Homeಮುಖಪುಟಲೋಕಸಭೆ ಚುನಾವಣೆ: ಹಾಲಿ ಬಿಜೆಪಿ ಸಂಸದರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ

ಲೋಕಸಭೆ ಚುನಾವಣೆ: ಹಾಲಿ ಬಿಜೆಪಿ ಸಂಸದರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ

- Advertisement -
- Advertisement -

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಕೆಲ ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಬಹುದು ಅಥವಾ ಬೇರೆ ಕ್ಷೇತ್ರಗಳಿಂದ ಸ್ಪರ್ಧಿಸುವ ಅನಿವಾರ್ಯತೆ ಎದುರಾಗಬಹುದು ಎಂದು ಹೇಳಲಾಗುತ್ತಿದೆ.

ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಪ್ರಭಾವಿ ಸಂಸದರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ, ಪ್ರಸ್ತುತ 25 ಕ್ಷೇತ್ರಗಳಲ್ಲಿ ಬಿಜೆಪಿ ಸಂಸದರಿದ್ದಾರೆ. ಇದರಲ್ಲಿ ಬೆಂಗಳೂರು ದಕ್ಷಿಣ, ಧಾರವಾಡ, ಬೆಳಗಾವಿ ಮತ್ತು ಹಾವೇರಿ ಕ್ಷೇತ್ರಗಳ ಅಭ್ಯರ್ಥಿಗಳ ಬದಲಾವಣೆಯ ಸಾಧ್ಯತೆ ಇದೆ.

ಬೆಂಗಳೂರು ದಕ್ಷಿಣಕ್ಕೆ ಸೀತಾರಾಮನ್‌? 

ಪ್ರಸ್ತುತ ಬೆಂಗಳೂರು ದಕ್ಷಿಣದಿಂದ ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಧಾರವಾಡದಿಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬೆಳಗಾವಿಯಿಂದ ಮಂಗಳಾ ಅಂಗಡಿ ಮತ್ತು ಹಾವೇರಿಯಿಂದ ಶಿವಕುಮಾರ್ ಉದಾಸಿ ಸಂಸದರಾಗಿದ್ದಾರೆ.

ವರದಿಗಳ ಪ್ರಕಾರ, ತೇಜಸ್ವಿ ಸೂರ್ಯ ಸಂಸದರಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ನಿರ್ಮಾಲಾ ಸೀತಾರಾಮನ್ ಅವರು ಪ್ರಸ್ತುತ ಕರ್ನಾಟಕದಿಂದಲೇ ರಾಜ್ಯಸಭಾ ಸದಸ್ಯರಾಗಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಜಯನಗರದಲ್ಲಿ ಅವರ ಮನೆಯಿದೆ.

ಸೀತಾರಾಮನ್ ಮಾತ್ರವಲ್ಲದೆ, ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್‌ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಕೂಡ ಬೆಂಗಳೂರು ದಕ್ಷಿಣದ ಪಟ್ಟಿಯಲ್ಲಿದ್ದಾರೆ. 2019ರಿಂದಲೂ ಬೆಂಗಳೂರು ದಕ್ಷಿಣದ ಟಿಕೆಟ್‌ಗೆ ತೇಜಸ್ವಿನಿ ಅಕಾಂಕ್ಷಿಯಾಗಿದ್ದಾರೆ. ಆದರೆ, ಕಳೆದ ಬಾರಿಯ ಚುನಾವಣೆಯಲ್ಲಿ ತೇಜಸ್ವಿನಿ ಬದಲು ಯುವ ನಾಯಕ ತೇಜಸ್ವಿ ಸೂರ್ಯಗೆ ಟಿಕೆಟ್‌ ದೊರೆತಿತ್ತು. ಇದಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ಕಾರಣ ಎನ್ನಲಾಗಿದೆ.

