Homeಮುಖಪುಟಬೇಲಿಮ್ ವಾಸ್ ಹಿಂಸಾಚಾರ: ಮುಸ್ಲಿಂ ಯುವಕರ ಬಂಧನ, ಕುಟುಂಬಸ್ಥರ ಮೇಲೆ ಪೊಲೀಸ್‌ ದೌರ್ಜನ್ಯದ ಆರೋಪ

ಬೇಲಿಮ್ ವಾಸ್ ಹಿಂಸಾಚಾರ: ಮುಸ್ಲಿಂ ಯುವಕರ ಬಂಧನ, ಕುಟುಂಬಸ್ಥರ ಮೇಲೆ ಪೊಲೀಸ್‌ ದೌರ್ಜನ್ಯದ ಆರೋಪ

- Advertisement -
- Advertisement -

ಉತ್ತರ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಖೇರಾಲು ಎಂಬಲ್ಲಿ ಬೇಲಿಮ್ ವಾಸ್ ಮುಸ್ಲಿಂ ಬಾಹುಳ್ಯದ ಪ್ರದೇಶವಾಗಿದೆ. ಇಲ್ಲಿ ಸ್ಥಳೀಯ ಮುಸ್ಲಿಮರು ಭಯದಿಂದ ದಿನದೂಡುತ್ತಿದ್ದು, ಆ ಪ್ರದೇಶದಲ್ಲಿ ಪೊಲೀಸರು ಬೀಡುಬಿಟ್ಟಿದ್ದಾರೆ.

ಜನವರಿ 21ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಮುನ್ನಾದಿನದಂದು ಆ ಪ್ರದೇಶದ ಹಿಂದೂ ನಿವಾಸಿಗಳು ‘ಶೋಭಾ ಯಾತ್ರೆ’ ರ್ಯಾಲಿಯನ್ನು ನಡೆಸಿದ್ದಾರೆ. ಸ್ಥಳೀಯರ ಅಂದಾಜಿನ ಪ್ರಕಾರ ಈ ರ್ಯಾಲಿಯಲ್ಲಿ ಕನಿಷ್ಠ 600-700 ಜನರು ಭಾಗವಹಿಸಿದ್ದರು. ರ್ಯಾಲಿಯು ತನ್ನ ನಿಗದಿತ  ಹಾದಿಯನ್ನು ಬಿಟ್ಟು ಬೇರೆ ದಾರಿಯಲ್ಲಿ ಸಾಗಿ ಆ ಪ್ರದೇಶದ ಮಸೀದಿಯನ್ನು ತಲುಪಿದೆ. ಮಸೀದಿಯ ಹೊರಗೆ ಜೋರಾಗಿ ಸಂಗೀತ ನುಡಿಸದಂತೆ ಹಾಗೂ ಪಟಾಕಿ ಸಿಡಿಸದಂತೆ ಸ್ಥಳೀಯ ಮುಸ್ಲಿಮರು ಮೆರವಣಿಗೆಯಲ್ಲಿ ಪಾಲ್ಗೊಂಡವರಿಗೆ ಮನವಿ ಮಾಡಿದ್ದಾರೆ. ಆ ಮನವಿಗಳನ್ನು ಯಾತ್ರೆಯಲ್ಲಿ ಮೋಜು-ಮಸ್ತಿನಿಂದ ಇದ್ದ ಜನರು ನಿರ್ಲಕ್ಷಿಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಮಾತಿನ ಚಕಮಕಿ ನಡೆದು ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿದೆ. ರ್ಯಾಲಿಯಲ್ಲಿ ಭಾಗವಹಿಸಿದವರು ಕತ್ತಿ, ಕೋಲು, ಕಲ್ಲುಗಳನ್ನು ಬಳಸಿದ್ದಾರೆ. ಹಿಂಸಾಚಾರ ಉಲ್ಬಣಗೊಳ್ಳುತ್ತಿದ್ದಂತೆ ಮೆಹ್ಸಾನಾ ಪೊಲೀಸರು ಅಶ್ರುವಾಯು ಬಳಸಿ ಜನರನ್ನು ಚದುರಿಸಲು ಪ್ರಾರಂಭಿಸಿದರು.

