Homeಮುಖಪುಟಬಾಬರಿ ಮಸೀದಿ ಧ್ವಂಸದ ದಿನ 'ಸಂಭ್ರಮಾಚರಣೆ' ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ...

ಬಾಬರಿ ಮಸೀದಿ ಧ್ವಂಸದ ದಿನ ‘ಸಂಭ್ರಮಾಚರಣೆ’ ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ ಅಧಿಕಾರಿಯ ಪೋಸ್ಟ್‌…

- Advertisement -
- Advertisement -

ಮಹಾರಾಷ್ಟ್ರದ ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮನೀಶಾ ಪಾಟಂಕರ್ ಮ್ಹೈಸ್ಕರ್ ಅವರು ತಮ್ಮ ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದಾರೆ. ಅವರು ಮತ್ತು 1992ರ ಬ್ಯಾಚ್‌ನ ಇತರ ಐಎಎಸ್ ತರಬೇತಿ ಅಧಿಕಾರಿಗಳು ಬಾಬರಿ ಮಸೀದಿ ಧ್ವಂಸಗೊಂಡ ನಂತರ ಮಸ್ಸೂರಿಯಲ್ಲಿ ರಾತ್ರಿಯನ್ನು ಹೇಗೆ ಸಂಭ್ರಮಿಸಿದ್ದರು ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದರು.

ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ವೇಳೆ ಅಧಿಕಾರಿ ಈ ಪೋಸ್ಟ್‌ನ್ನು ಮಾಡಿದ್ದಾರೆ. ಪೋಸ್ಟ್‌ನ್ನು ‘ಜೈ ಶ್ರೀ ರಾಮ್’ ಘೋಷಣೆಯೊಂದಿಗೆ ಪ್ರಾರಂಭಿಸಲಾಗಿತ್ತು ಮತ್ತು ಈಗ ಅವರ ಜೀವನವು ಪರಿಪೂರ್ಣವಾಗಿದೆ ಎಂದು ಹೇಳಿದ್ದಾರೆ.

ಡಿಸೆಂಬರ್ 6 ರಂದು ಮಸ್ಸೂರಿಯಲ್ಲಿ ಹೆಚ್ಚು ಚಳಿಯಿತ್ತು. 1992ರ ಬ್ಯಾಚ್‌ನ ಐಎಎಸ್ ಅಧಿಕಾರಿಗಳು ಅಲ್ಲಿ ತರಬೇತಿಯಲ್ಲಿದ್ದೆವು. ಅಯೋಧ್ಯೆಯ ರಾಮ ಜನ್ಮ ಭೂಮಿಯಲ್ಲಿ ನಡೆಯುತ್ತಿರುವ  ಬೆಳವಣಿಗೆಗಳ ಬಗ್ಗೆ ನಮಗೆ ಮಾಹಿತಿ ಸಿಗುತ್ತಿತ್ತು. ಆಗ ನಮ್ಮ ಸಂಸ್ಥೆಯಲ್ಲಿ ರಹಸ್ಯ ಸಭೆ ನಡೆದಿತ್ತು. ಅದಕ್ಕೆ ಕೇವಲ ಆಹ್ವಾನಿತರಿಗೆ ಮಾತ್ರ ಪ್ರವೇಶವಿತ್ತು. ನನಗೆ ನಾಗ್ಪುರದ ನಂಟು ಇದ್ದ ಕಾರಣ ಆಹ್ವಾನ ಸಿಕ್ಕಿತ್ತು. ಆ ಸಭೆಯಲ್ಲಿ ಕೆಲವರು ಜೈ ಶ್ರೀ ರಾಮ್ ಎಂದು ಘೋಷಣೆಗಳನ್ನು ಕೂಗುತ್ತಿದ್ದರು ಮತ್ತು ಪೇಡಾಗಳನ್ನು ವಿತರಿಸಲಾಯಿತು. ಒಂದು ಫುಲ್ ಕೇಸರ್ ಪೇಡಾ ತಿಂದಿದ್ದು ನೆನಪಿದೆ. ಅಯೋಧ್ಯೆಯಲ್ಲಿ ನಡೆದ ಘಟನೆಗಳು ಅತ್ಯಂತ ಸಕಾರಾತ್ಮಕ, ಅತ್ಯಂತ ಶಕ್ತಿಯುತ ಮತ್ತು ಅತ್ಯಂತ ಮಂಗಳಕರವಾದ ಯಾವುದೋ ಒಂದರ ಆರಂಭ ಎಂದು ನನಗೆ ತಿಳಿದಿತ್ತು ಎಂದು ಬರೆದುಕೊಂಡಿದ್ದಾರೆ.

