Homeಕರ್ನಾಟಕರೈತ ವಿರೋಧಿ ಬಿಜೆಪಿ ನಾಯಕರು ಸುರಿಸುವ ಕಣ್ಣೀರು ಮೊಸಳೆಯದ್ದು: ಸಿಎಂ ಸಿದ್ದರಾಮಯ್ಯ

ರೈತ ವಿರೋಧಿ ಬಿಜೆಪಿ ನಾಯಕರು ಸುರಿಸುವ ಕಣ್ಣೀರು ಮೊಸಳೆಯದ್ದು: ಸಿಎಂ ಸಿದ್ದರಾಮಯ್ಯ

- Advertisement -
- Advertisement -

‘ಹುಟ್ಟು ರೈತ ವಿರೋಧಿಯಾಗಿರುವ ಬಿಜೆಪಿ ನಾಯಕರು ಈಗ ವೇಷ ಬದಲಿಸಿ ಸುರಿಸುವ ಕಣ್ಣೀರು ಮೊಸಳೆಯದ್ದು’ ಎಂದು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬರ ಪರಿಹಾರ ನೀಡುವಂತೆ ವಿಪಕ್ಷ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುತ್ತಿದ್ದು, ಈ ಬಗ್ಗೆ ಅವರು ತಮ್ಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ರಾಜ್ಯದ ಬರಪೀಡಿತ ಪ್ರದೇಶದ ರೈತರಿಗೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಪರಿಹಾರದ ಹಣ ನೀಡದೆ ಕಳೆದ ಐದು ತಿಂಗಳಿನಿಂದ ಗೋಳಾಡಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಲಾಗದ ರಾಜ್ಯದ ಪುಕ್ಕಲು ಬಿಜೆಪಿ ನಾಯಕರು ನಮ್ಮ ವಿರುದ್ಧ ‘ಪರಿಹಾರ ಕೊಡಿ ಕುರ್ಚಿ ಬಿಡಿ’ ಎಂಬ ನಾಟಕ ಪ್ರದರ್ಶನಕ್ಕೆ ಹೊರಟಿರುವುದು ಹಾಸ್ಯಾಸ್ಪದ ಮಾತ್ರವಲ್ಲ ನಾಡಿನ ರೈತರಿಗೆ ಬಗೆಯುತ್ತಿರುವ ದ್ರೋಹವಾಗಿದೆ’ ಎಂದು ಹೇಳಿದ್ದಾರೆ.

‘ರಾಜ್ಯದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದಾಗ ಬೀಜ-ಗೊಬ್ಬರ ಕೇಳಿದ ರೈತರನ್ನು ಗುಂಡಿಟ್ಟು ಸಾಯಿಸಿದ ಪಕ್ಷ ಬಿಜೆಪಿ, ಪರಿಹಾರ ಕೊಡಿ ಎಂದು ಕೇಳಿದಾಗೆಲ್ಲ ನಾವೇನು ನೋಟ್ ಪ್ರಿಂಟಿಂಗ್ ಮೆಷಿನ್ ಇಟ್ಟು ಕೊಂಡಿದ್ದೆವೆಯೇ ಎಂದು ಧಾಷ್ಟ್ಯದಿಂದ ಕೇಳಿದ್ದು ಇದೇ ಬಿಜೆಪಿ ಮುಖ್ಯಮಂತ್ರಿಗಳು. ದೆಹಲಿಯಲ್ಲಿ ಧರಣಿ ನಡೆಸುತ್ತಿದ್ದ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಕೂಡಾ ಇದೇ ಬಿಜೆಪಿ. ಇಂತಹ ಹುಟ್ಟು ರೈತ ವಿರೋಧಿ ಬಿಜೆಪಿ ನಾಯಕರು ಈಗ ವೇಷ ಬದಲಿಸಿ ಸುರಿಸುವ ಕಣ್ಣೀರು ಮೊಸಳೆಯದ್ದು ಎಂದು ಅರ್ಥಮಾಡಿಕೊಳ್ಳದಷ್ಟು ರೈತರು ದಡ್ಡರಲ್ಲ’ ಎಂದಿದ್ದಾರೆ.

