Homeಮುಖಪುಟಬಸವಲಿಂಗಪ್ಪ-ಪ್ರೊ. ಬಿ. ಕೃಷ್ಣಪ್ಪ ಅವರನ್ನು ‘ಕರ್ನಾಟಕ ರತ್ನ’ ಎಂದು ಘೋಷಿಸಿ: ಮಾವಳ್ಳಿ ಶಂಕರ್

ಬಸವಲಿಂಗಪ್ಪ-ಪ್ರೊ. ಬಿ. ಕೃಷ್ಣಪ್ಪ ಅವರನ್ನು ‘ಕರ್ನಾಟಕ ರತ್ನ’ ಎಂದು ಘೋಷಿಸಿ: ಮಾವಳ್ಳಿ ಶಂಕರ್

- Advertisement -
- Advertisement -

‘ಬಿ. ಬಸವಲಿಂಗಪ್ಪ ಮತ್ತು ಪ್ರೊ. ಬಿ. ಕೃಷ್ಣಪ್ಪ ಅವರು ಈ ರಾಜ್ಯದ ತಳಸಮದಾಯಗಳ ಎರಡು ಪ್ರಮುಖ ಶಕ್ತಿಗಳು. ಇಬ್ಬರನ್ನೂ ‘ಕರ್ನಾಟಕ ರತ್ನ’ ಎಂದು ಘೋಷಣೆ ಮಾಡಬೇಕು’ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.

‘ಶೋಷಿತ ಸಮುದಾಯಗಳ ಮಹಾ ಒಕ್ಕೂಟ’ದಿಂದ ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಶೋಷಿತ ಸಮುದಾಯಗಳ ರಾಜ್ಯ ಮಟ್ಟದ ಜಾಗೃತಿ ಸಮಾವೇಶದಲ್ಲಿ ಆಶಯ ಮಾತುಗಳನ್ನಾಡಿದ ಅವರು, ‘ಈ ಸಮಾವೇಶವನ್ನು ಯಾಕೆ ಆಯೋಜನೆ ಮಾಡಿದ್ದೇವೆ ಎಂಬುದನ್ನು ನಾವೆಲ್ಲಾ ಅರ್ಥ ಮಾಡಿಕೊಳ್ಳಬೇಕು. ನಾವೆಲ್ಲಾ ಇಲ್ಲಿಗೆ ಬಂದಿರುವ ಉದ್ದೇಶವನ್ನು ಅರ್ಥ ಮಾಡಿಕೊಳ್ಳದೆ ಇದ್ದರೆ, ಈ ಕಾರ್ಯಕ್ರಮ ಅರ್ಥಪೂರ್ಣ ಆಗುವುದಿಲ್ಲ’ ಎಂದು ಹೇಳಿದರು.

