Homeಮುಖಪುಟಕೌಟುಂಬಿಕ ಪ್ರಕರಣ: ಮನುಸ್ಮೃತಿ ಉಲ್ಲೇಖಿಸಿ ತೀರ್ಪು ನೀಡಿದ ಜಾರ್ಖಂಡ್ ಹೈಕೋರ್ಟ್

ಕೌಟುಂಬಿಕ ಪ್ರಕರಣ: ಮನುಸ್ಮೃತಿ ಉಲ್ಲೇಖಿಸಿ ತೀರ್ಪು ನೀಡಿದ ಜಾರ್ಖಂಡ್ ಹೈಕೋರ್ಟ್

- Advertisement -
- Advertisement -

ಪತಿಯಿಂದ ಜೀವನಾಂಶ ಕೇಳಿ ಕೋರ್ಟ್‌ ಮೊರೆ ಹೋಗಿದ್ದ ಮಹಿಳೆಯ ಅರ್ಜಿಯನ್ನು ತಳ್ಳಿಹಾಕಿದ ಜಾರ್ಖಂಡ್ ಹೈಕೋರ್ಟ್, ಮನುಸ್ಮೃತಿಯನ್ನು ಉಲ್ಲೇಖಿಸಿ ತೀರ್ಪನ್ನು ನೀಡಿದೆ. ಭಾರತೀಯ ಸಂಸ್ಕೃತಿ ಪ್ರಕಾರ, ಪತ್ನಿಯು ತನ್ನ ಗಂಡನ ಕುಟುಂಬದ ಹಿರಿಯ ಸದಸ್ಯರ ಸೇವೆ ಮಾಡುವುದು ಕಡ್ಡಾಯವಾಗಿದೆ ಮತ್ತು ಆಕೆ ಪ್ರತ್ಯೇಕವಾಗಿ ವಾಸಿಸುವ ಕುರಿತ ಬೇಡಿಕೆಯನ್ನು ಈಡೇರಿಸುವುದಿಲ್ಲ ಎಂದು ಜಾರ್ಖಂಡ್ ಹೈಕೋರ್ಟ್ ಹೇಳಿ ಅರ್ಜಿದಾರ ಮಹಿಳೆಗೆ ಜೀವನಾಂಶವನ್ನು ನಿರಾಕರಿಸಿದೆ.

ಜಾರ್ಖಂಡ್ ಹೈಕೋರ್ಟ್ ನ್ಯಾಯಮೂರ್ತಿ ಸುಭಾಷ್ ಚಂದ್ ಅವರ ಪೀಠದ 25 ಪುಟಗಳ ತೀರ್ಪಿನಲ್ಲಿ, ಸುಪ್ರೀಂಕೋರ್ಟ್‌ ಈ ಮೊದಲು ಮಾಡಿರುವ ಅವಲೋಕನಗಳನ್ನು ಉಲ್ಲೇಖಿಸಲಾಗಿದೆ ಮತ್ತು ಆದರ್ಶ ವಿವಾಹಿತ ಸಂಬಂಧ ಮತ್ತು ದಂಪತಿಗಳ ಜವಾಬ್ಧಾರಿ ಮತ್ತು ಕರ್ತವ್ಯಗಳ ಬಗ್ಗೆ ಮನುಸ್ಮೃತಿ ಸೇರಿದಂತೆ ಪ್ರಾಚೀನ ಪಠ್ಯಗಳನ್ನು ಉಲ್ಲೇಖಿಸಲಾಗಿದೆ.

ಪಾಶ್ಚಿಮಾತ್ಯ ದೇಶಗಳಲ್ಲಿ ವಿವಾಹಿತ ಮಗ ತನ್ನ ಹೆತ್ತವರಿಂದ ಪ್ರತ್ಯೇಕವಾಗಿ ವಾಸಿಸುತ್ತಾರೆ, ಭಾರತಕ್ಕೆ ಹೋಲಿಕೆ ಮಾಡಿದರೆ ಕುಟುಂಬದ ಸಮೀಕರಣಗಳು ವಿಭಿನ್ನವಾಗಿ ಕಾರ್ಯನಿರ್ವಹಿಸುತ್ತವೆ. ಸಾಮಾನ್ಯ ಪರಿಸ್ಥಿತಿಯಲ್ಲಿ ಮಹಿಳೆಯು ಮದುವೆಯ ನಂತರ ಗಂಡನ ಕುಟುಂಬದೊಂದಿಗೆ ಇರಬೇಕೆಂದು ನಿರೀಕ್ಷಿಸಲಾಗಿದೆ. ಅವಳು ಕುಟುಂಬದ ಅವಿಭಾಜ್ಯ  ಭಾಗವಾಗುತ್ತಾಳೆ. ಸಾಮಾನ್ಯವಾಗಿ ಯಾವುದೇ ಬಲವಾದ ಕಾರಣವಿಲ್ಲದೆ, ತನ್ನ ಪತಿ ಕುಟುಂಬದಿಂದ ಬೇರ್ಪಟ್ಟು ತನ್ನೊಂದಿಗೆ ಮಾತ್ರ ಬದುಕಬೇಕು ಎಂದು ಅವಳು ಎಂದಿಗೂ ಒತ್ತಾಯಿಸುವಂತಿಲ್ಲ ಎಂದು ಕೋರ್ಟ್‌ ತನ್ನ ತೀರ್ಪಿನಲ್ಲಿ ಹೇಳಿದೆ.

