Homeಮುಖಪುಟಒಪಿಎಸ್ ವ್ಯಾಪ್ತಿಗೆ 13 ಸಾವಿರ ಸರ್ಕಾರಿ ನೌಕರರು; ರಾಜ್ಯ ಸರ್ಕಾರದಿಂದ ಆದೇಶ

ಒಪಿಎಸ್ ವ್ಯಾಪ್ತಿಗೆ 13 ಸಾವಿರ ಸರ್ಕಾರಿ ನೌಕರರು; ರಾಜ್ಯ ಸರ್ಕಾರದಿಂದ ಆದೇಶ

- Advertisement -
- Advertisement -

2006ರ ಏಪ್ರಿಲ್ 1ಕ್ಕಿಂತ ಮೊದಲು ನೇಮಕಗೊಂಡ ಸುಮಾರು 13,000 ಉದ್ಯೋಗಿಗಳನ್ನು ಹಳೆಯ ಪಿಂಚಣಿ ಯೋಜನೆಯ (ಒಪಿಎಸ್) ವ್ಯಾಪ್ತಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

‘2006 ಏಪ್ರಿಲ್ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಯಾಗಿ 2006ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ. ‘ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿ ನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

‘ಎಲ್ಲಾ 13,000 ಎನ್.ಪಿ.ಎಸ್ ನೌಕರರ ಕುಟುಂಬಗಳಿಗೆ ನಮ್ಮ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸಿದ್ದೇನೆ’ ಎಂದು ಹೇಳಿದ್ದಾರೆ.

ಆದೇಶದಲ್ಲಿ ಏನಿದೆ?

01.04.2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊ೦ದಿ, ದಿನಾ೦ಕ: 01.04.2006ರ೦ದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿ೦ದ ನೂತನ ಪಿಂಚಣಿ ಯೋಜನೆಯ (ರಾಷ್ಟ್ರೀಯ ಪಿ೦ಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಕೆಳಕ೦ಡ ಷರತ್ತುಗಳಿಗೊಳಪಟ್ಟು, ಒ೦ದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ಡ್ ಪಿ೦ಚಣಿ ಯೋಜನೆಯ ವ್ಯಾಪ್ತಿಗೊಳಡಿಸಲು ಒಪ್ಪಿಗೆ ನೀಡಿದೆ.

ದಿನಾ೦ಕ: 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊ೦ದಿ, ಆ ದಿನಾಂಕದ೦ದು ಅಥವಾ ತದನ೦ತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿ೦ದಿನ ಡಿಫೈನ್ ಪಿ೦ಚಣಿ ಯೋಜನೆಗೆ ಒಳಪಡಲು ಇಚ್ಚಿಸಿದಲ್ಲಿ, ತಮ್ಮ ಅಭಿಮತವನ್ನು ನಿಗಧಿತ ನಮೂನೆಯಲ್ಲಿ ದಿನಾ೦ಕ: 30.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು ಒ೦ದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ. ಒ೦ದು ಬಾರಿ ಮಾಡಿಕೊ೦ಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಮೇಲಿನ ಒಂದರಂತೆ ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗಧಿತ ದಿನಾ೦ಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿ೦ಚಣಿ ಯೋಜನೆಯಲ್ಲಿ ಮುಂದುವರಿಯುತ್ತಾರೆ. ನೌಕರರ ಆಯ್ಕೆಗನುಸಾರ, ಅವರು ತಮ್ಮ ಹಿ೦ದಿನ ಡಿಫೈನ್ಡ್ ಪಿಂಚಣಿ ಯೋಜನೆಗೊಳಪಡಲು ನಿಗಧಿತ ಅರ್ಹತೆಯನ್ನು ಹೊ೦ದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊ೦ಡು ದಿನಾಂಕ: 31.07.2024 ರೊಳಗಾಗಿ ಅ೦ತಹ ನೌಕರರನ್ನು ಹಿ೦ದಿನ ಡಿಫೈನ್ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸ್ಸಿನೊ೦ದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು. ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ಟೀಕೃತವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ, ಹಿ೦ದಿನ ಡಿಫೈನ್ಡ್ ಪಿ೦ಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ದಿನಾ೦ಕ: 31.08.2024ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು ಎಂದು ಹೇಳಿದೆ.

ದಿನಾ೦ಕ: 01.04.2006ರ ಪೂರ್ವದಲ್ಲಿನ ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ ಅಧಿಸೂಚನೆಯನ್ವಯ ಆಯ್ಕೆಯಾಗಿ, ಕರ್ತವ್ಯಕ್ಕೆ ವರದಿ ಮಾಡಿಕೊಂಡು ತದನ೦ತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ, ಸರ್ಕಾರದ ಅನ್ಯ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು, ತಮ್ಮ ಹಿ೦ದಿನ ಡಿಫೈನ್ಡ್ ಪಿ೦ಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಇಚ್ಚಿಸಿದಲ್ಲಿ, ಮನವಿಯನ್ನು ಹಿ೦ದಿನ ನೇಮಕಾತಿ ಪಾಧಿಕಾರಕ್ಕೆ ದಿನಾ೦ಕ: 30.06.2024ರೊಳಗಾಗಿ ಸಲ್ಲಿಸತಕ್ಕದ್ದು.

ನೇಮಕಾತಿ ಪ್ರಾಧಿಕಾರವು ಅ೦ತಹ ಸರ್ಕಾರಿ ನೌಕರನು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ, ಅನ್ಯ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿ ಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊ೦ದಿರುವುದನ್ನು ಖಚಿತಪಡಿಸಿಕೊ೦ಡು, ಮೇಲಿನ ಕ್ರಮ ಸ೦ಖ್ಯೆ 4 ರಂತೆ ಪರಿಶೀಲಿಸಿ, ಮೇಲಿನ ಕ್ರಮ ಸ೦ಖ್ಯೆ 5 ರಂತೆ ಮು೦ದಿನ ಕ್ರಮಕ್ಕಾಗಿ ಕಳುಹಿಸತಕ್ಕದ್ದು ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ; ನನಗೆ ಹಿಂದಿ ಬರಲ್ಲ, ಕ್ರಿಮಿನಲ್ ಕಾನೂನುಗಳನ್ನು ಹಳೆಯ ಹೆಸರಿನಿಂದಲೇ ಉಲ್ಲೇಖಿಸುತ್ತೇನೆ: ನ್ಯಾ. ಆನಂದ್ ವೆಂಕಟೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...