Homeಮುಖಪುಟಎಫ್‌ಟಿಐಐ ಕ್ಯಾಂಪಸ್‌ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಜೈ ಶ್ರೀರಾಮ್ ಘೋಷಣೆ ಕೂಗಿ, ಬ್ಯಾನರ್‌ ಸುಟ್ಟ...

ಎಫ್‌ಟಿಐಐ ಕ್ಯಾಂಪಸ್‌ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಜೈ ಶ್ರೀರಾಮ್ ಘೋಷಣೆ ಕೂಗಿ, ಬ್ಯಾನರ್‌ ಸುಟ್ಟ ಗುಂಪು

- Advertisement -
- Advertisement -

ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಯ ಮರುದಿನ ಮಂಗಳವಾರ ಬಲಪಂಥೀಯ ಗುಂಪೊಂದು ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಫ್‌ಟಿಐಐ) ಕ್ಯಾಂಪಸ್‌ಗೆ ನುಗ್ಗಿ ಮಂದಿರ ನಿರ್ಮಾಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದೆ.

ಈ ಕುರಿತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ಕ್ಯಾಂಪಸ್‌ಗೆ ನುಗ್ಗಿದ ಕೇಸರಿ ಶಾಲು ಧರಿಸಿದ್ದ ವ್ಯಕ್ತಿಗಳು, ವಿದ್ಯಾರ್ಥಿಗಳ ಮೇಲೆ ದೈಹಿಕ ಹಲ್ಲೆ ನಡೆಸಿರುವುದನ್ನು ಮತ್ತು “ಬಾಬರಿಯನ್ನು ನೆನಪಿಸಿಕೊಳ್ಳಿ, ಸಂವಿಧಾನದ ಸಾವು” ಎಂದು ಬರೆಯಲಾಗಿದ್ದ ದೊಡ್ಡ ಬ್ಯಾನರ್‌ಗಳನ್ನು ಸುಟ್ಟು ಹಾಕಿರುವುದನ್ನು ಕಾಣಬಹುದು.

ದುಷ್ಕರ್ಮಿಗಳು ನಮ್ಮ ಮೇಲೆ ದಾಳಿ ನಡೆಸುತ್ತಿದ್ದಾಗ ಸ್ಥಳದಲ್ಲಿ ಪೊಲೀಸರು ಇದ್ದರೂ ತಡೆದಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಕಾಲೇಜಿನ ಭದ್ರತಾ ಸಿಬ್ಬಂದಿ ಕೂಡ ಅವರನ್ನು ತಡೆಯುವ ಪ್ರಯತ್ನ ಮಾಡಿಲ್ಲ ಎಂದು ಹೇಳಿದ್ದಾರೆ. ಎಫ್‌ಟಿಐಐ ವಿದ್ಯಾರ್ಥಿ ಸಂಘಟನೆಯ ಪತ್ರಿಕಾ ಹೇಳಿಕೆಯ ಪ್ರಕಾರ, ಘಟನೆಯಲ್ಲಿ ಕನಿಷ್ಠ ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.

