Homeಮುಖಪುಟಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿ ಖಂಡಿಸಿ ಪತ್ರ ಬರೆದ 100 ಮಂದಿ...

ಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿ ಖಂಡಿಸಿ ಪತ್ರ ಬರೆದ 100 ಮಂದಿ ಚಿಂತಕರು

- Advertisement -
- Advertisement -

ಅಸ್ಸಾಂನಲ್ಲಿ ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆಯ ವೇಳೆ ಅಸ್ಸಾಂನ ಬಿಜೆಪಿ ಸರಕಾರ ಮತ್ತು ಕಾಂಗ್ರೆಸ್‌ ನಡುವೆ ತೀವ್ರ ಜಟಾಪಟಿ ನಡೆದಿತ್ತು. ರಾಹುಲ್‌ ಗಾಂಧಿಯವರ ಮೇಲೆ ದಾಳಿಗೆ ಯತ್ನಿಸಲಾಗಿದೆ ಎಂಬ ಆರೋಪವು ಕೇಳಿ ಬಂದಿತ್ತು. ಇದೀಗ ಅಸ್ಸಾಂ ಸರಕಾರದ ನಡೆಯನ್ನು ಖಂಡಿಸಿ ರಾಜ್ಯದ 100 ಮಂದಿ ಹೆಸರಾಂತ ಬುದ್ದಿಜೀವಿಗಳು, ಚಿಂತಕರು ಪತ್ರವನ್ನು ಬರೆದಿದ್ದಾರೆ.

ಪತ್ರದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆ ಮೇಲಿನ ದಾಳಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ನಡವಳಿಕೆಯನ್ನು ನಾವು ಖಂಡಿಸುತ್ತೇವೆ ಎಂದು ಉಲ್ಲೇಖಿಸಲಾಗಿದೆ.

ನ್ಯಾಯ್ ಯಾತ್ರೆಯು ಅಸ್ಸಾಂನಲ್ಲಿ ತನ್ನ ಎಂಟು ದಿನಗಳ ಯಾತ್ರೆಯನ್ನು ಪೂರ್ಣಗೊಳಿಸಿ ಬಂಗಾಳವನ್ನು ಪ್ರವೇಶಿಸಿತ್ತು. ಅಸ್ಸಾಂನಲ್ಲಿ ಯಾತ್ರೆಯ ವೇಳೆ ಪದೇ ಪದೇ ಅಡೆತಡೆಗಳನ್ನು ಎದುರಿಸಿತ್ತು. ನ್ಯಾಯ ಯಾತ್ರೆಯ ವಾಹನವನ್ನು ಸುತ್ತುವರಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರ ಕಾರಿನ ಮೇಲೆ ದಾಳಿಯನ್ನು ಕೂಡ ನಡೆಸಿದ್ದರು. ಅಸ್ಸಾಂನ 15ನೇ ಶತಮಾನದ ಸಂತ ಶ‍್ರೀಮಂತ ಶಂಕರದೇವರ ಜನ್ಮಸ್ಥಳವಾದ ಬತದ್ರವ ಸತ್ರ ದೇವಾಲಯಕ್ಕೆ ಭೇಟಿ ನೀಡದಂತೆ ರಾಹುಲ್‌ ಗಾಂಧಿಯನ್ನು ತಡೆಯಲಾಗಿತ್ತು. ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸದಂತೆ ರಾಹುಲ್‌ ಗಾಂಧಿಗೆ ತಡೆಯಲಾಗಿತ್ತು.

ಅಸ್ಸಾಂ ಕಾಂಗ್ರೆಸ್‌ ಘಟಕದ ರಾಜ್ಯಾಧ್ಯಕ್ಷ ಭೂಪೇನ್ ಬೋರಾಹ್ ಸೇರಿದಂತೆ ಕಾಂಗ್ರೆಸ್ ನಾಯಕರ ಜೊತೆ ಅಸ್ಸಾಂ ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದಾರೆ. ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ಬಿಜೆಪಿಗರು ಹಲ್ಲೆ ನಡೆಸಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಆರೋಪಿಸಿದ್ದರು. ಇದಲ್ಲದೆ ರಾಹುಲ್‌ ಗಾಂಧಿ, ಕೆಸಿ ವೇಣುಗೋಪಾಲ್‌ ಸೇರಿದಂತೆ ಕಾಂಗ್ರೆಸ್‌ ನಾಯಕರ  ವಿರುದ್ಧ ಹಿಂಸಾಚಾರ, ಪೊಲೀಸರ ಕರ್ತವ್ಯಕ್ಕೆ ಟಡ್ಡಿ ಸೇರಿ ವಿವಿಧ ಸೆಕ್ಸನ್‌ಗಳಡಿಯಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಪತ್ರದಲ್ಲೇನಿದೆ?

