HomeUncategorizedಅಸಮರ್ಪಕ ನಾಮಪತ್ರ ಸ್ವೀಕಾರ ಗೆಲುವಿಗೆ ಹೇಗೆ ಅಡ್ಡಿ ವಿವರಿಸಿ: ಬಿಜೆಪಿ ಅಭ್ಯರ್ಥಿ ಚುನಾವಣಾ ಅರ್ಜಿಗೆ ಆಕ್ಷೇಪ

ಅಸಮರ್ಪಕ ನಾಮಪತ್ರ ಸ್ವೀಕಾರ ಗೆಲುವಿಗೆ ಹೇಗೆ ಅಡ್ಡಿ ವಿವರಿಸಿ: ಬಿಜೆಪಿ ಅಭ್ಯರ್ಥಿ ಚುನಾವಣಾ ಅರ್ಜಿಗೆ ಆಕ್ಷೇಪ

- Advertisement -
- Advertisement -

ಅಸಮರ್ಪಕ ನಾಮಪತ್ರ ಸ್ವೀಕಾರವು ಪ್ರತಿಸ್ಪರ್ಧಿಯ ಗೆಲುವಿಗೆ ಹೇಗೆ ಅಡ್ಡಿಯಾಗುತ್ತದೆ ಎಂಬುವುದನ್ನು ವಿವರಿಸದ ಚುನಾವಣಾ ತಕರಾರು ಅರ್ಜಿಯನ್ನು ತಿರಸ್ಕರಿಸುವಂತೆ ಕಾಂಗ್ರೆಸ್‌ ಶಾಸಕ ಎನ್‌. ಹ್ಯಾರಿಸ್‌ ಪರ ವಕೀಲರು ಕರ್ನಾಟಕ ಹೈಕೋರ್ಟ್‌ಗೆ ಗುರುವಾರ ಮನವಿ ಮಾಡಿದ್ದಾರೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಚುನಾವಣೆ ವೇಳೆ ಸಲ್ಲಿಸಲಾದ ಫಾರಂ ನಂ. 26ರಲ್ಲಿ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಹ್ಯಾರಿಸ್‌ ತಮ್ಮ ಆಸ್ತಿ ವಿವರಗಳನ್ನು ಸರಿಯಾಗಿ ಘೋಷಿಸಿಲ್ಲ. ಹೀಗಾಗಿ, ಅವರನ್ನು ಅನರ್ಹಗೊಳಿಸಿ ತಮ್ಮನ್ನು ವಿಜೇತ ಎಂದು ಘೋಷಿಸಬೇಕು ಎಂದು ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಕೆ ಶಿವಕುಮಾರ್ ಸಲ್ಲಿಸಿರುವ ಚುನಾವಣಾ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ, ಪ್ರತಿವಾದಿ ಹ್ಯಾರಿಸ್‌ ಪರ ವಕೀಲರು ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅಸಮರ್ಪಕ ನಾಮಪತ್ರ ಸ್ವೀಕರಿಸಿದ ಕಾರಣ ಅದು ಪ್ರತಿಸ್ಪರ್ಧಿಯ ಗೆಲುವಿಗೆ ಹೇಗೆ ಅಡ್ಡಿ ಉಂಟು ಮಾಡಿದೆ ಎಂಬ ಆರೋಪವನ್ನು ಸಾಬೀತುಪಡಿಸಬೇಕು ಮತ್ತು ಅಂತಹ ಕ್ರಮ ಸೋಲಿಗೆ ಹೇಗೆ ಕಾರಣವಾಯಿತು ಎಂಬ ನಿಖರ ವಿಚಾರವನ್ನು ಅರ್ಜಿದಾರರು ತಮ್ಮ ದಾವೆಯಲ್ಲಿ ಉಲ್ಲೇಖಿಸಬೇಕು. ಆದರೆ, ಕೆ. ಶಿವಕುಮಾರ್ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯಲ್ಲಿ ಇಂತಹ ಯಾವುದೇ ಅಂಶಗಳು ಇಲ್ಲದ ಕಾರಣ ಈ ನಿರರ್ಥಕ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಹ್ಯಾರಿಸ್ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಅರ್ಜಿಯಲ್ಲಿ ವಿವರಿಸಿರುವ ಅಂಶಗಳ ಆಧಾರದಲ್ಲಿ ಹ್ಯಾರಿಸ್‌ ಅವರ ವಿರುದ್ಧದ ಆರೋಪಗಳ ವಿಚಾರಣೆಗಾಗಿ ಪ್ರತಿವಾದಿಗಳನ್ನು ಅರೆ ಅಪರಾಧಿಕ ನ್ಯಾಯಿಕ ಪ್ರಕ್ರಿಯೆಗೆ ಒಳಪಡಿಸಬಾರದು. ಈ ಹಂತದಲ್ಲಿಯೇ ಈ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನ ಪೂರ್ವ ನಿದರ್ಶನದ ತೀರ್ಪೊಂದನ್ನು ಉಲ್ಲೇಖಿಸಿದರು.

ಶಿವಕುಮಾರ್ ಪರ ಹಾಜರಿದ್ದ ಹಿರಿಯ ವಕೀಲ ವಿವೇಕ ರೆಡ್ಡಿ ಅವರು ಇದಕ್ಕೆ ಪ್ರತಿಯಾಗಿ ತಮ್ಮ ವಾದವನ್ನು ಸಮರ್ಥಿಸಿಕೊಳ್ಳುವ ಸುಪ್ರೀಂ ಕೋರ್ಟ್‌ನ ಪೂರ್ವ ನಿದರ್ಶನದ ಮತ್ತೊಂದು ತೀರ್ಪು ಉಲ್ಲೇಖಿಸಿದರು. ಉಭಯ ಪಕ್ಷಕಾರರ ವಾದ–ಪ್ರತಿವಾದ ಆಲಿಸಿದ ಪೀಠವು ಸುಪ್ರೀಂ ಕೋರ್ಟ್‌ನ ಎರಡೂ ತೀರ್ಪುಗಳ ಪರಾಮರ್ಶೆ ನಡೆಸುವುದಾಗಿ ತಿಳಿಸಿ ವಿಚಾರಣೆಯನ್ನು ಜನವರಿ 29ಕ್ಕೆ ಮುಂದೂಡಿತು.

ಇದನ್ನೂ ಓದಿ: ಪಿ ಬಿ ವರಾಳೆ ಪ್ರಮಾಣ ವಚನ: ಸುಪ್ರೀಂನಲ್ಲಿ ಮೂರಕ್ಕೇರಿದ ದಲಿತ ಸಮುದಾಯದ ನ್ಯಾಯಮೂರ್ತಿಗಳ ಸಂಖ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...