Homeಮುಖಪುಟಎಫ್‌ಟಿಐಐ ಕ್ಯಾಂಪಸ್‌ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಜೈ ಶ್ರೀರಾಮ್ ಘೋಷಣೆ ಕೂಗಿ, ಬ್ಯಾನರ್‌ ಸುಟ್ಟ...

ಎಫ್‌ಟಿಐಐ ಕ್ಯಾಂಪಸ್‌ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಜೈ ಶ್ರೀರಾಮ್ ಘೋಷಣೆ ಕೂಗಿ, ಬ್ಯಾನರ್‌ ಸುಟ್ಟ ಗುಂಪು

- Advertisement -
- Advertisement -

ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಯ ಮರುದಿನ ಮಂಗಳವಾರ ಬಲಪಂಥೀಯ ಗುಂಪೊಂದು ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಫ್‌ಟಿಐಐ) ಕ್ಯಾಂಪಸ್‌ಗೆ ನುಗ್ಗಿ ಮಂದಿರ ನಿರ್ಮಾಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದೆ.

ಈ ಕುರಿತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ಕ್ಯಾಂಪಸ್‌ಗೆ ನುಗ್ಗಿದ ಕೇಸರಿ ಶಾಲು ಧರಿಸಿದ್ದ ವ್ಯಕ್ತಿಗಳು, ವಿದ್ಯಾರ್ಥಿಗಳ ಮೇಲೆ ದೈಹಿಕ ಹಲ್ಲೆ ನಡೆಸಿರುವುದನ್ನು ಮತ್ತು “ಬಾಬರಿಯನ್ನು ನೆನಪಿಸಿಕೊಳ್ಳಿ, ಸಂವಿಧಾನದ ಸಾವು” ಎಂದು ಬರೆಯಲಾಗಿದ್ದ ದೊಡ್ಡ ಬ್ಯಾನರ್‌ಗಳನ್ನು ಸುಟ್ಟು ಹಾಕಿರುವುದನ್ನು ಕಾಣಬಹುದು.

ದುಷ್ಕರ್ಮಿಗಳು ನಮ್ಮ ಮೇಲೆ ದಾಳಿ ನಡೆಸುತ್ತಿದ್ದಾಗ ಸ್ಥಳದಲ್ಲಿ ಪೊಲೀಸರು ಇದ್ದರೂ ತಡೆದಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಕಾಲೇಜಿನ ಭದ್ರತಾ ಸಿಬ್ಬಂದಿ ಕೂಡ ಅವರನ್ನು ತಡೆಯುವ ಪ್ರಯತ್ನ ಮಾಡಿಲ್ಲ ಎಂದು ಹೇಳಿದ್ದಾರೆ. ಎಫ್‌ಟಿಐಐ ವಿದ್ಯಾರ್ಥಿ ಸಂಘಟನೆಯ ಪತ್ರಿಕಾ ಹೇಳಿಕೆಯ ಪ್ರಕಾರ, ಘಟನೆಯಲ್ಲಿ ಕನಿಷ್ಠ ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.

