HomeಮುಖಪುಟINDIA ಒಕ್ಕೂಟ: ದೀದಿ ಹೇಳಿಕೆ ಬಳಿಕವೂ ಪ್ರತಿಪಕ್ಷಗಳಲ್ಲಿದೆ 'ಮೈತ್ರಿ' ಆಶಾಭಾವನೆ?

INDIA ಒಕ್ಕೂಟ: ದೀದಿ ಹೇಳಿಕೆ ಬಳಿಕವೂ ಪ್ರತಿಪಕ್ಷಗಳಲ್ಲಿದೆ ‘ಮೈತ್ರಿ’ ಆಶಾಭಾವನೆ?

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಇದರ ಬೆನ್ನಲ್ಲಿ ಪಂಜಾಬ್‌ನಲ್ಲಿ ಎಎಪಿ ಕೂಡ ಏಕಾಂಗಿಯಾಗಿ ಕಣಕ್ಕಿಳಿಯಲಿದೆ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ. ಟಿಎಂಸಿ ನಾಯಕಿಯ ಹೇಳಿಕೆ ಬಳಿಕ ಕಾಂಗ್ರೆಸ್‌ ನಾಯಕರು ಮೈತ್ರಿಯ ಬಗ್ಗೆ ಆಶಾಭಾವನೆಯನ್ನು ವ್ಯಕ್ತಪಡಿಸಿದ್ದು, ಅಂತಿಮವಾಗಿ ಎರಡೂ ಪಕ್ಷಗಳ ರಾಷ್ಟ್ರೀಯ ನಾಯಕರು ಮಾತುಕತೆ ನಡೆಸುವ ಸಾಧ್ಯತೆ ಇದೆ. ಆದರೆ ಪಂಜಾಬ್‌ನಲ್ಲಿ ಎಎಪಿಯ ಘೋಷಣೆ ನಿರೀಕ್ಷಿತವೇ ಆಗಿದ್ದು, ಕಾಂಗ್ರೆಸ್‌ ಮತ್ತು ಎಎಪಿಯ ರಾಜ್ಯ ನಾಯಕತ್ವವು ಮೊದಲಿನಿಂದಲೇ ಪಂಜಾಬ್‌ನಲ್ಲಿ ಮೈತ್ರಿಗೆ ವಿರೋಧಿಸಿತ್ತು.

ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆ ಪಶ್ಚಿಮ ಬಂಗಾಳಕ್ಕೆ ಪ್ರವೇಶಿಸುವ ಒಂದು ದಿನದ ಮೊದಲು ಮತ್ತು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಮಮತಾ ಬ್ಯಾನರ್ಜಿ ಜೊತೆ ಸಂಬಂಧ ಉತ್ತಮವಾಗಿದೆ ಎಂದು ಹೇಳಿಕೆ ಕೊಟ್ಟ ಒಂದು ದಿನದ ನಂತರ ಮಮತಾ ಏಕಾಂಗಿ ಸ್ಪರ್ಧೆ ಹೇಳಿಕೆ ಕೊಟ್ಟಿದ್ದರು. ಆದರೆ ಮಮತಾ-ಜಿ ಇಲ್ಲದೆ INDIA ನ್ನು ಊಹಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ ಮತ್ತು ವಿರೋಧ ಪಕ್ಷದ ಒಕ್ಕೂಟವು ಪಶ್ಚಿಮ ಬಂಗಾಳದಲ್ಲಿ ಲೋಕಸಭೆ ಚುನಾವಣೆಯಲ್ಲಿ ಒಂದಾಗಿ ಹೋರಾಡಲಿದೆ ಎಂದು ಹೇಳಿಕೊಂಡಿದೆ.

ನಾವು ಬಿಜೆಪಿಯನ್ನು ಸೋಲಿಸಲು ಬಯಸುತ್ತೇವೆ ಮತ್ತು ಬಿಜೆಪಿಯನ್ನು ಸೋಲಿಸಲು ನಾವು ಏನು ಬೇಕಾದರೂ ಮಾಡುತ್ತೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಮಮತಾ ಜಿ ಮತ್ತು ಟಿಎಂಸಿ ಭಾರತದ ಮೈತ್ರಿಯ ಅತ್ಯಂತ ಬಲವಾದ ಆಧಾರ ಸ್ತಂಭವಾಗಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅಸ್ಸಾಂನ ಬೊಂಗೈಗಾಂವ್‌ನಲ್ಲಿ ಮಾತನಾಡಿ, ಮಮತಾ ಜೀ ಇಲ್ಲದ INDIA ಮೈತ್ರಿಯನ್ನು ನಾವು ಊಹಿಸಲು ಸಾಧ್ಯವಿಲ್ಲ. INDIA ಮೈತ್ರಿಯಂತೆಯೇ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ.