ಬೆಲಿಮ್ ವಾಸ್‌ನಲ್ಲಿನ ಸ್ಥಳೀಯ ಮುಸ್ಲಿಮರು ಪೊಲೀಸರು ತಮ್ಮೊಂದಿಗೆ ಕೆಟ್ಟದಾಗಿ ನಡೆದುಕೊಂಡರು ಎಂದು ಹೇಳಿದ್ದಾರೆ. ಪೊಲೀಸರು 13 ಮಂದಿಯನ್ನು ಬಂಧಿಸಿದ್ದು, ಇದರಲ್ಲಿ ಇಬ್ಬರು ಅಪ್ರಾಪ್ತರು ಸೇರಿದ್ದಾರೆ. ಬಂಧಿತ ಎಲ್ಲರೂ ಬೆಲಿಮ್ ವಾಸ್ ನಿವಾಸಿಗಳಾಗಿದ್ದು, ಮುಸ್ಲಿಮ್‌ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಪೊಲೀಸ್ ಅಧಿಕಾರಿಗಳು ತಮ್ಮ ಮನೆಗಳಿಗೆ ನುಗ್ಗಿ, ಮನೆಗಳ ಬಾಗಿಲುಗಳನ್ನು ಒಡೆದು ಹಾಕಿದ್ದಾರೆ, ಕಾರುಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಮುಸ್ಲಿಂ ಮಹಿಳೆಯರು ಆರೋಪಿಸಿದ್ದಾರೆ.

ರುಬಿನಾ ಅವರ ಪತಿ ಮೊಹಮ್ಮದ್ ಹುಸೇನ್(30) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹಿಂಸಾಚಾರ ನಡೆದ ಕೆಲವೇ ಗಂಟೆಗಳಲ್ಲಿ ಅವರ ಮನೆಗೆ ಪೊಲೀಸರು ನುಗ್ಗಿದ್ದರು. ಪೊಲೀಸರು ಹುಸೇನ್ ಅವರನ್ನು ಮನೆಯಿಂದ ಹೊರಗೆ ಎಳೆದುಕೊಂಡು ಹೋಗುವಾಗ ತೀವ್ರವಾಗಿ ಥಳಿಸಿದ್ದಾರೆ. ಅವರು ನಮ್ಮ ಗೇಟುಗಳು, ಬಾಗಿಲುಗಳನ್ನು ಮುರಿದರು ಮತ್ತು ಸುತ್ತಲೂ ಎಲ್ಲವನ್ನೂ ಚದುರಿಸಿದ್ದಾರೆ. ಇದಕ್ಕೆ ಮಹಿಳೆಯರು ವಿರೋಧಿಸಿದಾಗ ಅವರನ್ನು ಕೂಡ ಬಂಧಿಸುವುದಾಗಿ ಪೊಲೀಸರು ಬೆದರಿಕೆ ಹಾಕಿದ್ದಾರೆ. ರುಬಿನಾಳ ಪತಿ ಮೆಹ್ಸಾನಾದ ವಸಾಯಿ ಜೈಲಿನಲ್ಲಿ ಇತರ 12 ಮುಸ್ಲಿಮರೊಂದಿಗೆ ಇದ್ದಾರೆ. ಹುಸೇನ್ ಖಿನ್ನತೆಯಿಂದ ಬಳಲುತ್ತಿದ್ದು, ಔಷಧಿಯನ್ನು ಸೇವಿಸುತ್ತಿದ್ದರು, ಆದರೆ ಈಗ ಜೈಲಿನಲ್ಲಿ ಔಷಧಿಗಳನ್ನು ನೀಡಲಾಗುತ್ತಿಲ್ಲ ಎಂದು ಹೇಳಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿ ಮೊಹಮ್ಮದ್ ಸಿದ್ದಿಕ್ ಎಂಬವರ 16 ವರ್ಷದ ಮಗ ರೆಹಮತುಲ್ಲಾನನ್ನು ಮೆಹ್ಸಾನಾ ಪೊಲೀಸರು ಬಂಧಿಸಿ ಐದು ದಿನಗಳಾಗಿವೆ. ಅವರು ನನ್ನ ಮಗನನ್ನು ಬಂಧಿಸಿ ಎಲ್ಲಿಗೆ ಕರೆದೊಯ್ದರು ಎಂಬ ಬಗ್ಗೆ ಯಾವುದೇ ಕುಟುಂಬ ಸದಸ್ಯರಿಗೆ ತಿಳಿಸಲಿಲ್ಲ. ಇಂದು, ಐದು ದಿನಗಳ ನಂತರ ವಿಷಯ ಸ್ಪಷ್ಟವಾಗುವವರೆಗೆ ಅವರನ್ನು ಮಕ್ಕಳ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ನಮಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮಾಜಿ ಕಾರ್ಪೊರೇಟರ್ ಜುಬೇರ್ ಬೆಲಿಮ್, ಈ ಹಿಂದೆ ಶಾಂತಿಯುತವಾಗಿದ್ದ ಖೇರಾಲು ನೆರೆಹೊರೆ ಇಂತಹ ಉದ್ದೇಶಿತ ಕ್ರಮಕ್ಕೆ ಹೇಗೆ ಸಾಕ್ಷಿಯಾಯಿತು ಎಂದು ಪ್ರದೇಶದ ಜನರು ದಿಗ್ಭ್ರಮೆಗೊಂಡಿದ್ದಾರೆ. ಮುಸ್ಲಿಮರು ಇಲ್ಲಿ ಅಲ್ಪಸಂಖ್ಯಾತರಾಗಿದ್ದಾರೆ, ನಾವು ಎಂದಿಗೂ ಅಸುರಕ್ಷಿತರಾಗಿದ್ದೇವೆ ಎಂದು ಭಾವಿಸಿರಲಿಲ್ಲ. ಅವರು ಕತ್ತಿಗಳು ಮತ್ತು ರಾಡ್‌ಗಳನ್ನು ಹೊಂದಿದ್ದರು ಮತ್ತು ನಂತರ ಅವರು ಕಲ್ಲುಗಳನ್ನು ತೂರಿದರು. ಅವರು ನನ್ನ ಮನೆಯ ಟಿವಿಯನ್ನು ಒಡೆದರು, ಅವರು ಹತ್ತಿರದ ಉಪಾಹಾರ ಗೃಹವನ್ನು ಸುಟ್ಟು ಹಾಕಿದರು. ಇದು ತುಂಬಾ ಅಪಾಯಕಾರಿ. ದೇವಾಲಯದ ಶಂಕು ಸ್ಥಾಪನೆ ಹಿನ್ನೆಲೆ ನಾವು ರ್ಯಾಲಿಯನ್ನು ನಿರೀಕ್ಷಿಸಿದ್ದೇವೆ, ಆದರೆ ಈ ರೀತಿ ಗುರಿಯಾಗಬಹುದೆಂದು ನಿರೀಕ್ಷಿಸಿರಲಿಲ್ಲ ಎಂದು ಬೆಲಿಮ್ ಅವರು ಹೇಳಿದ್ದಾರೆ.

