Homeಮುಖಪುಟಜ್ಞಾನವಾಪಿ ಮಸೀದಿಯ ಸಮೀಕ್ಷಾ ವರದಿ ಉಭಯ ಕಕ್ಷಿದಾರರಿಗೆ ನೀಡಲು ಸಮ್ಮತಿಸಿದ ನ್ಯಾಯಾಲಯ

ಜ್ಞಾನವಾಪಿ ಮಸೀದಿಯ ಸಮೀಕ್ಷಾ ವರದಿ ಉಭಯ ಕಕ್ಷಿದಾರರಿಗೆ ನೀಡಲು ಸಮ್ಮತಿಸಿದ ನ್ಯಾಯಾಲಯ

- Advertisement -
- Advertisement -

ವಾರಣಾಸಿ ಜಿಲ್ಲಾ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ASI) ನಡೆಸಿದ ‘ಜ್ಞಾನವಾಪಿ ಮಸೀದಿ ಸಂಕೀರ್ಣ’ದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯ ಕಕ್ಷಿಗಳಿಗೆ ನೀಡಲು ಒಪ್ಪಿಗೆ ನೀಡಿದೆ. ಈ ಬಗ್ಗೆ ಸಂಬಂಧಪಟ್ಟವರು ಅಫಿಡವಿಟ್ ಸಲ್ಲಿಸಬೇಕಾಗಿದೆ.

ಡಿಸೆಂಬರ್ 18ರಂದು ಮುಚ್ಚಿದ ಲಕೋಟೆಯಲ್ಲಿ ಜ್ಞಾನವಾಪಿ ಮಸೀದಿ ಸಂಕೀರ್ಣದ ಕುರಿತದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಎಎಸ್‌ಐ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಇದಾದ ಒಂದು ತಿಂಗಳ ನಂತರ ಈ ಬೆಳವಣಿಗೆ ನಡೆದಿದೆ. ನ್ಯಾಯಾಲಯಕ್ಕೆ ಎಎಸ್‌ಐ ವರದಿ ಸಲ್ಲಿಸಿದ ನಂತರ, ಜ್ಞಾನವಾಪಿ ಸಮೀಕ್ಷೆ ಪ್ರಕರಣದಲ್ಲಿ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು ಎಎಸ್‌ಐ ವರದಿಯನ್ನು ಸಾರ್ವಜನಿಕಗೊಳಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿರುವುದನ್ನು ಪ್ರಶ್ನಿಸಿದ್ದರು.

ಆದರೆ ಎಎಸ್‌ಐ ಜ್ಞಾನವಾಪಿ ಸಮೀಕ್ಷೆಯ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುವುದನ್ನು ಮುಂದೂಡುವಂತೆ ಕೋರಿತ್ತು. ಸಾರ್ವಜನಿಕರಿಗೆ ವರದಿಯ ಬಿಡುಗಡೆ ವದಂತಿಗಳು ಮತ್ತು ತಪ್ಪು ಮಾಹಿತಿಯನ್ನು ಉತ್ತೇಜಿಸುವ ಸಾಧ್ಯತೆ ಇದೆ. ಆದ್ದರಿಂದ ವರದಿಯನ್ನು ಬಹಿರಂಗಪಡಿಸುವಿಕೆಯನ್ನು ವಿಳಂಬಗೊಳಿಸುವಂತೆ ಸಮಿತಿಯು ವಾರಣಾಸಿ ಜಿಲ್ಲಾ ನ್ಯಾಯಾಧೀಶರನ್ನು ಒತ್ತಾಯಿಸಿತ್ತು.

ASI ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸಿತ್ತು. 17ನೇ ಶತಮಾನದ ಮಸೀದಿಯನ್ನು ಹಿಂದೂ ದೇವಾಲಯ ಕೆಡವಿ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಸಮೀಕ್ಷೆಗೆ ಕೋರ್ಟ್‌ ASIಗೆ ಸೂಚಿಸಿತ್ತು.

ಅಲಹಾಬಾದ್ ಹೈಕೋರ್ಟ್, ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದ ನಂತರ ಮತ್ತು ಈ ಕ್ರಮವು ನ್ಯಾಯದ ಹಿತಾಸಕ್ತಿಯಲ್ಲಿ ಅಗತ್ಯ ಎಂದು ತೀರ್ಪು ನೀಡಿದ ನಂತರ ಸಮೀಕ್ಷೆಯು ಪ್ರಾರಂಭವಾಗಿತ್ತು. ಅಲಹಾಬಾದ್ ಹೈಕೋರ್ಟ್ ಆದೇಶದ ನಂತರ, ಜ್ಞಾನವಾಪಿ ಮಸೀದಿ ಸಮಿತಿಯು ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಎಎಸ್‌ಐ ಸಮೀಕ್ಷೆ ಕುರಿತ ಹೈಕೋರ್ಟ್‌ನ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್‌ ಕಳೆದ ವರ್ಷ ಆಗಸ್ಟ್‌ನಲ್ಲಿ ನಿರಾಕರಿಸಿತ್ತು.