ನಾನು ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ, ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಹೋರಾಡುತ್ತೇವೆ ಎಂದು ನಾನು ಯಾವಾಗಲೂ ಹೇಳುತ್ತೇನೆ. ನಮ್ಮದು ಜಾತ್ಯತೀತ ಪಕ್ಷ ಮತ್ತು ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಬಿಜೆಪಿಯನ್ನು ಸೋಲಿಸುತ್ತೇವೆ. ನಾನು ಅನೇಕ ಪ್ರಸ್ತಾಪಗಳನ್ನು ನೀಡಿದ್ದೇನೆ ಆದರೆ ಅವರು ಅವುಗಳನ್ನು ಮೊದಲಿನಿಂದಲೂ ತಿರಸ್ಕರಿಸಿದರು. ರಾಹುಲ್ ಗಾಂಧಿಯವರ ನ್ಯಾಯ ಯಾತ್ರೆಯು ಬಂಗಾಳದ ಮೂಲಕ ಹಾದುಹೋಗುವ ಬಗ್ಗೆ ತನಗೆ ತಿಳಿಸಲಾಗಿಲ್ಲ. ನಾನು ಇಂಡಿಯಾ ಬ್ಲಾಕ್‌ನ ಭಾಗವಾಗಿದ್ದರೂ ಸೌಜನ್ಯಕ್ಕಾಗಿ ಪಶ್ಚಿಮ ಬಂಗಾಳಕ್ಕೆ ಬರುವುದಾಗಿ ಅವರು ನನಗೆ ತಿಳಿಸಿಲ್ಲ, ಹಾಗಾಗಿ ಬಂಗಾಳದ ಮಟ್ಟಿಗೆ ನನಗೆ ಯಾವುದೇ ಸಂಬಂಧವಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು. ಆದರೆ ಅಖಿಲ ಭಾರತ ಮಟ್ಟದಲ್ಲಿ ಏನು ಮಾಡಬೇಕೆಂದು ನಾವು ನಿರ್ಧರಿಸುತ್ತೇವೆ. ನಮ್ಮದು ಜಾತ್ಯತೀತ ಪಕ್ಷ ಎಂದು ಹೇಳಿದ್ದರು. ಇದರರ್ಥ ಮೈತ್ರಿಯಿಂದ ಸಂಪೂರ್ಣವಾಗಿ ಟಿಎಂಸಿ ಹೊರಗೆ ಬಂದಿಲ್ಲ ಎನ್ನುವುದು ಸ್ಪಷ್ಟವಾಗಿದೆ.

ಕಾಂಗ್ರೆಸ್ ನಾಯಕಿ ದೀಪಾ ದಾಸ್ಮುನ್ಸಿ ಹೈದರಾಬಾದ್‌ನಲ್ಲಿ ಮಮತಾ ಪರೋಕ್ಷವಾಗಿ ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಆದರೆ ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಮತ್ತು ಮಮತಾ-ವಿಮರ್ಶಕ ಅಧೀರ್ ರಂಜನ್ ಚೌಧರಿ ಅವರು ಕೇಂದ್ರ ನಾಯಕತ್ವದ ಅಂಗಳಕ್ಕೆ ಸೀಟು ಹಂಚಿಕೆ ಚೆಂಡನ್ನು ಎಸೆದಿದ್ದಾರೆ. ಕಾಂಗ್ರೆಸ್‌ನ ಉನ್ನತ ನಾಯಕರು ಶೀಘ್ರದಲ್ಲೇ ಮಮತಾ ಅವರನ್ನು ಸಂಪರ್ಕಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಪಂಜಾಬ್‌ ಸಿಎಂ ಭಗವಂತ್‌ ಮಾನ್‌, ಎಎಪಿ ಪಂಜಾಬ್‌ನಲ್ಲಿ ಯಾವುದೇ ಮೈತ್ರಿಯನ್ನು ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಎಎಪಿ ದೆಹಲಿಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ.

ಸೀಟು ಹಂಚಿಕೆಯ ಕಸರತ್ತಿನ ವಿಳಂಬ, ಅಸಮಂಜಸ ಬೇಡಿಕೆಗಳು ಮತ್ತು ಮುಖ್ಯಮಂತ್ರಿ ವಿರುದ್ಧ ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿಯವರ ಹೇಳಿಕೆಗಳು ಮಮತಾ ಅವರು ಮೈತ್ರಿ ವಿರುದ್ಧ ಘೋಷಣೆಗೆ ಕಾರಣವಾಗಿದೆ ಎಂದು ಟಿಎಂಸಿ ಮೂಲಗಳು ತಿಳಿಸಿದೆ.

ಪಂಜಾಬ್‌ನಲ್ಲಿ ಎಎಪಿಯ ನಿಲುವು ಕಾಂಗ್ರೆಸ್‌ಗೆ ಆಶ್ಚರ್ಯ ತಂದಿಲ್ಲ. ಎರಡೂ ಪಕ್ಷಗಳ ರಾಜ್ಯ ಘಟಕಗಳು ರಾಜ್ಯದಲ್ಲಿ ಮೈತ್ರಿಯನ್ನು ವಿರೋಧಿಸಿದ್ದವು. ಖರ್ಗೆ ಮತ್ತು ರಾಹುಲ್ ಭೇಟಿ ವೇಳೆ ಸ್ವತಃ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಈ ಬಗ್ಗೆ ಸೂಚಿಸಿದ್ದರು. ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕತ್ವ ಎಎಪಿ ಜೊತೆಗೆ  ಪಂಜಾಬ್‌ನಲ್ಲಿ ಮೈತ್ರಿ ಬಗ್ಗೆ ಮಾತುಕತೆಗೆ ನಿರಾಕರಿಸಿತ್ತು. ಆದರೆ ದೆಹಲಿಯಲ್ಲಿ ಸೀಟು ಹಂಚಿಕೆಯನ್ನು ಚರ್ಚಿಸಲಾಗುವುದು ಎಂದು ಹೇಳಿತ್ತು.

ಇದನ್ನು ಓದಿ: ಬಾಬರಿ ಮಸೀದಿ ಧ್ವಂಸದ ದಿನ ‘ಸಂಭ್ರಮಾಚರಣೆ’ ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ ಅಧಿಕಾರಿಯ ಪೋಸ್ಟ್‌…

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...