Homeಮುಖಪುಟಇಂಡಿಯಾ ಮೈತ್ರಿಕೂಟ ತೊರೆಯಲು ಅಧೀರ್ ರಂಜನ್ ಚೌಧರಿ ಕಾರಣ: ಟಿಎಂಸಿ ಸಂಸದ ಓಬ್ರಿಯಾನ್

ಇಂಡಿಯಾ ಮೈತ್ರಿಕೂಟ ತೊರೆಯಲು ಅಧೀರ್ ರಂಜನ್ ಚೌಧರಿ ಕಾರಣ: ಟಿಎಂಸಿ ಸಂಸದ ಓಬ್ರಿಯಾನ್

- Advertisement -
- Advertisement -

ರಾಜ್ಯದಲ್ಲಿ ಉಭಯ ಪಕ್ಷಗಳ ನಡುವೆ ಮೈತ್ರಿ ಏರ್ಪಡದಿದ್ದಕ್ಕೆ ಪಶ್ಚಿಮ ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ ಮಾತ್ರ ಹೊಣೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಡೆರೆಕ್ ಓಬ್ರಿಯಾನ್ ಗಂಭೀರ ಆರೋಪ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷವು ಲೋಕಸಭೆ ಚುನಾವಣೆ ಚುನಾವಣೆಯಲ್ಲಿ ‘ಏಕಾಂಗಿಯಾಗಿ’ ಹೋರಾಡಲಿದೆ ಎಂದು ಘೋಷಿಸಿದ ಒಂದು ದಿನದ ನಂತರ ಓಬ್ರಿಯಾನ್ ಪ್ರತಿಕ್ರಿಯೆ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮೈತ್ರಿ ಕಾರ್ಯರೂಪಕ್ಕೆ ಬರದಿರಲು ಅಧೀರ್ ರಂಜನ್ ಚೌಧರಿ “ಕಾರಣ” ಎಂದು ಪ್ರತಿಪಾದಿಸಿದ ಓಬ್ರಿಯಾನ್, ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿಕೂಟವು (ಇಂಡಿಯಾ) ಅನೇಕ ವಿರೋಧಿಗಳನ್ನು ಹೊಂದಿದೆ. ಆದರೆ, ಬಿಜೆಪಿ ಮತ್ತು ಅಧೀರ್ ರಂಜನ್ ಚೌಧರಿ ಮಾತ್ರ ಮೈತ್ರಿಕೂಟದ ವಿರುದ್ಧ ಪದೇ ಪದೇ ಮಾತನಾಡಿದರು’ ಎಂದು ಹೇಳಿದರು.

‘ಸಾರ್ವತ್ರಿಕ ಚುನಾವಣೆಯ ನಂತರ, ಕಾಂಗ್ರೆಸ್ ತನ್ನ ಕೆಲಸವನ್ನು ನಿರ್ವಹಿಸಿ, ಗಣನೀಯ ಸಂಖ್ಯೆಯ ಸ್ಥಾನಗಳಲ್ಲಿ ಬಿಜೆಪಿಯನ್ನು ಸೋಲಿಸಿದರೆ, ತೃಣಮೂಲ ಕಾಂಗ್ರೆಸ್ ಸಂವಿಧಾನವನ್ನು ನಂಬುವ ಮತ್ತು ಹೋರಾಡುವರ ಭಾಗವಾಗಲಿದೆ’ ಎಂದು ಓಬ್ರಿಯಾನ್ ಸುದ್ದಿಗಾರರಿಗೆ ತಿಳಿಸಿದರು.

‘ಚೌಧರಿ ಅವರು ಬಂಗಾಳದಲ್ಲಿ ಇಂಡಿಯಾ ಮೈತ್ರಿಯ ಸಮಾಧಿಗಾರ. ಅವರ ದೈನಂದಿನ ಗದ್ದಲದಿಂದಾಗಿ ವಿಷಯಗಳು ನೆಲಕಚ್ಚಿವೆ. ನಿನ್ನೆ ಮುಖ್ಯಮಂತ್ರಿಯ ಹೇಳಿಕೆ ನೀಡಿದ ನಂತರ, ಕಾಂಗ್ರೆಸ್ ನಾಯಕರು ಡ್ಯಾಮೇಜ್ ಕಂಟ್ರೋಲ್‌ಗೆ ಬರುತ್ತಿದ್ದಾರೆ. ಆದರೆ, ಈಗ ತಡವಾಗಿದೆ’ ಎಂದು ತೃಣಮೂಲ ಮೂಲಗಳು ತಿಳಿಸಿವೆ.

ಸೀಟು ಹಂಚಿಕೆಯ ಮಾತುಕತೆಯ ಸಂದರ್ಭದಲ್ಲಿ ತೃಣಮೂಲ ಬಹಳ ತಾಳ್ಮೆಯಿಂದಿತ್ತು. ನಾವು ಸಾಕಷ್ಟು ತಾಳ್ಮೆ ಹೊಂದಿದ್ದೇವೆ. ಆದರೆ ನಾವು ಈವರೆಗೆ ನೋಡಿದ್ದು ವಿಳಂಬ, ವಿಳಂಬ ಮತ್ತು ವಿಳಂಬ ಮಾತ್ರ’ ಎಂದು ಮೂಲಗಳು ತಿಳಿಸಿವೆ.

