Homeಮುಖಪುಟಬಾಬರಿ ಮಸೀದಿ ಧ್ವಂಸದ ದಿನ 'ಸಂಭ್ರಮಾಚರಣೆ' ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ...

ಬಾಬರಿ ಮಸೀದಿ ಧ್ವಂಸದ ದಿನ ‘ಸಂಭ್ರಮಾಚರಣೆ’ ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ ಅಧಿಕಾರಿಯ ಪೋಸ್ಟ್‌…

- Advertisement -
- Advertisement -

ಮಹಾರಾಷ್ಟ್ರದ ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮನೀಶಾ ಪಾಟಂಕರ್ ಮ್ಹೈಸ್ಕರ್ ಅವರು ತಮ್ಮ ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದಾರೆ. ಅವರು ಮತ್ತು 1992ರ ಬ್ಯಾಚ್‌ನ ಇತರ ಐಎಎಸ್ ತರಬೇತಿ ಅಧಿಕಾರಿಗಳು ಬಾಬರಿ ಮಸೀದಿ ಧ್ವಂಸಗೊಂಡ ನಂತರ ಮಸ್ಸೂರಿಯಲ್ಲಿ ರಾತ್ರಿಯನ್ನು ಹೇಗೆ ಸಂಭ್ರಮಿಸಿದ್ದರು ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದರು.

ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ವೇಳೆ ಅಧಿಕಾರಿ ಈ ಪೋಸ್ಟ್‌ನ್ನು ಮಾಡಿದ್ದಾರೆ. ಪೋಸ್ಟ್‌ನ್ನು ‘ಜೈ ಶ್ರೀ ರಾಮ್’ ಘೋಷಣೆಯೊಂದಿಗೆ ಪ್ರಾರಂಭಿಸಲಾಗಿತ್ತು ಮತ್ತು ಈಗ ಅವರ ಜೀವನವು ಪರಿಪೂರ್ಣವಾಗಿದೆ ಎಂದು ಹೇಳಿದ್ದಾರೆ.

ಡಿಸೆಂಬರ್ 6 ರಂದು ಮಸ್ಸೂರಿಯಲ್ಲಿ ಹೆಚ್ಚು ಚಳಿಯಿತ್ತು. 1992ರ ಬ್ಯಾಚ್‌ನ ಐಎಎಸ್ ಅಧಿಕಾರಿಗಳು ಅಲ್ಲಿ ತರಬೇತಿಯಲ್ಲಿದ್ದೆವು. ಅಯೋಧ್ಯೆಯ ರಾಮ ಜನ್ಮ ಭೂಮಿಯಲ್ಲಿ ನಡೆಯುತ್ತಿರುವ  ಬೆಳವಣಿಗೆಗಳ ಬಗ್ಗೆ ನಮಗೆ ಮಾಹಿತಿ ಸಿಗುತ್ತಿತ್ತು. ಆಗ ನಮ್ಮ ಸಂಸ್ಥೆಯಲ್ಲಿ ರಹಸ್ಯ ಸಭೆ ನಡೆದಿತ್ತು. ಅದಕ್ಕೆ ಕೇವಲ ಆಹ್ವಾನಿತರಿಗೆ ಮಾತ್ರ ಪ್ರವೇಶವಿತ್ತು. ನನಗೆ ನಾಗ್ಪುರದ ನಂಟು ಇದ್ದ ಕಾರಣ ಆಹ್ವಾನ ಸಿಕ್ಕಿತ್ತು. ಆ ಸಭೆಯಲ್ಲಿ ಕೆಲವರು ಜೈ ಶ್ರೀ ರಾಮ್ ಎಂದು ಘೋಷಣೆಗಳನ್ನು ಕೂಗುತ್ತಿದ್ದರು ಮತ್ತು ಪೇಡಾಗಳನ್ನು ವಿತರಿಸಲಾಯಿತು. ಒಂದು ಫುಲ್ ಕೇಸರ್ ಪೇಡಾ ತಿಂದಿದ್ದು ನೆನಪಿದೆ. ಅಯೋಧ್ಯೆಯಲ್ಲಿ ನಡೆದ ಘಟನೆಗಳು ಅತ್ಯಂತ ಸಕಾರಾತ್ಮಕ, ಅತ್ಯಂತ ಶಕ್ತಿಯುತ ಮತ್ತು ಅತ್ಯಂತ ಮಂಗಳಕರವಾದ ಯಾವುದೋ ಒಂದರ ಆರಂಭ ಎಂದು ನನಗೆ ತಿಳಿದಿತ್ತು ಎಂದು ಬರೆದುಕೊಂಡಿದ್ದಾರೆ.

