Homeಮುಖಪುಟಪ.ಬಂಗಾಳ ತಲುಪಿದ ಭಾರತ್ ಜೋಡೋ ನ್ಯಾಯ ಯಾತ್ರೆ; INDIA ಒಕ್ಕೂಟ ಅನ್ಯಾಯದ ವಿರುದ್ಧ ಹೋರಾಡಲಿದೆ: ರಾಹುಲ್...

ಪ.ಬಂಗಾಳ ತಲುಪಿದ ಭಾರತ್ ಜೋಡೋ ನ್ಯಾಯ ಯಾತ್ರೆ; INDIA ಒಕ್ಕೂಟ ಅನ್ಯಾಯದ ವಿರುದ್ಧ ಹೋರಾಡಲಿದೆ: ರಾಹುಲ್ ಗಾಂಧಿ

- Advertisement -
- Advertisement -

ಕಾಂಗ್ರೆಸ್‌ನ ಭಾರತ್ ಜೋಡೋ ನ್ಯಾಯ ಯಾತ್ರೆ ಗುರುವಾರ ಪಶ್ಚಿಮ ಬಂಗಾಳಕ್ಕೆ ಪ್ರವೇಶಿಸಿದ್ದು, ಪ.ಬಂಗಾಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಧೀರ್ ಚೌಧರಿ ಅವರು ಬಂಗಾಳದಲ್ಲಿ ಯಾತ್ರೆಯನ್ನು ಸ್ವಾಗತಿಸಿದ್ದಾರೆ. ಯಾತ್ರೆಯು ಕೂಚ್ ಬೆಹಾರ್ ಜಿಲ್ಲೆಯ ಬಕ್ಷಿರ್ಹತ್ ಮೂಲಕ ಪಶ್ಚಿಮ ಬಂಗಾಳವನ್ನು ಪ್ರವೇಶಿಸಿದೆ.

ನ್ಯಾಯ ಯಾತ್ರೆ ಪಶ್ಚಿಮ ಬಂಗಾಳ ಪ್ರವೇಶಿಸಿದಾಗ ಕೂಚ್ ಬೆಹಾರ್‌ನಲ್ಲಿ ರಸ್ತೆಯುದ್ದಕ್ಕೂ ಜನರು ಸಾಲು ನಿಂತು ರಾಹುಲ್‌ ಗಾಂಧಿ ಸ್ವಾಗತವನ್ನು ಕೋರಿದ್ದಾರೆ. ಪಶ್ಚಿಮ ಬಂಗಾಳಕ್ಕೆ ಬಂದಿದ್ದಕ್ಕೆ ಖುಷಿಯಾಗಿದೆ. ನಿಮ್ಮ ಮಾತನ್ನು ಕೇಳಲು ಮತ್ತು ನಿಮ್ಮೊಂದಿಗೆ ದೃಢವಾಗಿ ನಿಲ್ಲಲು ನಾವು ಇಲ್ಲಿಗೆ ಬಂದಿದ್ದೇವೆ. ದೇಶಾದ್ಯಂತ ಅನ್ಯಾಯದ ವಿರುದ್ಧ ಪ್ರತಿಪಕ್ಷ INDIA ಬಣ ಹೋರಾಟ ನಡೆಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೇಶಾದ್ಯಂತ ಅನ್ಯಾಯ ನಡೆಯುತ್ತಿರುವುದರಿಂದ ‘ನ್ಯಾಯ’ ಪದವನ್ನು ಯಾತ್ರೆಗೆ ಸೇರಿಸಿದ್ದೇವೆ. ಬಿಜೆಪಿ ಮತ್ತು ಆರೆಸ್ಸೆಸ್ ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಿದೆ. INDIA ಬಣವು ದೇಶದಾದ್ಯಂತ ಅನ್ಯಾಯದ ವಿರುದ್ಧ ಹೋರಾಟವನ್ನು ನಡೆಸುತ್ತದೆ ಎಂದು ಹೇಳಿದ್ದಾರೆ.

