Homeಮುಖಪುಟವಿಧಾನಸಭೆಯಲ್ಲೂ ಮುಂದುವರಿದ ಮುಸುಕಿನ ಗುದ್ದಾಟ; 2 ನಿಮಿಷಕ್ಕೆ ಭಾಷಣ ಮುಗಿಸಿದ ಕೇರಳ ರಾಜ್ಯಪಾಲ!

ವಿಧಾನಸಭೆಯಲ್ಲೂ ಮುಂದುವರಿದ ಮುಸುಕಿನ ಗುದ್ದಾಟ; 2 ನಿಮಿಷಕ್ಕೆ ಭಾಷಣ ಮುಗಿಸಿದ ಕೇರಳ ರಾಜ್ಯಪಾಲ!

- Advertisement -
- Advertisement -

ರಾಜ್ಯದಲ್ಲಿ ಆಡಳಿತಾರೂಢ ಎಡಪಕ್ಷದ ಬಗ್ಗೆ ತಮ್ಮ ಅಸಮಾಧಾನವನ್ನು ವಿಧಾನಸಭೆಯಲ್ಲೂ ಪ್ರದರ್ಶಿಸಿರುವ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಸರ್ಕಾರದ ಸಾಂಪ್ರದಾಯಿಕ ನೀತಿ ಭಾಷಣದಲ್ಲಿ ಕೊನೆಯ ಪ್ಯಾರಾಗ್ರಾಫ್ ಅನ್ನು ಓದುವ ಮೂಲಕ ಆತುರಾತುರವಾಗಿ ಮುಕ್ತಾಯಗೊಳಿಸಿದ್ದಾರೆ.

ಬೆಳಗ್ಗೆ 9 ಗಂಟೆ ಸುಮಾರಿಗೆ ವಿಧಾನಸಭೆ ತಲುಪಿದ ಖಾನ್, 9.02ಕ್ಕೆ ಮೊದಲು ನೀತಿ ಭಾಷಣ ಮುಗಿಸಿ 9.04ಕ್ಕೆ ಸದನದಿಂದ ನಿರ್ಗಮಿಸಿದರು. ಖಾನ್ ಅವರನ್ನು ಸದನದ ಹೊರಗೆ ಸ್ಪೀಕರ್ ಎಎನ್ ಶಂಸೀರ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೆ. ರಾಧಾಕೃಷ್ಣನ್ ಅವರು ಹೂಗುಚ್ಛಗಳೊಂದಿಗೆ ಸ್ವಾಗತಿಸಿದರು.

ಖಾನ್ ಅವರು ಸದನದಲ್ಲಿ ಎಲ್ಲರಿಗೂ ಶುಭಾಶಯ ಕೋರುವ ಮೂಲಕ ಸಾಂಪ್ರದಾಯಿಕ ನೀತಿಯ ಭಾಷಣವನ್ನು ಪ್ರಾರಂಭಿಸಿ, ‘ನಾನು ಈಗ ಕೊನೆಯ ಪ್ಯಾರಾವನ್ನು ಓದುತ್ತೇನೆ’ ಎಂದರು.

62 ಪುಟಗಳ ನೀತಿ ಭಾಷಣದ 136 ಪ್ಯಾರಾಗಳಲ್ಲಿ ಕೊನೆಯದನ್ನು ಓದಿದ ರಾಜ್ಯಪಾಲರು, ‘ನಮ್ಮ ಶ್ರೇಷ್ಠ ಪರಂಪರೆ ಕಟ್ಟಡಗಳು ಅಥವಾ ಸ್ಮಾರಕಗಳಿಂದಲ್ಲ. ಸಂವಿಧಾನದ ಅಮೂಲ್ಯ ಪರಂಪರೆಗೆ ನಾವು ತೋರುವ ಗೌರವವನ್ನು ನೆನಪಿಸಿಕೊಳ್ಳೋಣ. ಭಾರತದ ಪ್ರಜಾಪ್ರಭುತ್ವ, ಜಾತ್ಯತೀತತೆ, ಫೆಡರಲಿಸಂ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಅರಿಯೋಣ. ಒಕ್ಕೂಟ ವ್ಯವಸ್ಥೆಯ ಮೂಲತತ್ವವೇ ಭಾರತವನ್ನು ಇಷ್ಟು ವರ್ಷಗಳ ಕಾಲ ಏಕತೆ ಮತ್ತು ಬಲಿಷ್ಠವಾಗಿ ಇರಿಸಿದೆ’ ಎಂದು ಅವರು ಹೇಳಿದರು. ‘ಈ ಸಾರವು ದುರ್ಬಲಗೊಳ್ಳದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ’ ಎಂದರು.

