Homeಮುಖಪುಟಗಾಝಾದಲ್ಲಿ ನರಮೇಧ ತಡೆಯಿರಿ: ಇಸ್ರೇಲ್‌ಗೆ ಅಂತಾರಾಷ್ಟ್ರೀಯ ನ್ಯಾಯಾಲಯ ಸೂಚನೆ

ಗಾಝಾದಲ್ಲಿ ನರಮೇಧ ತಡೆಯಿರಿ: ಇಸ್ರೇಲ್‌ಗೆ ಅಂತಾರಾಷ್ಟ್ರೀಯ ನ್ಯಾಯಾಲಯ ಸೂಚನೆ

- Advertisement -
- Advertisement -

ಗಾಝಾದಲ್ಲಿ ನಡೆಯುತ್ತಿರುವ ನರಮೇಧವನ್ನು ತಡೆಯಬೇಕು ಮತ್ತು ಅಂತಹ ಚಟುವಟಿಕೆಗಳಿಗೆ ಪ್ರಚೋದನೆ ನೀಡುವವರನ್ನು ಶಿಕ್ಷಿಸಬೇಕು ಎಂದು ವಿಶ್ವಸಂಸ್ಥೆಯ ಉನ್ನತ ಅಂತಾರಾಷ್ಟ್ರೀಯ ನ್ಯಾಯಾಲಯ ಇಸ್ರೇಲ್‌ಗೆ ಸೂಚಿಸಿದೆ.

ಗಾಝಾದಲ್ಲಿ ನರಮೇಧ ತಡೆಯಲು ನರಮೇಧ ತಡೆ ಸಮಾವೇಶದಲ್ಲಿ ಕೈಗೊಂಡ ನಿರ್ಣಯಗಳ ಆರ್ಟಿಕಲ್ IIರ ಅಡಿ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಸ್ರೇಲ್‌ಗೆ ಅಂತಾರಾಷ್ಟ್ರೀಯ ನ್ಯಾಯಾಲಯ ಹೇಳಿದೆ.

ತಕ್ಷಣ ಕದನ ವಿರಾಮಕ್ಕೆ ಆದೇಶಿಸಬೇಕು ಎಂದು ಇಸ್ರೇಲ್‌ ವಿರುದ್ದ ದಾವೆ ಹೂಡಿದ್ದ ದಕ್ಷಿಣ ಆಫ್ರಿಕಾ ಆಗ್ರಹಿಸಿತ್ತು. ಆದರೆ, ನ್ಯಾಯಾಲಯ ಕದನ ವಿರಾಮಕ್ಕೆ ಆದೇಶಿಸಿಲ್ಲ.

ಇಸ್ರೇಲ್‌ ಗಾಝಾದಲ್ಲಿ ನರಮೇಧ ನಡೆಸುತ್ತಿದೆ ಎಂದು ಆರೋಪಿಸಿ ದಕ್ಷಿಣ ಆಫ್ರಿಕಾ ಅಂತಾರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿತ್ತು. ಆದರೆ, ದಕ್ಷಿಣ ಆಫ್ರಿಕಾದ ವಾದವನ್ನು ಇಸ್ರೇಲ್ ತಳ್ಳಿ ಹಾಕಿದೆ. ನಾವು ಗಾಝಾ ನಾಗರಿಕರನ್ನು ರಕ್ಷಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ತಿಳಿಸಿದೆ.

ಗಾಝಾದಲ್ಲಿ ನಡೆಯುತ್ತಿರುವ ಜೀವಹಾನಿಯ ಬಗ್ಗೆ ನ್ಯಾಯಾಲಯಕ್ಕೆ ಅರಿವಿದೆ. ದುರಂತದ ವ್ಯಾಪ್ತಿ ಗೊತ್ತಿದೆ ಎಂದು ಅಂತಾರಾಷ್ಟ್ರೀಯ ನ್ಯಾಯಾಲಯದ ಅಧ್ಯಕ್ಷ ಜೋನ್ ಇ. ಡೊನೊಗ್ಯು ಹೇಳಿದ್ದಾರೆ.

ಅಂತಾರಾಷ್ಟ್ರೀಯ ನ್ಯಾಯಾಲಯದ ಆದೇಶ ಗಾಝಾದಲ್ಲಿ ನಮ್ಮ ಜನರ ನರಮೇಧ ತಡೆಯಲಿದೆ. ಅನ್ನ, ಪಾನಿಯ ಸಿಗದೆ ಕಂಗೆಟ್ಟಿರುವವರಿಗೆ ಅಗತ್ಯ ವಸ್ತುಗಳು ಸಿಗಲಿದೆ. ನಮ್ಮ ಜನರ ಮೇಲಿನ ಆಕ್ರಮಣವನ್ನು ತಡೆಯಲಿದೆ ಎಂಬ ಭರವಸೆ ಇದೆ ಎಂದು ಪ್ಯಾಲೆಸ್ತೀನ್ ಅಧ್ಯಕ್ಷ ಪ್ರಧಾನಿ ಮೊಹಮ್ಮದ್ ಶ್ತಯ್ಯ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಇಸ್ರೇಲ್‌ ಜೀವಹಾನಿ ತಡೆಯಲು ಶ್ರಮಿಸುತ್ತಿದೆ ಎಂದು ಅಂತಾರಾಷ್ಟ್ರೀಯ ನ್ಯಾಯಾಲಯ ಹೇಳಿದೆ. ಇಸ್ರೇಲ್‌ ಕೂಡ ಇದನ್ನೇ ವಾದಿಸುತ್ತಿದೆ. ಆದರೆ, ಜಗತ್ತಿಗೆ ಗೊತ್ತಿರುವಂತೆ 2023 ಅಕ್ಟೋಬರ್‌ 7ರಿಂದ ಇಸ್ರೇಲ್‌ ನಡೆಸಿದ ಆಕ್ರಮಣದಲ್ಲಿ ಇದುವರೆಗೆ ಗಾಝಾದ 26 ಸಾವಿರಕ್ಕಿಂತಲೂ ಅಧಿಕ ಅಮಾಯಕ ಜನರು ಬಲಿಯಾಗಿದ್ದಾರೆ.

ಇದನ್ನೂ ಓದಿ: ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ: ಮರಾಠ ಮೀಸಲಾತಿ ಹೋರಾಟ ಅಂತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...