2023ರ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ್ದ ಬಿ.ಎಸ್ ಯಡಿಯೂರಪ್ಪ ಬಣವನ್ನು ಹೈಕಮಾಂಡ್‌ ಕಡೆಗಣಿಸಿದ ಆರೋಪ ಕೇಳಿ ಬಂದಿತ್ತು. ಅಲ್ಲದೆ, ಬಿಜೆಪಿಯ ಹಿರಿಯ ನಾಯಕರಾಗಿದ್ದ ಕೆ.ಎಸ್‌ ಈಶ್ವರಪ್ಪ, ಜಗದೀಶ್ ಶೆಟ್ಟರ್, ಲಕ್ಷಣ ಸವದಿಗೆ ಟಿಕೆಟ್ ತಪ್ಪಿತ್ತು. ಸತತವಾಗಿ ಗೆಲ್ಲುತ್ತಾ ಬಂದಿದ್ದ ಈ ನಾಯಕರಿಗೆ ಟಿಕೆಟ್ ನೀಡದಿರಲು ಬಿ.ಎಲ್‌ ಸಂತೋಷ್ ಕಾರಣ ಎನ್ನಲಾಗಿತ್ತು.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡ ಬಳಿಕ, ಇದಕ್ಕೆ ಬಿಎಸ್‌ವೈ ಬಣವನ್ನು ದೂರ ಇಟ್ಟಿರುವುದೇ ಕಾರಣ ಎಂದು ಅರಿತ ಹೈಕಮಾಂಡ್, ಯಡಿಯೂರಪ್ಪ ಪುತ್ರ ಶಾಸಕ ವಿಜಯೇಂದ್ರ ಅವರನ್ನು ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿದೆ. ವಿಜಯೇಂದ್ರ ಬಹಳ ಚುರುಕಿನಿಂದ ರಾಜ್ಯದಲ್ಲಿ ಓಡಾಟ ನಡೆಸುತ್ತಿದ್ದು, ಅಪ್ಪ ಯಡಿಯೂರಪ್ಪ ಅವರ ಹಿಂದೆ ಬಲವಾಗಿ ನಿಂತಿದ್ದಾರೆ.

ವಿಜಯೇಂದ್ರ ಅಧ್ಯಕ್ಷರಾದ ಬಳಿಕ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬಂದು ವಿಧಾನಪರಿಷತ್‌ ಸದಸ್ಯರಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ಅವರನ್ನು ಮತ್ತೆ ಪಕ್ಷಕ್ಕೆ ಕರೆ ತಂದಿದ್ದು ಬಿಎಸ್‌ವೈ ಬಣದ ದೊಡ್ಡ ಸಾಧನೆ ಎಂದು ಬಿಬಿಂತವಾಗಿದೆ. ಹಾಗಾಗಿ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ವೈ ಬಣದ ತೀರ್ಮಾನವೇ ಅಂತಿಮವಾಗುವ ಸಾಧ್ಯತೆ ಇದೆ.

ಬಿಎಸ್‌ವೈ ಬಣಕ್ಕೆ ಮತ್ತೆ ರಾಜ್ಯ ಬಿಜೆಪಿಯ ಕಡಿವಾಣ ಸಿಕ್ಕಿರುವ ಹಿನ್ನೆಲೆ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಎಲ್‌ ಸಂತೋಷ್ ಬಣದ ಸಂಸದರಿಗೆ ಕೊಕ್‌ ನೀಡಬಹುದು ಎಂದು ಹೇಳಲಾಗ್ತಿದೆ. ಇದರಲ್ಲಿ ಸಂತೋಷ ಕೂಟದ ಪ್ರಲ್ಹಾದ್ ಜೋಶಿ ಇದ್ದಾರೆ ಎಂದು ಚರ್ಚೆಗಳು ನಡೆಯುತ್ತಿದೆ.

ಜೋಶಿ ಬದಲು ಯಾರು ಕಣಕ್ಕೆ?