ಪ್ರಕ್ಷುಬ್ಧ ಮಣಿಪುರದಿಂದ ಶಾಂತಿಯುತವಾಗಿ ಯಾತ್ರೆ ಆರಂಭವಾಯಿತು. ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶದ ಮೂಲಕ ಶಾಂತಿಯುತವಾಗಿ ಯಾತ್ರೆ ಸಾಗಿದೆ. ಆದರೆ ಅಸ್ಸಾಂನಲ್ಲಿ ಮಾತ್ರ ಯಾತ್ರೆಯ ಮೇಲೆ ಪದೇ ಪದೇ ದಾಳಿ ನಡೆಸಲಾಗಿದೆ. ಭಾರತ್ ಜೋಡೋ ನ್ಯಾಯ ಯಾತ್ರೆ ಮೇಲಿನ ದಾಳಿ ಮತ್ತು ಅಸ್ಸಾಂ ಮುಖ್ಯಮಂತ್ರಿ ವರ್ತನೆಯನ್ನು ನಾವು ಖಂಡಿಸುತ್ತೇವೆ. ಕೆಲವರು ಯಾತ್ರೆಯನ್ನು ಬೆಂಬಲಿಸಬಹುದು ಮತ್ತು ಕೆಲವರು ಬೆಂಬಲಿಸದಿರಬಹುದು. ಆದರೆ ಈ ಶಾಂತಿಯುತ ಯಾತ್ರೆಯನ್ನು ಯಾರೂ ತಡೆಯಲು ಪ್ರಯತ್ನಿಸಬಾರದು. ಯಾತ್ರೆಯು ಅಸ್ಸಾಂಗೆ ಪ್ರವೇಶಿಸಿದಾಗ ಅಸ್ಸಾಂ ಸರ್ಕಾರ ಅದಕ್ಕೆ ಅಡೆತಡೆಗಳನ್ನು ಸೃಷ್ಟಿಸಲು ಎಲ್ಲವನ್ನೂ ಪ್ರಯತ್ನಿಸಿತು. ಕೆಲವೆಡೆ ಕಿಡಿಗೇಡಿಗಳ ದಾಳಿಯೂ ನಡೆದಿದೆ. ಯಾತ್ರೆಯ ಜೊತೆಗಿದ್ದ ಪತ್ರಕರ್ತರ ವಾಹನಗಳನ್ನು ಧ್ವಂಸಗೊಳಿಸಿ ಅವರ ಕ್ಯಾಮರಾಗಳನ್ನು ಕಸಿದುಕೊಂಡಿದ್ದಾರೆ. ಸೋನಿತ್‌ಪುರದಲ್ಲಿ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಮೇಲೆ ದೈಹಿಕ ಹಲ್ಲೆ ನಡೆದಿದೆ. ಇಷ್ಟೆಲ್ಲ ನಡೆಯುತ್ತಿದ್ದರೂ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದರು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಪ್ರಕ್ಷುಬ್ಧ ಮಣಿಪುರದಿಂದ ಯಾತ್ರೆ ಶಾಂತಿಯುತವಾಗಿ ಆರಂಭವಾಯಿತು. ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶದ ಮೂಲಕ ಯಾವುದೇ ಅಡ್ಡಿಯಿಲ್ಲದೆ ಶಾಂತಿಯುತವಾಗಿ ಸಾಗಿತು. ಆದರೆ ಅಸ್ಸಾಂನಲ್ಲಿ ಮಾತ್ರ ಯಾತ್ರೆ ಮೇಲೆ ಪದೇ ಪದೇ ದಾಳಿ ನಡೆದಿದೆ. ಭಾರತ್ ಜೋಡೋ ನ್ಯಾಯ್ ಯಾತ್ರೆಯ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ ಮತ್ತು ಅದರಲ್ಲಿ ತೊಡಗಿರುವವರನ್ನು ಬಂಧಿಸಿ ಕಾನೂನಿನ ಪ್ರಕಾರ ಶಿಕ್ಷಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ನಾವು ರಾಹುಲ್ ಗಾಂಧಿ ಮತ್ತು ಯಾತ್ರೆಯಲ್ಲಿ ಭಾಗವಹಿಸುವ ಎಲ್ಲರಿಗೂ ಶಾಂತವಾಗಿ ಯಾತ್ರೆಯಲ್ಲಿ ಸಾಗಲು ಮತ್ತು ಅಂತಹ ಪ್ರಚೋದನೆಗಳಿಗೆ ಎಂದಿಗೂ ಒಳಗಾಗದಂತೆ ಮನವಿ ಮಾಡುತ್ತೇವೆ. ಕೆಲವು ದಿನಗಳ ಹಿಂದೆ,  ಪ್ರಖ್ಯಾತ ವಿದ್ವಾಂಸ ಡಾ.ಹಿರೇನ್ ಗೊಹೈನ್ ಅವರ ವಿರುದ್ಧ ಅಸ್ಸಾಂನ ಮುಖ್ಯಮಂತ್ರಿ ಶರ್ಮಾ ಅವರು ಆಕ್ಷೇಪಾರ್ಹ ಪದಗಳನ್ನು ಬಳಕೆ ಮಾಡುವ ಮೂಲಕ ಬುದ್ಧಿಜೀವಿಗಳನ್ನು ಸಾರ್ವಜನಿಕವಾಗಿ ಅವಮಾನಿಸಿದ್ದಾರೆ ಎಂದು ಹೇಳಿದ್ದಾರೆ. ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಕ್ಕಾಗಿ ಗೌಹಾಟಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ ಅಖಿಲ್ ರಂಜನ್ ದತ್ತಾ ವಿರುದ್ಧ ಕ್ರಮ ಜರುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಮುಖ್ಯಮಂತ್ರಿಗಳ ಭಾಷೆ ಮತ್ತು ನಡವಳಿಕೆ ಅತ್ಯಂತ ಆಘಾತಕಾರಿಯಾಗಿದೆ. ಒಬ್ಬ ವ್ಯಕ್ತಿಗೆ ವಾಕ್ ಸ್ವಾತಂತ್ರ್ಯ ಬಹುಮುಖ್ಯ. ಇದು ಪ್ರಜಾಪ್ರಭುತ್ವದ ಸಾರ್ವತ್ರಿಕ ಹಕ್ಕು ಮತ್ತು ಮೂಲಭೂತ ಹಕ್ಕು ಎಂದು ಹೇಳಿದ್ದಾರೆ. ಮುಖ್ಯಮಂತ್ರಿಯವರ ವರ್ತನೆಯಿಂದ ನಮಗೆ ಬೇಸರವಾಗಿದೆ ಮತ್ತು ನಾವು ಅದನ್ನು ಬಲವಾಗಿ ಖಂಡಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿಲಾಗಿದೆ.

ಪತ್ರದಲ್ಲಿ ಸಾಮಾಜಿಕ, ರಾಜಕೀಯ, ಸಾಹಿತ್ಯ ರಂಗದ ದಿಗ್ಗಜರು ಸಹಿಯನ್ನು ಹಾಕಿದ್ದಾರೆ. ಡಾ ನಾಗೇನ್ ಸೈಕಿಯಾ, ಶ್ರೀ ಕುಲದ ಕೃ ಭಟ್ಟಾಚಾರ್ಯ, ಶ್ರೀ ಹರೇಕೃಷ್ಣ ದೇಕಾ, ಶ್ರೀ ಹೈದರ್ ಹುಸೇನ್, ಶ್ರೀ ಅಪುರ್ಬಾ ಶರ್ಮಾ, ಶ್ರೀ ಕುಲೇಂದು ಪಾಠಕ್, ಡಾ ತಪೋಧೀರ್ ಭಟ್ಟಾಚಾರ್ಯ, ಡಾ ದಿನೇಶ್ ಚಿ. ಗೋಸ್ವಾಮಿ, ಶ್ರೀ ಅಜಿತ್ ಕುಮಾರ್ ಭೂಯಾನ್, ಡಾ ತೌಫಿಕ್ ರೆಹಮಾನ್ ಬೊರ್ಬೊರಾ,ಡಾ ಅಪುರ್ಬಾ ಕುಮಾರ್ ಬರುವಾ, ಡಾ ಮನೋರಮಾ ಶರ್ಮಾ, ಡಾ ದುಲಾಲ್ ಚ. ಗೋಸ್ವಾಮಿ, ಡಾ ಅನುರಾಧಾ ದತ್ತಾ, ಡಾ ಪರಮಾನಂದ ಮಹಾಂತ, ಡಾ ಅಬು ನಾಸರ್ ಸಯೀದ್ ಅಹ್ಮದ್, ಡಾ ಸಂಧ್ಯಾ ಗೋಸ್ವಾಮಿ, ಶ್ರೀ ಪ್ರಭಾತ್ ಬೋರಾ, ಶ್ರೀ ಲೋಕನಾಥ ಗೋಸ್ವಾಮಿ, ಶ್ರೀ ಉದಯಾದಿತ್ಯ ಭಾರಾಲಿ, ಶ್ರೀ ನಿತ್ಯಾ ಬೋರಾ,  ಶಾಂತಿಕಾಂ ಹಜಾರಿಕಾ, ಶ್ರೀ ಎಚ್.ಆರ್.ಎ. ಚೌಧರಿ, ಬಾದಲ್ ಚಕ್ರಬೋರಿ,  ಲಕ್ಷ್ಮೀನಾಥ ತಾಮುಳಿ, ಧೀರೇಂದ್ರ ನಾಥ್ ಸೈಕಿಯಾ, ಪ್ರದೀಪ ಆಚಾರ್ಯ, ಅಬ್ಸರ್ ಹಜಾರಿಕಾ, ಡಾ ಪದ್ಮಪಾಣಿ, ಪೂರ್ಣೇಶ್ವರನಾಥ, ಡಾ ಕಲ್ಯಾಣಿ ಬರುವಾ, ಉದ್ಧಬ್ ಕಾಕತಿ, ಡಾ ಜಿಬಾನ್ ಚಿ. ದತ್ತಬರುವಾ, ಅರುಪ್ ಬೊರ್ಬೊರಾ, ಕಮಲ್ ನಾರಾಯಣ ಚೌಧರಿ, ಅಜಿತ ಚಂದ್ರ ತಾಲೂಕದಾರ, ದೇಬೆನ್ ತಮುಳಿ, ಜ್ಞಾನ ಪೂಜಾರಿ, ಸತಾಂಜೀಬ್ ದಾಸ್, ರಾಜೇನ್ ಕಲಿತಾ, ಜ್ಞಾನನ್ ಬೊರ್ಕಕಟಿ, ದ್ವೀಪೇನ್ ಕಾಕತಿ, ಮುನಿನ್ ಬಯಾನ್, ಹೇಮಂತ ಬರ್ಮನ್, ಹೇಮಂತ ದಾಸ್, ಡಾ ನವನೀಲ್ ಬರುವಾ, ಮೃಣಾಲ್ ಕುಮಾರ್ ಬರ್ಮನ್, ಅಲಿ ಹೈದರ್ ಲಸ್ಕರ್, ವಾರಿಸ್ ಚೌಧರಿ, ಅಬ್ದುರ್ ರೆಹಮಾನ್ ಶೇಖ್, ಡಾ ಕಾಳಿಪ್ರಸಾದ್ ಶರ್ಮಾ, ಡಾ ಮೋಹನ್ ಚಿ. ಕಲಿತಾ, ಡಾ.ಸೋನಕುಮಾರ ತಾಲೂಕದಾರ್, ಡಾ ಇಂದ್ರಾಣಿ ದತ್ತಾ,  ರಬಿನ್ ದತ್ತಾ, ದೀಪಕ್ ಗೋಸ್ವಾಮಿ, ಘನಶ್ಯಾಮನಾಥ ಅವರು ಸಹಿಯನ್ನು ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಭಾರತ್ ಜೋಡೋ ನ್ಯಾಯ ಯಾತ್ರೆ: ಸಾರ್ವಜನಿಕ ಸಭೆಗಳಿಗೆ ಅನುಮತಿ ನೀಡದ ದೀದಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...