Homeಮುಖಪುಟಟಿಎಂಸಿ ಜೊತೆಗಿನ ಸೀಟು ಹಂಚಿಕೆ ಬಿಕ್ಕಟ್ಟು ಪರಿಹರಿಸಲು ಮುಂದಾದ ಕಾಂಗ್ರೆಸ್

ಟಿಎಂಸಿ ಜೊತೆಗಿನ ಸೀಟು ಹಂಚಿಕೆ ಬಿಕ್ಕಟ್ಟು ಪರಿಹರಿಸಲು ಮುಂದಾದ ಕಾಂಗ್ರೆಸ್

- Advertisement -
- Advertisement -

ಟಿಎಂಸಿ ಜೊತೆಗಿನ ಸೀಟು ಹಂಚಿಕೆ ಬಿಕ್ಕಟ್ಟಿಗೆ ಪರಿಹಾರವನ್ನು ಕಂಡುಕೊಳ್ಳುವ ಭರವಸೆಯನ್ನು ಕಾಂಗ್ರೆಸ್ ಹೊಂದಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದು, ಮಮತಾ ಮನವೊಲಿಕೆಗೆ ಕಾಂಗ್ರೆಸ್‌ ಮುಂದಾಗಿದೆ.

ಬಾಗ್ದೋಗ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೈರಾಮ್‌ ರಮೇಶ್, ದೇಶದಲ್ಲಿ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ಅನಿವಾರ್ಯವಾಗಿರುವುದರಿಂದ ಬ್ಯಾನರ್ಜಿ ಇಲ್ಲದೆ INDIA ಬಣವನ್ನು ಯೋಚಿಸಲು ಸಾಧ್ಯವಿಲ್ಲ. ಭಾರತದಲ್ಲಿ ಬಿಜೆಪಿಯನ್ನು ಸೋಲಿಸಲು ಮಮತಾ ಬ್ಯಾನರ್ಜಿ ಅನಿವಾರ್ಯವಾಗಿದ್ದಾರೆ. ನಮಗೆ ಬಂಗಾಳ ಮತ್ತು ಭಾರತದಲ್ಲಿ  ಬಿಜೆಪಿಯನ್ನು ಸೋಲಿಸಲು ಮಮತಾ ಬ್ಯಾನರ್ಜಿ ಅವರ ಅಗತ್ಯವಿದೆ, ನಮ್ಮ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಮಮತಾ ಜಿ ಬಗ್ಗೆ ಅಪಾರ ಗೌರವವನ್ನು ಹೊಂದಿದ್ದಾರೆ ಎಂದು ಅವರು ಹೇಳಿದರು.

INDIA ಮೈತ್ರಿಕೂಟದ ಪ್ರಮುಖ ಸ್ತಂಭಗಳಲ್ಲಿ ಟಿಎಂಸಿ ಒಂದಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಮಹತ್ವವನ್ನು ಉಲ್ಲೇಖಿಸಿದ ಜೈರಾಮ್‌ ರಮೇಶ್‌, ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ಇಲ್ಲದ ಮೈತ್ರಿಕೂಟವನ್ನು ಯಾರೂ ಊಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಟಿಎಂಸಿ ಮುಖ್ಯಸ್ಥರ ನಿರ್ಧಾರದ ಬಗ್ಗೆ ಮಾತನಾಡಿದ ರಮೇಶ್, ಸೀಟು ಹಂಚಿಕೆಯ ಬಿಕ್ಕಟ್ಟಿನ ಬಗ್ಗೆ ಮಾತುಕತೆಗೆ ಕಾಂಗ್ರೆಸ್ ಉತ್ಸುಕವಾಗಿದೆ, ನಾನು ಸೀಟು ಹಂಚಿಕೆಯ ಬಗ್ಗೆ ಯಾವುದೇ ಹೇಳಿಕೆ ನೀಡಲು ಬಯಸುವುದಿಲ್ಲ, ಆದರೆ ಈ ಬಿಕ್ಕಟ್ಟು ಕೊನೆಗೊಳ್ಳಬೇಕೆಂದು ನಾವು ಬಯಸುತ್ತೇವೆ ಮತ್ತು ನಾವು ಪರಿಹಾರವನ್ನು ಕಂಡುಕೊಳ್ಳುತ್ತೇವೆ. ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಮಮತಾ ಅವರಿಗೆ ಎರಡು ಬಾರಿ ಆಹ್ವಾನ ಕಳುಹಿಸಿದ್ದೆವು. ನಮ್ಮ ಗುರಿ ಒಂದೇ ಆಗಿರುವುದರಿಂದ ಅವರು ಯಾತ್ರೆಯ ಭಾಗವಾಗಬೇಕೆಂದು ನಾವೆಲ್ಲರೂ ಬಯಸುತ್ತೇವೆ, ದೇಶದಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡಬೇಕು ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಸಂಸತ್ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಮಮತಾ ಬ್ಯಾನರ್ಜಿ ಅವರು ಘೋಷಿಸಿದ ಒಂದು ದಿನದ ನಂತರ ಜೈರಾಮ್‌ ರಮೇಶ್‌ ಈ ಹೇಳಿಕೆಯನ್ನು ನೀಡಿದ್ದಾರೆ.