ಪ್ರಲ್ಹಾದ್ ಜೋಶಿ ಪ್ರಸ್ತುತ ಧಾರವಾಡದ ಸಂಸದರಾಗಿದ್ದಾರೆ. ಕೇಂದ್ರದ ಸಂಸದೀಯ ಸಚಿವರಾಗಿರುವ ಅವರು, ಒಬ್ಬ ಪ್ರಭಾವಿ ರಾಜಕಾರಣಿ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಜೋಶಿ ಬದಲು ಧಾರವಾಡದಿಂದ ಬಿಎಸ್‌ವೈ ಬಣದ ಶಂಕರ್ ಪಾಟೀಲ್ ಮುನೇನಕೊಪ್ಪ ಅವರಿಗೆ ಟಿಕೆಟ್‌ ನೀಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಹಾವೇರಿಯಿಂದ ಬೊಮ್ಮಾಯಿ

ಅಭ್ಯರ್ಥಿ ಬದಲಾವಣೆಯ ಸಾಧ್ಯತೆ ಇರುವ ಮತ್ತೊಂದು ಪ್ರಮುಖ ಕ್ಷೇತ್ರ ಹಾವೇರಿ. ಇಲ್ಲಿ ಪ್ರಸ್ತುತ ಶಿವಕುಮಾರ್ ಉದಾಸಿ ಸಂಸದರಾಗಿದ್ದಾರೆ. ಈ ಕ್ಷೇತ್ರದ ಟಿಕೆಟ್‌ಗಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಈ ಹಿಂದೆ ಪ್ರಯತ್ನಿಸಿದ್ದರು. ಆದರೆ, ಈ ಬಾರಿ ಸ್ವತಃ ಬಸವರಾಜ ಬೊಮ್ಮಾಯಿ ಹಾವೇರಿಯ ಟಿಕೆಟ್ ಆಕಾಂಕ್ಷಿ ಎನ್ನಲಾಗ್ತಿದೆ. ಬಸವರಾಜ ಬೊಮ್ಮಾಯಿ ಪ್ರಮುಖ ಲಿಂಗಾಯತ ನಾಯಕ ಹಾಗೂ ಬಿಎಸ್‌ವೈ ಬಣದವರು ಎಂಬುವುದು ಇಲ್ಲಿ ಗಮನಾರ್ಹ.

ಬೆಂಗಳೂರು ಸೆಂಟ್ರಲ್ ಮೇಲೆ ರಾಜೀವ್ ಕಣ್ಣು

ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಕೂಡ ಈ ಬಾರಿ ಕರ್ನಾಟಕದಿಂದ ಲೋಕಸಭೆಗೆ ಸ್ಪರ್ಧಿಸುವ ಇರಾದೆ ಹೊಂದಿದ್ದಾರೆ. ಅವರು ಬೆಂಗಳೂರು ಸೆಂಟ್ರಲ್‌ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗ್ತಿದೆ. ಆದರೆ, ರಾಜೀವ್ ಚಂದ್ರಶೇಖರ್ ಕೇರಳದ ತಿರುವನಂತಪುರಂಗೆ ಹೋಗಿ ಅಲ್ಲಿಂದಲೇ ಸ್ಪರ್ಧಿಸಿ ಗೆಲ್ಲಲಿ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಹೇಳಿರುವುದಾಗಿ ದಿ ಸೌಥ್‌ ಫಸ್ಟ್‌ ವರದಿ ಮಾಡಿದೆ.

ಬೆಂಗಳೂರು ಸೆಂಟ್ರಲ್‌ನಲ್ಲಿ ಪ್ರಸ್ತುತ ಪಿ.ಸಿ ಮೋಹನ್ ಸಂಸದರಾಗಿದ್ದಾರೆ. ಹಾಗಾಗಿ, ರಾಜೀವ್ ಚಂದ್ರಶೇಖರ್ ಕೇರಳಕ್ಕೆ ಹೋಗಿ ಕಾಂಗ್ರೆಸ್ ನಾಯಕ ಶಶಿತರೂರ್ ಎದುರು ಸ್ಪರ್ಧಿಸಲಿ ಎಂಬುವುದು ಕರ್ನಾಟಕದ ಬಿಜೆಪಿ ನಾಯಕರ ಒತ್ತಾಯವಂತೆ.