‘ಬರಗಾಲದ ಸೂಚನೆ ಸಿಗುತ್ತಿದ್ದಂತೆಯೇ ನಮ್ಮ ಸರ್ಕಾರ ಯುದ್ಧೋಪಾದಿಯಲ್ಲಿ ಸಮೀಕ್ಷೆ ಮತ್ತು ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಸಮೀಕ್ಷೆಯ ನಂತರ ಕಳೆದ ವರ್ಷದ ಸೆಪ್ಟೆಂಬರ್ 13ರಂದು ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿತ್ತು. ನಮ್ಮ ಅಧ್ಯಯನದ ಪ್ರಕಾರ ಬರಗಾಲದಿಂದಾಗಿ ₹37 ಸಾವಿರ ಕೋಟಿಗಳಷ್ಟು ನಷ್ಟ ಉಂಟಾಗಿದೆ. ಇದರಲ್ಲಿ ₹18,177 ಕೋಟಿ ಪರಿಹಾರವನ್ನು ನೀಡುವಂತೆ ಸೆ.23ಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೆವು. ಅಕ್ಟೋಬರ್‌ನಲ್ಲಿ ಬರ ಅಧ್ಯಯನಕ್ಕಾಗಿ ಕೇಂದ್ರದಿಂದ ತಜ್ಞರ ತಂಡ ಆಗಮಿಸಿತ್ತು. ಇಲ್ಲಿಯ ವರಗೆ ಅದು ನೀಡಿರುವ ವರದಿಯ ಗತಿ ಏನಾಗಿದೆಯೋ ಗೊತ್ತಿಲ್ಲ’ ಎಂದು ವಿವರಿಸಿದ್ದಾರೆ.

‘ಕಂದಾಯ ಸಚಿವ ಕೃಷ್ಣ ಬೈರೇಗೌಡರ ಜೊತೆ ನಾನು ಪ್ರಧಾನಮಂತ್ರಿ ಮೋದಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಕೃಷಿ ಸಚಿವರು ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಇಲ್ಲಿಯವರೆಗೆ ಬರ ಪರಿಹಾರ ಕೋರಿ 17 ಪತ್ರಗಳನ್ನು ಬರೆದಿದ್ದೇವೆ. ಯಾವುದಕ್ಕೂ ಉತ್ತರವೂ ಇಲ್ಲ, ಪೈಸೆ ಪರಿಹಾರವನ್ನೂ ಕೊಟ್ಟಿಲ್ಲ. ಪರಿಸ್ಥಿತಿ ಹೀಗಿರುವಾಗ ಬಿಜೆಪಿ ನಾಯಕರು ಯಾವ ಮುಖ ಹೊತ್ತು ಬರಪೀಡಿತ ರೈತರ ಬಳಿ ನಮ್ಮ ವಿರುದ್ಧ ದೂರು ತೆಗೆದುಕೊಂಡು ಹೋಗುತ್ತಾರೆ. ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದಿಂದ ಈಗಾಗಲೇ ರಾಜ್ಯದ ರೈತರು ರೊಚ್ಚಿಗೆದ್ದಿದ್ದಾರೆ. ಆದ್ದರಿಂದ ಅವರ ಬಳಿ ಹೋಗುವಾಗ ಜಾಗ್ರತೆಯಿಂದ ಇರಿ ಎಂದಷ್ಟೇ ಹೇಳಬಯಸುತ್ತೇನೆ’ ಎಂದು ಎಚ್ಚರಿಕೆ ನೀಡಿದ್ದಾರೆ.

‘ಕೇಂದ್ರ ಸರ್ಕಾರ ಪರಿಹಾರ ನೀಡದೆ ಇದ್ದರೂ ರಾಜ್ಯ ಸರ್ಕಾರ ಕೈಕಟ್ಟಿ ಕೂತಿಲ್ಲ. ಬರಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ₹870 ಕೋಟಿ. ಬರಪೀಡಿತ 36 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸುತಿದ್ದೇವೆ. 21 ಜಿಲ್ಲೆಗಳಲ್ಲಿ ಟ್ಯಾಂಕರ್ ನಲ್ಲಿ ನೀರು ಪೂರೈಸಲು ಟೆಂಡರ್ ಕರೆದಿದ್ದೇವೆ. 158 ಕಡೆಗಳಲ್ಲಿ ಹೊಸದಾಗಿ ಕೊಳವೆ ಬಾವಿಗಳನ್ನು ತೋಡಲಾಗಿದೆ. ಖಾಸಗಿ ಜಮೀನು ಇರುವ 3,000 ಕಡೆಗಳಲ್ಲಿ ಕೊಳವೆ ಬಾವಿಗಳನ್ನು ತೋಡಲು ಸ್ಥಳಗಳನ್ನು ಗುರುತಿಸಲಾಗಿದೆ. ಸದ್ಯ ಎಲ್ಲಿಯೂ ಕುಡಿಯುವ ನೀರಿನ ಕೊರತೆ ಇಲ್ಲ’ ಎಂದು ವಿವರಿಸಿದ್ದಾರೆ.

