Homeಕರ್ನಾಟಕಕಾಂಗ್ರೆಸ್‌ ಪಕ್ಷಕ್ಕೆ ಕರೆತರುವ ನಾಯಕರ ಸಿದ್ಧಾಂತ, ಹಿನ್ನೆಲೆ ಪರಿಶೀಲಿಸಿ: ರಾಜ್ಯ ನಾಯಕರಿಗೆ ಖರ್ಗೆ ಸೂಚನೆ

ಕಾಂಗ್ರೆಸ್‌ ಪಕ್ಷಕ್ಕೆ ಕರೆತರುವ ನಾಯಕರ ಸಿದ್ಧಾಂತ, ಹಿನ್ನೆಲೆ ಪರಿಶೀಲಿಸಿ: ರಾಜ್ಯ ನಾಯಕರಿಗೆ ಖರ್ಗೆ ಸೂಚನೆ

- Advertisement -
- Advertisement -

ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಮರಳಿ ಸೇರ್ಪಡೆ ಬೆನ್ನಲ್ಲೇ ಕಾಂಗ್ರೆಸ್‌ ಹೈಕಮಾಂಡ್‌ ರಾಜ್ಯ ನಾಯಕರಿಗೆ ಸಲಹೆಯನ್ನು ನೀಡಿದ್ದು, ಪಕ್ಷಕ್ಕೆ ಕರೆತರುವ ನಾಯಕರ ಸಿದ್ಧಾಂತ ಮತ್ತು ಹಿನ್ನೆಲೆಯನ್ನು ಸೂಕ್ತವಾಗಿ ಪರಿಶೀಲಿಸುವಂತೆ ಸೂಚಿಸಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ನಾಯಕರಿಗೆ ಈ ಸಂದೇಶವನ್ನು ನೀಡಿದೆ. ಅವರು ಇಂದು ಬಂದು ನಾಳೆ ನಿರ್ಗಮಿಸುವ ಪರಿಸ್ಥಿತಿ ಆಗಬಾರದು ಎಂದು ರಾಜ್ಯ ನಾಯಕರಿಗೆ ಹೇಳಿದ್ದಾರೆ.

ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಪಕ್ಷ ತೊರೆದು ಕಾಂಗ್ರೆಸ್‌ನಿಂದ ಬಿಜೆಪಿಗೆ ಮರಳಿದ ಹಿನ್ನೆಲೆಯಲ್ಲಿ ಶುಕ್ರವಾರ ಪಕ್ಷದ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಖರ್ಗೆ, ಇತರ ಬೇರೆ ಪಕ್ಷಗಳ ನಾಯಕರನ್ನು ಸೆಳೆದು ಪಕ್ಷವನ್ನು ಬಲಪಡಿಸುವುದು ನ್ಯಾಯಯುತವಾಗಿದೆ. ಆದರೆ ಅವರ ನಿಷ್ಠೆಯನ್ನು ಪರಿಶೀಲಿಸುವ ಅಗತ್ಯ ಇದೆ ಎಂದು ಹೇಳಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಪ್ರಾಣಿಗಳನ್ನು ಖರೀದಿಸುವ ಸಮಯದಲ್ಲಿ, ಖರೀದಿದಾರರು ಅನೇಕ ಬಾರಿ ಯೋಚಿಸುತ್ತಾರೆ ಮತ್ತು ಅವುಗಳ ತೂಕ, ಅಳತೆಯನ್ನು ಪರಿಶೀಲಿಸುತ್ತಾರೆ. ಅಂತೆಯೇ ಇತರರನ್ನು ಕಾಂಗ್ರೆಸ್‌ಗೆ    ಸೇರ್ಪಡೆ ಮಾಡುವಾಗ ಎಚ್ಚರಿಕೆಯಿಂದ ಪರಿಗಣಿಸಬೇಕು. ಅವರನ್ನು ಪಕ್ಷಕ್ಕೆ ಕರೆತರುವಾಗ ಅವರ ಪಾತ್ರ, ಅವರು ಇದ್ದ ಪರಿಸ್ಥಿತಿ ಮತ್ತು ಸಿದ್ಧಾಂತಗಳು, ಅವರ ನಂಬಿಕೆ ಬಗ್ಗೆ ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ. ಪಕ್ಷವು ಸಿದ್ಧಾಂತ ಮತ್ತು ತತ್ವಗಳ ಆಧಾರ ಸ್ತಂಭಗಳ ಮೇಲೆ ನಿಂತಿದೆ. ಪಕ್ಷದ ನಾಯಕರು ದೇಶದ ಏಕತೆಗಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ ಎಂದು ಹೇಳಿದ್ದಾರೆ.