ದಕ್ಷಿಣ ಕನ್ನಡ, ಬೆಳಗಾವಿಗೆ ಯಾರು?

ದಕ್ಷಿಣ ಕನ್ನಡ ಮತ್ತು ಬೆಳಗಾವಿಯಲ್ಲೂ ಹಾಲಿ ಸಂಸದರಿಗೆ ಟಿಕೆಟ್‌ ಕೈ ತಪ್ಪು ಸಾಧ್ಯತೆ ಇದೆ ಎನ್ನಲಾಗ್ತಿದೆ. ಆದರೆ, ಈ ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಗಳು ಬಿಜೆಪಿ ಸಿಕ್ಕಿಲ್ಲ. ದಕ್ಷಿಣ ಕನ್ನಡದ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ದ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೇ ಅಸಮಧಾನ ಹೊಂದಿದ್ದಾರೆ. ಅವರನ್ನು ಬದಲಾಯಿಸಿ ಬೇರೆಯವರಿಗೆ ಟಿಕೆಟ್ ಕೊಡಿ ಎಂಬುವುದು ಕೆಲ ಕಾರ್ಯಕರ್ತರ ವಾದ. ಹಿಂದುತ್ವ ನಾಯಕ ಅರುಣ್ ಕುಮಾರ್ ಪುತ್ತಿಲಗೆ ಈ ಬಾರಿ ಟಿಕೆಟ್ ಕೊಡಿ ಎಂಬುವುದು ಅವರ ಪುತ್ತಿಲ ಪರಿವಾರದ ಒತ್ತಾಯ. ಆದರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತಿಲಗೆ ಟಿಕೆಟ್ ನೀಡದ ಬಿಜೆಪಿ ಈ ಬಾರಿ ಲೋಕಭೆ ಟಿಕೆಟ್ ಕೊಡುತ್ತಾ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಪ್ರಸ್ತುತ ಸನ್ನಿವೇಶದಲ್ಲಿ ಬಿಜೆಪಿ ನಾಯಕರು ಮತ್ತು ಪುತ್ತಿಲ ಪರಿವಾರದ ನಡುವೆ ಒಮ್ಮತ ಮೂಡಿದಂತೆ ಕಾಣುತ್ತಿಲ್ಲ.

ಇನ್ನೂ ಬೆಳಗಾವಿಯಲ್ಲಿ ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಅಂಗಡಿ ಸಂಸದರಾಗಿದ್ದಾರೆ. ಮಂಗಳ ಅಂಗಡಿ ರಾಜಕೀಯದಲ್ಲಿ ಸಕ್ರಿಯವಾಗಿ ಗುರುತಿಸಿಕೊಳ್ಳದಿದ್ದರೂ, ಕೋವಿಡ್‌ನಿಂದ ಪತಿ ಅಗಲಿದ ಬಳಿಕ ನಡೆದ ಉಪ ಚುನಾವಣೆಯಲ್ಲಿ ಮೊದಲ ಬಾರಿ ಜಯಗಳಿಸಿ ಸಂಸದರಾದವರು. ಮಂಗಳ ಅಂಗಡಿ ಬಿಜೆಪಿಯಲ್ಲಿ ರಾಜ್ಯ ಮಟ್ಟದಲ್ಲಿ ಏನೂ ಗುರುತಿಸಿಕೊಂಡಿಲ್ಲ.ಹಾಗಾಗಿ, ಮಂಗಳಾ ಬದಲಿಗೆ ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಚರ್ಚಗೆಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿದೆ.