ಗುರುವಾರ ಬೆಳಗ್ಗೆ ಬಂಗಾಳವನ್ನು ಪ್ರವೇಶಿಸಿದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯಲ್ಲಿ ಭಾಗವಹಿಸಲು ಪಕ್ಷವು ಬ್ಯಾನರ್ಜಿ ಅವರನ್ನು ಆಹ್ವಾನಿಸಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಮಮತಾ ಹೇಳಿಕೆಯಲ್ಲೇನಿತ್ತು?

ಲೋಕಸಭೆ ಚುನಾವಣೆಯಲ್ಲಿ ಪ.ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಹೋರಾಡಲಿದೆ ಎಂದು ನಿನ್ನೆ ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಹೇಳಿದ್ದರು.

ನಾನು ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ, ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಹೋರಾಡುತ್ತೇವೆ ಎಂದು ನಾನು ಯಾವಾಗಲೂ ಹೇಳುತ್ತೇನೆ. ನಮ್ಮದು ಜಾತ್ಯತೀತ ಪಕ್ಷ ಮತ್ತು ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಬಿಜೆಪಿಯನ್ನು ಸೋಲಿಸುತ್ತೇವೆ. ನಾನು ಅನೇಕ ಪ್ರಸ್ತಾಪಗಳನ್ನು ನೀಡಿದ್ದೇನೆ ಆದರೆ ಅವರು ಅವುಗಳನ್ನು ಮೊದಲಿನಿಂದಲೂ ತಿರಸ್ಕರಿಸಿದರು. ರಾಹುಲ್ ಗಾಂಧಿಯವರ ನ್ಯಾಯ ಯಾತ್ರೆಯು ಬಂಗಾಳದ ಮೂಲಕ ಹಾದುಹೋಗುವ ಬಗ್ಗೆ ತನಗೆ ತಿಳಿಸಲಾಗಿಲ್ಲ. ನಾನು ಇಂಡಿಯಾ ಬ್ಲಾಕ್‌ನ ಭಾಗವಾಗಿದ್ದರೂ ಸೌಜನ್ಯಕ್ಕಾಗಿ ಪಶ್ಚಿಮ ಬಂಗಾಳಕ್ಕೆ ಬರುವುದಾಗಿ ಅವರು ನನಗೆ ತಿಳಿಸಿಲ್ಲ, ಹಾಗಾಗಿ ಬಂಗಾಳದ ಮಟ್ಟಿಗೆ ನನಗೆ ಯಾವುದೇ ಸಂಬಂಧವಿಲ್ಲ. ಅಖಿಲ ಭಾರತ ಮಟ್ಟದಲ್ಲಿ ಏನು ಮಾಡಬೇಕೆಂದು ನಾವು ನಿರ್ಧರಿಸುತ್ತೇವೆ. ನಮ್ಮದು ಜಾತ್ಯತೀತ ಪಕ್ಷ ಎಂದು ಹೇಳಿದ್ದರು.

ಇದನ್ನು ಓದಿ: ಕೇಸರಿ ಧ್ವಜಕ್ಕೆ ಅವಮಾನಿಸಿದ ಆರೋಪ: ಮುಸ್ಲಿಂ ಯುವಕನಿಗೆ ಥಳಿಸಿ ಬೆತ್ತಲೆ ಮೆರವಣಿಗೆ ಮಾಡಿದ ಗುಂಪು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...