ಇನ್ನೊಬ್ಬ ಸ್ಥಳೀಯರು ಈ ಬಗ್ಗೆ ಮಾತನಾಡಿ, ರ್ಯಾಲಿಯಲ್ಲಿ ಭಾಗವಹಿಸಿದ್ದವರ ವೀಡಿಯೊಗಳನ್ನು ಹೊಂದಿದ್ದೇವೆ. ಆದರೆ ಪುತ್ರ ಬಂಧನದಲ್ಲಿರುವುದರಿಂದ ಅದನ್ನು ಪೊಲೀಸರಿಗೆ ಅದನ್ನು ನೀಡಲು ಬಯಸುವುದಿಲ್ಲ. ನನ್ನ ಮಗ ಅವನ ಕಾಲೇಜಿನಲ್ಲಿ ಒಬ್ಬನೇ ಮುಸ್ಲಿಂ, ಅವನು ಕ್ರೀಡೆಯಲ್ಲಿ ಚಿನ್ನದ ಪದಕ ವಿಜೇತ, ವಿಶ್ವ ಹಿಂದೂ ಪರಿಷತ್ತಿನ ಗೂಂಡಾಗಳು ಅವನ ಮೇಲೆ ಬಹಳ ಕಾಲದಿಂದ ಕಣ್ಣಿಟ್ಟಿದ್ದರು ಮತ್ತು ಈಗ ಅವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸ್ಥಳೀಯರು ಕತ್ತಿ ಹಿಡಿದು ನಮ್ಮ ಮನೆಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿರುವ ವೀಡಿಯೊಗಳು ನನ್ನ ಬಳಿ ಇವೆ. ಆದರೆ ನಾನು ಹಿಂದೂಗಳ ವಿರುದ್ಧ ದೂರು ನೀಡಿದರೆ ನನ್ನನ್ನು ಬಂಧಿಸಲಾಗುತ್ತದೆ ಅಥವಾ ನನ್ನ ಕುಟುಂಬವು ಭದ್ರತಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ನಾನು ಹೆದರುತ್ತೇನೆ. ಇದು ಯೋಜಿತ ದಾಳಿ ಎಂದು ನಮಗೆಲ್ಲರಿಗೂ ತಿಳಿದಿದೆ ಮತ್ತು ನಮ್ಮನ್ನು ಪ್ರಚೋದಿಸಲು ಉದ್ದೇಶಿಸಲಾಗಿತ್ತು ಎಂದು ಹೇಳಿದ್ದಾರೆ.

