Homeಮುಖಪುಟಒಪಿಎಸ್ ವ್ಯಾಪ್ತಿಗೆ 13 ಸಾವಿರ ಸರ್ಕಾರಿ ನೌಕರರು; ರಾಜ್ಯ ಸರ್ಕಾರದಿಂದ ಆದೇಶ

ಒಪಿಎಸ್ ವ್ಯಾಪ್ತಿಗೆ 13 ಸಾವಿರ ಸರ್ಕಾರಿ ನೌಕರರು; ರಾಜ್ಯ ಸರ್ಕಾರದಿಂದ ಆದೇಶ

- Advertisement -
- Advertisement -

2006ರ ಏಪ್ರಿಲ್ 1ಕ್ಕಿಂತ ಮೊದಲು ನೇಮಕಗೊಂಡ ಸುಮಾರು 13,000 ಉದ್ಯೋಗಿಗಳನ್ನು ಹಳೆಯ ಪಿಂಚಣಿ ಯೋಜನೆಯ (ಒಪಿಎಸ್) ವ್ಯಾಪ್ತಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

‘2006 ಏಪ್ರಿಲ್ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಯಾಗಿ 2006ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ. ‘ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿ ನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

‘ಎಲ್ಲಾ 13,000 ಎನ್.ಪಿ.ಎಸ್ ನೌಕರರ ಕುಟುಂಬಗಳಿಗೆ ನಮ್ಮ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸಿದ್ದೇನೆ’ ಎಂದು ಹೇಳಿದ್ದಾರೆ.

ಆದೇಶದಲ್ಲಿ ಏನಿದೆ?

01.04.2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊ೦ದಿ, ದಿನಾ೦ಕ: 01.04.2006ರ೦ದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿ೦ದ ನೂತನ ಪಿಂಚಣಿ ಯೋಜನೆಯ (ರಾಷ್ಟ್ರೀಯ ಪಿ೦ಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಕೆಳಕ೦ಡ ಷರತ್ತುಗಳಿಗೊಳಪಟ್ಟು, ಒ೦ದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ಡ್ ಪಿ೦ಚಣಿ ಯೋಜನೆಯ ವ್ಯಾಪ್ತಿಗೊಳಡಿಸಲು ಒಪ್ಪಿಗೆ ನೀಡಿದೆ.

ದಿನಾ೦ಕ: 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊ೦ದಿ, ಆ ದಿನಾಂಕದ೦ದು ಅಥವಾ ತದನ೦ತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿ೦ದಿನ ಡಿಫೈನ್ ಪಿ೦ಚಣಿ ಯೋಜನೆಗೆ ಒಳಪಡಲು ಇಚ್ಚಿಸಿದಲ್ಲಿ, ತಮ್ಮ ಅಭಿಮತವನ್ನು ನಿಗಧಿತ ನಮೂನೆಯಲ್ಲಿ ದಿನಾ೦ಕ: 30.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು ಒ೦ದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ. ಒ೦ದು ಬಾರಿ ಮಾಡಿಕೊ೦ಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಮೇಲಿನ ಒಂದರಂತೆ ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗಧಿತ ದಿನಾ೦ಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿ೦ಚಣಿ ಯೋಜನೆಯಲ್ಲಿ ಮುಂದುವರಿಯುತ್ತಾರೆ. ನೌಕರರ ಆಯ್ಕೆಗನುಸಾರ, ಅವರು ತಮ್ಮ ಹಿ೦ದಿನ ಡಿಫೈನ್ಡ್ ಪಿಂಚಣಿ ಯೋಜನೆಗೊಳಪಡಲು ನಿಗಧಿತ ಅರ್ಹತೆಯನ್ನು ಹೊ೦ದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊ೦ಡು ದಿನಾಂಕ: 31.07.2024 ರೊಳಗಾಗಿ ಅ೦ತಹ ನೌಕರರನ್ನು ಹಿ೦ದಿನ ಡಿಫೈನ್ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸ್ಸಿನೊ೦ದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು. ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ಟೀಕೃತವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ, ಹಿ೦ದಿನ ಡಿಫೈನ್ಡ್ ಪಿ೦ಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ದಿನಾ೦ಕ: 31.08.2024ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು ಎಂದು ಹೇಳಿದೆ.

ದಿನಾ೦ಕ: 01.04.2006ರ ಪೂರ್ವದಲ್ಲಿನ ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ ಅಧಿಸೂಚನೆಯನ್ವಯ ಆಯ್ಕೆಯಾಗಿ, ಕರ್ತವ್ಯಕ್ಕೆ ವರದಿ ಮಾಡಿಕೊಂಡು ತದನ೦ತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ, ಸರ್ಕಾರದ ಅನ್ಯ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು, ತಮ್ಮ ಹಿ೦ದಿನ ಡಿಫೈನ್ಡ್ ಪಿ೦ಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಇಚ್ಚಿಸಿದಲ್ಲಿ, ಮನವಿಯನ್ನು ಹಿ೦ದಿನ ನೇಮಕಾತಿ ಪಾಧಿಕಾರಕ್ಕೆ ದಿನಾ೦ಕ: 30.06.2024ರೊಳಗಾಗಿ ಸಲ್ಲಿಸತಕ್ಕದ್ದು.

ನೇಮಕಾತಿ ಪ್ರಾಧಿಕಾರವು ಅ೦ತಹ ಸರ್ಕಾರಿ ನೌಕರನು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ, ಅನ್ಯ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿ ಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊ೦ದಿರುವುದನ್ನು ಖಚಿತಪಡಿಸಿಕೊ೦ಡು, ಮೇಲಿನ ಕ್ರಮ ಸ೦ಖ್ಯೆ 4 ರಂತೆ ಪರಿಶೀಲಿಸಿ, ಮೇಲಿನ ಕ್ರಮ ಸ೦ಖ್ಯೆ 5 ರಂತೆ ಮು೦ದಿನ ಕ್ರಮಕ್ಕಾಗಿ ಕಳುಹಿಸತಕ್ಕದ್ದು ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ; ನನಗೆ ಹಿಂದಿ ಬರಲ್ಲ, ಕ್ರಿಮಿನಲ್ ಕಾನೂನುಗಳನ್ನು ಹಳೆಯ ಹೆಸರಿನಿಂದಲೇ ಉಲ್ಲೇಖಿಸುತ್ತೇನೆ: ನ್ಯಾ. ಆನಂದ್ ವೆಂಕಟೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...