ನಮ್ಮ ಪಕ್ಷವು ಬಡವರು, ಕಾರ್ಮಿಕರು, ವಿದ್ಯಾರ್ಥಿಗಳು, ಮಹಿಳೆಯರು, ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಬಗ್ಗೆ ಕಾಳಜಿ ವಹಿಸುತ್ತದೆ. ಅನೇಕ ದೇಶಗಳಲ್ಲಿ ವಿಶೇಷವಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಇತ್ತೀಚಿನ ಎರಡು ಮೂರು ದಶಕಗಳವರೆಗೆ ಮಹಿಳೆಯರಿಗೆ ಮತದಾನದ ಹಕ್ಕುಗಳನ್ನು ನೀಡಲಾಗಿಲ್ಲ. ಆದರೆ ಸಂವಿಧಾನ ಜಾರಿಗೆ ಬಂದಾಗ ಭಾರತದಲ್ಲಿ ಮಹಿಳೆಯರಿಗೆ ಮತದಾನದ ಹಕ್ಕನ್ನು ನೀಡಲಾಯಿತು. ಅಂದಿನ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಮತ್ತು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಇದರ ಹಿಂದೆ ಶ್ರಮಿಸಿದ್ದರು ಎಂದು ಖರ್ಗೆ ಹೇಳಿದ್ದಾರೆ.

ಸಂವಿಧಾನವು ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದ್ದು, ಈ ಮೌಲ್ಯಗಳನ್ನು ರಕ್ಷಿಸಬೇಕಾಗಿದೆ. ಹಲವರಿಗೆ ಇತಿಹಾಸ ಗೊತ್ತಿಲ್ಲ, ಸ್ವಾತಂತ್ರ್ಯ ಹೋರಾಟ ನಡೆಸಿದವರು ಯಾರು? ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು ಯಾರು ಎಂಬುದು ಯುವಕರಿಗೆ ಗೊತ್ತಿಲ್ಲ. ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರು ಸಂವಿಧಾನವನ್ನು ತಮ್ಮ ಕೈಗೊಂಬೆಯನ್ನಾಗಿ ಮಾಡಿಕೊಳ್ಳಲು ಯತ್ನಿಸುತ್ತಿದ್ದಾರೆ. ಸ್ವಾತಂತ್ರ್ಯ ಮತ್ತು ಸಂವಿಧಾನವನ್ನು ಉಳಿಸಿದರೆ ಭವಿಷ್ಯದ ಪೀಳಿಗೆಗೆ ಅವಕಾಶಗಳು ಸಿಗುತ್ತವೆ ಎಂದು ಹೇಳಿದ್ದಾರೆ.

ಸಂವಿಧಾನವನ್ನು ಜಾರಿಗೊಳಿಸುವ ಜನರು ನ್ಯಾಯಯುತ ವ್ಯಕ್ತಿಗಳಾಗಿರಬೇಕು, ಆಗ ಅದು ಉತ್ತಮ ಪರಿಣಾಮಗಳನ್ನು ಬೀರುತ್ತದೆ ಇಲ್ಲದಿದ್ದರೆ ಫಲಿತಾಂಶಗಳು ಉತ್ತಮವಾಗಿರುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ದರು. 1949ರಲ್ಲಿ ಅಂಬೇಡ್ಕರ್ ಹೇಳಿದ ಮಾತು ಇಂದಿನ ದಿನಗಳಲ್ಲಿ ನಿಜವಾಗುತ್ತಿದೆ. ಸಂವಿಧಾನವನ್ನು ಅನುಷ್ಠಾನಕ್ಕೆ ತರುತ್ತಿರುವ ಜನರು ಸದುದ್ದೇಶವನ್ನು ಹೊಂದಿಲ್ಲದಿರುವುದರಿಂದ, ರಾಷ್ಟ್ರವು ಅನೇಕ ಬಿಕ್ಕಟ್ಟಿನ ಪರಿಸ್ಥಿತಿಗಳನ್ನು ಎದುರಿಸುತ್ತಿದೆ ಎಂದು ಖರ್ಗೆ ಹೇಳಿದರು.

ಇದನ್ನು ಓದಿ: ಗಣರಾಜ್ಯೋತ್ಸವ ದಿನ ‘ಸೆಕ್ಯುಲರ್’, ‘ಸಮಾಜವಾದಿ’ ಪದವಿಲ್ಲದೆ ಸಂವಿಧಾನದ ಪೀಠಿಕೆ ಹಂಚಿಕೊಂಡ ಕೇಂದ್ರ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...