‘ತೃಣಮೂಲ ಬಂಗಾಳದಲ್ಲಿ ಏಕಾಂಗಿಯಾಗಿ ಹೋರಾಡುತ್ತದೆ ಮತ್ತು ಲೋಕಸಭೆ ಚುನಾವಣೆಯ ನಂತರವೇ ಕಾಂಗ್ರೆಸ್‌ನೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ’ ಎಂದು ಬ್ಯಾನರ್ಜಿ ನಿನ್ನೆ ಘೋಷಿಸಿದರು.

ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ಕಾಂಗ್ರೆಸ್, ಹದಗೆಟ್ಟ ಸಂಬಂಧಗಳನ್ನು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದೆ. ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. “ಮಮತಾಜಿ ಇಲ್ಲದ ಇಂಡಿಯಾ ಬಣವನ್ನು ಕಾಂಗ್ರೆಸ್ ಊಹಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ರಮೇಶ್ ನಿನ್ನೆ ಹೇಳಿದ್ದರು.

ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಬಂಗಾಳವನ್ನು ಪ್ರವೇಶಿಸಿದ್ದು, ಇಂಡಿಯಾ ಬ್ಲಾಕ್ ಅನ್ಯಾಯದ ವಿರುದ್ಧ ಹೋರಾಡುತ್ತದೆ ಎಂದು ರಾಹುಲ್ ಗಾಂಧಿ ಹೇಳಿದರು. ‘ಪಶ್ಚಿಮ ಬಂಗಾಳಕ್ಕೆ ಬಂದಿದ್ದಕ್ಕೆ ನನಗೆ ಸಂತೋಷವಾಗಿದೆ. ನಿಮ್ಮ ಮಾತನ್ನು ಕೇಳಲು ಮತ್ತು ನಿಮ್ಮೊಂದಿಗೆ ನಿಲ್ಲಲು ನಾವು ಇಲ್ಲಿಗೆ ಬಂದಿದ್ದೇವೆ. ಬಿಜೆಪಿ-ಆರ್‌ಎಸ್‌ಎಸ್‌ ದ್ವೇಷ, ಹಿಂಸಾಚಾರ ಮತ್ತು ಅನ್ಯಾಯವನ್ನು ಹರಡುತ್ತಿವೆ. ಆದ್ದರಿಂದ, ಇಂಡಿಯಾ ಕೂಟವು ಹೇಗಾದರೂ ಒಟ್ಟಾಗಿ ಹೋರಾಡಲಿದೆ’ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ಸೀಟು ಹಂಚಿಕೆ ಕುರಿತ ಮಾತುಕತೆಗಳು ವಿಫಲವಾದ ನಂತರ ಮೈತ್ರಿ ಕುರಿತು ಬ್ಯಾನರ್ಜಿ ಅವರ ಹೇಳಿಕೆಗಳು ಬಂದಿವೆ. ವರದಿಗಳ ಪ್ರಕಾರ, ಬಂಗಾಳದಲ್ಲಿ ತೃಣಮೂಲ ಪಕ್ಷವು ಕಾಂಗ್ರೆಸ್‌ಗೆ ಎರಡು ಸ್ಥಾನಗಳನ್ನು ನೀಡಲು ನಿರ್ಧರಿಸಿತ್ತು. ಅವರು ಕನಿಷ್ಠ 10 ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸಿದ್ದರು ಎನ್ನಲಾಗಿದೆ.

ಲೋಕಸಭೆಯಲ್ಲಿ ಕಾಂಗ್ರೆಸ್‌ನ ನಾಯಕರಾಗಿರುವ ಚೌಧರಿ ಅವರು ತೃಣಮೂಲ ಮುಖ್ಯಸ್ಥರನ್ನು “ಅವಕಾಶವಾದಿ” ನಾಯಕ ಎಂದು ಕರೆದರು. ಕಾಂಗ್ರೆಸ್ ಸ್ವತಂತ್ರವಾಗಿ ಚುನಾವಣೆಗಳನ್ನು ಎದುರಿಸಲು ಸಮರ್ಥವಾಗಿದೆ’ ಎಂದು ಹೇಳಿದಾಗ ವಿವಾದ ಭುಗಿಲೆದ್ದಿತು.

ಇದನ್ನೂ ಓದು; ರಾಹುಲ್ ಗಾಂಧಿ ‘ಕಲ್ಲಿದ್ದಲು ಒಲೆ’ ಹೇಳಿಕೆಯನ್ನು ಲೇವಡಿ ಮಾಡಿದ ಬಿಜೆಪಿಗರು; ವಾಸ್ತವ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...