Homeಮುಖಪುಟಬಿಹಾರ ರಾಜಕೀಯ ಬಿಕ್ಕಟ್ಟು; 'ಇಧರ್-ಉಧರ್' ಎನ್ನುವ ಗೊಂದಲ ಪರಿಹರಿಸಿ: ಆರ್‌ಜೆಡಿ

ಬಿಹಾರ ರಾಜಕೀಯ ಬಿಕ್ಕಟ್ಟು; ‘ಇಧರ್-ಉಧರ್’ ಎನ್ನುವ ಗೊಂದಲ ಪರಿಹರಿಸಿ: ಆರ್‌ಜೆಡಿ

- Advertisement -
- Advertisement -

ಮಹಾ ಘಟಬಂಧನ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿ ಬೆಂಬಲದೊಂದಿಗೆ ಭಾನುವಾರ ಏಳನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದು, ಗೊಂದಲ ಪರಿಹರಿಸುವಂತೆ ರಾಷ್ಟ್ರೀಯ ಜನತಾದಳ ಪಕ್ಷವು ಗಡುವು ನೀಡಿದೆ. ಈ ನಡುವೆ ಸಿಎಂ ನಿತೀಶ್ ಕುಮಾರ್ ರಾಜಭವನದಲ್ಲಿ ಬೀಡು ಬಿಟ್ಟಿದ್ದಾರೆ.

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ಗೆ ಸೇರ್ಪಡೆಗೊಳ್ಳಲು ಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ) ಮಾತುಕತೆ ನಡೆಸುತ್ತಿದ್ದಾರೆ ಎಂಬ ವರದಿಗಳ ಕುರಿತು ಸ್ಪಷ್ಟನೆ ನೀಡುವಂತೆ ನಿತೀಶ್ ಕುಮಾರ್ ಅವರನ್ನು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಶುಕ್ರವಾರ ಕೇಳಿದೆ. ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ  ಸಂಸದ ಮನೋಜ್ ಝಾ, ‘ಸಂಜೆಯೊಳಗೆ ಬಿಹಾರ ಮುಖ್ಯಮಂತ್ರಿ ಗೊಂದಲವನ್ನು ಪರಿಹರಿಸಬೇಕು’ ಎಂದು ಹೇಳಿದರು.

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ (ಆರ್) ಮತ್ತು ತೇಜಸ್ವಿ ಯಾದವ್ 2022 ರಲ್ಲಿ ನಿತೀಶ್ ಕುಮಾರ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದರು. ಆರ್‌ಜೆಡಿ ಮೈತ್ರಿಯನ್ನು ಮುಂದುವರಿಸಲು ಸಿದ್ಧವಾಗಿದೆ ಮತ್ತು ಸರ್ಕಾರ ಬೀಳಿಸುವ ಆಟಗಳನ್ನು ಎಂದಿಗೂ ಆಡಲಿಲ್ಲ ಎಂದು ಮನೋಜ್ ಝಾ ಹೇಳಿದ್ದಾರೆ.

‘ಸಂಜೆಯೊಳಗೆ ಗೊಂದಲವನ್ನು ನಿವಾರಿಸಲು ನಾವು ನಿತೀಶ್ ಕುಮಾರ್ ಅವರನ್ನು ವಿನಂತಿಸುತ್ತೇವೆ. ಮೈತ್ರಿ ಬಗ್ಗೆ ಈ ಗೊಂದಲ, ಜನರ ಸಾಮಾನ್ಯ ಜೀವನದ ಮೇಲೆ ಪರಿಣಾಮ ಬೀರುತ್ತಿದೆ … ನಮ್ಮ ಕಡೆಯಿಂದ ಇದು ಸ್ಪಷ್ಟವಾಗಿದೆ. ಹಾಗಾಗಿ ಮಾಧ್ಯಮ ವರದಿಗಳಿಂದ ಹೊರಹೊಮ್ಮುವ ಈ ಗೊಂದಲವು ನಮ್ಮನ್ನು ಗೊಂದಲಕ್ಕೀಡುಮಾಡಿದೆ. ನೀವು ನಮ್ಮ ಕಡೆಯಿಂದ ಯಾವುದೇ ಹೇಳಿಕೆ ನೀಡಿಲ್ಲ. ಹಾಗಾಗಿ ನಾನು ವಿನಂತಿಸುತ್ತೇನೆ, ‘ಇಧರ್-ಉಧರ್’ ಎನ್ನುವ ಗೊಂದಲ ಪರಿಹರಿಸಿ. ಮುಖ್ಯಮಂತ್ರಿಯೂ ಮಾಧ್ಯಮ ವರದಿಗಳನ್ನು ವೀಕ್ಷಿಸುತ್ತಾರೆ. ಆರ್‌ಜೆಡಿ ಇಂಥ ಆಟವನ್ನು ಎಂದಿಗೂ ಆಡಲಿಲ್ಲ’ ಎಂದು ಹೇಳಿದ್ದಾರೆ.

ನಿತೀಶ್ ಕುಮಾರ್ ಅವರು ವರದಿಗಳನ್ನು ನಿರಾಕರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಮನೋಜ್ ಝಾ ಹೇಳಿದ್ದಾರೆ.

