Homeಮುಖಪುಟಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿ ಖಂಡಿಸಿ ಪತ್ರ ಬರೆದ 100 ಮಂದಿ...

ಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿ ಖಂಡಿಸಿ ಪತ್ರ ಬರೆದ 100 ಮಂದಿ ಚಿಂತಕರು

- Advertisement -
- Advertisement -

ಅಸ್ಸಾಂನಲ್ಲಿ ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆಯ ವೇಳೆ ಅಸ್ಸಾಂನ ಬಿಜೆಪಿ ಸರಕಾರ ಮತ್ತು ಕಾಂಗ್ರೆಸ್‌ ನಡುವೆ ತೀವ್ರ ಜಟಾಪಟಿ ನಡೆದಿತ್ತು. ರಾಹುಲ್‌ ಗಾಂಧಿಯವರ ಮೇಲೆ ದಾಳಿಗೆ ಯತ್ನಿಸಲಾಗಿದೆ ಎಂಬ ಆರೋಪವು ಕೇಳಿ ಬಂದಿತ್ತು. ಇದೀಗ ಅಸ್ಸಾಂ ಸರಕಾರದ ನಡೆಯನ್ನು ಖಂಡಿಸಿ ರಾಜ್ಯದ 100 ಮಂದಿ ಹೆಸರಾಂತ ಬುದ್ದಿಜೀವಿಗಳು, ಚಿಂತಕರು ಪತ್ರವನ್ನು ಬರೆದಿದ್ದಾರೆ.

ಪತ್ರದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆ ಮೇಲಿನ ದಾಳಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ನಡವಳಿಕೆಯನ್ನು ನಾವು ಖಂಡಿಸುತ್ತೇವೆ ಎಂದು ಉಲ್ಲೇಖಿಸಲಾಗಿದೆ.

ನ್ಯಾಯ್ ಯಾತ್ರೆಯು ಅಸ್ಸಾಂನಲ್ಲಿ ತನ್ನ ಎಂಟು ದಿನಗಳ ಯಾತ್ರೆಯನ್ನು ಪೂರ್ಣಗೊಳಿಸಿ ಬಂಗಾಳವನ್ನು ಪ್ರವೇಶಿಸಿತ್ತು. ಅಸ್ಸಾಂನಲ್ಲಿ ಯಾತ್ರೆಯ ವೇಳೆ ಪದೇ ಪದೇ ಅಡೆತಡೆಗಳನ್ನು ಎದುರಿಸಿತ್ತು. ನ್ಯಾಯ ಯಾತ್ರೆಯ ವಾಹನವನ್ನು ಸುತ್ತುವರಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರ ಕಾರಿನ ಮೇಲೆ ದಾಳಿಯನ್ನು ಕೂಡ ನಡೆಸಿದ್ದರು. ಅಸ್ಸಾಂನ 15ನೇ ಶತಮಾನದ ಸಂತ ಶ‍್ರೀಮಂತ ಶಂಕರದೇವರ ಜನ್ಮಸ್ಥಳವಾದ ಬತದ್ರವ ಸತ್ರ ದೇವಾಲಯಕ್ಕೆ ಭೇಟಿ ನೀಡದಂತೆ ರಾಹುಲ್‌ ಗಾಂಧಿಯನ್ನು ತಡೆಯಲಾಗಿತ್ತು. ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸದಂತೆ ರಾಹುಲ್‌ ಗಾಂಧಿಗೆ ತಡೆಯಲಾಗಿತ್ತು.

ಅಸ್ಸಾಂ ಕಾಂಗ್ರೆಸ್‌ ಘಟಕದ ರಾಜ್ಯಾಧ್ಯಕ್ಷ ಭೂಪೇನ್ ಬೋರಾಹ್ ಸೇರಿದಂತೆ ಕಾಂಗ್ರೆಸ್ ನಾಯಕರ ಜೊತೆ ಅಸ್ಸಾಂ ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದಾರೆ. ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ಬಿಜೆಪಿಗರು ಹಲ್ಲೆ ನಡೆಸಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಆರೋಪಿಸಿದ್ದರು. ಇದಲ್ಲದೆ ರಾಹುಲ್‌ ಗಾಂಧಿ, ಕೆಸಿ ವೇಣುಗೋಪಾಲ್‌ ಸೇರಿದಂತೆ ಕಾಂಗ್ರೆಸ್‌ ನಾಯಕರ  ವಿರುದ್ಧ ಹಿಂಸಾಚಾರ, ಪೊಲೀಸರ ಕರ್ತವ್ಯಕ್ಕೆ ಟಡ್ಡಿ ಸೇರಿ ವಿವಿಧ ಸೆಕ್ಸನ್‌ಗಳಡಿಯಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಪತ್ರದಲ್ಲೇನಿದೆ?

