Homeಮುಖಪುಟಎಫ್‌ಟಿಐಐ ಕ್ಯಾಂಪಸ್‌ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಜೈ ಶ್ರೀರಾಮ್ ಘೋಷಣೆ ಕೂಗಿ, ಬ್ಯಾನರ್‌ ಸುಟ್ಟ...

ಎಫ್‌ಟಿಐಐ ಕ್ಯಾಂಪಸ್‌ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಜೈ ಶ್ರೀರಾಮ್ ಘೋಷಣೆ ಕೂಗಿ, ಬ್ಯಾನರ್‌ ಸುಟ್ಟ ಗುಂಪು

- Advertisement -
- Advertisement -

ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಯ ಮರುದಿನ ಮಂಗಳವಾರ ಬಲಪಂಥೀಯ ಗುಂಪೊಂದು ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಫ್‌ಟಿಐಐ) ಕ್ಯಾಂಪಸ್‌ಗೆ ನುಗ್ಗಿ ಮಂದಿರ ನಿರ್ಮಾಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದೆ.

ಈ ಕುರಿತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ಕ್ಯಾಂಪಸ್‌ಗೆ ನುಗ್ಗಿದ ಕೇಸರಿ ಶಾಲು ಧರಿಸಿದ್ದ ವ್ಯಕ್ತಿಗಳು, ವಿದ್ಯಾರ್ಥಿಗಳ ಮೇಲೆ ದೈಹಿಕ ಹಲ್ಲೆ ನಡೆಸಿರುವುದನ್ನು ಮತ್ತು “ಬಾಬರಿಯನ್ನು ನೆನಪಿಸಿಕೊಳ್ಳಿ, ಸಂವಿಧಾನದ ಸಾವು” ಎಂದು ಬರೆಯಲಾಗಿದ್ದ ದೊಡ್ಡ ಬ್ಯಾನರ್‌ಗಳನ್ನು ಸುಟ್ಟು ಹಾಕಿರುವುದನ್ನು ಕಾಣಬಹುದು.

ದುಷ್ಕರ್ಮಿಗಳು ನಮ್ಮ ಮೇಲೆ ದಾಳಿ ನಡೆಸುತ್ತಿದ್ದಾಗ ಸ್ಥಳದಲ್ಲಿ ಪೊಲೀಸರು ಇದ್ದರೂ ತಡೆದಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಕಾಲೇಜಿನ ಭದ್ರತಾ ಸಿಬ್ಬಂದಿ ಕೂಡ ಅವರನ್ನು ತಡೆಯುವ ಪ್ರಯತ್ನ ಮಾಡಿಲ್ಲ ಎಂದು ಹೇಳಿದ್ದಾರೆ. ಎಫ್‌ಟಿಐಐ ವಿದ್ಯಾರ್ಥಿ ಸಂಘಟನೆಯ ಪತ್ರಿಕಾ ಹೇಳಿಕೆಯ ಪ್ರಕಾರ, ಘಟನೆಯಲ್ಲಿ ಕನಿಷ್ಠ ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.