ಸುಮಾರು 20 ರಿಂದ 25 ಉದ್ರೇಕಿತ ಜನರ ಗುಂಪು ಮಧ್ಯಾಹ್ನ 1:30 ರ ಸುಮಾರಿಗೆ ಕ್ಯಾಂಪಸ್‌ಗೆ ನುಗ್ಗಿತ್ತು. ಮೊದಲು ಅವರು ಗೇಟ್ ಬಳಿ ನಿಂತಿದ್ದ ಭದ್ರತಾ ಸಿಬ್ಬಂದಿ ಜೊತೆ ಗಲಾಟೆ ಮಾಡಿದ್ದರು. ಈ ಬಗ್ಗೆ ಕೆಲ ವಿದ್ಯಾರ್ಥಿಗಳು ವಿಚಾರಿಸಲು ಭದ್ರತಾ ಸಿಬ್ಬಂದಿ ಬಳಿ ಹೋದಾಗ ದುಷ್ಕರ್ಮಿಗಳು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಲು ಪ್ರಾರಂಭಿಸಿದರು. ವಿದ್ಯಾರ್ಥಿಗಳನ್ನು ನಿಂದಿಸಿದರು. ನಮ್ಮ ಅಧ್ಯಕ್ಷರಾದ ಮಂಕಪ್ ನೋಕ್ವೋಹಮ್ ಮುಖ್ಯ ಗೇಟ್‌ನ ಕಡೆಗೆ ಹೋದಾಗ ಗುಂಪು ಜೋರಾಗಿ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿತು. ಅಲ್ಲದೆ ಅವರು ನಮ್ಮ ಅಧ್ಯಕ್ಷರಾದ ಮಂಕಪ್ ಹಲ್ಲೆ ಮಾಡಿದರು. ಮಂಕಪ್ ಮೇಲೆ ಹಿಂಸಾತ್ಮಕವಾಗಿ ದಾಳಿ ಮಾಡಿದರು. ಅವರಿಗೆ ಕ್ರೂರವಾಗಿ ಥಳಿಸಿದರು. ಟಿ-ಶರ್ಟ್ ಹರಿದು ಹಾಕಿದರು. ಭದ್ರತಾ ಸಿಬ್ಬಂದಿ ಏನೂ ಮಾಡಲಾಗದೆ ಅಸಹಾಯಕಾರಗಿ ನಿಂತು ನೋಡುತ್ತಿದ್ದರು ಎಂದು ದಾಳಿಯ ಕುರಿತು ಎಫ್‌ಟಿಐಐ ಸ್ಟೂಡೆಂಟ್ಸ್ ಅಸೋಸಿಯೇಷನ್ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಜೈಶ್ರೀರಾಮ್ ಎಂದು ಘೋಷಣೆ ಕೂಗಿದ್ದ ಇದೇ ಗುಂಪು ಜನವರಿ 21ರಂದು ಕಾಲೇಜ್ ಕ್ಯಾಂಪಸ್‌ನ ಗೇಟ್ ಬಳಿ ಜಮಾಯಿಸಿ ದೊಣ್ಣೆಗಳನ್ನು ತೋರಿಸಿ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿತ್ತು. ನಾವು ಹೆಚ್ಚಿನ ಜನರೊಂದಿಗೆ ಬರುತ್ತೇವೆ ಎಂದು ಹೇಳಿತ್ತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಲಾಗಿದೆ. ವಿದ್ಯಾರ್ಥಿಗಳ ಪ್ರಕಾರ, ಜನವರಿ 21ರ ಘಟನೆಯ ಬಗ್ಗೆ ಎಫ್‌ಟಿಐಐನ ಭದ್ರತಾ ಅಧಿಕಾರಿ ಸಂಜಯ್ ಜಾಧವ್ ಮತ್ತು ರಿಜಿಸ್ಟ್ರಾರ್ ಪ್ರತೀಕ್ ಜೈನ್ ಅವರಿಗೆ ತಿಳಿಸಲಾಗಿತ್ತು. ಆದರೆ, ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.

ನಮ್ಮ ಕ್ಯಾಂಪಸ್‌ಗೆ ಹೊರಗಿನವರು ಬಂದು ಹಲ್ಲೆ ಮಾಡುವಾಗ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಮೂಕಪ್ರೇಕ್ಷಕರಾಗಿದ್ದರು. ಇದು ವಿದ್ಯಾರ್ಥಿಗಳ ಬದುಕುವ ಮೂಲಭೂತ ಹಕ್ಕಿನ ಮೇಲಿನ ಘೋರ ದಾಳಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಗಂಭೀರ ವೈಫಲ್ಯವಾಗಿದೆ. ನಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳು ಹಾಗೂ ವಿದ್ಯಾರ್ಥಿಗಳ ಜೀವನದ ಮೇಲಿನ ಇಂತಹ ಭೀಕರ ದಾಳಿಯ ವಿರುದ್ಧ ಎಫ್‌ಟಿಐಐ ವಿದ್ಯಾರ್ಥಿ ಸಂಘವು ಬಲವಾಗಿ ನಿಂತಿದೆ ಎಂದು ಪತ್ರಿಕಾ ಪ್ರಕಟನೆ ತಿಳಿಸಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಎಫ್‌ಟಿಐಐ ಅಧ್ಯಕ್ಷರಾಗಿ ನೇಮಕಗೊಂಡ ನಟ ಆರ್ ಮಾಧವನ್ ಈ ಘಟನೆಯ ಬಗ್ಗೆ ಇನ್ನೂ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿಲ್ಲ.

ಇದನ್ನೂ ಓದಿ : ರಾಮಮಂದಿರ ಉದ್ಘಾಟನೆಯಂದು ಸಂವಿಧಾನದ ಪೀಠಿಕೆ ಹಂಚಿಕೊಂಡ ನಟ, ನಟಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...