ಪ್ರಕ್ಷುಬ್ಧ ಮಣಿಪುರದಿಂದ ಶಾಂತಿಯುತವಾಗಿ ಯಾತ್ರೆ ಆರಂಭವಾಯಿತು. ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶದ ಮೂಲಕ ಶಾಂತಿಯುತವಾಗಿ ಯಾತ್ರೆ ಸಾಗಿದೆ. ಆದರೆ ಅಸ್ಸಾಂನಲ್ಲಿ ಮಾತ್ರ ಯಾತ್ರೆಯ ಮೇಲೆ ಪದೇ ಪದೇ ದಾಳಿ ನಡೆಸಲಾಗಿದೆ. ಭಾರತ್ ಜೋಡೋ ನ್ಯಾಯ ಯಾತ್ರೆ ಮೇಲಿನ ದಾಳಿ ಮತ್ತು ಅಸ್ಸಾಂ ಮುಖ್ಯಮಂತ್ರಿ ವರ್ತನೆಯನ್ನು ನಾವು ಖಂಡಿಸುತ್ತೇವೆ. ಕೆಲವರು ಯಾತ್ರೆಯನ್ನು ಬೆಂಬಲಿಸಬಹುದು ಮತ್ತು ಕೆಲವರು ಬೆಂಬಲಿಸದಿರಬಹುದು. ಆದರೆ ಈ ಶಾಂತಿಯುತ ಯಾತ್ರೆಯನ್ನು ಯಾರೂ ತಡೆಯಲು ಪ್ರಯತ್ನಿಸಬಾರದು. ಯಾತ್ರೆಯು ಅಸ್ಸಾಂಗೆ ಪ್ರವೇಶಿಸಿದಾಗ ಅಸ್ಸಾಂ ಸರ್ಕಾರ ಅದಕ್ಕೆ ಅಡೆತಡೆಗಳನ್ನು ಸೃಷ್ಟಿಸಲು ಎಲ್ಲವನ್ನೂ ಪ್ರಯತ್ನಿಸಿತು. ಕೆಲವೆಡೆ ಕಿಡಿಗೇಡಿಗಳ ದಾಳಿಯೂ ನಡೆದಿದೆ. ಯಾತ್ರೆಯ ಜೊತೆಗಿದ್ದ ಪತ್ರಕರ್ತರ ವಾಹನಗಳನ್ನು ಧ್ವಂಸಗೊಳಿಸಿ ಅವರ ಕ್ಯಾಮರಾಗಳನ್ನು ಕಸಿದುಕೊಂಡಿದ್ದಾರೆ. ಸೋನಿತ್‌ಪುರದಲ್ಲಿ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಮೇಲೆ ದೈಹಿಕ ಹಲ್ಲೆ ನಡೆದಿದೆ. ಇಷ್ಟೆಲ್ಲ ನಡೆಯುತ್ತಿದ್ದರೂ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದರು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಪ್ರಕ್ಷುಬ್ಧ ಮಣಿಪುರದಿಂದ ಯಾತ್ರೆ ಶಾಂತಿಯುತವಾಗಿ ಆರಂಭವಾಯಿತು. ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶದ ಮೂಲಕ ಯಾವುದೇ ಅಡ್ಡಿಯಿಲ್ಲದೆ ಶಾಂತಿಯುತವಾಗಿ ಸಾಗಿತು. ಆದರೆ ಅಸ್ಸಾಂನಲ್ಲಿ ಮಾತ್ರ ಯಾತ್ರೆ ಮೇಲೆ ಪದೇ ಪದೇ ದಾಳಿ ನಡೆದಿದೆ. ಭಾರತ್ ಜೋಡೋ ನ್ಯಾಯ್ ಯಾತ್ರೆಯ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ ಮತ್ತು ಅದರಲ್ಲಿ ತೊಡಗಿರುವವರನ್ನು ಬಂಧಿಸಿ ಕಾನೂನಿನ ಪ್ರಕಾರ ಶಿಕ್ಷಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ನಾವು ರಾಹುಲ್ ಗಾಂಧಿ ಮತ್ತು ಯಾತ್ರೆಯಲ್ಲಿ ಭಾಗವಹಿಸುವ ಎಲ್ಲರಿಗೂ ಶಾಂತವಾಗಿ ಯಾತ್ರೆಯಲ್ಲಿ ಸಾಗಲು ಮತ್ತು ಅಂತಹ ಪ್ರಚೋದನೆಗಳಿಗೆ ಎಂದಿಗೂ ಒಳಗಾಗದಂತೆ ಮನವಿ ಮಾಡುತ್ತೇವೆ. ಕೆಲವು ದಿನಗಳ ಹಿಂದೆ,  ಪ್ರಖ್ಯಾತ ವಿದ್ವಾಂಸ ಡಾ.ಹಿರೇನ್ ಗೊಹೈನ್ ಅವರ ವಿರುದ್ಧ ಅಸ್ಸಾಂನ ಮುಖ್ಯಮಂತ್ರಿ ಶರ್ಮಾ ಅವರು ಆಕ್ಷೇಪಾರ್ಹ ಪದಗಳನ್ನು ಬಳಕೆ ಮಾಡುವ ಮೂಲಕ ಬುದ್ಧಿಜೀವಿಗಳನ್ನು ಸಾರ್ವಜನಿಕವಾಗಿ ಅವಮಾನಿಸಿದ್ದಾರೆ ಎಂದು ಹೇಳಿದ್ದಾರೆ. ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಕ್ಕಾಗಿ ಗೌಹಾಟಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ ಅಖಿಲ್ ರಂಜನ್ ದತ್ತಾ ವಿರುದ್ಧ ಕ್ರಮ ಜರುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಮುಖ್ಯಮಂತ್ರಿಗಳ ಭಾಷೆ ಮತ್ತು ನಡವಳಿಕೆ ಅತ್ಯಂತ ಆಘಾತಕಾರಿಯಾಗಿದೆ. ಒಬ್ಬ ವ್ಯಕ್ತಿಗೆ ವಾಕ್ ಸ್ವಾತಂತ್ರ್ಯ ಬಹುಮುಖ್ಯ. ಇದು ಪ್ರಜಾಪ್ರಭುತ್ವದ ಸಾರ್ವತ್ರಿಕ ಹಕ್ಕು ಮತ್ತು ಮೂಲಭೂತ ಹಕ್ಕು ಎಂದು ಹೇಳಿದ್ದಾರೆ. ಮುಖ್ಯಮಂತ್ರಿಯವರ ವರ್ತನೆಯಿಂದ ನಮಗೆ ಬೇಸರವಾಗಿದೆ ಮತ್ತು ನಾವು ಅದನ್ನು ಬಲವಾಗಿ ಖಂಡಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿಲಾಗಿದೆ.

ಪತ್ರದಲ್ಲಿ ಸಾಮಾಜಿಕ, ರಾಜಕೀಯ, ಸಾಹಿತ್ಯ ರಂಗದ ದಿಗ್ಗಜರು ಸಹಿಯನ್ನು ಹಾಕಿದ್ದಾರೆ. ಡಾ ನಾಗೇನ್ ಸೈಕಿಯಾ, ಶ್ರೀ ಕುಲದ ಕೃ ಭಟ್ಟಾಚಾರ್ಯ, ಶ್ರೀ ಹರೇಕೃಷ್ಣ ದೇಕಾ, ಶ್ರೀ ಹೈದರ್ ಹುಸೇನ್, ಶ್ರೀ ಅಪುರ್ಬಾ ಶರ್ಮಾ, ಶ್ರೀ ಕುಲೇಂದು ಪಾಠಕ್, ಡಾ ತಪೋಧೀರ್ ಭಟ್ಟಾಚಾರ್ಯ, ಡಾ ದಿನೇಶ್ ಚಿ. ಗೋಸ್ವಾಮಿ, ಶ್ರೀ ಅಜಿತ್ ಕುಮಾರ್ ಭೂಯಾನ್, ಡಾ ತೌಫಿಕ್ ರೆಹಮಾನ್ ಬೊರ್ಬೊರಾ,ಡಾ ಅಪುರ್ಬಾ ಕುಮಾರ್ ಬರುವಾ, ಡಾ ಮನೋರಮಾ ಶರ್ಮಾ, ಡಾ ದುಲಾಲ್ ಚ. ಗೋಸ್ವಾಮಿ, ಡಾ ಅನುರಾಧಾ ದತ್ತಾ, ಡಾ ಪರಮಾನಂದ ಮಹಾಂತ, ಡಾ ಅಬು ನಾಸರ್ ಸಯೀದ್ ಅಹ್ಮದ್, ಡಾ ಸಂಧ್ಯಾ ಗೋಸ್ವಾಮಿ, ಶ್ರೀ ಪ್ರಭಾತ್ ಬೋರಾ, ಶ್ರೀ ಲೋಕನಾಥ ಗೋಸ್ವಾಮಿ, ಶ್ರೀ ಉದಯಾದಿತ್ಯ ಭಾರಾಲಿ, ಶ್ರೀ ನಿತ್ಯಾ ಬೋರಾ,  ಶಾಂತಿಕಾಂ ಹಜಾರಿಕಾ, ಶ್ರೀ ಎಚ್.ಆರ್.ಎ. ಚೌಧರಿ, ಬಾದಲ್ ಚಕ್ರಬೋರಿ,  ಲಕ್ಷ್ಮೀನಾಥ ತಾಮುಳಿ, ಧೀರೇಂದ್ರ ನಾಥ್ ಸೈಕಿಯಾ, ಪ್ರದೀಪ ಆಚಾರ್ಯ, ಅಬ್ಸರ್ ಹಜಾರಿಕಾ, ಡಾ ಪದ್ಮಪಾಣಿ, ಪೂರ್ಣೇಶ್ವರನಾಥ, ಡಾ ಕಲ್ಯಾಣಿ ಬರುವಾ, ಉದ್ಧಬ್ ಕಾಕತಿ, ಡಾ ಜಿಬಾನ್ ಚಿ. ದತ್ತಬರುವಾ, ಅರುಪ್ ಬೊರ್ಬೊರಾ, ಕಮಲ್ ನಾರಾಯಣ ಚೌಧರಿ, ಅಜಿತ ಚಂದ್ರ ತಾಲೂಕದಾರ, ದೇಬೆನ್ ತಮುಳಿ, ಜ್ಞಾನ ಪೂಜಾರಿ, ಸತಾಂಜೀಬ್ ದಾಸ್, ರಾಜೇನ್ ಕಲಿತಾ, ಜ್ಞಾನನ್ ಬೊರ್ಕಕಟಿ, ದ್ವೀಪೇನ್ ಕಾಕತಿ, ಮುನಿನ್ ಬಯಾನ್, ಹೇಮಂತ ಬರ್ಮನ್, ಹೇಮಂತ ದಾಸ್, ಡಾ ನವನೀಲ್ ಬರುವಾ, ಮೃಣಾಲ್ ಕುಮಾರ್ ಬರ್ಮನ್, ಅಲಿ ಹೈದರ್ ಲಸ್ಕರ್, ವಾರಿಸ್ ಚೌಧರಿ, ಅಬ್ದುರ್ ರೆಹಮಾನ್ ಶೇಖ್, ಡಾ ಕಾಳಿಪ್ರಸಾದ್ ಶರ್ಮಾ, ಡಾ ಮೋಹನ್ ಚಿ. ಕಲಿತಾ, ಡಾ.ಸೋನಕುಮಾರ ತಾಲೂಕದಾರ್, ಡಾ ಇಂದ್ರಾಣಿ ದತ್ತಾ,  ರಬಿನ್ ದತ್ತಾ, ದೀಪಕ್ ಗೋಸ್ವಾಮಿ, ಘನಶ್ಯಾಮನಾಥ ಅವರು ಸಹಿಯನ್ನು ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಭಾರತ್ ಜೋಡೋ ನ್ಯಾಯ ಯಾತ್ರೆ: ಸಾರ್ವಜನಿಕ ಸಭೆಗಳಿಗೆ ಅನುಮತಿ ನೀಡದ ದೀದಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...