ನಿರ್ಮಲಾ ಸೀತಾರಾಮನ್ ಜೊತೆ ಕೇಂದ್ರ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರೂ ಕರ್ನಾಟಕದಿಂದಲೇ ಲೋಕಸಭೆಗೆ ಸ್ಪರ್ಧಿಸುವ ಇರಾದೆ ಹೊಂದಿದ್ದಾರೆ ಎನ್ನಲಾಗಿದೆ. ರಾಜ್ಯಸಭಾ ಸದಸ್ಯರಾಗಿರುವ ಜೈಶಂಕರ್‌ಗೆ ಬೆಂಗಳೂರು ಅಥವಾ ದಕ್ಷಿಣ ಕನ್ನಡ ಟಿಕೆಟ್ ಸಿಗುವ ಸಾಧ್ಯತೆಯಿದೆ.

ಬಿಎಸ್‌ವೈ ಬಣದ ತೀರ್ಮಾನವೇ ಅಂತಿಮ

ಚರ್ಚೆಗಳು ಏನೇ ಇದ್ದರೂ, ಬಿಜೆಪಿ ಹೈಕಮಾಂಡ್ ಈ ಬಾರಿ ಯಡಿಯೂರಪ್ಪ ಬಣ ಹೇಳಿದಂತೆ ಟಿಕೆಟ್ ನಿಶ್ಚಯಿಸುವ ಸಾಧ್ಯತೆ ಇದೆ. ಏಕೆಂದರೆ, ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ಬಣವನ್ನು ಕಡೆಗಣಿಸಿ ಕೈ ಸುಟ್ಟುಕೊಂಡೆವು ಎಂಬ ಭಾವನೆಯಲ್ಲಿ ಬಿಜೆಪಿ ಹೈಕಮಾಂಡ್ ಇದೆ.

ನಿರ್ಮಲಾ ಸೀತಾರಾಮನ್‌ ಅವರನ್ನು ಬೆಂಗಳೂರು ದಕ್ಷಿಣದಿಂದ ಕಣಕ್ಕಿಳಿಸುವ ವಿಷಯ ಬಿಜೆಪಿ ನಾಯಕರಿಗೆ ಅಷ್ಟೊಂದು ಸಮಧಾನ ತಂದಂತೆ ಕಾಣುತ್ತಿಲ್ಲ. ಏಕೆಂದರೆ, 2022ರಲ್ಲಿ ಸಂಸತ್‌ನ ಮೇಲ್ಮನೆಗೆ ಆಯ್ಕೆಯಾಗಿರುವ ಸೀತಾರಾಮನ್ ಅವರ ಅವಧಿ ಇನ್ನೂ ನಾಲ್ಕು ವರ್ಷ ಇದೆ. ಹಾಗಾಗಿ, ಅವರನ್ನು ಯಾಕಾಗಿ ಲೋಕಸಭೆಗೆ ನಿಲ್ಲಿಸಬೇಕು ಎಂಬುವುದು ಕೆಲ ನಾಯಕರ ಪ್ರಶ್ನೆ.

ಒಂದು ವೇಳೆ ಸೀತರಾಮನ್‌ಗೆ ಬೆಂಗಳೂರು ದಕ್ಷಿಣದ ಟಿಕೆಟ್‌ ಕೊಟ್ಟರೆ ತೇಜಸ್ವಿ ಸೂರ್ಯ ಕಥೆಯೇನು? ಧಾರವಾಡದಲ್ಲಿ ಅಭ್ಯರ್ಥಿ ಬದಲಿಸಿದರೆ ಪ್ರಲ್ಹಾದ್ ಜೋಶಿ ಯಾವ ಎಲ್ಲಿಗೆ ಹೋಗ್ತಾರೆ? ಇತ್ಯಾದಿ ಪ್ರಶ್ನೆಗಳು ಮೂಡಿದೆ. ಎಲ್ಲದಕ್ಕೂ ಮುಂದೆ ಉತ್ತರ ಸಿಗಲಿದೆ.

ಇದನ್ನೂ ಓದಿ: ಮನುಷ್ಯತ್ವದ ಎದುರು ಮಂದಿರ, ಮಸೀದಿ ನಿಲ್ಲಿಸಲಾಗುತ್ತಿದೆ: ಪತ್ರಕರ್ತ ನವೀನ್‌ ಕುಮಾರ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...