Homeಮುಖಪುಟಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿ ಖಂಡಿಸಿ ಪತ್ರ ಬರೆದ 100 ಮಂದಿ...

ಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿ ಖಂಡಿಸಿ ಪತ್ರ ಬರೆದ 100 ಮಂದಿ ಚಿಂತಕರು

- Advertisement -
- Advertisement -

ಅಸ್ಸಾಂನಲ್ಲಿ ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆಯ ವೇಳೆ ಅಸ್ಸಾಂನ ಬಿಜೆಪಿ ಸರಕಾರ ಮತ್ತು ಕಾಂಗ್ರೆಸ್‌ ನಡುವೆ ತೀವ್ರ ಜಟಾಪಟಿ ನಡೆದಿತ್ತು. ರಾಹುಲ್‌ ಗಾಂಧಿಯವರ ಮೇಲೆ ದಾಳಿಗೆ ಯತ್ನಿಸಲಾಗಿದೆ ಎಂಬ ಆರೋಪವು ಕೇಳಿ ಬಂದಿತ್ತು. ಇದೀಗ ಅಸ್ಸಾಂ ಸರಕಾರದ ನಡೆಯನ್ನು ಖಂಡಿಸಿ ರಾಜ್ಯದ 100 ಮಂದಿ ಹೆಸರಾಂತ ಬುದ್ದಿಜೀವಿಗಳು, ಚಿಂತಕರು ಪತ್ರವನ್ನು ಬರೆದಿದ್ದಾರೆ.

ಪತ್ರದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆ ಮೇಲಿನ ದಾಳಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ನಡವಳಿಕೆಯನ್ನು ನಾವು ಖಂಡಿಸುತ್ತೇವೆ ಎಂದು ಉಲ್ಲೇಖಿಸಲಾಗಿದೆ.

ನ್ಯಾಯ್ ಯಾತ್ರೆಯು ಅಸ್ಸಾಂನಲ್ಲಿ ತನ್ನ ಎಂಟು ದಿನಗಳ ಯಾತ್ರೆಯನ್ನು ಪೂರ್ಣಗೊಳಿಸಿ ಬಂಗಾಳವನ್ನು ಪ್ರವೇಶಿಸಿತ್ತು. ಅಸ್ಸಾಂನಲ್ಲಿ ಯಾತ್ರೆಯ ವೇಳೆ ಪದೇ ಪದೇ ಅಡೆತಡೆಗಳನ್ನು ಎದುರಿಸಿತ್ತು. ನ್ಯಾಯ ಯಾತ್ರೆಯ ವಾಹನವನ್ನು ಸುತ್ತುವರಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರ ಕಾರಿನ ಮೇಲೆ ದಾಳಿಯನ್ನು ಕೂಡ ನಡೆಸಿದ್ದರು. ಅಸ್ಸಾಂನ 15ನೇ ಶತಮಾನದ ಸಂತ ಶ‍್ರೀಮಂತ ಶಂಕರದೇವರ ಜನ್ಮಸ್ಥಳವಾದ ಬತದ್ರವ ಸತ್ರ ದೇವಾಲಯಕ್ಕೆ ಭೇಟಿ ನೀಡದಂತೆ ರಾಹುಲ್‌ ಗಾಂಧಿಯನ್ನು ತಡೆಯಲಾಗಿತ್ತು. ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸದಂತೆ ರಾಹುಲ್‌ ಗಾಂಧಿಗೆ ತಡೆಯಲಾಗಿತ್ತು.

ಅಸ್ಸಾಂ ಕಾಂಗ್ರೆಸ್‌ ಘಟಕದ ರಾಜ್ಯಾಧ್ಯಕ್ಷ ಭೂಪೇನ್ ಬೋರಾಹ್ ಸೇರಿದಂತೆ ಕಾಂಗ್ರೆಸ್ ನಾಯಕರ ಜೊತೆ ಅಸ್ಸಾಂ ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದಾರೆ. ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ಬಿಜೆಪಿಗರು ಹಲ್ಲೆ ನಡೆಸಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಆರೋಪಿಸಿದ್ದರು. ಇದಲ್ಲದೆ ರಾಹುಲ್‌ ಗಾಂಧಿ, ಕೆಸಿ ವೇಣುಗೋಪಾಲ್‌ ಸೇರಿದಂತೆ ಕಾಂಗ್ರೆಸ್‌ ನಾಯಕರ  ವಿರುದ್ಧ ಹಿಂಸಾಚಾರ, ಪೊಲೀಸರ ಕರ್ತವ್ಯಕ್ಕೆ ಟಡ್ಡಿ ಸೇರಿ ವಿವಿಧ ಸೆಕ್ಸನ್‌ಗಳಡಿಯಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಪತ್ರದಲ್ಲೇನಿದೆ?

