Homeಕರ್ನಾಟಕಜಗದೀಶ್ ಶೆಟ್ಟರ್ ದಿಢೀರ್ ಬಿಜೆಪಿ ಸೇರ್ಪಡೆ: ಸಿಎಂ, ಡಿಸಿಎಂ ಏನಂದ್ರು?

ಜಗದೀಶ್ ಶೆಟ್ಟರ್ ದಿಢೀರ್ ಬಿಜೆಪಿ ಸೇರ್ಪಡೆ: ಸಿಎಂ, ಡಿಸಿಎಂ ಏನಂದ್ರು?

- Advertisement -
- Advertisement -

ಮಾಜಿ ಮುಖ್ಯಮಂತ್ರಿ, ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇಂದು (ಜ.25) ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಪ್ರಮುಖರ ಸಮ್ಮುಖದಲ್ಲಿ ಶೆಟ್ಟರ್ ಕೇಸರಿ ಪಕ್ಷಕ್ಕೆ ಮರಳಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಯಾವುದೇ ಅನ್ಯಾಯ, ಅವಮಾನ ಆಗಿಲ್ಲ. ಅವರು ಬಿಜೆಪಿಯವರು ಟಿಕೆಟ್ ಕೊಡದೇ ಅವಮಾನ ಮಾಡಿದ್ದಾರೆ ಎಂದು ಹೇಳಿ ಕಾಂಗ್ರೆಸ್ ಸೇರಿದ್ದರು. ನಾವು ಅವರಿಗೆ ಟಿಕೆಟ್ ಕೊಟ್ಟರೂ ವಿಧಾನಸಭಾ ಚುನಾವಣೆಯಲ್ಲಿ ಸೋತರು. ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ಗೌರವಯುತವಾಗಿ ನಡೆಸಿಕೊಂಡಿದ್ದೇವೆ. ಯಾವ ಕಾರಣಕ್ಕೆ ಅವರು ಪುನ: ಬಿಜೆಪಿಗೆ ಸೇರ್ಪಡೆಯಾಗಿದ್ದಾರೆಂದು ನನಗೆ ಗೊತ್ತಿಲ್ಲ. ನನ್ನ ಬಳಿ ಬಿಜೆಪಿಯಲ್ಲಿ ಅವಮಾನವಾಗಿದ್ದು ಮತ್ತೆ ವಾಪಸ್ಸು ಹೋಗುವುದಿಲ್ಲ ಎಂದಿದ್ದರು. ನನ್ನನ್ನು ಅವರು 10 ದಿನಗಳ ಹಿಂದೆ ಸಭೆಯೊಂದರಲ್ಲಿ ಭೇಟಿ ಮಾಡಿದ್ದರು, ಆ ನಂತರ ಸಿಕ್ಕಿರಲಿಲ್ಲ ಎಂದಿದ್ದಾರೆ.

ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿದ್ದು, ಕೆಲ ದಿನಗಳ ಹಿಂದೆ ಜಗದೀಶ್ ಶೆಟ್ಟರ್ ನನ್ನನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಬಿಜೆಪಿಯವರು ನಮ್ಮ ಕಾರ್ಯಕರ್ತರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ನಾವು ಈ ಬಗ್ಗೆ ಎಚ್ಚರವಾಗಿರಬೇಕು ಎಂದಿದ್ದರು. ನಿನ್ನೆ ಬೆಳಿಗ್ಗೆ ಅವರೊಂದಿಗೆ ಮಾತನಾಡಿದ್ದೆ. ಕಾಂಗ್ರೆಸ್‌ ನನಗೆ ರಾಜಕೀಯ ಮರುಜೀವ ಕೊಟ್ಟಿದೆ. ಯಾವುದೇ ಕಾರಣಕ್ಕೆ ಬಿಜೆಪಿಗೆ ಹೋಗಲ್ಲ ಎಂದಿದ್ದರು. ಈ ಮಾತನ್ನು ನಂಬಿ ನಾನು ಮೈಸೂರಿನಲ್ಲಿ ಅವರ ಬಗ್ಗೆ ಮಾತನಾಡಿದ್ದೆ. ಈಗ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ಮಾಧ್ಯಮಗಳಿಂದ ತಿಳಿಯಿತು. ಅವರು ಹಿರಿಯರು ಎಂದು ನಮ್ಮ ಪಕ್ಷ ಗೌರವ ಕೊಟ್ಟಿತ್ತು ಎಂದಿದ್ದಾರೆ.

ನಾನು ಹೆಚ್ಚಿಗೆ ಮಾತನಾಡುವುದಿಲ್ಲ. ಅವರು ಮೊದಲು ಹೇಳಿಕೆ ಕೊಡಲಿ, ಆಮೇಲೆ ನಾನು ಮಾತನಾಡುತ್ತೇನೆ. ನನಗೆ ಇದುವರೆಗೆ ಅವರ ರಾಜೀನಾಮೆ ಪತ್ರ ದೊರೆತಿಲ್ಲ ಎಂದರು. ದೇಶದ ಹಿತಕ್ಕಾಗಿ ಬಿಜೆಪಿಗೆ ಮರಳಿರುವುದಾಗಿ ಶೆಟ್ಟರ್ ಹೇಳಿದ್ದಾರೆ ಎಂದು ಮಾಧ್ಯಮದವರು ಡಿಕೆಶಿಗೆ ತಿಳಿಸಿದರು. ಇದಕ್ಕೆ ಕೋಪಗೊಂಡ ಡಿಕೆಶಿ, ಬಿಜೆಪಿಯವರು ಅವರಿಗೆ ಸೀಟ್ ತಪ್ಪಿಸುವಾಗ ಅವರಿಗೆ ದೇಶದ ಹಿತ ಗೊತ್ತಿರಲಿಲ್ವಾ? ಎಂದು ಪ್ರಶ್ನಿಸಿದರು.

ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ : ಬಸವರಾಜ ಹೊರಟ್ಟಿ

ಜಗದೀಶ್ ಶೆಟ್ಟರ್ ಧಿಡೀರ್ ಬಿಜೆಪಿ ಸೇರ್ಪಡೆಯ ಕುರಿತು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು (ಜ.25) ಮಧ್ಯಾಹ್ನ 12:45ಕ್ಕೆ ಜಗದೀಶ್ ಶೆಟ್ಟರ್ ಕರೆ ಮಾಡಿ ನಾನು ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. ರಾಜೀನಾಮೆ ಪತ್ರವನ್ನು ಈ-ಮೇಲ್ ಮಾಡುವುದಾಗಿ ಹೇಳಿದ್ದಾರೆ. ಆದರೆ, ನನಗೆ ಇದುವರೆಗೆ ಈ-ಮೇಲ್ ಬಂದಿಲ್ಲ. ನಿಯಮಗಳ ಪ್ರಕಾರ, ಸದಸ್ಯರು ನೇರವಾಗಿ ಬಂದು ರಾಜೀನಾಮೆ ನೀಡ್ಬೇಕು. ಇಲ್ಲದಿದ್ದರೆ ಪಕ್ಷಾಂತರ ಕಾಯ್ದೆ ಅನ್ವಯ ಆಗಲಿದೆ. ಯಾರಾದರು ದೂರು ಕೊಟ್ಟರೆ ಪಕ್ಷಾಂತರ ಕಾಯ್ದೆ ಪ್ರಕಾರ ಶೆಟ್ಟರ್‌ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಏನಿದು ಪಕ್ಷಾಂತರ ನಿಷೇಧ ಕಾಯ್ದೆ? 

ರಾಜೀವ್‌ ಗಾಂಧಿ ಪ್ರಧಾನಿಯಾಗಿದ್ದ ಅವಧಿಯಲ್ಲಿ, ಅಂದರೆ 1985ರ ಜನವರಿ 30ರಂದು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಯಿತು. 2003ರಲ್ಲಿ ಕೇಂದ್ರದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ ಈ ಕಾಯ್ದೆಗೆ ಮತ್ತಷ್ಟು ಬಲ ತುಂಬಲಾಯಿತು.

ಪಕ್ಷಾಂತರ ನಿಷೇಧ ಕಾಯ್ದೆಯ ಪ್ರಕಾರ, ರಾಜಕೀಯ ಪಕ್ಷದಿಂದ ಆಯ್ಕೆಯಾಗುವ ಯಾವುದೇ ಶಾಸಕ/ಸಂಸದರು, ತಾನು ಆಯ್ಕೆಯಾದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡದೆ, ಇನ್ನೊಂದು ರಾಜಕೀಯ ಪಕ್ಷಕ್ಕೆ ಸೇರಿದರೆ ಅದು ಪಕ್ಷಾಂತರವಾಗಲಿದೆ. ಅಂಥವರನ್ನು ಅನರ್ಹಗೊಳಿಸಬಹುದು.

ಮತದಾನದ ಸಮಯದಲ್ಲಿ ಹಾಜರಿರಲೇಬೇಕು ಎಂದು ರಾಜಕೀಯ ಪಕ್ಷವೊಂದು ತನ್ನ ಶಾಸಕ/ಸಂಸದರಿಗೆ ಲಿಖಿತ ಸೂಚನೆ (ವಿಪ್‌) ಜಾರಿಗೊಳಿಸಿದ ಬಳಿಕವೂ, ಅದನ್ನು ಉಲ್ಲಂಘನೆ ಮಾಡುವವರು ಹಾಗೂ ಮತದಾನದಿಂದ ದೂರ ಉಳಿಯುವವರನ್ನು ಪಕ್ಷಾಂತರಿಗಳು ಎಂದು ಅನರ್ಹಗೊಳಿಸಬಹುದು.

ಒಬ್ಬ ಸದಸ್ಯ ಪಕ್ಷಾಂತರ ಮಾಡಿದ್ದಾನೋ ಇಲ್ಲವೇ ಎಂಬ ನಿರ್ಣಯವನ್ನು ಸಭಾಧ್ಯಕ್ಷ, ಸ್ಪೀಕರ್‌ ಪಕ್ಷಾಂತರ ನಿಷೇಧ ಕಾಯ್ದೆಯೆ ಅನ್ವಯ ತೀರ್ಮಾನ ಕೈಗೊಳ್ಳುವ ಅಧಿಕಾರ ಹೊಂದಿರುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್‌ ತೊರೆದು ಮತ್ತೆ ಬಿಜೆಪಿ ಸೇರಿದ ಜಗದೀಶ್ ಶೆಟ್ಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...