Homeಮುಖಪುಟಗಣರಾಜ್ಯೋತ್ಸವ ದಿನ 'ಸೆಕ್ಯುಲರ್', 'ಸಮಾಜವಾದಿ' ಪದವಿಲ್ಲದೆ ಸಂವಿಧಾನದ ಪೀಠಿಕೆ ಹಂಚಿಕೊಂಡ ಕೇಂದ್ರ ಸರಕಾರ

ಗಣರಾಜ್ಯೋತ್ಸವ ದಿನ ‘ಸೆಕ್ಯುಲರ್’, ‘ಸಮಾಜವಾದಿ’ ಪದವಿಲ್ಲದೆ ಸಂವಿಧಾನದ ಪೀಠಿಕೆ ಹಂಚಿಕೊಂಡ ಕೇಂದ್ರ ಸರಕಾರ

- Advertisement -
- Advertisement -

ಭಾರತದ 75ನೇ ಗಣರಾಜ್ಯ ದಿನದ ಸಂದರ್ಭದಲ್ಲಿ ಭಾರತ ಸರ್ಕಾರದ ಅಧಿಕೃತ ಸಾಮಾಜಿಕ ವೇದಿಕೆ  MyGovIndia ದಲ್ಲಿ ಹಂಚಿಕೊಳ್ಳಲಾದ ಸಂವಿಧಾನದ ಮೂಲ ಪೀಠಿಕೆಯು ‘ಸೆಕ್ಯುಲರ್’ ಮತ್ತು ‘ಸಮಾಜವಾದಿ’ ಪದಗಳನ್ನು ಒಳಗೊಂಡಿರಲಿಲ್ಲ. ಇದು ಮೋದಿ ಆಡಳಿತದ ಭಾರತದಲ್ಲಿ ಸಾರ್ವಭೌಮತ್ವ, ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಸಮಾನತೆ ಕುರಿತ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸಂವಿಧಾನದ ಪೀಠಿಕೆಯನ್ನು ಭಾರತೀಯ ಸಂವಿಧಾನದ ಜೊತೆಗೆ ನವೆಂಬರ್ 26, 1949ರಂದು ಅಂಗೀಕರಿಸಲಾಯಿತು ಮತ್ತು ಜನವರಿ 26, 1950ರಿಂದ ಜಾರಿಗೆ ಬಂದಿದೆ. ಜ.26ರಂದು ಗಣರಾಜ್ಯೋತ್ಸವ ದಿನವಾಗಿ ಆಚರಿಸಲಾಗುತ್ತದೆ. ಸಂವಿಧಾನದ ಪೀಠಿಕೆಯನ್ನು 1976ರಲ್ಲಿ ತಿದ್ದುಪಡಿ ಮಾಡಲಾಗಿದೆ. ಇದು ಭಾರತದ ಸಂವಿಧಾನದ ಪೀಠಿಕೆಗೆ ಮಾಡಿದ ಏಕೈಕ ತಿದ್ದುಪಡಿಯಾಗಿದೆ.