ಅಸ್ಸಾಂನ ಗೌರಿಪುರದಲ್ಲಿ ರಾತ್ರಿ ತಂಗಿದ್ದ ರಾಹುಲ್‌ ಗಾಂಧಿ ಅಸ್ಸಾಂನಲ್ಲಿ ಕೊನೆಯ ದಿನದ ಯಾತ್ರೆಯ ಭಾಗವಾಗಿ ವಾಹನದಲ್ಲಿ ಸ್ವಲ್ಪ ದೂರದವರೆಗೆ ಸಾಗಿದರು. ಅಸ್ಸಾಂನ ಧುಬ್ರಿ ಜಿಲ್ಲೆಯ ಗೋಲಕ್‌ಗಂಜ್ ಮೂಲಕ ಸಾಗಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಅಸ್ಸಾಂನಲ್ಲಿ ಮುಕ್ತಾಯಗೊಂಡಿದೆ. ಅಸ್ಸಾಂನಲ್ಲಿ ಯಾತ್ರೆ ವೇಳೆ ಅಸ್ಸಾಂನ ಬಿಜೆಪಿ ಸರಕಾರ ಮತ್ತು ಕಾಂಗ್ರೆಸ್‌ ನಡುವೆ ಜಟಾಪಟಿ ನಡೆದಿತ್ತು.

ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ಕನ್ಹಯ್ಯಾ ಕುಮಾರ್ ಮತ್ತು ಪಕ್ಷದ ಇತರ ನಾಯಕರು ಮತ್ತು ಕಾರ್ಯಕರ್ತರ ವಿರುದ್ಧ ಹಿಂಸಾಚಾರ, ಪ್ರಚೋದನೆ, ಹಲ್ಲೆ ಕುರಿತು ಪ್ರಕರಣವನ್ನು ದಾಖಲಿಸಲಾಗಿದೆ. ಅಸ್ಸಾಂನ ಗುವಾಹಟಿಯಲ್ಲಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಮುಂದುವರಿದಾಗ ಪೊಲೀಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಜೋರ್ಹತ್ ಜಿಲ್ಲಾ ಪೊಲೀಸರು ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಕುಮಾರ್ ಬೋರಾ ಅವರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿದ್ದು, ಜನವರಿ 31ರಂದು ತನಿಖಾ ಅಧಿಕಾರಿಯ ಮುಂದೆ ಹಾಜರಾಗುವಂತೆ ಸೂಚಿಸಿದ್ದಾರೆ.

ಪ.ಬಂಗಾಳದಲ್ಲಿ ರಾಹುಲ್‌ ಗಾಂಧಿಯವರು ಇತರ ಹಿರಿಯ ನಾಯಕರೊಂದಿಗೆ ಟೀ ಸ್ಟಾಲ್‌ವೊಂದಕ್ಕೆ ಭೇಟಿ ನೀಡಿ ಅಲ್ಲಿನ ಬಡ ಮತ್ತು ಹಿಂದುಳಿದ ವರ್ಗದ ಜನರೊಂದಿಗೆ ಸಂವಹನ ನಡೆಸಿದ್ದಾರೆ.

ಕಳೆದ ವರ್ಷ ರಚನೆಯಾದ 28 ವಿರೋಧ ಪಕ್ಷಗಳನ್ನೊಳಗೊಂಡ ಪ್ರತಿಪಕ್ಷಗಳ ಒಕ್ಕೂಟವಾದ INDIA ಬಣದ ಜೊತೆಗೆ ಪ.ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಣಿಸಿಕೊಂಡಿದ್ದರು. ಬಂಗಾಳದಲ್ಲಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿದ್ದರು. ಇದಾದ ಒಂದು ದಿನದ ಬಳಿಕ ಭಾರತ್‌ ಜೋಡೋ ನ್ಯಾಯ ಯಾತ್ರೆ ಬಂಗಾಳವನ್ನು ಪ್ರವೇಶಿಸಿದೆ.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಜನವರಿ 14ರಂದು ಮಣಿಪುರದಿಂದ ಪ್ರಾರಂಭವಾಯಿತು ಮತ್ತು ಮಾರ್ಚ್ 20ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.

ಇದನ್ನು ಓದಿ: ಮತೀಯ ಗೂಂಡಾಗಿರಿ ತಾಣವಾಗುತ್ತಿದೆಯಾ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...