Homeಮುಖಪುಟಪ.ಬಂಗಾಳ ತಲುಪಿದ ಭಾರತ್ ಜೋಡೋ ನ್ಯಾಯ ಯಾತ್ರೆ; INDIA ಒಕ್ಕೂಟ ಅನ್ಯಾಯದ ವಿರುದ್ಧ ಹೋರಾಡಲಿದೆ: ರಾಹುಲ್...

ಪ.ಬಂಗಾಳ ತಲುಪಿದ ಭಾರತ್ ಜೋಡೋ ನ್ಯಾಯ ಯಾತ್ರೆ; INDIA ಒಕ್ಕೂಟ ಅನ್ಯಾಯದ ವಿರುದ್ಧ ಹೋರಾಡಲಿದೆ: ರಾಹುಲ್ ಗಾಂಧಿ

- Advertisement -
- Advertisement -

ಕಾಂಗ್ರೆಸ್‌ನ ಭಾರತ್ ಜೋಡೋ ನ್ಯಾಯ ಯಾತ್ರೆ ಗುರುವಾರ ಪಶ್ಚಿಮ ಬಂಗಾಳಕ್ಕೆ ಪ್ರವೇಶಿಸಿದ್ದು, ಪ.ಬಂಗಾಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಧೀರ್ ಚೌಧರಿ ಅವರು ಬಂಗಾಳದಲ್ಲಿ ಯಾತ್ರೆಯನ್ನು ಸ್ವಾಗತಿಸಿದ್ದಾರೆ. ಯಾತ್ರೆಯು ಕೂಚ್ ಬೆಹಾರ್ ಜಿಲ್ಲೆಯ ಬಕ್ಷಿರ್ಹತ್ ಮೂಲಕ ಪಶ್ಚಿಮ ಬಂಗಾಳವನ್ನು ಪ್ರವೇಶಿಸಿದೆ.

ನ್ಯಾಯ ಯಾತ್ರೆ ಪಶ್ಚಿಮ ಬಂಗಾಳ ಪ್ರವೇಶಿಸಿದಾಗ ಕೂಚ್ ಬೆಹಾರ್‌ನಲ್ಲಿ ರಸ್ತೆಯುದ್ದಕ್ಕೂ ಜನರು ಸಾಲು ನಿಂತು ರಾಹುಲ್‌ ಗಾಂಧಿ ಸ್ವಾಗತವನ್ನು ಕೋರಿದ್ದಾರೆ. ಪಶ್ಚಿಮ ಬಂಗಾಳಕ್ಕೆ ಬಂದಿದ್ದಕ್ಕೆ ಖುಷಿಯಾಗಿದೆ. ನಿಮ್ಮ ಮಾತನ್ನು ಕೇಳಲು ಮತ್ತು ನಿಮ್ಮೊಂದಿಗೆ ದೃಢವಾಗಿ ನಿಲ್ಲಲು ನಾವು ಇಲ್ಲಿಗೆ ಬಂದಿದ್ದೇವೆ. ದೇಶಾದ್ಯಂತ ಅನ್ಯಾಯದ ವಿರುದ್ಧ ಪ್ರತಿಪಕ್ಷ INDIA ಬಣ ಹೋರಾಟ ನಡೆಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೇಶಾದ್ಯಂತ ಅನ್ಯಾಯ ನಡೆಯುತ್ತಿರುವುದರಿಂದ ‘ನ್ಯಾಯ’ ಪದವನ್ನು ಯಾತ್ರೆಗೆ ಸೇರಿಸಿದ್ದೇವೆ. ಬಿಜೆಪಿ ಮತ್ತು ಆರೆಸ್ಸೆಸ್ ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಿದೆ. INDIA ಬಣವು ದೇಶದಾದ್ಯಂತ ಅನ್ಯಾಯದ ವಿರುದ್ಧ ಹೋರಾಟವನ್ನು ನಡೆಸುತ್ತದೆ ಎಂದು ಹೇಳಿದ್ದಾರೆ.