‘ಈ ವೈವಿಧ್ಯಮಯ ಮತ್ತು ಸುಂದರವಾದ ರಾಷ್ಟ್ರದ ಭಾಗವಾಗಿ, ನಾವು ನಮ್ಮ ದಾರಿಯಲ್ಲಿ ಸಿಗುವ ಎಲ್ಲಾ ಸವಾಲುಗಳನ್ನು ಜಯಿಸುವ ಮೂಲಕ ಅಂತರ್ಗತ ಬೆಳವಣಿಗೆ ಮತ್ತು ಜವಾಬ್ದಾರಿಯುತ ಸ್ಥಿತಿಸ್ಥಾಪಕತ್ವದ ವಸ್ತ್ರವನ್ನು ನೇಯುತ್ತೇವೆ’ ಎಂದು ಅವರು ತಮ್ಮ ಭಾಷಣವನ್ನು ಮುಗಿಸಿ, ತಮಗೆ ಮೀಸಲಿಟ್ಟ ಆಸನದಲ್ಲಿ ಕುಳಿತುಕೊಂಡರು.

ರಾಷ್ಟ್ರಗೀತೆ ಮುಗಿದ ನಂತರ ಖಾನ್ ಅವರು ವಿಧಾನಸಭೆಯಿಂದ ಹೊರನಡೆದರು. ಈ ಸಂಪೂರ್ಣ ಪ್ರಹಸನವು ಕೇವಲ 5 ನಿಮಿಷಗಳಿಗಿಂತ ಕಡಿಮೆ ಸಮಯವನ್ನು ತೆಗೆದುಕೊಂಡಿತು.

ರಾಜ್ಯಪಾಲ ಖಾನ್ ಮತ್ತು ಪಿಣರಾಯಿ ವಿಜಯನ್ ಸರ್ಕಾರದ ನಡುವೆ ಹಲವು ದಿನಗಳಿಂದ ತಿಕ್ಕಾಟ ನಡೆಯುತ್ತಿದೆ. ಮುಖ್ಯವಾಗಿ, ರಾಜ್ಯದ ವಿಶ್ವವಿದ್ಯಾಲಯಗಳ ಕಾರ್ಯನಿರ್ವಹಣೆ ಮತ್ತು ವಿಧಾನಸಭೆ ಅಂಗೀಕರಿಸಿದ ಕೆಲವು ಮಸೂದೆಗಳಿಗೆ ಅವರು ಸಹಿ ಹಾಕದಿರುವುದು ಮನಸ್ಥಾಪಕ್ಕೆ ಕಾರಣವಾಗಿದೆ.

ರಾಜ್ಯಪಾಲರ ಕಾರ್ಯವೈಖರಿ ವಿರುದ್ಧ ಸಿಪಿಐ(ಎಂ), ಅದರ ಯುವ ಘಟಕ ‘ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ’ (ಡಿವೈಎಫ್ಐ), ವಿದ್ಯಾರ್ಥಿ ಸಂಘಟನೆಯಾದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್ಎಫ್ಐ) ಘಟಕಗಳು ರಾಜ್ಯದಾದ್ಯಂತ ವ್ಯಾಪಕ ಪ್ರತಿಭಟನೆ ನಡೆಸಿದವು.

ಇದನ್ನೂ ಓದಿ; ನನಗೆ ಹಿಂದಿ ಬರಲ್ಲ, ಕ್ರಿಮಿನಲ್ ಕಾನೂನುಗಳನ್ನು ಹಳೆಯ ಹೆಸರಿನಿಂದಲೇ ಉಲ್ಲೇಖಿಸುತ್ತೇನೆ: ನ್ಯಾ. ಆನಂದ್ ವೆಂಕಟೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...