ಥೆರೇಸಾ ಚಾಕೋ ಅವರ ಇಂಟ್ರೊಡಕ್ಷನ್ ಟೂ ಫ್ಯಾಮಿಲಿ ಲೈಫ್ ಎಜ್ಯುಕೇಶನ್ ಕೃತಿಯ ಅಂಶಗಳನ್ನು ಉಲ್ಲೇಖಿಸಿ ಆದೇಶ ನೀಡಿದ ನ್ಯಾಯಾಧೀಶರು, ಪುರುಷರು ಮತ್ತು ಮಹಿಳೆಯರ ಸೂಕ್ತ ನಡವಳಿಕೆ ಬಗ್ಗೆ ಹಲವು ಸಾಂಸ್ಕೃತಿಕ ಹಾಗೂ ಸಾಮಾಜಿಕ ನಿರೀಕ್ಷೆಗಳು ಇರುತ್ತವೆ. ಪತ್ನಿ ದಾಂಪತ್ಯದ ಸಾಮಾಜಿಕ ಜೀವನದ ಹೊಣೆ ವಹಿಸಿಕೊಳ್ಳಬೇಕು. ಪತಿಯ ಕೆಲಸದಲ್ಲಿ ಆಸಕ್ತಿ ವಹಿಸಬೇಕು. ಪತ್ನಿ-ಪತಿಯ ಚಟುವಟಿಕೆಗಳ ಜಗತ್ತನ್ನು ಅರ್ಥ ಮಾಡಿಕೊಳ್ಳಬೇಕು. ಪತಿಯ ಜೊತೆ ಉತ್ತಮ ಸಂಬಂಧವನ್ನು ಬೆಳೆಸಿಕೊಳ್ಳಬೇಕು. ಸಂವಿಧಾನವನ್ನು ಉಲ್ಲೇಖಿಸುತ್ತಾ, ಪ್ರತಿಯೊಬ್ಬ ನಾಗರಿಕನು ನಮ್ಮ ಸಂಯೋಜಿತ ಸಂಸ್ಕೃತಿಯ ಶ್ರೀಮಂತ ಪರಂಪರೆಯನ್ನು ಗೌರವಿಸಬೇಕು ಮತ್ತು ಸಂರಕ್ಷಿಸಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

ಆದೇಶದಲ್ಲಿ ಮನುಸ್ಮೃತಿಯನ್ನು ಉಲ್ಲೇಖಿಸಿ, ಒಂದು ಕುಟುಂಬದ ಮಹಿಳೆಯರು ಸರಿಯಾಗಿಲ್ಲದಿದ್ದರೆ, ನೆಮ್ಮದಿಯಿಂದಿರದಿದ್ದರೆ, ಆ ಕುಟುಂಬವು ಶೀಘ್ರದಲ್ಲೇ ನಾಶವಾಗುತ್ತದೆ ಮತ್ತು ಮಹಿಳೆಯರು ತೃಪ್ತರಾಗಿರುವಲ್ಲಿ ಯಾವಾಗಲೂ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಲಾಗಿದೆ.

ದುಮ್ಕಾದಲ್ಲಿನ ಕೌಟುಂಬಿಕ ನ್ಯಾಯಾಲಯವು ತನ್ನ ಪತ್ನಿ ಮತ್ತು ಅಪ್ರಾಪ್ತ ಮಗನಿಗೆ ಜೀವನಾಂಶವನ್ನು ಪಾವತಿಸುವ ಆದೇಶವನ್ನು ಪ್ರಶ್ನಿಸಿ ವಿಚ್ಛೇದಿತ ಪತಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸುತ್ತಿದೆ. ನ್ಯಾಯಮೂರ್ತಿ ಸುಭಾಷ್ ಚಂದ್ ಅವರು ವಿಚ್ಛೇದಿತ ದಂಪತಿಗಳ ಮಗುವಿನ ಪೋಷಣೆಗಾಗಿ ಪಾವತಿಸಬೇಕಾದ ಮೊತ್ತವನ್ನು ತಿಂಗಳಿಗೆ 15,000 ರೂ.ಗಳಿಂದ 25,000 ರೂ.ಗಳಿಗೆ ಹೆಚ್ಚಿಸಿ ಆದೇಶವನ್ನು ನೀಡಿದೆ. ಆದರೆ ಪತ್ನಿಗೆ ಜೀವನಾಂಶಕ್ಕೆ ನಿರಾಕರಿಸಿದೆ.

ಇದನ್ನು ಓದಿ: “ದಾಳಿ ವೇಳೆ ಪೊಲೀಸರು ನೋಡುತ್ತಾ ನಿಂತಿದ್ದರು”: ಮುಂಬೈ ಹಿಂದುತ್ವ ಹಿಂಸಾಚಾರ ಸಂತ್ರಸ್ತರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...