ಸಭೆಯ ಸುದ್ದಿ ಸೋರಿಕೆಯಾದಾಗ, ಅವರಿಗೆ ನೋಟಿಸ್ ನೀಡಲಾಗಿದೆ ಮತ್ತು ಘಟನೆಯನ್ನು ಪ್ರಮುಖ ಪತ್ರಿಕೆಯ ಮೊದಲ ಪುಟದಲ್ಲಿ ವರದಿ ಮಾಡಲಾಗಿದೆ. “ಐಎಎಸ್‌ನಲ್ಲಿ ಕೋಮುವಾದಿಗಳು ನುಸುಳುತ್ತಿದ್ದಾರೆ’ ಎಂದು ವರದಿಯಲ್ಲಿ ಹೇಳಲಾಗಿದೆ. ದೇವಾಲಯದ ಪ್ರತಿಷ್ಠಾಪನೆಯ ಈ ಸಮಾರಂಭದ ಸಂದರ್ಭದಲ್ಲಿ ನಾನು ಮತ್ತೊಂದು ಪೇಡಾವನ್ನು ತಿಂದಿದ್ದೇನೆ. ನಾಳೆ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣಪ್ರತಿಷ್ಠೆ ನಡೆಯಲಿದೆ. ಇದಕ್ಕೆ ಮುನ್ನಾದಿನವಾದ ಇಂದು, ನಾನು ಇನ್ನೊಂದು ಕೇಸರಿ ಪೇಡಾವನ್ನು ತಿನ್ನುವಾಗ ಡಿಸೆಂಬರ್ 6ರ ಮೂಲ ಕ್ಷಣ ಮತ್ತು ಅತ್ಯಂತ ಸಕಾರಾತ್ಮಕ, ಮಂಗಳಕರವಾದ ಶಕ್ತಿಯುತ ಭಾವನೆಯನ್ನು ನೆನಪಿಸಿಕೊಂಡೆ ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಮಾಜಿ ಐಎಎಸ್ ಅಧಿಕಾರಿ ಎಂ.ಜಿ.ದೇವಸಹಾಯಂ, ಜಾತ್ಯತೀತತೆಯು ಸಂವಿಧಾನದ ಮೂಲಭೂತ ತತ್ವ ಮತ್ತು ಮೂಲ ರಚನೆಯಾಗಿದೆ. ಕೋಮುವಾದಿಯಾಗಿ ನಡೆದುಕೊಂಡು ಬಾಬರಿ ಮಸೀದಿ ಧ್ವಂಸವನ್ನು ಆಚರಿಸುವ ಮೂಲಕ ಆಕೆ ತನ್ನ ಪ್ರತಿಜ್ಞೆಯನ್ನು ಉಲ್ಲಂಘಿಸಿದ್ದಾಳೆ. ದೇವಸ್ಥಾನವನ್ನು ಪ್ರಶಂಸಿಸುವುದು ಒಂದು ವಿಷಯ, ಆದರೆ 30 ವರ್ಷಗಳ ನಂತರ ಕೆಡವಿದ್ದನ್ನು ನೆನಪಿಸಿಕೊಳ್ಳುವುದು ಮತ್ತು ಆಚರಿಸುವುದು ಅಪರಾಧ. ಉನ್ನತ ಅಧಿಕಾರಿಯ ಸ್ಥಾನದಲ್ಲಿರಲು ಆಕೆಗೆ ಯಾವುದೇ ನೈತಿಕತೆಯಿಲ್ಲ. ಅವರು ಕೆಲಸ ಮಾಡುತ್ತಿರುವ ರಾಜ್ಯದಲ್ಲಿ ಹಲವಾರು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಇದ್ದಾರೆ. ರಾಜಕಾರಣಿಗಳನ್ನು ಲೆಕ್ಕಿಸದೆ, ನಾಗರಿಕ ಸೇವೆಕರು ತಟಸ್ಥವಾಗಿರಬೇಕು. ಕೋಮುವಾದಿಯಲ್ಲದವರಾಗಿರಬೇಕು ಮತ್ತು ಜಾತ್ಯತೀತವಾಗಿರಬೇಕು. ಅವರು ಐಎಎಸ್‌ ಹುದ್ದೆ ಮತ್ತು ಭಾರತದ ಸಂವಿಧಾನವನ್ನು ಅವಮಾನಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪೋಸ್ಟ್‌ ವೈರಲ್‌ ಆಗುತ್ತಿದ್ದಂತೆ ಐಎಎಸ್‌ ಅಧಿಕಾರಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇಂತಹ ಮನಸ್ಥಿತಿಯ ಅಧಿಕಾರಿಗಳು ತನ್ನ ವೃತ್ತಿ ಜೀವನದಲ್ಲಿ ಹೇಗೆ ಕಾರ್ಯ ನಿರ್ವಹಿಸಿರಬಹುದು ಎಂದು ಸಾಮಾಜಿಕ ಜಾಲತಾಣಗಳ ಬಳಕೆದಾರರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಎನ್‍ಡಿಟಿವಿಯ ಮುಂಬೈ ಕಚೇರಿಯ ಮಾಜಿ ಮುಖ್ಯಸ್ಥ ಸೋಹಿತ್ ಮಿಶ್ರಾ ಪ್ರತಿಕ್ರಿಯಿಸಿದ್ದು, ಮನೀಷಾ ಅವರ ಪೋಸ್ಟ್‌ನ್ನು ಖಂಡಿಸಿದ್ದಾರೆ. ಬಹುಸಂಖ್ಯಾತರ ಪರವಾಗಿರುವುದು ಸಾರ್ವಜನಿಕ ಸೇವೆಯಲ್ಲಿರುವವರಿಗೆ ಎಷ್ಟು ಸೂಕ್ತ ಎಂದು ಪ್ರಶ‍್ನಿಸಿದ್ದಾರೆ.

ಇದನ್ನು ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ ವೇಳೆ ಅಸ್ಸಾಂನಲ್ಲಿ ಭದ್ರತಾ ಸಮಸ್ಯೆ: ಅಮಿತ್‌ ಶಾಗೆ ಪತ್ರ ಬರೆದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...