ಸಭೆಯ ಸುದ್ದಿ ಸೋರಿಕೆಯಾದಾಗ, ಅವರಿಗೆ ನೋಟಿಸ್ ನೀಡಲಾಗಿದೆ ಮತ್ತು ಘಟನೆಯನ್ನು ಪ್ರಮುಖ ಪತ್ರಿಕೆಯ ಮೊದಲ ಪುಟದಲ್ಲಿ ವರದಿ ಮಾಡಲಾಗಿದೆ. “ಐಎಎಸ್‌ನಲ್ಲಿ ಕೋಮುವಾದಿಗಳು ನುಸುಳುತ್ತಿದ್ದಾರೆ’ ಎಂದು ವರದಿಯಲ್ಲಿ ಹೇಳಲಾಗಿದೆ. ದೇವಾಲಯದ ಪ್ರತಿಷ್ಠಾಪನೆಯ ಈ ಸಮಾರಂಭದ ಸಂದರ್ಭದಲ್ಲಿ ನಾನು ಮತ್ತೊಂದು ಪೇಡಾವನ್ನು ತಿಂದಿದ್ದೇನೆ. ನಾಳೆ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣಪ್ರತಿಷ್ಠೆ ನಡೆಯಲಿದೆ. ಇದಕ್ಕೆ ಮುನ್ನಾದಿನವಾದ ಇಂದು, ನಾನು ಇನ್ನೊಂದು ಕೇಸರಿ ಪೇಡಾವನ್ನು ತಿನ್ನುವಾಗ ಡಿಸೆಂಬರ್ 6ರ ಮೂಲ ಕ್ಷಣ ಮತ್ತು ಅತ್ಯಂತ ಸಕಾರಾತ್ಮಕ, ಮಂಗಳಕರವಾದ ಶಕ್ತಿಯುತ ಭಾವನೆಯನ್ನು ನೆನಪಿಸಿಕೊಂಡೆ ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಮಾಜಿ ಐಎಎಸ್ ಅಧಿಕಾರಿ ಎಂ.ಜಿ.ದೇವಸಹಾಯಂ, ಜಾತ್ಯತೀತತೆಯು ಸಂವಿಧಾನದ ಮೂಲಭೂತ ತತ್ವ ಮತ್ತು ಮೂಲ ರಚನೆಯಾಗಿದೆ. ಕೋಮುವಾದಿಯಾಗಿ ನಡೆದುಕೊಂಡು ಬಾಬರಿ ಮಸೀದಿ ಧ್ವಂಸವನ್ನು ಆಚರಿಸುವ ಮೂಲಕ ಆಕೆ ತನ್ನ ಪ್ರತಿಜ್ಞೆಯನ್ನು ಉಲ್ಲಂಘಿಸಿದ್ದಾಳೆ. ದೇವಸ್ಥಾನವನ್ನು ಪ್ರಶಂಸಿಸುವುದು ಒಂದು ವಿಷಯ, ಆದರೆ 30 ವರ್ಷಗಳ ನಂತರ ಕೆಡವಿದ್ದನ್ನು ನೆನಪಿಸಿಕೊಳ್ಳುವುದು ಮತ್ತು ಆಚರಿಸುವುದು ಅಪರಾಧ. ಉನ್ನತ ಅಧಿಕಾರಿಯ ಸ್ಥಾನದಲ್ಲಿರಲು ಆಕೆಗೆ ಯಾವುದೇ ನೈತಿಕತೆಯಿಲ್ಲ. ಅವರು ಕೆಲಸ ಮಾಡುತ್ತಿರುವ ರಾಜ್ಯದಲ್ಲಿ ಹಲವಾರು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಇದ್ದಾರೆ. ರಾಜಕಾರಣಿಗಳನ್ನು ಲೆಕ್ಕಿಸದೆ, ನಾಗರಿಕ ಸೇವೆಕರು ತಟಸ್ಥವಾಗಿರಬೇಕು. ಕೋಮುವಾದಿಯಲ್ಲದವರಾಗಿರಬೇಕು ಮತ್ತು ಜಾತ್ಯತೀತವಾಗಿರಬೇಕು. ಅವರು ಐಎಎಸ್‌ ಹುದ್ದೆ ಮತ್ತು ಭಾರತದ ಸಂವಿಧಾನವನ್ನು ಅವಮಾನಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪೋಸ್ಟ್‌ ವೈರಲ್‌ ಆಗುತ್ತಿದ್ದಂತೆ ಐಎಎಸ್‌ ಅಧಿಕಾರಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇಂತಹ ಮನಸ್ಥಿತಿಯ ಅಧಿಕಾರಿಗಳು ತನ್ನ ವೃತ್ತಿ ಜೀವನದಲ್ಲಿ ಹೇಗೆ ಕಾರ್ಯ ನಿರ್ವಹಿಸಿರಬಹುದು ಎಂದು ಸಾಮಾಜಿಕ ಜಾಲತಾಣಗಳ ಬಳಕೆದಾರರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಎನ್‍ಡಿಟಿವಿಯ ಮುಂಬೈ ಕಚೇರಿಯ ಮಾಜಿ ಮುಖ್ಯಸ್ಥ ಸೋಹಿತ್ ಮಿಶ್ರಾ ಪ್ರತಿಕ್ರಿಯಿಸಿದ್ದು, ಮನೀಷಾ ಅವರ ಪೋಸ್ಟ್‌ನ್ನು ಖಂಡಿಸಿದ್ದಾರೆ. ಬಹುಸಂಖ್ಯಾತರ ಪರವಾಗಿರುವುದು ಸಾರ್ವಜನಿಕ ಸೇವೆಯಲ್ಲಿರುವವರಿಗೆ ಎಷ್ಟು ಸೂಕ್ತ ಎಂದು ಪ್ರಶ‍್ನಿಸಿದ್ದಾರೆ.

ಇದನ್ನು ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ ವೇಳೆ ಅಸ್ಸಾಂನಲ್ಲಿ ಭದ್ರತಾ ಸಮಸ್ಯೆ: ಅಮಿತ್‌ ಶಾಗೆ ಪತ್ರ ಬರೆದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...