Homeಕರ್ನಾಟಕಪರಿಸರ ನಿಯಮಾವಳಿ ಉಲ್ಲಂಘನೆ ಆರೋಪ: ಯತ್ನಾಳ್ ಸಕ್ಕರೆ ಕಾರ್ಖಾನೆ ಮುಚ್ಚಲು ಆದೇಶ

ಪರಿಸರ ನಿಯಮಾವಳಿ ಉಲ್ಲಂಘನೆ ಆರೋಪ: ಯತ್ನಾಳ್ ಸಕ್ಕರೆ ಕಾರ್ಖಾನೆ ಮುಚ್ಚಲು ಆದೇಶ

- Advertisement -
- Advertisement -

ಪರಿಸರ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಎರಡು ಸಕ್ಕರೆ ಕಾರ್ಖಾನೆಗಳನ್ನು ಮುಚ್ಚಲು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಆದೇಶಿಸಿದೆ ಎಂದು ತಿಳಿದು ಬಂದಿದೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಒಡೆತನದ ಕಲಬುರಗಿ ಜಿಲ್ಲೆ ಚಿಂಚೋಳಿಯ ಸಿದ್ಧಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆ ಹಾಗೂ ವಿಷಾನಿಲ ಸೋರಿಕೆಯಿಂದ ಇಬ್ಬರು ಕಾರ್ಮಿಕರ ಸಾವಿಗೆ ಕಾರಣವಾದ ಬೀದರ್‌ ಜಿಲ್ಲೆ ಹುಮನಾಬಾದ್‌ನ ಪ್ರಸನ್ನ ಪ್ರಿ ಪ್ರೊಸೆಸಿಂಗ್‌ ಪ್ರೈವೇಟ್‌ ಲಿಮಿಟೆಡ್‌ ಕಾರ್ಖಾನೆಗಳನ್ನು ತಕ್ಷಣದಿಂದಲೇ ಮುಚ್ಚುವಂತೆ ಸೂಚಿಸಲಾಗಿದೆ.

ಕಳೆದ ವಾರ ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಕೆಎಸ್‌ಪಿಸಿಬಿ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ ಬೆನ್ನಲ್ಲೇ ತುರ್ತು ಸಭೆ ನಡೆಸಿದ ಮಂಡಳಿ, ಸಕ್ಕರೆ ಕಾರ್ಖಾನೆಗಳನ್ನು ಮುಚ್ಚುವಂತೆ ನೋಟಿಸ್ ಜಾರಿಗೊಳಿಸಿದೆ ಎಂದು ವರದಿಗಳು ಹೇಳಿವೆ.

ಸಕ್ಕರೆ ಕಾರ್ಖಾನೆಗಳಿಗೆ ಬೀಗ ಜಡಿಯುವುದು ಮಾತ್ರವಲ್ಲದೆ, ಅವುಗಳ ನೋಂದಣಿಗೆ ಸಹಕರಿಸಿದ ಅಧಿಕಾರಿಗಳ ವಿರುದ್ದವೂ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೆಎಸ್‌ಪಿಸಿಬಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ ಎರಡು ಕಾರ್ಖಾನೆಗಳಲ್ಲಿ ಅವೈಜ್ಞಾನಿಕ ನಿರ್ವಹಣೆ ಸೇರಿದಂತೆ ಹಲವು ಲೋಪಗಳು ಕಂಡು ಬಂದಿವೆ ಎಂದು ಹೇಳಲಾಗಿದೆ.

ಯತ್ನಾಳ್ ಸಕ್ಕರೆ ಕಾರ್ಖಾನೆ ಮುಚ್ಚಲು ಆದೇಶ:

ಕಲಬುರಗಿ ಜಿಲ್ಲೆ ಚಿಂಚೋಳಿಯಲ್ಲಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಒಡೆತನದ ಸಿದ್ಧಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆ ಮುಚ್ಚಲು ಕೆಎಸ್‌ಪಿಸಿಬಿ ಆದೇಶಿಸಿದೆ. ಮಾಲಿನ್ಯ ನಿಯಂತ್ರಣ ನಿಯಮಾವಳಿಗಳನ್ನು ಗಾಳಿಗೆ ತೂರಿ ಕಾರ್ಖಾನೆ ನಡೆಸುತ್ತಿದ್ದ ಆರೋಪ ಕೇಳಿ ಬಂದಿದೆ. ವರದಿಗಳ ಪ್ರಕಾರ, ಅನುಮತಿ ಪಡೆಯದೆ ಬಾಯ್ಲರ್ ಆರಂಭ, ಕಬ್ಬು ಅರೆಯುವಿಕೆ, ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣ ಹಂತದಲ್ಲಿದ್ದರೂ ಅನುಮತಿ ಪಡೆಯದೆ ಡಿಸ್ಟಿಲರಿ ಘಟಕ ಸ್ಥಾಪಿಸಿದ್ದು ಸೇರಿದಂತೆ ಅನೇಕ ಆರೋಪಗಳು ಈ ಕಾರ್ಖಾನೆ ವಿರುದ್ದ ಕೇಳಿ ಬಂದಿವೆ.

ಹುಮನಾಬಾದ್ ಕಾರ್ಖಾನೆಗೆ ಬೀಗ:

ಜನವರಿ 21ರಂದು ವಿಷಾನಿಲ ಸೋರಿಕೆಯಿಂದ ದುರ್ಘಟನೆ ನಡೆದಿರುವ ಬೀದರ್ ಜಿಲ್ಲೆ ಹುಮನಾಬಾದ್‌ ತಾಲೂಕಿನ ಗಡ್ವಂತಿ ಗ್ರಾಮದ ಕೆಐಎಡಿಬಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಸನ್ನ ಪ್ರಿ ಪ್ರೊಸೆಸಿಂಗ್‌ ಪ್ರೈವೇಟ್‌ ಲಿಮಿಟೆಡ್‌ ಕಾರ್ಖಾನೆಯನ್ನು ಮುಂದಿನ ಆದೇಶವರೆಗೆ ಸ್ಥಗಿತಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಈ ಕಾರ್ಖಾನೆ ಮುಚ್ಚಲು ಇತ್ತೀಚೆಗೆ ನಡೆದ ದುರ್ಘಟನೆ ಮತ್ತು ನಿಯಮಾವಳಿಗಳ ಉಲ್ಲಂಘನೆ ಮುಖ್ಯ ಕಾರಣ ಎನ್ನಲಾಗಿದೆ.

ಕೈಗಾರಿಗೆ, ಕಲ್ಲು ಮತ್ತು ಅದಿರು ಗಣಿಗಳಿಗೆ ನೋಟಿಸ್:

ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು 2023ರಿಂದ ಈವರೆಗೆ ರಾಜ್ಯದಲ್ಲಿಎಷ್ಟು ಕೈಗಾರಿಕೆಗಳು, ಕಲ್ಲು ಮತ್ತು ಅದಿರು ಗಣಿಗಳಿಗೆ ನೋಟಿಸ್‌ ನೀಡಲಾಗಿದೆ. ಅವುಗಳಲ್ಲಿ ಎಷ್ಟು ನೋಟಿಸ್‌ಗೆ ಉತ್ತರ ನೀಡಿವೆ. ಎಷ್ಟು ಕಾರ್ಖಾನೆಗಳು ಮತ್ತು ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಒಂದು ವಾರದಲ್ಲಿ ಸಮಗ್ರ ವರದಿ ಸಲ್ಲಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ; 32 ಶಾಸಕರಿಗೆ ಮೊದಲ ಆದ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...