ಸುಮಾರು 20 ರಿಂದ 25 ಉದ್ರೇಕಿತ ಜನರ ಗುಂಪು ಮಧ್ಯಾಹ್ನ 1:30 ರ ಸುಮಾರಿಗೆ ಕ್ಯಾಂಪಸ್‌ಗೆ ನುಗ್ಗಿತ್ತು. ಮೊದಲು ಅವರು ಗೇಟ್ ಬಳಿ ನಿಂತಿದ್ದ ಭದ್ರತಾ ಸಿಬ್ಬಂದಿ ಜೊತೆ ಗಲಾಟೆ ಮಾಡಿದ್ದರು. ಈ ಬಗ್ಗೆ ಕೆಲ ವಿದ್ಯಾರ್ಥಿಗಳು ವಿಚಾರಿಸಲು ಭದ್ರತಾ ಸಿಬ್ಬಂದಿ ಬಳಿ ಹೋದಾಗ ದುಷ್ಕರ್ಮಿಗಳು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಲು ಪ್ರಾರಂಭಿಸಿದರು. ವಿದ್ಯಾರ್ಥಿಗಳನ್ನು ನಿಂದಿಸಿದರು. ನಮ್ಮ ಅಧ್ಯಕ್ಷರಾದ ಮಂಕಪ್ ನೋಕ್ವೋಹಮ್ ಮುಖ್ಯ ಗೇಟ್‌ನ ಕಡೆಗೆ ಹೋದಾಗ ಗುಂಪು ಜೋರಾಗಿ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿತು. ಅಲ್ಲದೆ ಅವರು ನಮ್ಮ ಅಧ್ಯಕ್ಷರಾದ ಮಂಕಪ್ ಹಲ್ಲೆ ಮಾಡಿದರು. ಮಂಕಪ್ ಮೇಲೆ ಹಿಂಸಾತ್ಮಕವಾಗಿ ದಾಳಿ ಮಾಡಿದರು. ಅವರಿಗೆ ಕ್ರೂರವಾಗಿ ಥಳಿಸಿದರು. ಟಿ-ಶರ್ಟ್ ಹರಿದು ಹಾಕಿದರು. ಭದ್ರತಾ ಸಿಬ್ಬಂದಿ ಏನೂ ಮಾಡಲಾಗದೆ ಅಸಹಾಯಕಾರಗಿ ನಿಂತು ನೋಡುತ್ತಿದ್ದರು ಎಂದು ದಾಳಿಯ ಕುರಿತು ಎಫ್‌ಟಿಐಐ ಸ್ಟೂಡೆಂಟ್ಸ್ ಅಸೋಸಿಯೇಷನ್ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಜೈಶ್ರೀರಾಮ್ ಎಂದು ಘೋಷಣೆ ಕೂಗಿದ್ದ ಇದೇ ಗುಂಪು ಜನವರಿ 21ರಂದು ಕಾಲೇಜ್ ಕ್ಯಾಂಪಸ್‌ನ ಗೇಟ್ ಬಳಿ ಜಮಾಯಿಸಿ ದೊಣ್ಣೆಗಳನ್ನು ತೋರಿಸಿ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿತ್ತು. ನಾವು ಹೆಚ್ಚಿನ ಜನರೊಂದಿಗೆ ಬರುತ್ತೇವೆ ಎಂದು ಹೇಳಿತ್ತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಲಾಗಿದೆ. ವಿದ್ಯಾರ್ಥಿಗಳ ಪ್ರಕಾರ, ಜನವರಿ 21ರ ಘಟನೆಯ ಬಗ್ಗೆ ಎಫ್‌ಟಿಐಐನ ಭದ್ರತಾ ಅಧಿಕಾರಿ ಸಂಜಯ್ ಜಾಧವ್ ಮತ್ತು ರಿಜಿಸ್ಟ್ರಾರ್ ಪ್ರತೀಕ್ ಜೈನ್ ಅವರಿಗೆ ತಿಳಿಸಲಾಗಿತ್ತು. ಆದರೆ, ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.

ನಮ್ಮ ಕ್ಯಾಂಪಸ್‌ಗೆ ಹೊರಗಿನವರು ಬಂದು ಹಲ್ಲೆ ಮಾಡುವಾಗ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಮೂಕಪ್ರೇಕ್ಷಕರಾಗಿದ್ದರು. ಇದು ವಿದ್ಯಾರ್ಥಿಗಳ ಬದುಕುವ ಮೂಲಭೂತ ಹಕ್ಕಿನ ಮೇಲಿನ ಘೋರ ದಾಳಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಗಂಭೀರ ವೈಫಲ್ಯವಾಗಿದೆ. ನಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳು ಹಾಗೂ ವಿದ್ಯಾರ್ಥಿಗಳ ಜೀವನದ ಮೇಲಿನ ಇಂತಹ ಭೀಕರ ದಾಳಿಯ ವಿರುದ್ಧ ಎಫ್‌ಟಿಐಐ ವಿದ್ಯಾರ್ಥಿ ಸಂಘವು ಬಲವಾಗಿ ನಿಂತಿದೆ ಎಂದು ಪತ್ರಿಕಾ ಪ್ರಕಟನೆ ತಿಳಿಸಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಎಫ್‌ಟಿಐಐ ಅಧ್ಯಕ್ಷರಾಗಿ ನೇಮಕಗೊಂಡ ನಟ ಆರ್ ಮಾಧವನ್ ಈ ಘಟನೆಯ ಬಗ್ಗೆ ಇನ್ನೂ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿಲ್ಲ.

ಇದನ್ನೂ ಓದಿ : ರಾಮಮಂದಿರ ಉದ್ಘಾಟನೆಯಂದು ಸಂವಿಧಾನದ ಪೀಠಿಕೆ ಹಂಚಿಕೊಂಡ ನಟ, ನಟಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...