Homeಮುಖಪುಟ'ಸಂಘಿ' ಅಲ್ಲ 'ರಜನಿಕಾಂತ್‌' ಬಗ್ಗೆ ಪುತ್ರಿ ಐಶ್ವರ್ಯಾ ಹೇಳಿಕೆ

‘ಸಂಘಿ’ ಅಲ್ಲ ‘ರಜನಿಕಾಂತ್‌’ ಬಗ್ಗೆ ಪುತ್ರಿ ಐಶ್ವರ್ಯಾ ಹೇಳಿಕೆ

- Advertisement -
- Advertisement -

ಚಿತ್ರ ಲಾಲ್ ಸಲಾಮ್‌ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್, ತಮ್ಮ ತಂದೆ ಬಿಜೆಪಿ ಮತ್ತು ಆರೆಸ್ಸೆಸ್‌ಗೆ ಬೆಂಬಲವಾಗಿದ್ದಾರೆ ಎಂಬ ಟೀಕೆಗಳ ವಿರುದ್ಧ ಪ್ರತಿಕ್ರಿಯಿಸಿದ್ದು, ಆತ ‘ಸಂಘಿ’ ಆಗಿದ್ದರೆ ಲಾಲ್‌ ಸಲಾಂ ಸಿನಿಮಾ ಮಾಡುತ್ತಿರಲಿಲ್ಲ ಎಂದೂ ಹೇಳಿದ್ದಾರೆ.

‘ಸಂಘಿ’ ಎಂಬುದು ಕೆಲವೊಮ್ಮೆ ಸಂಘಪರಿವಾರದ ಹಿಂದುತ್ವ ಸಿದ್ಧಾಂತದ ಬೆಂಬಲಿಗರ ವಿರುದ್ಧ ಬಳಸುವ ಪದವಾಗಿದೆ. ಇದೇ ಪದವನ್ನು ಐಶ್ವರ್ಯಾ ರಜನಿಕಾಂತ್ ಅವರು ಟ್ವೀಟ್‌ನಲ್ಲಿ ಬಳಸಿದ್ದು, ತಂದೆಯ ಪರ ಬೆಂಬಲವನ್ನು ಸೂಚಿಸಿದ್ದಾರೆ.

ಫೆಬ್ರವರಿ 9ರಂದು ಲಾಲ್ ಸಲಾಮ್‌ ಚಿತ್ರ ಬಿಡುಗಡೆಯಾಗಲಿದ್ದು, ಚಿತ್ರದಲ್ಲಿ ರಜನಿಕಾಂತ್ ಮುಸ್ಲಿಂ ಪಾತ್ರದ ‘ಮೊಯ್ದೀನ್ ಭಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.

ನಾನು ಸಾಮಾಜಿಕ ಮಾಧ್ಯಮದಿಂದ ದೂರವಿರಲು ಪ್ರಯತ್ನಿಸುತ್ತೇನೆ. ಆದರೆ ನನ್ನ ತಂಡವು ಜನರು ಏನು ಮಾತನಾಡುತ್ತಾರೆ ಎಂಬುದನ್ನು ನನಗೆ ತೋರಿಸುತ್ತಲೇ ಇರುತ್ತಾರೆ. ಇತ್ತೀಚೆಗ ರಜನಿಕಾಂತ್‌ಗೆ ಜನರು ‘ಸಂಘಿ’ ಎಂಬ ಒಂದು ಪದವನ್ನು ಹೇಳುತ್ತಿದ್ದಾರೆ ಮತ್ತು ಜನರು ಅವರನ್ನು ಏಕೆ ಆ ರೀತಿ ಕರೆಯುತ್ತಾರೆಂದು ನನಗೆ ಅರ್ಥವಾಗುತ್ತಿಲ್ಲ. ನಾನು ಇದನ್ನು ಹೇಳುತ್ತೇನೆ, ಸೂಪರ್‌ಸ್ಟಾರ್ ರಜನಿಕಾಂತ್ ‘ಸಂಘಿ’ ಅಲ್ಲ. ‘ಸಂಘಿ’ ಆಗಿದ್ದರೆ ಲಾಲ್ ಸಲಾಂ ಮಾಡುತ್ತಿರಲಿಲ್ಲ. ಈ ಸಿನಿಮಾವನ್ನು ಮಾನವೀಯತೆ ಇರುವ ವ್ಯಕ್ತಿಯಿಂದ ಮಾತ್ರ ಮಾಡಲು ಸಾಧ್ಯ ಎಂದು ಹೇಳಿದ್ದಾರೆ.