ಅವರ ನೆರೆಹೊರೆಯವರಾದ ಶೈಸ್ತಾ ಕೂಡ ಇದೇ ರೀತಿಯಾಗಿ ಪೊಲೀಸ್‌ ದೌರ್ಜನ್ಯವನ್ನು ಬಿಚ್ಚಿಟ್ಟಿದ್ದಾರೆ.  ನನ್ನ ಪತಿ ವಜೀರ್ ಮೊಹಮ್ಮದ್ ಸಾದಿಕ್ ಅಲಿ ಅವರನ್ನು ಥಳಿಸಲಾಗಿದೆ. ಅವರ ತಲೆಗೆ ಆರು ಹೊಲಿಗೆಗಳನ್ನು ಹಾಕಲಾಗಿದೆ. ಪೊಲೀಸರು ನಮ್ಮ ಮನೆಗೆ ನುಗ್ಗಿ ನನ್ನ ಪತಿಯನ್ನು ಎಳೆದೊಯ್ದು ಹಲ್ಲೆ ನಡೆಸಿದ್ದಾರೆ. ಅವರು ನಮ್ಮ ಎಲ್ಲಾ ಫೋನ್‌ಗಳನ್ನು ಸೀಜ್‌ ಮಾಡಿದ್ದಾರೆ. ನಮ್ಮ ಮಗಳು 4ನೇ ತರಗತಿಯಲ್ಲಿ ಓದುತ್ತಿದ್ದು, ಹಿಂಸಾಚಾರ ಮತ್ತು ತಂದೆಯ ಬಂಧನದ ಬಳಿಕ ಆಕೆಯನ್ನು ಶಾಲೆಗೆ ಕಳಹಿಸಲು ಭಯವಾಗುತ್ತಿದೆ ಎಂದು ಹೇಳಿದ್ದಾರೆ. ಹಿಂಸಾಚಾರದ ದಿನದಂದು ಹಿಂದೂ ಯುವಕರನ್ನು ಸಜ್ಜುಗೊಳಿಸಿರುವುದರ ಹಿಂದೆ ಸ್ಥಳೀಯ ಹಿಂದುತ್ವ ಗುಂಪುಗಳ ಕೈವಾಡ ಇದೆ ಎಂದು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ರಾಜ್ಯ ಮೀಸಲು ಪೊಲೀಸ್ ಪಡೆ ಕಮಾಂಡೆಂಟ್ ರುಶಿಕೇಶ್ ಬಿ.ಉಪಾಧ್ಯಾಯ ಈ ಕುರಿತು ಪ್ರತಿಕ್ರಿಯಿಸಿದ್ದು,  ಮೆಹ್ಸಾನಾದಲ್ಲಿ 13 ಮಂದಿಯ ಬಂಧನವನ್ನು ದೃಢಪಡಿಸಿದ್ದಾರೆ. ಉದ್ವಿಗ್ನತೆಯನ್ನು ತಡೆಯಲು ಪೊಲೀಸರು ಶಾಂತಿ ಸಭೆಗಳನ್ನು ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

 ಇದನ್ನು ಓದಿ: ಗಣರಾಜ್ಯೋತ್ಸವದ ಭಾಷಣದಲ್ಲಿ ‘ಜೈ ಭೀಮ್-ಜೈ ಭಾರತ್’ ಹೇಳಿದ್ದಕ್ಕೆ ದಲಿತ ವಿದ್ಯಾರ್ಥಿಗೆ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...