ಪ್ರಕ್ಷುಬ್ಧ ಮಣಿಪುರದಿಂದ ಶಾಂತಿಯುತವಾಗಿ ಯಾತ್ರೆ ಆರಂಭವಾಯಿತು. ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶದ ಮೂಲಕ ಶಾಂತಿಯುತವಾಗಿ ಯಾತ್ರೆ ಸಾಗಿದೆ. ಆದರೆ ಅಸ್ಸಾಂನಲ್ಲಿ ಮಾತ್ರ ಯಾತ್ರೆಯ ಮೇಲೆ ಪದೇ ಪದೇ ದಾಳಿ ನಡೆಸಲಾಗಿದೆ. ಭಾರತ್ ಜೋಡೋ ನ್ಯಾಯ ಯಾತ್ರೆ ಮೇಲಿನ ದಾಳಿ ಮತ್ತು ಅಸ್ಸಾಂ ಮುಖ್ಯಮಂತ್ರಿ ವರ್ತನೆಯನ್ನು ನಾವು ಖಂಡಿಸುತ್ತೇವೆ. ಕೆಲವರು ಯಾತ್ರೆಯನ್ನು ಬೆಂಬಲಿಸಬಹುದು ಮತ್ತು ಕೆಲವರು ಬೆಂಬಲಿಸದಿರಬಹುದು. ಆದರೆ ಈ ಶಾಂತಿಯುತ ಯಾತ್ರೆಯನ್ನು ಯಾರೂ ತಡೆಯಲು ಪ್ರಯತ್ನಿಸಬಾರದು. ಯಾತ್ರೆಯು ಅಸ್ಸಾಂಗೆ ಪ್ರವೇಶಿಸಿದಾಗ ಅಸ್ಸಾಂ ಸರ್ಕಾರ ಅದಕ್ಕೆ ಅಡೆತಡೆಗಳನ್ನು ಸೃಷ್ಟಿಸಲು ಎಲ್ಲವನ್ನೂ ಪ್ರಯತ್ನಿಸಿತು. ಕೆಲವೆಡೆ ಕಿಡಿಗೇಡಿಗಳ ದಾಳಿಯೂ ನಡೆದಿದೆ. ಯಾತ್ರೆಯ ಜೊತೆಗಿದ್ದ ಪತ್ರಕರ್ತರ ವಾಹನಗಳನ್ನು ಧ್ವಂಸಗೊಳಿಸಿ ಅವರ ಕ್ಯಾಮರಾಗಳನ್ನು ಕಸಿದುಕೊಂಡಿದ್ದಾರೆ. ಸೋನಿತ್‌ಪುರದಲ್ಲಿ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಮೇಲೆ ದೈಹಿಕ ಹಲ್ಲೆ ನಡೆದಿದೆ. ಇಷ್ಟೆಲ್ಲ ನಡೆಯುತ್ತಿದ್ದರೂ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದರು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಪ್ರಕ್ಷುಬ್ಧ ಮಣಿಪುರದಿಂದ ಯಾತ್ರೆ ಶಾಂತಿಯುತವಾಗಿ ಆರಂಭವಾಯಿತು. ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶದ ಮೂಲಕ ಯಾವುದೇ ಅಡ್ಡಿಯಿಲ್ಲದೆ ಶಾಂತಿಯುತವಾಗಿ ಸಾಗಿತು. ಆದರೆ ಅಸ್ಸಾಂನಲ್ಲಿ ಮಾತ್ರ ಯಾತ್ರೆ ಮೇಲೆ ಪದೇ ಪದೇ ದಾಳಿ ನಡೆದಿದೆ. ಭಾರತ್ ಜೋಡೋ ನ್ಯಾಯ್ ಯಾತ್ರೆಯ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ ಮತ್ತು ಅದರಲ್ಲಿ ತೊಡಗಿರುವವರನ್ನು ಬಂಧಿಸಿ ಕಾನೂನಿನ ಪ್ರಕಾರ ಶಿಕ್ಷಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ನಾವು ರಾಹುಲ್ ಗಾಂಧಿ ಮತ್ತು ಯಾತ್ರೆಯಲ್ಲಿ ಭಾಗವಹಿಸುವ ಎಲ್ಲರಿಗೂ ಶಾಂತವಾಗಿ ಯಾತ್ರೆಯಲ್ಲಿ ಸಾಗಲು ಮತ್ತು ಅಂತಹ ಪ್ರಚೋದನೆಗಳಿಗೆ ಎಂದಿಗೂ ಒಳಗಾಗದಂತೆ ಮನವಿ ಮಾಡುತ್ತೇವೆ. ಕೆಲವು ದಿನಗಳ ಹಿಂದೆ,  ಪ್ರಖ್ಯಾತ ವಿದ್ವಾಂಸ ಡಾ.ಹಿರೇನ್ ಗೊಹೈನ್ ಅವರ ವಿರುದ್ಧ ಅಸ್ಸಾಂನ ಮುಖ್ಯಮಂತ್ರಿ ಶರ್ಮಾ ಅವರು ಆಕ್ಷೇಪಾರ್ಹ ಪದಗಳನ್ನು ಬಳಕೆ ಮಾಡುವ ಮೂಲಕ ಬುದ್ಧಿಜೀವಿಗಳನ್ನು ಸಾರ್ವಜನಿಕವಾಗಿ ಅವಮಾನಿಸಿದ್ದಾರೆ ಎಂದು ಹೇಳಿದ್ದಾರೆ. ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಕ್ಕಾಗಿ ಗೌಹಾಟಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ ಅಖಿಲ್ ರಂಜನ್ ದತ್ತಾ ವಿರುದ್ಧ ಕ್ರಮ ಜರುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಮುಖ್ಯಮಂತ್ರಿಗಳ ಭಾಷೆ ಮತ್ತು ನಡವಳಿಕೆ ಅತ್ಯಂತ ಆಘಾತಕಾರಿಯಾಗಿದೆ. ಒಬ್ಬ ವ್ಯಕ್ತಿಗೆ ವಾಕ್ ಸ್ವಾತಂತ್ರ್ಯ ಬಹುಮುಖ್ಯ. ಇದು ಪ್ರಜಾಪ್ರಭುತ್ವದ ಸಾರ್ವತ್ರಿಕ ಹಕ್ಕು ಮತ್ತು ಮೂಲಭೂತ ಹಕ್ಕು ಎಂದು ಹೇಳಿದ್ದಾರೆ. ಮುಖ್ಯಮಂತ್ರಿಯವರ ವರ್ತನೆಯಿಂದ ನಮಗೆ ಬೇಸರವಾಗಿದೆ ಮತ್ತು ನಾವು ಅದನ್ನು ಬಲವಾಗಿ ಖಂಡಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿಲಾಗಿದೆ.

ಪತ್ರದಲ್ಲಿ ಸಾಮಾಜಿಕ, ರಾಜಕೀಯ, ಸಾಹಿತ್ಯ ರಂಗದ ದಿಗ್ಗಜರು ಸಹಿಯನ್ನು ಹಾಕಿದ್ದಾರೆ. ಡಾ ನಾಗೇನ್ ಸೈಕಿಯಾ, ಶ್ರೀ ಕುಲದ ಕೃ ಭಟ್ಟಾಚಾರ್ಯ, ಶ್ರೀ ಹರೇಕೃಷ್ಣ ದೇಕಾ, ಶ್ರೀ ಹೈದರ್ ಹುಸೇನ್, ಶ್ರೀ ಅಪುರ್ಬಾ ಶರ್ಮಾ, ಶ್ರೀ ಕುಲೇಂದು ಪಾಠಕ್, ಡಾ ತಪೋಧೀರ್ ಭಟ್ಟಾಚಾರ್ಯ, ಡಾ ದಿನೇಶ್ ಚಿ. ಗೋಸ್ವಾಮಿ, ಶ್ರೀ ಅಜಿತ್ ಕುಮಾರ್ ಭೂಯಾನ್, ಡಾ ತೌಫಿಕ್ ರೆಹಮಾನ್ ಬೊರ್ಬೊರಾ,ಡಾ ಅಪುರ್ಬಾ ಕುಮಾರ್ ಬರುವಾ, ಡಾ ಮನೋರಮಾ ಶರ್ಮಾ, ಡಾ ದುಲಾಲ್ ಚ. ಗೋಸ್ವಾಮಿ, ಡಾ ಅನುರಾಧಾ ದತ್ತಾ, ಡಾ ಪರಮಾನಂದ ಮಹಾಂತ, ಡಾ ಅಬು ನಾಸರ್ ಸಯೀದ್ ಅಹ್ಮದ್, ಡಾ ಸಂಧ್ಯಾ ಗೋಸ್ವಾಮಿ, ಶ್ರೀ ಪ್ರಭಾತ್ ಬೋರಾ, ಶ್ರೀ ಲೋಕನಾಥ ಗೋಸ್ವಾಮಿ, ಶ್ರೀ ಉದಯಾದಿತ್ಯ ಭಾರಾಲಿ, ಶ್ರೀ ನಿತ್ಯಾ ಬೋರಾ,  ಶಾಂತಿಕಾಂ ಹಜಾರಿಕಾ, ಶ್ರೀ ಎಚ್.ಆರ್.ಎ. ಚೌಧರಿ, ಬಾದಲ್ ಚಕ್ರಬೋರಿ,  ಲಕ್ಷ್ಮೀನಾಥ ತಾಮುಳಿ, ಧೀರೇಂದ್ರ ನಾಥ್ ಸೈಕಿಯಾ, ಪ್ರದೀಪ ಆಚಾರ್ಯ, ಅಬ್ಸರ್ ಹಜಾರಿಕಾ, ಡಾ ಪದ್ಮಪಾಣಿ, ಪೂರ್ಣೇಶ್ವರನಾಥ, ಡಾ ಕಲ್ಯಾಣಿ ಬರುವಾ, ಉದ್ಧಬ್ ಕಾಕತಿ, ಡಾ ಜಿಬಾನ್ ಚಿ. ದತ್ತಬರುವಾ, ಅರುಪ್ ಬೊರ್ಬೊರಾ, ಕಮಲ್ ನಾರಾಯಣ ಚೌಧರಿ, ಅಜಿತ ಚಂದ್ರ ತಾಲೂಕದಾರ, ದೇಬೆನ್ ತಮುಳಿ, ಜ್ಞಾನ ಪೂಜಾರಿ, ಸತಾಂಜೀಬ್ ದಾಸ್, ರಾಜೇನ್ ಕಲಿತಾ, ಜ್ಞಾನನ್ ಬೊರ್ಕಕಟಿ, ದ್ವೀಪೇನ್ ಕಾಕತಿ, ಮುನಿನ್ ಬಯಾನ್, ಹೇಮಂತ ಬರ್ಮನ್, ಹೇಮಂತ ದಾಸ್, ಡಾ ನವನೀಲ್ ಬರುವಾ, ಮೃಣಾಲ್ ಕುಮಾರ್ ಬರ್ಮನ್, ಅಲಿ ಹೈದರ್ ಲಸ್ಕರ್, ವಾರಿಸ್ ಚೌಧರಿ, ಅಬ್ದುರ್ ರೆಹಮಾನ್ ಶೇಖ್, ಡಾ ಕಾಳಿಪ್ರಸಾದ್ ಶರ್ಮಾ, ಡಾ ಮೋಹನ್ ಚಿ. ಕಲಿತಾ, ಡಾ.ಸೋನಕುಮಾರ ತಾಲೂಕದಾರ್, ಡಾ ಇಂದ್ರಾಣಿ ದತ್ತಾ,  ರಬಿನ್ ದತ್ತಾ, ದೀಪಕ್ ಗೋಸ್ವಾಮಿ, ಘನಶ್ಯಾಮನಾಥ ಅವರು ಸಹಿಯನ್ನು ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಭಾರತ್ ಜೋಡೋ ನ್ಯಾಯ ಯಾತ್ರೆ: ಸಾರ್ವಜನಿಕ ಸಭೆಗಳಿಗೆ ಅನುಮತಿ ನೀಡದ ದೀದಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...