ಮಸೀದಿಯನ್ನು ದೇವಾಲಯ ಕೆಡವಿ ನಿರ್ಮಿಸಲಾಗಿದೆಯೇ ಎಂದು ತಿಳಿಯಲು ಸಮೀಕ್ಷೆಯೊಂದು ಮಾರ್ಗವಾಗಿದೆ ಎಂದು ಅರ್ಜಿದಾರ ಮಹಿಳೆಯರು ವಾದಿಸಿದ್ದರು. ಕಳೆದ ಎಪ್ರಿಲ್‌ನಲ್ಲಿ ನ್ಯಾಯಾಲಯವು ಮಸೀದಿ ಆವರಣದ ವೀಡಿಯೋ ಸಮೀಕ್ಷೆಗೆ ಆದೇಶಿಸಿತ್ತು.

ಏನಿದು ವಿವಾದ?

ಜ್ಞಾನವಾಪಿ ಮಸೀದಿಯನ್ನು 1669ರಲ್ಲಿ ಮೊಘಲ್ ದೊರೆ ಔರಂಗಜೇಬನು ಪ್ರಾಚೀನ ವಿಶ್ವೇಶ್ವರ ದೇವಾಲಯವನ್ನು ಕೆಡವಿ ನಿರ್ಮಿಸಿದನು ಎಂಬುವುದು ಹಿಂದೂಪರರ ವಾದ. ಜ್ಞಾನವಾಪಿ ಮಸೀದಿಯ ಪ್ರಕರಣವು 1991ರಿಂದ ನ್ಯಾಯಾಲಯದಲ್ಲಿದೆ. ಕಾಶಿ ವಿಶ್ವನಾಥ ದೇವಾಲಯದ ಅರ್ಚಕರ ವಂಶಸ್ಥರಾದ ಪಂಡಿತ್ ಸೋಮನಾಥ ವ್ಯಾಸ್ ಸೇರಿದಂತೆ ಮೂವರು ವಾರಣಾಸಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಔರಂಗಜೇಬನು ದೇವಾಲಯ ಧ್ವಂಸಗೊಳಿಸಿದ್ದಾನೆ ಎಂದು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಇದಲ್ಲದೆ ವಿಶ್ವನಾಥ ದೇವರ ಜ್ಯೋತಿರ್ಲಿಂಗವು ಜ್ಞಾನವಾಪಿ ಮಸೀದಿಯ ಆವರಣದಲ್ಲಿದೆ ಎಂದು ಹೇಳುವ ಇನ್ನೊಂದು ಅರ್ಜಿಯೂ ನ್ಯಾಯಾಲಯದಲ್ಲಿದೆ.

2021ರ ಆ.18ರಂದು ವಾರಣಾಸಿಯ ಅದೇ ನ್ಯಾಯಾಲಯದಲ್ಲಿ, ಶೃಂಗಾರ ಗೌರಿ, ಹನುಮಾನ್ ಮತ್ತು ಗಣೇಶ ಚಿತ್ರಗಳು ಇವೆಯೆಂದು ಮತ್ತು ಪೂಜೆಗೆ ಅನುಮತಿ ಕೋರಿ ಐವರು ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದರು, ಇದರ ಬೆನ್ನಲ್ಲಿ ಪ್ರಸ್ತುತ ಸ್ಥಿತಿಯನ್ನು ತಿಳಿಯಲು ಆಯೋಗವನ್ನು ರಚಿಸಲಾಗಿತ್ತು.

ಏ.2021ರಲ್ಲಿ ವಾರಣಾಸಿ ನ್ಯಾಯಾಲಯವು ಸಮೀಕ್ಷೆಯನ್ನು ನಡೆಸಿ ಅದರ ವರದಿಯನ್ನು ಸಲ್ಲಿಸಲು ASIಗೆ ನಿರ್ದೇಶನ ನೀಡಿತ್ತು. ಆದರೆ ಉತ್ತರಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಮತ್ತು ಜ್ಞಾನವಾಪಿ ಮಸೀದಿಯನ್ನು ನಡೆಸುತ್ತಿರುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು  ಅರ್ಜಿಯನ್ನು  ವಿರೋಧಿಸಿತ್ತು ಮತ್ತು ಮಸೀದಿಯ ಸಮೀಕ್ಷೆಗಾಗಿ ವಾರಣಾಸಿ ನ್ಯಾಯಾಲಯದ ಆದೇಶವನ್ನು ವಿರೋಧಿಸಿತ್ತು.  ಪ್ರಕರಣವು ನಂತರ ಅಲಹಾಬಾದ್ ಹೈಕೋರ್ಟ್‌ಗೆ ತಲುಪಿತ್ತು.

ಇದನ್ನು ಓದಿ: ಬಾಬರಿ ಮಸೀದಿ ಧ್ವಂಸದ ದಿನ ‘ಸಂಭ್ರಮಾಚರಣೆ’ ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ ಅಧಿಕಾರಿಯ ಪೋಸ್ಟ್‌…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....