ಅಸ್ಸಾಂನ ಗೌರಿಪುರದಲ್ಲಿ ರಾತ್ರಿ ತಂಗಿದ್ದ ರಾಹುಲ್‌ ಗಾಂಧಿ ಅಸ್ಸಾಂನಲ್ಲಿ ಕೊನೆಯ ದಿನದ ಯಾತ್ರೆಯ ಭಾಗವಾಗಿ ವಾಹನದಲ್ಲಿ ಸ್ವಲ್ಪ ದೂರದವರೆಗೆ ಸಾಗಿದರು. ಅಸ್ಸಾಂನ ಧುಬ್ರಿ ಜಿಲ್ಲೆಯ ಗೋಲಕ್‌ಗಂಜ್ ಮೂಲಕ ಸಾಗಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಅಸ್ಸಾಂನಲ್ಲಿ ಮುಕ್ತಾಯಗೊಂಡಿದೆ. ಅಸ್ಸಾಂನಲ್ಲಿ ಯಾತ್ರೆ ವೇಳೆ ಅಸ್ಸಾಂನ ಬಿಜೆಪಿ ಸರಕಾರ ಮತ್ತು ಕಾಂಗ್ರೆಸ್‌ ನಡುವೆ ಜಟಾಪಟಿ ನಡೆದಿತ್ತು.

ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ಕನ್ಹಯ್ಯಾ ಕುಮಾರ್ ಮತ್ತು ಪಕ್ಷದ ಇತರ ನಾಯಕರು ಮತ್ತು ಕಾರ್ಯಕರ್ತರ ವಿರುದ್ಧ ಹಿಂಸಾಚಾರ, ಪ್ರಚೋದನೆ, ಹಲ್ಲೆ ಕುರಿತು ಪ್ರಕರಣವನ್ನು ದಾಖಲಿಸಲಾಗಿದೆ. ಅಸ್ಸಾಂನ ಗುವಾಹಟಿಯಲ್ಲಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಮುಂದುವರಿದಾಗ ಪೊಲೀಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಜೋರ್ಹತ್ ಜಿಲ್ಲಾ ಪೊಲೀಸರು ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಕುಮಾರ್ ಬೋರಾ ಅವರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿದ್ದು, ಜನವರಿ 31ರಂದು ತನಿಖಾ ಅಧಿಕಾರಿಯ ಮುಂದೆ ಹಾಜರಾಗುವಂತೆ ಸೂಚಿಸಿದ್ದಾರೆ.

ಪ.ಬಂಗಾಳದಲ್ಲಿ ರಾಹುಲ್‌ ಗಾಂಧಿಯವರು ಇತರ ಹಿರಿಯ ನಾಯಕರೊಂದಿಗೆ ಟೀ ಸ್ಟಾಲ್‌ವೊಂದಕ್ಕೆ ಭೇಟಿ ನೀಡಿ ಅಲ್ಲಿನ ಬಡ ಮತ್ತು ಹಿಂದುಳಿದ ವರ್ಗದ ಜನರೊಂದಿಗೆ ಸಂವಹನ ನಡೆಸಿದ್ದಾರೆ.

ಕಳೆದ ವರ್ಷ ರಚನೆಯಾದ 28 ವಿರೋಧ ಪಕ್ಷಗಳನ್ನೊಳಗೊಂಡ ಪ್ರತಿಪಕ್ಷಗಳ ಒಕ್ಕೂಟವಾದ INDIA ಬಣದ ಜೊತೆಗೆ ಪ.ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಣಿಸಿಕೊಂಡಿದ್ದರು. ಬಂಗಾಳದಲ್ಲಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿದ್ದರು. ಇದಾದ ಒಂದು ದಿನದ ಬಳಿಕ ಭಾರತ್‌ ಜೋಡೋ ನ್ಯಾಯ ಯಾತ್ರೆ ಬಂಗಾಳವನ್ನು ಪ್ರವೇಶಿಸಿದೆ.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಜನವರಿ 14ರಂದು ಮಣಿಪುರದಿಂದ ಪ್ರಾರಂಭವಾಯಿತು ಮತ್ತು ಮಾರ್ಚ್ 20ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.

ಇದನ್ನು ಓದಿ: ಮತೀಯ ಗೂಂಡಾಗಿರಿ ತಾಣವಾಗುತ್ತಿದೆಯಾ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...