ಗಣರಾಜ್ಯೋತ್ಸವ ದಿನದಂದು ಮಧ್ಯಪ್ರದೇಶದ ರಾಜ್ಗಢ ಜಿಲ್ಲೆಯ ಗ್ರಾಮವೊಂದರಲ್ಲಿ ಸರಪಂಚ್ಗೆ ಜಾತಿಯ ಕಾರಣ ನೀಡಿ ಧ್ವಜಾರೋಹಣ ಮಾಡಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಅಧಿಕಾರಿಗಳು ಪಂಚಾಯತ್ ಇಲಾಖೆ ನೌಕರನನ್ನು ಸೇವೆಯಿಂದ ವಜಾಗೊಳಿಸಿದ್ದಾರೆ.
ಶುಕ್ರವಾರ ರಾಜ್ಗಢ್ ಜಿಲ್ಲೆಯ ಬಿಯೋರಾ ತಹಸಿಲ್ ವ್ಯಾಪ್ತಿಯ ತರೇನಾ ಗ್ರಾಮ ಪಂಚಾಯತ್ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ದಿಗ್ವಿಜಯ ಸಿಂಗ್ ಅವರು ಸರಪಂಚ್ ದಲಿತ ಎಂಬ ಕಾರಣಕ್ಕಾಗಿ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಅಕ್ಷಯ್ ತೆಮ್ರಾವಾಲ್ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದು, ಶನಿವಾರ ರಾತ್ರಿ ತರೇನಾ ಗ್ರಾಮ ಪಂಚಾಯಿತಿಯ ಸಿಬ್ಬಂದಿ ಲಖನ್ ಸಿಂಗ್ ಸೋಂಧಿಯಾ ಅವರು ಗಣರಾಜ್ಯೋತ್ಸವದಂದು ಗ್ರಾಮದ ಸರಪಂಚ್ ಬದಲಿಗೆ ಇನ್ನೊಬ್ಬ ವ್ಯಕ್ತಿಯಿಂದ ಧ್ವಜಾರೋಹಣ ಮಾಡಿಸಿದ್ದಾರೆ. ಇದು ಸರಪಂಚ್ ಅವರ ಹಕ್ಕುಗಳನ್ನು ಕಸಿದುಕೊಂಡಿರುವ ಘಟನೆಯಾಗಿದ್ದು, ಪಂಚಾಯತ್ನ ಸಿಬ್ಬಂದಿಯಾಗಿರುವ ಸೋಂಧಿಯಾ ಅವರನ್ನು ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಸರಪಂಚ್ ಮಾನ್ ಸಿಂಗ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಜನವರಿ 26ರಂದು ತಮ್ಮ ಗ್ರಾಮದಲ್ಲಿ ಗಣರಾಜ್ಯೋತ್ಸವದ ದಿನ ನಡೆದ ಕಾರ್ಯಕ್ರಮವೊಂದರಲ್ಲಿ ನನ್ನ ಬದಲಿಗೆ ಲಖನ್ ಸಿಂಗ್ ಅವರು ಇನ್ನೊಬ್ಬ ವ್ಯಕ್ತಿಯಿಂದ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ನಾನು ದಲಿತ ಆದ ಕಾರಣಕ್ಕೆ ಈ ರೀತಿ ಮಾಡಲಾಗಿದೆ ಎಂದು ಹೇಳಿದ್ದರು. ಇದಲ್ಲದೆ ಬೈಯೋರಾ ಜನಪದ ಪಂಚಾಯತ್ ಸಿಇಒ ಈಶ್ವರ್ ಅವರಿಗೆ ದೂರು ನೀಡಿದ್ದರು.
ಸರಪಂಚ್ ಬದಲಿಗೆ ಬೇರೆಯವರಿಂದ ಧ್ವಜಾರೋಹಣ ಮಾಡಿಸಿದ ನೌಕರನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆಗ್ರಹಿಸಿದ್ದಾರೆ. ಪಂಚಾಯತ್ ಭವನದಲ್ಲಿ ಧ್ವಜಾರೋಹಣ ಮಾಡುವ ಹಕ್ಕು ಸರಪಂಚ್ಗೆ ಇಲ್ಲವೇ? ಅಂತಹ ತಪ್ಪಿತಸ್ಥ ಸಿಬ್ಬಂದಿಯನ್ನು ಕೂಡಲೇ ಅಮಾನತುಗೊಳಿಸಬೇಕು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ನಾನು ಮುಖ್ಯಮಂತ್ರಿಗಳನ್ನು ಕೋರುತ್ತೇನೆ ಎಂದು ದಿಗ್ವಿಜಯ್ ಸಿಂಗ್ ಅವರು ಹೇಳಿದ್ದಾರೆ.
धन्यवाद @collectorrajga1 @CMMadhyaPradesh @INCMP @BJP4India pic.twitter.com/mAg7WLrga8
— digvijaya singh (@digvijaya_28) January 28, 2024
ಇದನ್ನು ಓದಿ: ಬೇಲಿಮ್ ವಾಸ್ ಹಿಂಸಾಚಾರ: ಮುಸ್ಲಿಂ ಯುವಕರ ಬಂಧನ, ಕುಟುಂಬಸ್ಥರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ



What the hell going in india , why sc is not belong Indian how we are educated and how we are humans , such chip mentality idiots has to punish them and wt is meaning of republic such a culture there still in India because of bjp going hindus god’s back to civilization bjp has overcome god concept we are in 21 st century well developing technology pls mind it