HomeಮುಖಪುಟINDIA ಮೈತ್ರಿ ಕೂಟದಲ್ಲಿ ಬಿರುಕು: ಬಂಗಾಳದಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧೆ; ಮಮತಾ ಘೋಷಣೆ

INDIA ಮೈತ್ರಿ ಕೂಟದಲ್ಲಿ ಬಿರುಕು: ಬಂಗಾಳದಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧೆ; ಮಮತಾ ಘೋಷಣೆ

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಹೋರಾಡಲಿದೆ ಎಂದು ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಪ್ರತಿಪಕ್ಷಗಳ INDIA ಮೈತ್ರಿಕೂಟಕ್ಕೆ ಇದು ದೊಡ್ಡ ಹಿನ್ನೆಡೆಯಾಗಿದ್ದು, ಬಂಗಾಳದಲ್ಲಿ ಮೈತ್ರಿ ಬಾಗಿಲು ಮುಚ್ಚಿದೆ ಎಂದು ಹೇಳಲಾಗುತ್ತಿದೆ.

ನಾನು ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ, ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಹೋರಾಡುತ್ತೇವೆ ಎಂದು ನಾನು ಯಾವಾಗಲೂ ಹೇಳುತ್ತೇನೆ. ನಮ್ಮದು ಜಾತ್ಯತೀತ ಪಕ್ಷ ಮತ್ತು ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಬಿಜೆಪಿಯನ್ನು ಸೋಲಿಸುತ್ತೇವೆ. ನಾನು ಅನೇಕ ಪ್ರಸ್ತಾಪಗಳನ್ನು ನೀಡಿದ್ದೇನೆ ಆದರೆ ಅವರು ಅವುಗಳನ್ನು ಮೊದಲಿನಿಂದಲೂ ತಿರಸ್ಕರಿಸಿದರು. ರಾಹುಲ್ ಗಾಂಧಿಯವರ ನ್ಯಾಯ ಯಾತ್ರೆಯು ಬಂಗಾಳದ ಮೂಲಕ ಹಾದುಹೋಗುವ ಬಗ್ಗೆ ತನಗೆ ತಿಳಿಸಲಾಗಿಲ್ಲ ಎಂದು ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನಾನು ಇಂಡಿಯಾ ಬ್ಲಾಕ್‌ನ ಭಾಗವಾಗಿದ್ದರೂ ಸೌಜನ್ಯಕ್ಕಾಗಿ ಪಶ್ಚಿಮ ಬಂಗಾಳಕ್ಕೆ ಬರುವುದಾಗಿ ಅವರು ನನಗೆ ತಿಳಿಸಿಲ್ಲ, ಹಾಗಾಗಿ ಬಂಗಾಳದ ಮಟ್ಟಿಗೆ ನನಗೆ ಯಾವುದೇ ಸಂಬಂಧವಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಏನು ಮಾಡಬೇಕೆಂದು ನಾವು ನಿರ್ಧರಿಸುತ್ತೇವೆ. ನಮ್ಮದು ಜಾತ್ಯತೀತ ಪಕ್ಷ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಬಂಗಾಳ ರಾಜ್ಯ ಘಟಕದ ಮುಖ್ಯಸ್ಥ ಅಧೀರ್ ರಂಜನ್ ಚೌದರಿ ಅವರು ಬಂಗಾಳದ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ನಂತರ ತೃಣಮೂಲ ಮತ್ತು ಕಾಂಗ್ರೆಸ್‌ನಲ್ಲಿ ಬಿರುಕು ಕಾಣಿಸಿಕೊಂಡಿತ್ತು.  ಅಧೀರ್ ಚೌಧರಿ ಅವರು 2011ರ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್‌ನ ದಯೆಯಿಂದ ಅಧಿಕಾರಕ್ಕೆ ಬಂದರು. ಈ ಬಾರಿ ಮಮತಾ ಬ್ಯಾನರ್ಜಿ ಕೃಪೆಯಿಂದ ಚುನಾವಣೆ ನಡೆಯುವುದಿಲ್ಲ. ಚುನಾವಣೆಯನ್ನು ಹೇಗೆ ಎದುರಿಸಬೇಕೆಂದು ಕಾಂಗ್ರೆಸ್ ಪಕ್ಷಕ್ಕೆ ತಿಳಿದಿದೆ. ಮಮತಾ ಬ್ಯಾನರ್ಜಿ ಅವಕಾಶವಾದಿ ಎಂದು ಹೇಳಿದ್ದರು.

ಭಾರತ್‌ ಜೋಡೋ ನ್ಯಾಯ ಯಾತ್ರೆ ಹಿನ್ನೆಲೆ ಅಸ್ಸಾಂನಲ್ಲಿರುವ ರಾಹುಲ್ ಗಾಂಧಿ, ಅಧೀರ್‌ ರಂಜನ್‌ ಚೌಧರಿಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ ಡ್ಯಾಮೇಜ್‌ ಕಂಟ್ರೋಲ್‌ಗೆ ಯತ್ನಿಸಿದ್ದರು. ಟಿಎಂಸಿ ಮುಖ್ಯಸ್ಥರೊಂದಿಗೆ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಯುತ್ತಿದೆ, ಈ ಬಗ್ಗೆ ನಾನು ಇಲ್ಲಿ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಆದರೆ ಮಮತಾ ಬ್ಯಾನರ್ಜಿ ನನಗೆ ಮತ್ತು ನಮ್ಮ ಪಕ್ಷಕ್ಕೆ ತುಂಬಾ ಹತ್ತಿರವಾಗಿದ್ದಾರೆ. ಕೆಲವೊಮ್ಮೆ ನಮ್ಮ ನಾಯಕರು ಏನಾದರೂ ಹೇಳುತ್ತಾರೆ, ಅವರ ನಾಯಕರು ಕೂಡ ಏನಾದರೊಂದು ಹೇಳುತ್ತಾರೆ, ಈ ಹೇಳಿಕೆಗಳು ಮುಂದುವರಿಯುತ್ತದೆ. ಇದು ಸಹಜ ಎಂದು ಹೇಳಿದ್ದರು.

ತೃಣಮೂಲ ಕಾಂಗ್ರೆಸ್ ಬಂಗಾಳದ 42 ಸ್ಥಾನಗಳಲ್ಲಿ ಗರಿಷ್ಠ ಮೂರು ಲೋಕಸಭಾ ಸ್ಥಾನಗಳನ್ನು ಕಾಂಗ್ರೆಸ್‌ಗೆ ನೀಡಲು ಸಿದ್ಧವಾಗಿತ್ತು ಎಂದು ವರದಿಯಾಗಿದೆ. 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದರೆ, ಟಿಎಂಸಿ 22 ಸ್ಥಾನಗಳನ್ನು ಗೆದ್ದಿತ್ತು.

ಇದನ್ನು ಓದಿ: ಅಸ್ಸಾಂನಲ್ಲಿ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...