ಜನವರಿ 22ರಂದು ತಮಿಳು ನಟ ಧನುಷ್ ಮತ್ತು ರಜನಿಕಾಂತ್ ಅವರು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದು ವ್ಯಾಪಕ ಟೀಕೆ ಮತ್ತು ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಕೆಲವು ದಿನಗಳ ನಂತರ ಐಶ್ವರ್ಯಾ ರಜನಿಕಾಂತ್ ಅವರು ಸ್ಪಷ್ಟನೆ ನೀಡಿದ್ದಾರೆ. ಇದು ಸೂಪರ್‌ಸ್ಟಾರ್‌ನ ರಾಜಕೀಯ ಒಲವಿನ ಮೇಲೆ ಮತ್ತೆ ಗಮನ ಸೆಳೆಯಿತು. ತಮಿಳು ನಿರ್ದೇಶಕ ಪಾ ರಂಜಿತ್ ಅವರು ಈ ಕಾರ್ಯಕ್ರಮಕ್ಕೆ ಹಾಜರಾಗುವುದು ವೈಯಕ್ತಿಕ ಆಯ್ಕೆ ಎಂದು ಹೇಳಿದ್ದರು. 500 ವರ್ಷಗಳಷ್ಟು ಹಳೆಯದಾದ ಸಮಸ್ಯೆ ಕೊನೆಗೊಂಡಿದೆ. ಆದರೆ ಆ ಸಮಸ್ಯೆಯ ಹಿಂದಿನ ರಾಜಕೀಯವನ್ನು ನಾವು ಪ್ರಶ್ನಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ರಜನಿಕಾಂತ್ ತಮ್ಮ ಹಿಂದಿನ ಬ್ಲಾಕ್‌ಬಸ್ಟರ್ ‘ಜೈಲರ್’ ವಿಶೇಷ ಪ್ರದರ್ಶನದಲ್ಲಿ ಆಗಸ್ಟ್ 18ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಲಕ್ನೋದಲ್ಲಿ ಭಾಗವಹಿಸಿದ್ದರು. ಅವರು ಯೋಗಿಯ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದರು. ಇದು ತಮಿಳುನಾಡಿನ ಜನರಿಂದ ವ್ಯಾಪಕವಾದ ಟೀಕೆಗೆ ಕಾರಣವಾಗಿತ್ತು. ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ರಜನಿಕಾಂತ್, ಯೋಗಿಗಳು ಮತ್ತು ಸನ್ಯಾಸಿಗಳು ನನಗಿಂತ ಚಿಕ್ಕವರಾಗಿದ್ದರೂ ಅವರ ಆಶೀರ್ವಾದಕ್ಕಾಗಿ ಅವರ ಪಾದಗಳನ್ನು ಸ್ಪರ್ಶಿಸುವುದು ಅಭ್ಯಾಸವಾಗಿದೆ ಎಂದು ಸಮರ್ಥಿಸಿದ್ದರು. ನವೆಂಬರ್ 2019 ರಲ್ಲಿ, ರಜನಿಕಾಂತ್ ಅವರು ಬಿಜೆಪಿಗೆ ಸೇರಲು ಆಹ್ವಾನದ ಕುರಿತ ಸುದ್ದಿಯನ್ನು ತಳ್ಳಿಹಾಕಿದ್ದರು. ಮಾಧ್ಯಮದ ಒಂದು ವಿಭಾಗ ಮತ್ತು ಕೆಲವು ವ್ಯಕ್ತಿಗಳು ಕೇಸರಿ ಬಣ್ಣ ಬಳಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು.

ಇದನ್ನು ಓದಿ: ಗಣರಾಜ್ಯೋತ್ಸವ ದಿನ ‘ಸೆಕ್ಯುಲರ್’, ‘ಸಮಾಜವಾದಿ’ ಪದವಿಲ್ಲದೆ ಸಂವಿಧಾನದ ಪೀಠಿಕೆ ಹಂಚಿಕೊಂಡ ಕೇಂದ್ರ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...