42ನೇ ತಿದ್ದುಪಡಿ ಅಥವಾ ಸಂವಿಧಾನ (42ನೇ ತಿದ್ದುಪಡಿ) ಕಾಯಿದೆ-1976 ತುರ್ತು ಪರಿಸ್ಥಿತಿಯ ಅವಧಿಯಲ್ಲಿ 1976ರಲ್ಲಿ ಜಾರಿಗೆ ತರಲಾಯಿತು. ಈ ತಿದ್ದುಪಡಿಯ ವೇಳೆ ಸಂವಿಧಾನದ ಪೀಠಿಕೆ, ಹಲವಾರು ಆರ್ಟಿಕಲ್‌ಗಳು ಮತ್ತು ಏಳನೇ ಶೆಡ್ಯೂಲ್‌ (ಇದು ಒಕ್ಕೂಟ ಮತ್ತು ರಾಜ್ಯ ಶಾಸಕಾಂಗಗಳ ನಡುವಿನ ಅಧಿಕಾರ ಮತ್ತು ಕಾರ್ಯಗಳ ಬಗ್ಗೆ ಸೂಚಿಸುತ್ತದೆ). ಕಾಯಿದೆಯ ಪರಿಚ್ಛೇದ 2 (ಪೀಠಿಕೆಯ ತಿದ್ದುಪಡಿ), ಎರಡು ಬದಲಾವಣೆಗಳನ್ನು ಮುಂದಿಟ್ಟಿದೆ “ಸಾರ್ವಭೌಮ ಪ್ರಜಾಸತ್ತಾತ್ಮಕ ಗಣರಾಜ್ಯ” ಪದಗಳನ್ನು “ಸಾರ್ವಭೌಮ ಸಮಾಜವಾದಿ ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯ” ಎಂದು ಬದಲಿಸಲಾಗಿದೆ ಮತ್ತು “ರಾಷ್ಟ್ರದ ಏಕತೆ” ಎಂಬ ಪದಗುಚ್ಛವನ್ನು “ರಾಷ್ಟ್ರದ ಏಕತೆ ಮತ್ತು ಸಮಗ್ರತೆ” ಯೊಂದಿಗೆ ಬದಲಿಸಲಾಗಿದೆ.

ಜನವರಿ 25ರಂದು ಭಾರತೀಯ ಸರ್ಕಾರದ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ MyGovIndia  ಸಂವಿಧಾನದ ಮೂಲ ಪೀಠಿಕೆಯ ಚಿತ್ರವನ್ನು ಪೋಸ್ಟ್ ಮಾಡಿದೆ. ಪೋಸ್ಟ್‌ನಲ್ಲಿ ನಾವು ಭಾರತ ಗಣರಾಜ್ಯದ 75 ನೇ ವರ್ಷವನ್ನು ಆಚರಿಸುತ್ತಿರುವಾಗ, ನಮ್ಮ ಸಂವಿಧಾನದ ಮೂಲ ಪೀಠಿಕೆಯನ್ನು ಮರುಪರಿಶೀಲಿಸೋಣ. ಈ ಮೂಲಭೂತ ತತ್ವಗಳೊಂದಿಗೆ ನವ ಭಾರತ ಎಷ್ಟು ಚೆನ್ನಾಗಿ ಪ್ರತಿಧ್ವನಿಸುತ್ತದೆ? ಎಂಬುವುದನ್ನು ಪೋಸ್ಟ್‌ನಲ್ಲಿ ಬರೆಯಲಾಗಿದೆ.

ಮುನ್ನುಡಿ ವಿವಾದ;

ಸಂವಿಧಾನದ ಮೂಲ ಮುನ್ನುಡಿಯನ್ನು ಆಡಳಿತ ಪಕ್ಷವು ಹಂಚಿಕೊಳ್ಳುತ್ತಿರುವುದು ಇದೇ ಮೊದಲಲ್ಲ. ಸೆಪ್ಟೆಂಬರ್ 2023ರಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ, ಸಂಸದ ಅಧೀರ್ ರಂಜನ್ ಚೌಧರಿ ಅವರು ಹೊಸ ಸಂಸತ್ತಿನ ಕಟ್ಟಡದಲ್ಲಿ ಮೊದಲ ಅಧಿವೇಶನದಲ್ಲಿ ಸಂಸತ್ತಿನ ಸದಸ್ಯರಿಗೆ ವಿತರಿಸಿದ ಸಂವಿಧಾನದ ಪ್ರತಿಗಳು ಅದರ ಮುನ್ನುಡಿಯಲ್ಲಿ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ಹೊಂದಿಲ್ಲ ಎಂದು ಹೇಳಿದ್ದರು. ಈ ಬೆಳವಣಿಗೆಯು ಉದ್ದೇಶಪೂರ್ವಕ ಎಂದು ಅಧೀರ್‌ ರಂಜನ್‌ ಚೌದರಿ ಹೇಳಿದ ಬಳಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ಆದರೆ ಈ ಆರೋಪವನ್ನು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಅರ್ಜುನ್ ರಾಮ್ ಮೇಘವಾಲ್ ತಳ್ಳಿಹಾಕಿದ್ದರು. ಮೂಲ ಸಂವಿಧಾನವನ್ನು ಮುದ್ರಿಸಿದ್ದು, ಹಾಗಾಗಿ ಪದಗಳು ಕಾಣೆಯಾಗಿವೆ ಎಂದು ಹೇಳಿದ್ದಾರೆ. ಸಂವಿಧಾನವನ್ನು ರಚಿಸಿದಾಗ ಅದು ಹೀಗಿತ್ತು. ನಂತರ ತಿದ್ದುಪಡಿ ಮಾಡಲಾಯಿತು. ಇದು ಮೂಲ ಪ್ರತಿ ಎಂದು ಅವರು ಸಮಜಾಯಿಸಿ ಹೇಳಿದ್ದರು.