ಸುಮಾರು 20 ರಿಂದ 25 ಉದ್ರೇಕಿತ ಜನರ ಗುಂಪು ಮಧ್ಯಾಹ್ನ 1:30 ರ ಸುಮಾರಿಗೆ ಕ್ಯಾಂಪಸ್‌ಗೆ ನುಗ್ಗಿತ್ತು. ಮೊದಲು ಅವರು ಗೇಟ್ ಬಳಿ ನಿಂತಿದ್ದ ಭದ್ರತಾ ಸಿಬ್ಬಂದಿ ಜೊತೆ ಗಲಾಟೆ ಮಾಡಿದ್ದರು. ಈ ಬಗ್ಗೆ ಕೆಲ ವಿದ್ಯಾರ್ಥಿಗಳು ವಿಚಾರಿಸಲು ಭದ್ರತಾ ಸಿಬ್ಬಂದಿ ಬಳಿ ಹೋದಾಗ ದುಷ್ಕರ್ಮಿಗಳು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಲು ಪ್ರಾರಂಭಿಸಿದರು. ವಿದ್ಯಾರ್ಥಿಗಳನ್ನು ನಿಂದಿಸಿದರು. ನಮ್ಮ ಅಧ್ಯಕ್ಷರಾದ ಮಂಕಪ್ ನೋಕ್ವೋಹಮ್ ಮುಖ್ಯ ಗೇಟ್‌ನ ಕಡೆಗೆ ಹೋದಾಗ ಗುಂಪು ಜೋರಾಗಿ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿತು. ಅಲ್ಲದೆ ಅವರು ನಮ್ಮ ಅಧ್ಯಕ್ಷರಾದ ಮಂಕಪ್ ಹಲ್ಲೆ ಮಾಡಿದರು. ಮಂಕಪ್ ಮೇಲೆ ಹಿಂಸಾತ್ಮಕವಾಗಿ ದಾಳಿ ಮಾಡಿದರು. ಅವರಿಗೆ ಕ್ರೂರವಾಗಿ ಥಳಿಸಿದರು. ಟಿ-ಶರ್ಟ್ ಹರಿದು ಹಾಕಿದರು. ಭದ್ರತಾ ಸಿಬ್ಬಂದಿ ಏನೂ ಮಾಡಲಾಗದೆ ಅಸಹಾಯಕಾರಗಿ ನಿಂತು ನೋಡುತ್ತಿದ್ದರು ಎಂದು ದಾಳಿಯ ಕುರಿತು ಎಫ್‌ಟಿಐಐ ಸ್ಟೂಡೆಂಟ್ಸ್ ಅಸೋಸಿಯೇಷನ್ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಜೈಶ್ರೀರಾಮ್ ಎಂದು ಘೋಷಣೆ ಕೂಗಿದ್ದ ಇದೇ ಗುಂಪು ಜನವರಿ 21ರಂದು ಕಾಲೇಜ್ ಕ್ಯಾಂಪಸ್‌ನ ಗೇಟ್ ಬಳಿ ಜಮಾಯಿಸಿ ದೊಣ್ಣೆಗಳನ್ನು ತೋರಿಸಿ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿತ್ತು. ನಾವು ಹೆಚ್ಚಿನ ಜನರೊಂದಿಗೆ ಬರುತ್ತೇವೆ ಎಂದು ಹೇಳಿತ್ತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಲಾಗಿದೆ. ವಿದ್ಯಾರ್ಥಿಗಳ ಪ್ರಕಾರ, ಜನವರಿ 21ರ ಘಟನೆಯ ಬಗ್ಗೆ ಎಫ್‌ಟಿಐಐನ ಭದ್ರತಾ ಅಧಿಕಾರಿ ಸಂಜಯ್ ಜಾಧವ್ ಮತ್ತು ರಿಜಿಸ್ಟ್ರಾರ್ ಪ್ರತೀಕ್ ಜೈನ್ ಅವರಿಗೆ ತಿಳಿಸಲಾಗಿತ್ತು. ಆದರೆ, ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.

ನಮ್ಮ ಕ್ಯಾಂಪಸ್‌ಗೆ ಹೊರಗಿನವರು ಬಂದು ಹಲ್ಲೆ ಮಾಡುವಾಗ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಮೂಕಪ್ರೇಕ್ಷಕರಾಗಿದ್ದರು. ಇದು ವಿದ್ಯಾರ್ಥಿಗಳ ಬದುಕುವ ಮೂಲಭೂತ ಹಕ್ಕಿನ ಮೇಲಿನ ಘೋರ ದಾಳಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಗಂಭೀರ ವೈಫಲ್ಯವಾಗಿದೆ. ನಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳು ಹಾಗೂ ವಿದ್ಯಾರ್ಥಿಗಳ ಜೀವನದ ಮೇಲಿನ ಇಂತಹ ಭೀಕರ ದಾಳಿಯ ವಿರುದ್ಧ ಎಫ್‌ಟಿಐಐ ವಿದ್ಯಾರ್ಥಿ ಸಂಘವು ಬಲವಾಗಿ ನಿಂತಿದೆ ಎಂದು ಪತ್ರಿಕಾ ಪ್ರಕಟನೆ ತಿಳಿಸಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಎಫ್‌ಟಿಐಐ ಅಧ್ಯಕ್ಷರಾಗಿ ನೇಮಕಗೊಂಡ ನಟ ಆರ್ ಮಾಧವನ್ ಈ ಘಟನೆಯ ಬಗ್ಗೆ ಇನ್ನೂ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿಲ್ಲ.

ಇದನ್ನೂ ಓದಿ : ರಾಮಮಂದಿರ ಉದ್ಘಾಟನೆಯಂದು ಸಂವಿಧಾನದ ಪೀಠಿಕೆ ಹಂಚಿಕೊಂಡ ನಟ, ನಟಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...