಿ ಎರಡನೇ ಸ್ಥಾನಮಾನ ನೀಡಿದ್ದರು.

ಕರ್ಪೂರಿ ಠಾಕೂರ್ 1978ರಲ್ಲಿ ಬಿಹಾರದ ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಉದ್ಯೋಗದಲ್ಲಿ ದಮನಿತರಿಗೆ ಶೇ 26ರಷ್ಟು ಮೀಸಲಾತಿಯನ್ನು ಜಾರಿಗೆ ತಂದರು. ರಾಜ್ಯದ ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡಲು ವೇತನ ಆಯೋಗದ ಮೂಲಕ ಸಮಾನ ವೇತನ ಪದ್ದತಿ ಜಾರಿಗೆ ತಂದರು. ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸಿದ್ದರು.

ತನ್ನ ಉತ್ತಮ ಕೆಲಸಗಳ ಕಾರಣಕ್ಕೆ ಜನರಿಂದ ‘ಜನ ಸೇವಕ್‌’ ಎಂದು ಬಿರುದು ಪಡೆದಿದ್ದ ಕರ್ಪೂರಿ ಠಾಕೂರ್, 1988ರಲ್ಲಿ ಹೃದಯಾಘಾತದಿಂದ ನಿಧನರಾದರು.

‘ಬಿಜೆಪಿಯ ಓಟ್‌ ಬ್ಯಾಂಕ್ ತಂತ್ರ?

ಕರ್ಪೂರಿ ಠಾಕೂರ್ ಅವರಿಗೆ ರಾಷ್ಟ್ರಪತಿ ‘ಭಾರತ ರತ್ನ’ ಪ್ರಶಸ್ತಿ ಘೋಷಣೆ ಮಾಡಿರುವುದರ ಹಿಂದೆ ಬಿಜೆಪಿಯ ರಾಜಕೀಯ ಲೆಕ್ಕಾಚಾರ ಇರಬಹುದು ಎಂದು ಕೆಲ ಮಾಧ್ಯಮಗಳು ವಿಶ್ಲೇಷಿವೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಪ್ರತಿಪಕ್ಷಗಳ ‘ಇಂಡಿಯಾ ಒಕ್ಕೂಟ’ ಸಾಮಾಜಿಕ ನ್ಯಾಯವನ್ನು ಪ್ರಮುಖ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ಇದಕ್ಕೆ ಪ್ರತ್ಯುತ್ತರ ನೀಡಲು ಬಿಜೆಪಿ ಸಾಮಾಜಿಕ ನ್ಯಾಯದ ಮುಂದಾಳುಗೆ ಪ್ರಶಸ್ತಿ ಘೋಷಣೆ ಮಾಡಿದೆ ಎನ್ನಲಾಗಿದೆ.

ಅಲ್ಲದೆ, ಕರ್ಪೂರಿ ಅವರಿಗೆ ಭಾರತ ರತ್ನ ಘೋಷಣೆ ಮಾಡಿರುವುದರ ಹಿಂದೆ ಅತೀ ಹಿಂದುಳಿದ ವರ್ಗಗಳ ಮತ ಬ್ಯಾಂಕ್ ಸೆಳೆಯುವ ತಂತ್ರವೂ ಅಡಗಿದೆ ಎಂದು ಹೇಳಲಾಗ್ತಿದೆ. ಹಿಂದುಳಿದ ವರ್ಗಗಳ ಮತ ಬ್ಯಾಂಕ್ ಪ್ರಸ್ತುತ  ಇಂಡಿಯಾದ ಒಕ್ಕೂಟದ ಪಕ್ಷಗಳ ಬಳಿಯೇ ಇದೆ. ಅವುಗಳನ್ನು ತಮ್ಮತ್ತ ಸೆಳೆಯುವ ಬಿಜೆಪಿಯ ತಂತ್ರದ ಭಾಗವೇ ಪ್ರಶಸ್ತಿ ಎಂದು ಹೇಳಲಾಗಿದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಶಸ್ತಿ ಘೋಷಣೆಯನ್ನು ಸ್ವಾಗತಿಸಿದ್ದಾರೆ. ಆದರೆ, ಅವರ ಪಕ್ಷ ಜೆಡಿಯುನ ಮಿತ್ರ ಪಕ್ಷ ಆರ್‌ಜೆಡಿ “ಇದು ಬಿಜೆಪಿಯ ರಾಜಕೀಯ ಗಿಮಿಕ್” ಎಂದಿದೆ.

“ಕರ್ಪೂರಿ ಠಾಕೂರ್ ಅವರ 100ನೇ ಜನ್ಮ ಜಯಂತಿಯ ಸಂದರ್ಭದಲ್ಲಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಘೋಷಣೆ ಮಾಡಿರುವುದು ಸಮಾಜದ ದಲಿತರು, ವಂಚಿತ ಮತ್ತು ನಿರ್ಲಕ್ಷಿತ ವರ್ಗಗಳಲ್ಲಿ ಸಕಾರಾತ್ಮಕ ಭಾವನೆಗಳನ್ನು ಮೂಡಿಸಲಿದೆ. ಕರ್ಪೂರಿ ಠಾಕೂರ್‌ಗೆ ಭಾರತ ರತ್ನ ನೀಡಬೇಕೆಂದು ನಾನು ಯಾವಾತ್ತೋ ಒತ್ತಾಯಿಸಿದ್ದೆವು. ಸರ್ಕಾರದ ನಿರ್ಧಾರವು ಸಂತೋಷವನ್ನುಂಟು ಮಾಡಿದೆ” ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ : ನಾವು ಬ್ಯಾರಿಕೇಡ್‌ಗಳನ್ನು ಮುರಿದಿದ್ದೇವೆ, ಆದರೆ ಕಾನೂನನ್ನು ಮೀರುವುದಿಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...