ಜೂನ್ 2023ರಲ್ಲಿ ತೆಲಂಗಾಣ ಸ್ಟೇಟ್ ಕೌನ್ಸಿಲ್ ಫಾರ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್ (SCERT) 10ನೇ ತರಗತಿಯ ಸಾಮಾಜ ಅಧ್ಯಯನಗಳ ಪಠ್ಯಪುಸ್ತಕಗಳ ಮುಖಪುಟದಲ್ಲಿ ಸಂವಿಧಾನದ ಮೂಲ ಪೀಠಿಕೆಯನ್ನು ಮುದ್ರಿಸಿ ಚರ್ಚೆಯನ್ನು ಹುಟ್ಟು ಹಾಕಿತ್ತು.

2015ರಲ್ಲಿ ಗಣರಾಜ್ಯೋತ್ಸವದಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಟೈಮ್ಸ್ ಆಫ್ ಇಂಡಿಯಾದಲ್ಲಿ ಅರ್ಧ ಪುಟದ ಜಾಹೀರಾತನ್ನು ಗಣರಾಜ್ಯೋತ್ಸವದಂದು ಪ್ರಧಾನ ಮಂತ್ರಿಯ ಸಂದೇಶದೊಂದಿಗೆ ಮೂಲ ಪೀಠಿಕೆಯ ಚಿತ್ರದೊಂದಿಗೆ ಬಿಡುಗಡೆ ಮಾಡಿತ್ತು. ಇದು ವ್ಯಾಪಕ ಖಂಡನೆಗೆ ಕಾರಣವಾಗಿತ್ತು. ಅಂದಿನ ಸಚಿವ ರಾಜ್ಯವರ್ಧನ್ ರಾಥೋಡ್ ಈ ಬಗ್ಗೆ ಪ್ರತಿಕ್ರಿಯಿಸಿ, ಜಾಹೀರಾತಿನ ಸುತ್ತಲಿನ ವಿವಾದವನ್ನು ತಳ್ಳಿಹಾಕಿದ್ದು, ಮೂಲ ಪೀಠಿಕೆಯ ಫೋಟೋ ಸಂವಿಧಾನದ ಪಿತಾಮಹರನ್ನು ಗೌರವಿಸುವ ಸಲುವಾಗಿ ಹಂಚಿಕೊಳ್ಳಲಾಗಿದೆ ಎಂದು ಬರೆಯಲಾಗಿದೆ.

ಇದನ್ನು ಓದಿ: ಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿ ಖಂಡಿಸಿ ಪತ್ರ ಬರೆದ 100 ಮಂದಿ ಚಿಂತಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. india belongs to different religions and region having different celebration it does mean secular, unity and integrity pls don’t try to change ambedkar constitution it will show ur defeat final path

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...