Homeಮುಖಪುಟಎನ್‌ಸಿಪಿ V/s ಎನ್‌ಸಿಪಿ: ಫೆ.15ರೊಳಗೆ ಶಾಸಕರ ಅನರ್ಹತೆ ನಿರ್ಧರಿಸಿ; ಮಹಾ ಸ್ಪೀಕರ್‌ಗೆ ಸುಪ್ರೀಂ ಸೂಚನೆ

ಎನ್‌ಸಿಪಿ V/s ಎನ್‌ಸಿಪಿ: ಫೆ.15ರೊಳಗೆ ಶಾಸಕರ ಅನರ್ಹತೆ ನಿರ್ಧರಿಸಿ; ಮಹಾ ಸ್ಪೀಕರ್‌ಗೆ ಸುಪ್ರೀಂ ಸೂಚನೆ

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಗುಂಪಿಗೆ ಸೇರಿದ ಎನ್‌ಸಿಪಿ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಶರದ್ ಪವಾರ್ ಬಣ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಸುಪ್ರೀಂ ಕೋರ್ಟ್ ಫೆಬ್ರವರಿ 15ರವರೆಗೆ ಸಮಯ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠದ ಮುಂದೆ, ಸ್ಪೀಕರ್ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅನರ್ಹತೆ ಅರ್ಜಿಗಳ ಕುರಿತು ಆದೇಶಗಳನ್ನು ಹೊರಡಿಸಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಮನವಿ ಸಲ್ಲಿಸಿದರು.

ಇದಕ್ಕೂ ಮೊದಲು, ಏಕನಾಥ್ ಶಿಂಧೆ ನೇತೃತ್ವದ ರಾಜ್ಯ ಸರ್ಕಾರದ ಭಾಗವಾಗಿ ಪಕ್ಷ ಬದಲಿಸಿದ ಎನ್‌ಸಿಪಿ ಶಾಸಕರಿಗೆ ಸಂಬಂಧಿಸಿದ ಅನರ್ಹತೆ ಅರ್ಜಿಗಳನ್ನು ನಿರ್ಧರಿಸಲು ಸುಪ್ರೀಂ ಕೋರ್ಟ್ ಸ್ಪೀಕರ್‌ಗೆ ಜನವರಿ 31 ರವರೆಗೆ ಕಾಲಾವಕಾಶ ನೀಡಿತ್ತು.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಶರದ್ ಪವಾರ್ ಬಣದ ಜಯಂತ್ ಪಾಟೀಲ್ ಅವರು ಅಜಿತ್ ಪವಾರ್ ಮತ್ತು ಅವರಿಗೆ ನಿಷ್ಠರಾಗಿರುವ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳನ್ನು ತ್ವರಿತವಾಗಿ ತೀರ್ಮಾನಿಸುವಂತೆ ಸ್ಪೀಕರ್‌ಗೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸಿದ್ದಾರೆ.

‘ಜನವರಿ 30 ರಂದು ಸಾಕ್ಷ್ಯಾಧಾರಗಳ ಕ್ರಾಸ್ ಎಕ್ಸಾಮಿನೇಷನ್ ಮುಗಿಯುತ್ತದೆ ಮತ್ತು ಅಂತಿಮ ವಿಚಾರಣೆಯು ಜನವರಿ 31 ರಂದು ಮುಕ್ತಾಯಗೊಳ್ಳುತ್ತದೆ. ತೀರ್ಪುಗಳನ್ನು ಪ್ರಕಟಿಸಲು ನಾವು ಮೂರು ವಾರಗಳ ಕಾಲ ಕೇಳುತ್ತಿದ್ದೇವೆ. ಇದು ವಾಸ್ತವಿಕ ಸಮಯ ಎಂದು ನಾವು ಕೇಳುತ್ತಿದ್ದೇವೆ’ ಎಂದು ಮೆಹ್ತಾ ಸುಪ್ರೀಂ ಪೀಠದ ಮುಂದೆ ಮನವಿ ಸಲ್ಲಿಸಿದರು.

ಮೂರು ವಾರಗಳ ವಿಸ್ತರಣೆಯನ್ನು ವಿರೋಧಿಸಿದ ಜಯಂತ್ ಪಾಟೀಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ನಾರ್ವೇಕರ್ ತೀರ್ಪು ಬರೆಯಲು ಒಂದು ವಾರ ಹೆಚ್ಚುವರಿ ಸಮಯ ಸಾಕು ಎಂದು ಹೇಳಿದರು.

