Homeಮುಖಪುಟನಿತೀಶ್ ಕುಮಾರ್ 'ಇಂಡಿಯಾ' ಬಣದಲ್ಲೆ ಉಳಿದಿದ್ದರೆ ಪ್ರಧಾನಿಯಾಗಬಹುದಿತ್ತು: ಅಖಿಲೇಶ್ ಯಾದವ್

ನಿತೀಶ್ ಕುಮಾರ್ ‘ಇಂಡಿಯಾ’ ಬಣದಲ್ಲೆ ಉಳಿದಿದ್ದರೆ ಪ್ರಧಾನಿಯಾಗಬಹುದಿತ್ತು: ಅಖಿಲೇಶ್ ಯಾದವ್

- Advertisement -
- Advertisement -

ಬಿಹಾರದ ‘ಮಹಾ ಘಟಬಂಧನ್’ ಮೈತ್ರಿ ಸರ್ಕಾರದೊಳಗೆ ಸಂಭವಿಸಿರುವ ಕ್ಷಿಪ್ರ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ‘ನಿತೀಶ್ ಕುಮಾರ್ ಅವರು ವಿರೋಧ ಪಕ್ಷಗಳ ಇಂಡಿಯಾ ಬಣದೊಂದಿಗೆ ಬಲವಾಗಿ ನಿಂತಿದ್ದರೆ, ಅವರು ಪ್ರಧಾನಿಯಾಗಬಹುದಿತ್ತು’ ಎಂದು ಹೇಳಿದ್ದಾರೆ.

ಇಂಡಿಯಾ ಟುಡೆಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ‘ಮೈತ್ರಿಯಲ್ಲಿ ಪ್ರಧಾನಿ ಹುದ್ದೆಗೆ ಯಾರನ್ನಾದರೂ ಪರಿಗಣಿಸಬಹುದು. ನಿತೀಶ್ ಕುಮಾರ್ ಅವರು ಸರಿಯಾದ ಬೆಂಬಲದೊಂದಿಗೆ ಸ್ಪರ್ಧಿಯಾಗಬಹುದಿತ್ತು’ ಎಂದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂಡಿಯಾ ಬ್ಲಾಕ್ ಪಾಲುದಾರರೊಂದಿಗಿನ ಮಾತುಕತೆಗಳು ಹದಗೆಟ್ಟಿರುವ ಕಾರಣ ಬಿಜೆಪಿಯೊಂದಿಗಿನ ಹಳೆ ಗೆಳತನವನ್ನು ಮುಂದುವರಿಸಬಹುದು ಎಂಬ ತೀವ್ರ ಊಹಾಪೋಹಗಳ ಹಿನ್ನೆಲೆಯಲ್ಲಿ ಅಖಿಲೇಶ್ ಯಾದವ್ ಹೇಳಿಕೆ ನೀಡಿದ್ದಾರೆ. ಜನವರಿ 28ರಂದು ಬಿಜೆಪಿ ಬೆಂಬಲದೊಂದಿಗೆ ನಿತೀಶ್ ಕುಮಾರ್ ಏಳನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

ನಿತೀಶ್ ಕುಮಾರ್ ಅವರ ನಡೆಗೆ ನಿರಾಶೆಯನ್ನು ವ್ಯಕ್ತಪಡಿಸಿದ ಯಾದವ್, ಜೆಡಿಯು ಮುಖ್ಯಸ್ಥರು ಇಂಡಿಯಾ ಬಣದಲ್ಲೆ ಉಳಿಯಬೇಕು ಎಂದು ಅವರು ಬಯಸಿದರು.

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರೊಂದಿಗೆ ಪ್ರಚಾರ ಮಾಡುವ ಸಾಧ್ಯತೆಯ ಬಗ್ಗೆ ಕೇಳಿದಾಗ, ‘ಇನ್ನೂ ಅಂತಿಮವಾಗಿಲ್ಲ; ಅಂತಹ ಸಹಯೋಗವು ಕಾರ್ಯರೂಪಕ್ಕೆ ಬರುತ್ತದೆಯೇ ಎಂದು ಕಾಲ ಮಾತ್ರ ಹೇಳುತ್ತದೆ’ ಎಂದು ಹೇಳಿದರು.

ಪ್ರಧಾನಿ ಹುದ್ದೆಗೆ ಸ್ಪರ್ಧಿಸುತ್ತಿಲ್ಲ ಎಂದು ಅಖಿಲೇಶ್ ಯಾದವ್ ಸ್ಪಷ್ಟಪಡಿಸಿದರು. ಬದಲಿಗೆ ಪ್ರಾದೇಶಿಕ ಪಕ್ಷಗಳು ಸಾಕಷ್ಟು ಬಲವನ್ನು ಹೊಂದಿರುವಲ್ಲಿ ಆದ್ಯತೆ ನೀಡಬೇಕು ಎಂದು ಮಮತಾ ಬ್ಯಾನರ್ಜಿ ಅವರ ಮಾತುಗಳನ್ನು ಪುರುಚ್ಛರಿಸಿದರು. ಇಂಡಿಯಾ ಬಣದೊಂದಿಗಿನ ಸೀಟು ಹಂಚಿಕೆಯ ಮಾತುಕತೆ ಮುರಿದುಬಿದ್ದ ನಂತರ ಬಂಗಾಳದಲ್ಲಿ ಸ್ವತಂತ್ರವಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ದೀದಿ ಘೋಷಿಸಿದರು.

ರಾಮಮಂದಿರದ ವಿವಾದಾತ್ಮಕ ವಿಷಯದ ಬಗ್ಗೆ ಮಾತನಾಡಿ, ‘ಬಿಜೆಪಿಯು ಈ ವಿಷಯವನ್ನು ರಾಜಕೀಯಗೊಳಿಸುತ್ತಿದೆ. ಅದರಿಂದ ರಾಜಕೀಯ ಮೈಲೇಜ್ ಪಡೆಯಲು ಪ್ರಯತ್ನಿಸುತ್ತಿದೆ’ ಎಂದರು. ‘ನಾನೂ ಕೂಡ ಅಯೋಧ್ಯೆಗೆ ಹೋಗುತ್ತೇನೆ. ಆದರೆ, 2024ರಲ್ಲಿ ಚುನಾವಣೆ ಇರುವುದರಿಂದ ಪಂಡಿತರನ್ನು ಕೇಳಿ ಸಮಯ ತೆಗೆದುಕೊಂಡ ನಂತರ ಹೋಗುತ್ತೇನೆ’ ಎಂದರು.

ಇದನ್ನೂ ಓದಿ; ಬಿಹಾರ ರಾಜಕೀಯ ಬಿಕ್ಕಟ್ಟು; ‘ಇಧರ್-ಉಧರ್’ ಎನ್ನುವ ಗೊಂದಲ ಪರಿಹರಿಸಿ: ಆರ್‌ಜೆಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...