Homeಮುಖಪುಟಮುಂಬೈ: ಮತ್ತೆ ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ

ಮುಂಬೈ: ಮತ್ತೆ ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಮತ್ತೆ ಮರಾಠ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಮರಾಠ ಸಮುದಾಯಕ್ಕೆ ಮೀಸಲಾತಿಗಾಗಿ ಒದಗಿಸಲು ಒತ್ತಾಯಿಸಿ ಮರಾಠ ಕೋಟಾದ ನಾಯಕ ಮನೋಜ್ ಜಾರಂಗೆ ಅವರು ಶುಕ್ರವಾರ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ನವಿ ಮುಂಬೈ ತಲುಪಿದ್ದಾರೆ.

ಜಾರಂಗೆ ಮತ್ತು ಇತರ ಮರಾಠಾ ಕಾರ್ಯಕರ್ತರು ಬೈಕ್‌, ಕಾರು, ಜೀಪು, ಟೆಂಪೋ ಮತ್ತು ಟ್ರಕ್‍ಗಳ ಮೂಲಕ ಮುಂಬೈನ ಹೊರವಲಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮುಂಭಾಗಕ್ಕೆ ಬಂದು ಜಮಾಯಿಸಿದ್ದಾರೆ. ಅವರ ಯೋಜನೆಯಂತೆ ಜಾರಂಗೆ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಆಜಾದ್ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ. ಮರಾಠಾ ಸಮುದಾಯಕ್ಕೆ ಕುಂಬಿ (ಒಬಿಸಿ) ಸ್ಥಾನಮಾನ ನೀಡಬೇಕು ಎಂದು ಪ್ರತಿಭಟನಾಕಾರರ ಒತ್ತಾಯವಾಗಿದೆ.

ನಗರದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ಅನುಮತಿ ನಿರಾಕರಿಸಿ ಮುಂಬೈ ಪೊಲೀಸರು ನೋಟಿಸ್ ಜಾರಿ ಮಾಡಿದ್ದರೂ, ಜನವರಿ 26ರಂದು ದಕ್ಷಿಣ ಮುಂಬೈನ ಆಜಾದ್ ಮೈದಾನ ತಲುಪುದಾಗಿ ಗುರುವಾರ ಜಾರಂಗೆ ಘೋಷಿಸಿದ್ದರು. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 149 ರ ಅಡಿಯಲ್ಲಿ ಹೊರಡಿಸಲಾದ ನೋಟಿಸ್‍ನಲ್ಲಿ ಪೊಲೀಸರು, ಮುಂಬೈ ದೇಶದ ಆರ್ಥಿಕ ರಾಜಧಾನಿಯಾಗಿದೆ ಮತ್ತು ಮುಂಬೈನಲ್ಲಿ ವಿವಿಧ ಹಣಕಾಸು ಸಂಸ್ಥೆಗಳು, ಅಂತಾರಾಷ್ಟ್ರೀಯ ವಕೀಲರು ಮತ್ತು ಇತರ ಹಣಕಾಸು ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ಮುಂಬೈನಲ್ಲಿ ಪ್ರತಿದಿನ ಸರಿಸುಮಾರು 60 ರಿಂದ 65 ಲಕ್ಷ ನಾಗರಿಕರು ಕೆಲಸಗಳಿಗಾಗಿ ರೈಲು ಮತ್ತು ಇತರ ಸಾರಿಗೆ ವಿಧಾನಗಳಲ್ಲಿ ಪ್ರಯಾಣಿಸುತ್ತಾರೆ. ಮರಾಠಾ ಪ್ರತಿಭಟನಾಕಾರರು ತಮ್ಮ ವಾಹನಗಳಲ್ಲಿ ನಗರಕ್ಕೆ ಬಂದರೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಮತ್ತು ನಗರದಲ್ಲಿ ದೈನಂದಿನ ಸಾರಿಗೆ ವ್ಯವಸ್ಥೆಗೆ ಅಡ್ಡಿಯಾಗಲಿದೆ ಎಂದು ಎಚ್ಚರಿಸಿದ್ದರು.

ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆದ ನಂತರ ನವಿ ಮುಂಬೈನ ಖಾರ್‌ಘರ್‌ನಲ್ಲಿರುವ ಇಂಟರ್‌ನ್ಯಾಷನಲ್ ಕಾರ್ಪೋರೇಷನ್ ಪಾರ್ಕ್ ಗ್ರೌಂಡ್‍ನಲ್ಲಿ ಪ್ರತಿಭಟನಾಕಾರರು ಸೇರಬಹುದು ಎಂದು ಮುಂಬೈ ಪೊಲೀಸರು ಸೂಚಿಸಿದ್ದಾರೆ. ಒಂದು ವೇಳೆ ಪ್ರತಿಭನಾಕಾರರು ನೋಟಿಸ್‍ಗೆ ಬದ್ಧವಾಗಿಲ್ಲದಿದ್ದರೆ, ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು.