‘ನಮ್ಮ ಪೂರ್ವಿಕರ ಮಾತುಗಳನ್ನು ನಾವು ಸರಿಯಾಗಿ ಕೇಳಿಸಿಕೊಳ್ಳದೇ ಇದ್ದಿದ್ದಕ್ಕೆ ನಾವು ಈ ರೀತಿಯ ಶೋಷಣೆಗೆ ಒಳಗಾಗಿದ್ದೇವೆ. ನಮ್ಮ ಪೂರ್ವಿಕರು ಮಾಡಿದ ಮಹಾನ್ ಹೋರಾಟಗಳನ್ನು ಚರಿತ್ರಕಾರರು ಉದ್ದೇಶಪೂರ್ವಕವಾಗಿ ಮರೆಮಾಚಿದ್ದಾರೆ ಎಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಶಾಹು ಮಹಾರಾಜರು ಈ ದೇಶದಲ್ಲಿ ಮೊದಲ ಬಾರಿಗೆ ಮೀಸಲಾತಿಯನ್ನು ಕೊಟ್ಟಾಗ, ಸಾಮಾಜಿಕ ನ್ಯಾಯವನ್ನು ಜಾರಿ ಮಾಡಿದಾಗ, ಅವರ ಉದ್ದೇಶ ತುಳಿತಕ್ಕೆ ಒಳಗಾಗಿದ್ದವರ ಪರವಾಗಿತ್ತು. ಅವರು ಶಿಕ್ಷಣ, ಉದ್ಯೋಗಗಳಲ್ಲಿ ಸಾಮಾಜಿಕ ನ್ಯಾಯ ಜಾರಿ ಮಾಡ್ತಾರೆ. ಆಗ ಒಬ್ಬರು ಸ್ವಾತಂತ್ರ್ಯ ಹೋರಾಟಗಾರರು ಪ್ರತಿಕ್ರಿಯಿಸಿ, ಶಾಹು ಮಹಾರಾಜರು ದನ ಕಾಯುವವರಿಗೆ, ಕುರಿ ಕಾಯುವವರಿಗೆ, ಬೀದಿ ಗುಡಿಸುವವರಿಗೆ ಮೀಸಲಾತಿ ಕೊಟ್ಟಿದ್ದಾರೆ. ಇವರೆಲ್ಲಾ ಶಿಕ್ಷಣ ಪಡೆದು ಸಾಧಿಸುವುದಾದರೂ ಏನು ಎಂದು ಕೇಳಿದವರು ಚರಿತ್ರೆಯಲ್ಲಿ ‘ಲೋಕಮಾನ್ಯ’ರಾದರು; ಶಾಹು ಮಹಾರಾಜರು ಚರಿತ್ರೆಯಲ್ಲಿ ಖಳನಾಯಕರಾದರು; ಅದಕ್ಕೆಲ್ಲಾ ಕಾರಣ ನಾವು ನೀವು’ ಎಂದು ಹೇಳಿದರು.

‘ಮೈಸೂರು ಸಂಸ್ಥಾನದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರು ಮೀಸಲಾತಿ ಕೊಟ್ಟಾಗ ಇದೇ ಜನ ನಾಲ್ವಡಿಯವರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಶಾಹು ಮಹಾರಾಜರು, ತಂದೆ ಪೆರಿಯಾರ್, ಜ್ಯೋತಿ ಬಾಪುಲೆ, ನಾರಾಯಣಗುರು ಅವರ ವಿಚಾರಗಳನ್ನು ಓದಿ ಬೆಳೆದವರು ಅಂಬೇಡ್ಕರ್; ನಾವೆಲ್ಲಾ ಅವರ ಕುಡಿಗಳು. ಬಹುಸಂಖ್ಯಾತ ತಳಸಮುದಾಯಗಳು ರಾಜ್ಯಾಧಿಕಾರ ಹಿಡಿಯಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ನಮಗೆ ಅಧಿಕಾರ ಸಿಕ್ಕಿದೆಯಾ? ನಮ್ಮಲ್ಲಿರುವ ಜಾತಿ ವೈಶಮ್ಯದಿಂದ ಸಾಧ್ಯವಾಗಿಲ್ಲ. ವೈದಿಕ ಧರ್ಮ ನಮ್ಮ ವಿರುದ್ಧ ನಮ್ಮನ್ನೇ ಎತ್ತಿಕಟ್ಟಿ ಆಟವಾಡುತ್ತಿದೆ’ ಎಂದರು.

