Homeಮುಖಪುಟನನಗೆ ಹಿಂದಿ ಬರಲ್ಲ, ಕ್ರಿಮಿನಲ್ ಕಾನೂನುಗಳನ್ನು ಹಳೆಯ ಹೆಸರಿನಿಂದಲೇ ಉಲ್ಲೇಖಿಸುತ್ತೇನೆ: ನ್ಯಾ. ಆನಂದ್ ವೆಂಕಟೇಶ್

ನನಗೆ ಹಿಂದಿ ಬರಲ್ಲ, ಕ್ರಿಮಿನಲ್ ಕಾನೂನುಗಳನ್ನು ಹಳೆಯ ಹೆಸರಿನಿಂದಲೇ ಉಲ್ಲೇಖಿಸುತ್ತೇನೆ: ನ್ಯಾ. ಆನಂದ್ ವೆಂಕಟೇಶ್

- Advertisement -
- Advertisement -

ನಿರರ್ಗಳವಾಗಿ ಹಿಂದಿ ಮಾತನಾಡಲು ಗೊತ್ತಿಲ್ಲದ ಕಾರಣ, ಕ್ರಿಮಿನಲ್‌ ಕಾನೂನುಗಳ ಹೆಸರು ಬದಲಾದರೂ, ನಾನು ಅವುಗಳನ್ನು ಐಪಿಸಿ, ಸಿಆರ್‌ಪಿಸಿ ಎಂಬ ಮೂಲ ಹೆಸರಿನಿಂದಲೇ ಕರೆಯುತ್ತೇನೆ ಎಂದು ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿ ಆನಂದ್ ವೆಂಕಟೇಶ್ ಅವರು ಹೇಳಿದ್ದಾರೆ.

ಸಿಆರ್‌ಪಿಸಿಯ ಸೆಕ್ಷನ್ 460 ಮತ್ತು 473 ರ ಅಡಿಯಲ್ಲಿ ಕಾಗ್ನಿಜೆನ್ಸ್ ಮತ್ತು ಮಿತಿಯ ಅವಧಿಗಳ ವಿಸ್ತರಣೆಗೆ ಸಂಬಂಧಿಸಿದ ಪ್ರಕರಣವನ್ನು ಮಂಗಳವಾರ ವಿಚಾರಣೆ ನಡೆಸುತ್ತಿದ್ದಾಗ ನ್ಯಾಯಮೂರ್ತಿ ವೆಂಕಟೇಶ್ ಅವರು ಈ ಹೇಳಿಕೆ ನೀಡಿದ್ದಾರೆ.

ಪ್ರಕರಣವನ್ನು ವಾದಿಸುವಾಗ, ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಎ ದಾಮೋದರನ್ ಅವರು ‘ಹೊಸ ಕ್ರಿಮಿನಲ್‌ ಕಾಯ್ದೆಯ’ ಒಂದು ನಿಬಂಧನೆಯನ್ನು ನ್ಯಾಯಾಲಯದ ಗಮನಕ್ಕೆ ತಂದರು. ಆದರೆ ಸಿಆರ್‌ಪಿಸಿಯನ್ನು ಬದಲಿಸುವ ಹೊಸ ಹೆಸರು ‘ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ’ ಪದಗಳನ್ನು ಉಚ್ಚರಿಸಲು ಹೆಣಗಾಡಿದರು.

ಆಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ವೆಂಕಟೇಶ್, ದಾಮೋದರನ್ ಅವರು ಹೊಸ ಕಾಯ್ದೆಯ ಹಿಂದಿ ಹೆಸರು ಉಚ್ಚರಿಸಲು ಬಾರದ ಕಾರಣ ಜಾಣತನದಿಂದ ‘ಹೊಸ ಕಾಯ್ದೆ’ ಎಂದು ಹೇಳಿ ತಪ್ಪಿಸಿಕೊಂಡಿದ್ದಾರೆ. ನಾನೂ ಕೂಡ ಹಿಂದಿ ಬಾರದ ಕಾರಣ ಕ್ರಿಮಿನಲ್ ಕಾನೂನುಗಳನ್ನು ಹಳೆಯ ಹೆಸರಿನಿಂದಲೇ ಕರೆಯುತ್ತೇನೆ ಎಂದರು.

ಮೂರು ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ (ಎರಡನೆಯ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೆಯ) ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ (ಎರಡನೆಯ)ವನ್ನು ಇತ್ತೀಚೆಗೆ ಸರ್ಕಾರ ಹೊಸದಾಗಿ ಜಾರಿಗೊಳಿಸಿದೆ.

ಈ ಮೂರು ಕಾನೂನುಗಳು ಕ್ರಮವಾಗಿ ಭಾರತೀಯ ದಂಡ ಸಂಹಿತೆ- 1860, ಕ್ರಿಮಿನಲ್ ಪ್ರೊಸೀಜರ್ ಆಕ್ಟ್- 1898, ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್-1872 ಅನ್ನು ಬದಲಾಯಿಸಿದೆ.

ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸದ ದಿನ ‘ಸಂಭ್ರಮಾಚರಣೆ’ ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ ಅಧಿಕಾರಿಯ ಪೋಸ್ಟ್‌…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...