ಜೆಡಿಯು ಇಂಡಿಯಾ ಬ್ಲಾಕ್‌ನೊಂದಿಗಿದೆ:

ಈ ನಡುವೆ, ‘ಪಕ್ಷವು ವಿರೋಧ ಪಕ್ಷದೊಂದಿಗೆ ದೃಢವಾಗಿದೆ. ಆದರೆ, ಮೈತ್ರಿ ಮತ್ತು ಸೀಟು ಹಂಚಿಕೆಯ ಬಗ್ಗೆ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಲು ಬಯಸುತ್ತದೆ’ ಎಂದು ಜೆಡಿಯು ಉನ್ನತ ಮೂಲಗಳು ಹೇಳಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬಿಜೆಪಿ ಮತ್ತು ಅದರ ಬಿಹಾರ ಮಿತ್ರಪಕ್ಷಗಳು ಇಂದು ಜನತಾ ದಳ (ಯುನೈಟೆಡ್) ಮೈತ್ರಿ ಸಾಧ್ಯತೆಗಳನ್ನು ಅನ್ವೇಷಿಸುತ್ತಿದೆ ಎಂದು ಸುಳಿವು ನೀಡಿವೆ.

‘ಬಿಹಾರದ ರಾಜಕೀಯ ಪರಿಸ್ಥಿತಿಯನ್ನು ದೆಹಲಿಯಲ್ಲಿ ಚರ್ಚಿಸಲಾಗಿದ್ದು, ಪರಿಸ್ಥಿತಿಯನ್ನು ವಿಶ್ಲೇಷಿಸಿದ ನಂತರವೇ ಸಮರ್ಥ ನಾಯಕತ್ವವನ್ನು ನಿರ್ಧರಿಸಲಾಗುವುದು… ಬಿಹಾರದಲ್ಲಿ ಸಂಪೂರ್ಣ ಅರಾಜಕತೆ ಮತ್ತು ರಾಜಕೀಯ ಅಸ್ಥಿರತೆ ಇದೆ… ಪಕ್ಷದ ಚುಕ್ಕಾಣಿ ಹಿಡಿಯುವ ನಿರ್ಧಾರ ಪಕ್ಷದ ಎಲ್ಲಾ ಕಾರ್ಯಕರ್ತರು ಒಪ್ಪಿಕೊಂಡಿದ್ದಾರೆ’ ಎಂದು ಬಿಹಾರದ ವಿರೋಧ ಪಕ್ಷದ ನಾಯಕ ವಿಜಯ್ ಕುಮಾರ್ ಸಿನ್ಹಾ ಹೇಳಿದ್ದಾರೆ.

‘ಸ್ವಲ್ಪ ಸಮಯದಲ್ಲಿ ಬದಲಾವಣೆ ಖಚಿತ, ಪಕ್ಷವು ಸಹ ನಿರ್ಧಾರ ತೆಗೆದುಕೊಂಡಿದೆ. ನಿತೀಶ್ ಜಿ ಕೂಡ ಸಿದ್ಧರಾಗಿದ್ದಾರೆ. ಪ್ರಧಾನಿ ಮೋದಿ ಕೂಡ ನಿತೀಶ್ ಜಿಯನ್ನು ಇಷ್ಟಪಡುತ್ತಾರೆ. ಬಿಹಾರದ ಎಲ್ಲಾ 40 ಸ್ಥಾನಗಳನ್ನು ಎನ್ಡಿಎ ಗೆಲ್ಲುತ್ತದೆ. ನಿತೀಶ್ ಜೀ ನಮ್ಮೊಂದಿಗೆ ಸೇರಿಕೊಂಡರೆ. ಎರಡು ದಿನಗಳಲ್ಲಿ ಎಲ್ಲವೂ ಸರಿಹೋಗುತ್ತದೆ ಎಂದು ನಾನು ಭಾವಿಸುತ್ತೇನೆ. ಬಿಹಾರದಲ್ಲಿ ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ’ ಎಂದು ಅವರು ಹೇಳಿದರು.

ಈ ವಾರದ ಆರಂಭದಲ್ಲಿ, ನಿತೀಶ್ ಕುಮಾರ್ ಅವರು ಕರ್ಪೂರಿ ಠಾಕೂರ್ ಅವರ 100 ನೇ ಜನ್ಮ ವಾರ್ಷಿಕೋತ್ಸವದ ಸಮಾರಂಭದಲ್ಲಿ ರಾಜವಂಶದ ರಾಜಕೀಯದ ಬಗ್ಗೆ ಮಾತನಾಡುವಾಗ ಬಿಹಾರ ಮೈತ್ರಿಯಲ್ಲಿ ಕೋಲಾಹಲವನ್ನು ಉಂಟುಮಾಡಿದರು. ಕೂಡಲೇ, ಲಾಲು ಯಾದವ್ ಅವರ ಪುತ್ರಿ ರೋಶ್ನಿ ಆಚಾರ್ಯ ಎಕ್ಸ್ನಲ್ಲಿ ಮಾರ್ಮಿಕವಾಗಿ ಪೋಸ್ಟ್ ಒಂದನ್ನು ಬರೆದಿದ್ದಾರೆ. ಅವರು ನಿತೀಶ್ ಕುಮಾರ್ ಅವರನ್ನು “ಬಡ್ತಮೀಜ್” ಎಂದು ಕರೆದಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ.

ಇದನ್ನೂ ಓದಿ; ಬಿಹಾರ ರಾಜಕೀಯ ಬೆಳವಣಿಗೆ: ಮುಖ್ಯಮಂತ್ರಿಯಾಗಿ ನಿತೀಶ್, ಬಿಜೆಪಿಯಿಂದ ಇಬ್ಬರು ಡಿಸಿಎಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...