HomeUncategorizedಅಸಮರ್ಪಕ ನಾಮಪತ್ರ ಸ್ವೀಕಾರ ಗೆಲುವಿಗೆ ಹೇಗೆ ಅಡ್ಡಿ ವಿವರಿಸಿ: ಬಿಜೆಪಿ ಅಭ್ಯರ್ಥಿ ಚುನಾವಣಾ ಅರ್ಜಿಗೆ ಆಕ್ಷೇಪ

ಅಸಮರ್ಪಕ ನಾಮಪತ್ರ ಸ್ವೀಕಾರ ಗೆಲುವಿಗೆ ಹೇಗೆ ಅಡ್ಡಿ ವಿವರಿಸಿ: ಬಿಜೆಪಿ ಅಭ್ಯರ್ಥಿ ಚುನಾವಣಾ ಅರ್ಜಿಗೆ ಆಕ್ಷೇಪ

- Advertisement -
- Advertisement -

ಅಸಮರ್ಪಕ ನಾಮಪತ್ರ ಸ್ವೀಕಾರವು ಪ್ರತಿಸ್ಪರ್ಧಿಯ ಗೆಲುವಿಗೆ ಹೇಗೆ ಅಡ್ಡಿಯಾಗುತ್ತದೆ ಎಂಬುವುದನ್ನು ವಿವರಿಸದ ಚುನಾವಣಾ ತಕರಾರು ಅರ್ಜಿಯನ್ನು ತಿರಸ್ಕರಿಸುವಂತೆ ಕಾಂಗ್ರೆಸ್‌ ಶಾಸಕ ಎನ್‌. ಹ್ಯಾರಿಸ್‌ ಪರ ವಕೀಲರು ಕರ್ನಾಟಕ ಹೈಕೋರ್ಟ್‌ಗೆ ಗುರುವಾರ ಮನವಿ ಮಾಡಿದ್ದಾರೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಚುನಾವಣೆ ವೇಳೆ ಸಲ್ಲಿಸಲಾದ ಫಾರಂ ನಂ. 26ರಲ್ಲಿ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಹ್ಯಾರಿಸ್‌ ತಮ್ಮ ಆಸ್ತಿ ವಿವರಗಳನ್ನು ಸರಿಯಾಗಿ ಘೋಷಿಸಿಲ್ಲ. ಹೀಗಾಗಿ, ಅವರನ್ನು ಅನರ್ಹಗೊಳಿಸಿ ತಮ್ಮನ್ನು ವಿಜೇತ ಎಂದು ಘೋಷಿಸಬೇಕು ಎಂದು ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಕೆ ಶಿವಕುಮಾರ್ ಸಲ್ಲಿಸಿರುವ ಚುನಾವಣಾ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ, ಪ್ರತಿವಾದಿ ಹ್ಯಾರಿಸ್‌ ಪರ ವಕೀಲರು ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅಸಮರ್ಪಕ ನಾಮಪತ್ರ ಸ್ವೀಕರಿಸಿದ ಕಾರಣ ಅದು ಪ್ರತಿಸ್ಪರ್ಧಿಯ ಗೆಲುವಿಗೆ ಹೇಗೆ ಅಡ್ಡಿ ಉಂಟು ಮಾಡಿದೆ ಎಂಬ ಆರೋಪವನ್ನು ಸಾಬೀತುಪಡಿಸಬೇಕು ಮತ್ತು ಅಂತಹ ಕ್ರಮ ಸೋಲಿಗೆ ಹೇಗೆ ಕಾರಣವಾಯಿತು ಎಂಬ ನಿಖರ ವಿಚಾರವನ್ನು ಅರ್ಜಿದಾರರು ತಮ್ಮ ದಾವೆಯಲ್ಲಿ ಉಲ್ಲೇಖಿಸಬೇಕು. ಆದರೆ, ಕೆ. ಶಿವಕುಮಾರ್ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯಲ್ಲಿ ಇಂತಹ ಯಾವುದೇ ಅಂಶಗಳು ಇಲ್ಲದ ಕಾರಣ ಈ ನಿರರ್ಥಕ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಹ್ಯಾರಿಸ್ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಅರ್ಜಿಯಲ್ಲಿ ವಿವರಿಸಿರುವ ಅಂಶಗಳ ಆಧಾರದಲ್ಲಿ ಹ್ಯಾರಿಸ್‌ ಅವರ ವಿರುದ್ಧದ ಆರೋಪಗಳ ವಿಚಾರಣೆಗಾಗಿ ಪ್ರತಿವಾದಿಗಳನ್ನು ಅರೆ ಅಪರಾಧಿಕ ನ್ಯಾಯಿಕ ಪ್ರಕ್ರಿಯೆಗೆ ಒಳಪಡಿಸಬಾರದು. ಈ ಹಂತದಲ್ಲಿಯೇ ಈ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನ ಪೂರ್ವ ನಿದರ್ಶನದ ತೀರ್ಪೊಂದನ್ನು ಉಲ್ಲೇಖಿಸಿದರು.

ಶಿವಕುಮಾರ್ ಪರ ಹಾಜರಿದ್ದ ಹಿರಿಯ ವಕೀಲ ವಿವೇಕ ರೆಡ್ಡಿ ಅವರು ಇದಕ್ಕೆ ಪ್ರತಿಯಾಗಿ ತಮ್ಮ ವಾದವನ್ನು ಸಮರ್ಥಿಸಿಕೊಳ್ಳುವ ಸುಪ್ರೀಂ ಕೋರ್ಟ್‌ನ ಪೂರ್ವ ನಿದರ್ಶನದ ಮತ್ತೊಂದು ತೀರ್ಪು ಉಲ್ಲೇಖಿಸಿದರು. ಉಭಯ ಪಕ್ಷಕಾರರ ವಾದ–ಪ್ರತಿವಾದ ಆಲಿಸಿದ ಪೀಠವು ಸುಪ್ರೀಂ ಕೋರ್ಟ್‌ನ ಎರಡೂ ತೀರ್ಪುಗಳ ಪರಾಮರ್ಶೆ ನಡೆಸುವುದಾಗಿ ತಿಳಿಸಿ ವಿಚಾರಣೆಯನ್ನು ಜನವರಿ 29ಕ್ಕೆ ಮುಂದೂಡಿತು.

ಇದನ್ನೂ ಓದಿ: ಪಿ ಬಿ ವರಾಳೆ ಪ್ರಮಾಣ ವಚನ: ಸುಪ್ರೀಂನಲ್ಲಿ ಮೂರಕ್ಕೇರಿದ ದಲಿತ ಸಮುದಾಯದ ನ್ಯಾಯಮೂರ್ತಿಗಳ ಸಂಖ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...