ವಾದ ಆಲಿಸಿದ ನಂತರ, ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಶರದ್ ಪವಾರ್ ಪಾಳಯವು 40 ಶಾಸಕರು ಮತ್ತು 5 ಎಂಎಲ್‌ಸಿಗಳ ವಿರುದ್ಧ ಸಲ್ಲಿಸಿರುವ ಅನರ್ಹತೆ ಅರ್ಜಿಗಳ ತೀರ್ಪು ನೀಡಲು ಫೆಬ್ರವರಿ 15 ರವರೆಗೆ ಸ್ಪೀಕರ್‌ಗೆ ಸಮಯ ನೀಡುವುದಾಗಿ ಪೀಠ ಹೇಳಿದೆ.

ಶರದ್ ಪವಾರ್ ಸಹೋದರ ಸಂಬಂಧಿಯಾಗಿರುವ ಅಜಿತ್ ಪವಾರ್ ಪಕ್ಷವನ್ನು ವಿಭಜಿಸಿದ ನಂತರ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಉಪಮುಖ್ಯಮಂತ್ರಿಯಾಗಿ ಸೇರ್ಪಡೆಯಾದರು. ಮೇ 2022 ರಲ್ಲಿ ಶಿವಸೇನೆಯಲ್ಲಿನ ವಿಭಜನೆಯ ನಂತರ ಆಗಿನ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಉರುಳಿಸಿದ ನಂತರ ಮತ್ತು ಏಕನಾಥ್ ಶಿಂಧೆ ಅವರು ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.

ಅಜಿತ್ ಬೆಂಬಲಿಗ ಶಾಸಕರ ವಿರುದ್ಧ ಪಾಟೀಲ್ ಅವರು ಸೆಪ್ಟೆಂಬರ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಕಳೆದ ಮೂರು ತಿಂಗಳಿನಿಂದ ನಾರ್ವೇಕರ್ ಅನರ್ಹತೆ ಅರ್ಜಿಗಳ ಮೇಲೆ ಕುಳಿತಿದ್ದಾರೆ ಎಂದು ವಿಷಾದಿಸಿದರು. ಬಂಡಾಯ ಶಾಸಕರ ಅನರ್ಹತೆಗೆ ಶರದ್ ಪವಾರ್ ಪಾಳಯ ಮೂರು ಅರ್ಜಿಗಳನ್ನು ಸಲ್ಲಿಸಿದೆ.

ಮೊದಲ ಅರ್ಜಿಯನ್ನು ಅಜಿತ್ ಪವಾರ್ ಸೇರಿದಂತೆ ಒಂಬತ್ತು ಶಾಸಕರ ವಿರುದ್ಧ ಸಲ್ಲಿಸಲಾಯಿತು; ಎರಡನೇ ಅರ್ಜಿ 20 ಶಾಸಕರ ವಿರುದ್ಧ; ಮತ್ತು 11 ಶಾಸಕರ ವಿರುದ್ಧ ಮೂರನೇ ಅರ್ಜಿ ಸಲ್ಲಿಸಲಾಗಿದೆ.

ಅಜಿತ್ ಪವಾರ್ ಬಣವು ಹತ್ತು ಎನ್‌ಸಿಪಿ ಶಾಸಕರು ಮತ್ತು ಮೂವರು ಎಂಎಲ್‌ಸಿಗಳ ವಿರುದ್ಧ ಅನರ್ಹತೆ ಅರ್ಜಿಯನ್ನು ಸಲ್ಲಿಸಿದೆ. ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯನ್ನು ಬಳಸಲು ಅನುಮತಿ ಕೋರಿ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಅರ್ಜಿ ಸಲ್ಲಿಸಿದೆ. ಸದ್ಯದಲ್ಲೇ ಪ್ರಕರಣದ ತೀರ್ಪು ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ; ‘ಕಾಂತರಾಜು ಆಯೋಗದ ವರದಿ ಸ್ವೀಕರಿಸುತ್ತೇನೆ…’; ಶೋಷಿತರ ಜಾಗೃತಿ ಸಮಾವೇಶದಲ್ಲಿ ಸಿಎಂ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...