ಹೈಕೋರ್ಟ್‌ನ ಆದೇಶ ಪ್ರಕಾರ, ಆಝಾದ್ ಮೈದಾನದ 7,000 ಚದರ ಮೀಟರ್ ಪ್ರದೇಶವನ್ನು ಮಾತ್ರ ಪ್ರತಿಭಟನೆಗೆ ಮೀಸಲಿಡಲಾಗಿದೆ. ಈ ಜಾಗ 5,000 ರಿಂದ 6,000 ಪ್ರತಿಭಟನಾಕಾರರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವಿದೆ. ಹೆಚ್ಚಿನ ಸಂಖ್ಯೆಯ ಪ್ರತಿಭಟನಾಕಾರರು ಅಲ್ಲಿಗೆ ಬಂದರೆ, ಅವರಿಗೆ ನಿಲ್ಲಲು ಕೂಡ ಸಾಕಷ್ಟು ಸ್ಥಳಾವಕಾಶವಿಲ್ಲ. ಮೈದಾನದ ಇನ್ನುಳಿದ ಜಾಗ ಶಾಲಾ ಶಿಕ್ಷಣ ಮತ್ತು ಕ್ರೀಡಾ ಇಲಾಖೆಗೆ ಒಳಪಟ್ಟಿದ್ದು, ಅಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಲಾಗಿದೆ ಎಂದು ಪೊಲೀಸರು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ದಾದರ್‌ನ ಶಿವಾಜಿ ಪಾರ್ಕ್ ಮೈದಾನದಲ್ಲಿ ಜನಸಮೂಹ ಸೇರಲು ಅನುಮತಿ ನಿರಾಕರಿಸಿರುವ ಪೊಲೀಸರು, ಜನವರಿ 26 ಗಣರಾಜ್ಯೋತ್ಸವ ದಿನವಾದ್ದರಿಂದ ಶಿವಾಜಿ ಪಾರ್ಕ್‍ನಲ್ಲಿ ಸರ್ಕಾರಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಇದರಿಂದ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಆಂದೋಲನ. ಶಿವಾಜಿ ಪಾರ್ಕ್ ಮೈದಾನಕ್ಕೆ ಇಷ್ಟು ದೊಡ್ಡ ಸಂಖ್ಯೆಯ ಪ್ರವಾಸಿಗರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯ ಇಲ್ಲ ಎಂದು ನೋಟಿಸ್‌ನಲ್ಲಿ ಸೇರಿಸಿದ್ದಾರೆ.

ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ರಿಟ್ ಅರ್ಜಿಯ ಪ್ರಕಾರ, ಪ್ರತಿಭಟನೆಯಿಂದ ಮುಂಬೈನಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ನ್ಯಾಯಾಲಯವು ಪೊಲೀಸರಿಗೆ ಸೂಚಿಸಿದೆ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ. ಮರಾಠಾ ಆಂದೋಲನವು ಗಣರಾಜ್ಯೋತ್ಸವದಂದು ಅಯೋಜಿಸುವ ಯಾವುದೇ ಆಚರಣೆಯನ್ನು ಎಂದಿಗೂ ಅಡ್ಡಿಪಡಿಸುವುದಿಲ್ಲ ಎಂದು ಜಾರಂಗೆ ಹೇಳಿದ್ದಾರೆ.

ಪೊಲೀಸರ ಸೂಚನೆಯ ಹೊರತಾಗಿಯೂ ಜಾರಂಗೆ ಮುಂಬೈಗೆ ಆಗಮಿಸಿದ್ದಾರೆ. ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಸಮಸ್ಯೆ ಪರಿಹರಿಸಲು ವೈಯಕ್ತಿಕವಾಗಿ ಚರ್ಚೆಗೆ ಬರಬೇಕು ಎಂದು ಆಗ್ರಹಿಸಿದ್ದಾರೆ.

ಮುಂಬೈಗೆ ಹೋಗದಂತೆ ಮನವೊಲಿಸಲು ಛತ್ರಪತಿ ಸಂಭಾಜಿನಗರದ ವಿಭಾಗೀಯ ಆಯುಕ್ತ ಸೇರಿದಂತೆ ಹಿರಿಯ ಸರ್ಕಾರಿ ಅಧಿಕಾರಿಗಳ ನೇತೃತ್ವದ ನಿಯೋಗ ಜಾರಂಗೆ ಅವರನ್ನು ಭೇಟಿ ಮಾಡಿತ್ತು. ಮೀಸಲಾತಿ ವಿಚಾರದಲ್ಲಿ ಸರ್ಕಾರದ ನಿರ್ಧಾರಗಳನ್ನು ತಿಳಿಸಲು ಮತ್ತೊಂದು ನಿಯೋಗ ಅವರನ್ನು ಭೇಟಿ ಮಾಡಲಿದೆ ಎಂದು ಹೇಳಲಾಗಿತ್ತು. ನವಿ ಮುಂಬೈ ಪೊಲೀಸ್ ಅಧಿಕಾರಿಗಳು ಕೂಡ ಜಾರಂಗೆ ಅವರನ್ನು ಭೇಟಿಯಾಗಿ ಆಸ್ಪತ್ರೆಯೊಂದು ಮಾರ್ಗದಲ್ಲಿ ಇರುವುದರಿಂದ ಅವರ ಮೆರವಣಿಗೆಯ ಮಾರ್ಗವನ್ನು ಬದಲಾಯಿಸುವಂತೆ ಮನವಿ ಮಾಡಿದ್ದರು. ಮಾರ್ಗ ಬದಲಾಯಿಸಿ ಹಳೆಯ ಪುಣೆ-ಮುಂಬೈ ಹೆದ್ದಾರಿಯಿಂದ ತೆರಳಲು ಸೂಚಿಸಿದ್ದರು.

ಇದನ್ನೂ ಓದಿ: ಜ್ಞಾನವಾಪಿ ಪ್ರಕರಣ: ಹಿಂದೂ ಪರ ವಕೀಲನಿಂದ ಎಎಸ್‌ಐ ಸಮೀಕ್ಷೆ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...