‘ದೇಶದಲ್ಲಿ ಇಂದು ಮನುವಾದ ಮತ್ತು ಅಂಬೇಡ್ಕರ್ ವಾದ ಇದೆ. ಮನುವಾದ ದೇಶದ ಬಹುಜನರನ್ನು ಒಡೆಯುತ್ತಾ, ಅವರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಅಂಬೇಡ್ಕರ್ ವಾದ ದೇಶದ ಬಹುಸಂಖ್ಯಾತರಿಗೆ ರಾಜಕೀಯ ಅಧಿಕಾರವನ್ನು ನೀಡುತ್ತಿದೆ. ರಾಜ್ಯದಲ್ಲಿ ಸಾಮಾಜಿಕ ನ್ಯಾಯ ಕೊಡುವಾಗ ಇದೇ ಸಂಘಪರಿವಾರ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದರು. ನಾವು ಅದಕ್ಕೆಲ್ಲಾ ಉತ್ತರ ಕೊಡುತ್ತೇವೆ. ಇನ್ನು ಮುಂದೆ ಅವರ ವಿರುದ್ಧ ಹಗುರವಾಗಿ ಮಾತನಾಡಿದರೆ ನಿಮ್ಮ ಬಾಯಿಗೆ ಬೀಗ ಹಾಕಬೇಕುತ್ತದೆ. ಸಂಸತ್ ಸದಸ್ಯ ಅನಂತ್ ಕುಮಾರ್ ಹೆಗಡೆಗೆ ತಲೆಯಲ್ಲಿ ಮಿದುಳು ಇದೆಯಾ’ ಎಂದು ಕಿಡಿಕಾರಿದರು.

‘ರಾಜ್ಯದಲ್ಲಿ ಜನನಾಯಕ ಎಂದು ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯ ಮಾತ್ರ. ಶೋಷಿತ ಸಮುದಾಯಗಳ ಪರವಾದ ನಾಯಕರನ್ನು ನಾವು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಮುಖ್ಯಮಂತ್ರಿಗಳೆ ನೀವು ಯಾವುದೇ ಕಾರಣಕ್ಕೂ ಅಂಜಿಕೊಳ್ಳಬೇಡಿ; ನಿಮ್ಮ ಜತೆ ಇಡೀ ರಾಜ್ಯದ ಸಮಸ್ತ ಶೋಷಿತ ಸಮುದಾಯ ಇದೆ’ ಎಂದು ವೇದಿಕೆಯಲ್ಲೆ ಹೇಳಿದರು.

‘ಕಾಂತರಾಜು ಆಯೋಗದ ಸಮೀಕ್ಷೆ ಯಾರ ವಿರುದ್ಧವೂ ಅಲ್ಲ, ಯಾರ ಪರವೂ ಇಲ್ಲ. ಅದು ಬಹಿರಂಗವಾಗಿ, ಸತ್ಯ ಏನಿದೆ ಎಂಬುದು ಗೊತ್ತಾಗಬೇಕು. ತಾಯಿಯ ಗರ್ಭದಲ್ಲೆ ಮಗುವನ್ನು ಕೊಲ್ಲುವ ಪ್ರಯತ್ನವನ್ನು ಈ ರಾಜ್ಯದ ಮೇಲ್ಜಾತಿಗಳು ಮಾಡಿದರೆ, ಅವರಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ಬಸವಣ್ಣನವರನ್ನು ಸಾಂಸ್ಕೃತಿ ನಾಯಕ ಎಂದು ಸಿದ್ದರಾಮಯ್ಯ ಸರ್ಕಾರ ಘೋಷಣೆ ಮಾಡಿದೆ; ಅವರಿಗೆ ಧನ್ಯವಾದಗಳು. ಬಿ. ಬಸವಲಿಂಗಪ್ಪ ಮತ್ತು ಪ್ರೊ. ಬಿ. ಕೃಷ್ಣಪ್ಪ ಅವರು ಈ ರಾಜ್ಯದ ತಳ ಸಮದಾಯಗಳ ಎರಡು ಪ್ರಮುಖ ಶಕ್ತಿಗಳು. ಇಬ್ಬರನ್ನೂ ‘ಕರ್ನಾಟಕ ರತ್ನ’ ಎಂದು ಘೋಷಣೆ ಮಾಡಬೇಕು’ ಎಂದು ಮಾವಳ್ಳಿ ಶಂಕರ್ ಮುಖ್ಯಮಂತ್ರಿಗಳ ಮುಂದೆ ಬೇಡಿಕೆ ಇಟ್ಟರು.

ಇದನ್ನೂ ಓದಿ; ಹಿಂದುಳಿದವರ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ: ಡಿ.ಕೆ. ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...