Homeಕರ್ನಾಟಕಜಗದೀಶ್ ಶೆಟ್ಟರ್ ದಿಢೀರ್ ಬಿಜೆಪಿ ಸೇರ್ಪಡೆ: ಸಿಎಂ, ಡಿಸಿಎಂ ಏನಂದ್ರು?

ಜಗದೀಶ್ ಶೆಟ್ಟರ್ ದಿಢೀರ್ ಬಿಜೆಪಿ ಸೇರ್ಪಡೆ: ಸಿಎಂ, ಡಿಸಿಎಂ ಏನಂದ್ರು?

- Advertisement -
- Advertisement -

ಮಾಜಿ ಮುಖ್ಯಮಂತ್ರಿ, ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇಂದು (ಜ.25) ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಪ್ರಮುಖರ ಸಮ್ಮುಖದಲ್ಲಿ ಶೆಟ್ಟರ್ ಕೇಸರಿ ಪಕ್ಷಕ್ಕೆ ಮರಳಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಯಾವುದೇ ಅನ್ಯಾಯ, ಅವಮಾನ ಆಗಿಲ್ಲ. ಅವರು ಬಿಜೆಪಿಯವರು ಟಿಕೆಟ್ ಕೊಡದೇ ಅವಮಾನ ಮಾಡಿದ್ದಾರೆ ಎಂದು ಹೇಳಿ ಕಾಂಗ್ರೆಸ್ ಸೇರಿದ್ದರು. ನಾವು ಅವರಿಗೆ ಟಿಕೆಟ್ ಕೊಟ್ಟರೂ ವಿಧಾನಸಭಾ ಚುನಾವಣೆಯಲ್ಲಿ ಸೋತರು. ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ಗೌರವಯುತವಾಗಿ ನಡೆಸಿಕೊಂಡಿದ್ದೇವೆ. ಯಾವ ಕಾರಣಕ್ಕೆ ಅವರು ಪುನ: ಬಿಜೆಪಿಗೆ ಸೇರ್ಪಡೆಯಾಗಿದ್ದಾರೆಂದು ನನಗೆ ಗೊತ್ತಿಲ್ಲ. ನನ್ನ ಬಳಿ ಬಿಜೆಪಿಯಲ್ಲಿ ಅವಮಾನವಾಗಿದ್ದು ಮತ್ತೆ ವಾಪಸ್ಸು ಹೋಗುವುದಿಲ್ಲ ಎಂದಿದ್ದರು. ನನ್ನನ್ನು ಅವರು 10 ದಿನಗಳ ಹಿಂದೆ ಸಭೆಯೊಂದರಲ್ಲಿ ಭೇಟಿ ಮಾಡಿದ್ದರು, ಆ ನಂತರ ಸಿಕ್ಕಿರಲಿಲ್ಲ ಎಂದಿದ್ದಾರೆ.

ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿದ್ದು, ಕೆಲ ದಿನಗಳ ಹಿಂದೆ ಜಗದೀಶ್ ಶೆಟ್ಟರ್ ನನ್ನನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಬಿಜೆಪಿಯವರು ನಮ್ಮ ಕಾರ್ಯಕರ್ತರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ನಾವು ಈ ಬಗ್ಗೆ ಎಚ್ಚರವಾಗಿರಬೇಕು ಎಂದಿದ್ದರು. ನಿನ್ನೆ ಬೆಳಿಗ್ಗೆ ಅವರೊಂದಿಗೆ ಮಾತನಾಡಿದ್ದೆ. ಕಾಂಗ್ರೆಸ್‌ ನನಗೆ ರಾಜಕೀಯ ಮರುಜೀವ ಕೊಟ್ಟಿದೆ. ಯಾವುದೇ ಕಾರಣಕ್ಕೆ ಬಿಜೆಪಿಗೆ ಹೋಗಲ್ಲ ಎಂದಿದ್ದರು. ಈ ಮಾತನ್ನು ನಂಬಿ ನಾನು ಮೈಸೂರಿನಲ್ಲಿ ಅವರ ಬಗ್ಗೆ ಮಾತನಾಡಿದ್ದೆ. ಈಗ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ಮಾಧ್ಯಮಗಳಿಂದ ತಿಳಿಯಿತು. ಅವರು ಹಿರಿಯರು ಎಂದು ನಮ್ಮ ಪಕ್ಷ ಗೌರವ ಕೊಟ್ಟಿತ್ತು ಎಂದಿದ್ದಾರೆ.

ನಾನು ಹೆಚ್ಚಿಗೆ ಮಾತನಾಡುವುದಿಲ್ಲ. ಅವರು ಮೊದಲು ಹೇಳಿಕೆ ಕೊಡಲಿ, ಆಮೇಲೆ ನಾನು ಮಾತನಾಡುತ್ತೇನೆ. ನನಗೆ ಇದುವರೆಗೆ ಅವರ ರಾಜೀನಾಮೆ ಪತ್ರ ದೊರೆತಿಲ್ಲ ಎಂದರು. ದೇಶದ ಹಿತಕ್ಕಾಗಿ ಬಿಜೆಪಿಗೆ ಮರಳಿರುವುದಾಗಿ ಶೆಟ್ಟರ್ ಹೇಳಿದ್ದಾರೆ ಎಂದು ಮಾಧ್ಯಮದವರು ಡಿಕೆಶಿಗೆ ತಿಳಿಸಿದರು. ಇದಕ್ಕೆ ಕೋಪಗೊಂಡ ಡಿಕೆಶಿ, ಬಿಜೆಪಿಯವರು ಅವರಿಗೆ ಸೀಟ್ ತಪ್ಪಿಸುವಾಗ ಅವರಿಗೆ ದೇಶದ ಹಿತ ಗೊತ್ತಿರಲಿಲ್ವಾ? ಎಂದು ಪ್ರಶ್ನಿಸಿದರು.

ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ : ಬಸವರಾಜ ಹೊರಟ್ಟಿ

ಜಗದೀಶ್ ಶೆಟ್ಟರ್ ಧಿಡೀರ್ ಬಿಜೆಪಿ ಸೇರ್ಪಡೆಯ ಕುರಿತು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು (ಜ.25) ಮಧ್ಯಾಹ್ನ 12:45ಕ್ಕೆ ಜಗದೀಶ್ ಶೆಟ್ಟರ್ ಕರೆ ಮಾಡಿ ನಾನು ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. ರಾಜೀನಾಮೆ ಪತ್ರವನ್ನು ಈ-ಮೇಲ್ ಮಾಡುವುದಾಗಿ ಹೇಳಿದ್ದಾರೆ. ಆದರೆ, ನನಗೆ ಇದುವರೆಗೆ ಈ-ಮೇಲ್ ಬಂದಿಲ್ಲ. ನಿಯಮಗಳ ಪ್ರಕಾರ, ಸದಸ್ಯರು ನೇರವಾಗಿ ಬಂದು ರಾಜೀನಾಮೆ ನೀಡ್ಬೇಕು. ಇಲ್ಲದಿದ್ದರೆ ಪಕ್ಷಾಂತರ ಕಾಯ್ದೆ ಅನ್ವಯ ಆಗಲಿದೆ. ಯಾರಾದರು ದೂರು ಕೊಟ್ಟರೆ ಪಕ್ಷಾಂತರ ಕಾಯ್ದೆ ಪ್ರಕಾರ ಶೆಟ್ಟರ್‌ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಏನಿದು ಪಕ್ಷಾಂತರ ನಿಷೇಧ ಕಾಯ್ದೆ? 

ರಾಜೀವ್‌ ಗಾಂಧಿ ಪ್ರಧಾನಿಯಾಗಿದ್ದ ಅವಧಿಯಲ್ಲಿ, ಅಂದರೆ 1985ರ ಜನವರಿ 30ರಂದು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಯಿತು. 2003ರಲ್ಲಿ ಕೇಂದ್ರದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ ಈ ಕಾಯ್ದೆಗೆ ಮತ್ತಷ್ಟು ಬಲ ತುಂಬಲಾಯಿತು.

ಪಕ್ಷಾಂತರ ನಿಷೇಧ ಕಾಯ್ದೆಯ ಪ್ರಕಾರ, ರಾಜಕೀಯ ಪಕ್ಷದಿಂದ ಆಯ್ಕೆಯಾಗುವ ಯಾವುದೇ ಶಾಸಕ/ಸಂಸದರು, ತಾನು ಆಯ್ಕೆಯಾದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡದೆ, ಇನ್ನೊಂದು ರಾಜಕೀಯ ಪಕ್ಷಕ್ಕೆ ಸೇರಿದರೆ ಅದು ಪಕ್ಷಾಂತರವಾಗಲಿದೆ. ಅಂಥವರನ್ನು ಅನರ್ಹಗೊಳಿಸಬಹುದು.

ಮತದಾನದ ಸಮಯದಲ್ಲಿ ಹಾಜರಿರಲೇಬೇಕು ಎಂದು ರಾಜಕೀಯ ಪಕ್ಷವೊಂದು ತನ್ನ ಶಾಸಕ/ಸಂಸದರಿಗೆ ಲಿಖಿತ ಸೂಚನೆ (ವಿಪ್‌) ಜಾರಿಗೊಳಿಸಿದ ಬಳಿಕವೂ, ಅದನ್ನು ಉಲ್ಲಂಘನೆ ಮಾಡುವವರು ಹಾಗೂ ಮತದಾನದಿಂದ ದೂರ ಉಳಿಯುವವರನ್ನು ಪಕ್ಷಾಂತರಿಗಳು ಎಂದು ಅನರ್ಹಗೊಳಿಸಬಹುದು.

ಒಬ್ಬ ಸದಸ್ಯ ಪಕ್ಷಾಂತರ ಮಾಡಿದ್ದಾನೋ ಇಲ್ಲವೇ ಎಂಬ ನಿರ್ಣಯವನ್ನು ಸಭಾಧ್ಯಕ್ಷ, ಸ್ಪೀಕರ್‌ ಪಕ್ಷಾಂತರ ನಿಷೇಧ ಕಾಯ್ದೆಯೆ ಅನ್ವಯ ತೀರ್ಮಾನ ಕೈಗೊಳ್ಳುವ ಅಧಿಕಾರ ಹೊಂದಿರುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್‌ ತೊರೆದು ಮತ್ತೆ ಬಿಜೆಪಿ ಸೇರಿದ ಜಗದೀಶ್ ಶೆಟ್ಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...