‘ಬಿತ್ತನೆ ಬೀಜದ ಆರುವರೆ ಲಕ್ಷ ಕಿಟ್ ಗಳನ್ನು ವಿತರಿಸಿದ್ದೇವೆ. 16 ಜಿಲ್ಲೆಗಳಲ್ಲಿ ಮೇವು ಖರೀದಿಗೆ ಟೆಂಡರ್ ಕರೆದಿದ್ದೇವೆ. ಸ್ಥಳೀಯ ಶಾಸಕರ ನೇತೃತ್ವದಲ್ಲಿ ತಾಲೂಕು ಮಟ್ಟದ ಕಾರ್ಯಾಚರಣೆ ಪಡೆಯನ್ನು ರಚಿಸಲಾಗಿದೆ. ಈ ಪಡೆಗಳು ಇಲ್ಲಿಯ ವರೆಗೆ 350ಕ್ಕೂ ಹೆಚ್ಚು ಸಭೆಗಳನ್ನು ನಡೆಸಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ 210 ಸಭೆಗಳನ್ನು ನಡೆಸಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಜನವರಿ 25ರ ವರೆಗೆ ಬರಪೀಡಿತ ಪ್ರದೇಶದ 29 ಲಕ್ಷ ರೈತರಿಗೆ ₹545 ಕೋಟಿ ಪರಿಹಾರ ನೀಡಲಾಗಿದೆ. ರೈತರ ಬೆಳೆಹಾನಿ ಸಮೀಕ್ಷೆಯ ನಂತರ ಇನ್ನೂ 8-9 ಲಕ್ಷ ರೈತರಿಗೆ ಪರಿಹಾರ ನೀಡಲಾಗಿದೆ. ಬೆಳೆ ಹಾನಿ ಸಮೀಕ್ಷೆಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಲಾಗಿದೆ. ಈ ದಾಖಲೀಕರಣದಲ್ಲಿ ಎದುರಾಗಿರುವ ತೊಡಕುಗಳನ್ನು ಸರಿಪಡಿಸಲಾಗಿದೆ. ಬರಪೀಡಿತ ಪ್ರದೇಶದಲ್ಲಿ ನಮ್ಮ ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಶಕ್ತಿಮೀರಿ ಪ್ರಯತ್ನ ಮಾಡುತ್ತಿದೆ. ಆದರೆ ಕೇಂದ್ರ ಸರ್ಕಾರ ಜಿದ್ದಿಗೆ ಬಿದ್ದವರಂತೆ ಪೈಸೆ ಪರಿಹಾರವನ್ನು ನೀಡದೆ ಅನ್ಯಾಯ ಮಾಡುತ್ತಿದೆ. ಈ ವೈಫಲ್ಯವನ್ನು ಮುಚ್ಚಿಹಾಕಲು ರಾಜ್ಯದ ಬಿಜೆಪಿ ನಾಯಕರು ನಮ್ಮ ಸರ್ಕಾರದ ವಿರುದ್ಧ ಹೋರಾಟದ ನಾಟಕ ಮಾಡುತ್ತಿದ್ದಾರೆ’ ಎಂದು ಸಿಎಂ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

‘ರಾಜ್ಯದ ಬಿಜೆಪಿ ನಾಯಕರಿಗೆ ಕರ್ನಾಟಕದ ನೆಲದ ಮಣ್ಣು ಮತ್ತು ನೀರಿನ ಋಣ ಇದ್ದರೆ ದೆಹಲಿಗೆ ಹೋಗಿ ಕನ್ನಡಿಗರ ಬಗ್ಗೆ ಯಾಕಿಷ್ಟು ನಿಮಗೆ ದ್ವೇಷ? ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕೇಳಬೇಕು. ಪರಿಹಾರಕ್ಕಾಗಿ ಒತ್ತಾಯಿಸಿ ಪ್ರಧಾನಿ ಕಾರ್ಯಾಲಯದ ಮುಂದೆ ಧರಣಿ ಕೂರಬೇಕು. ಇವರ ಆಟಾಟೋಪಗಳೇನಿದ್ದರೂ ರಾಜ್ಯದಲ್ಲಿ ಮಾತ್ರ, ಇಲ್ಲಿ ಎಲ್ಲರು ಹುಲಿ-ಸಿಂಹಗಳೇ, ಪ್ರಧಾನಮಂತ್ರಿ, ಗೃಹಸಚಿವರನ್ನು ಕಂಡಕೂಡಲೇ ಬಾಲ ಮುದುರಿದ ಇಲಿಗಳಾಗುತ್ತಾರೆ’ ಎಂದು ಬಿಜೆಪಿ ನಾಯಕರನ್ನು ಲೇವಡಿ ಮಾಡಿದ್ದಾರೆ.

‘ಬರಪರಿಹಾರದಲ್ಲಿ ಅನ್ಯಾಯ, ತೆರಿಗೆ ಪಾಲಿನಲ್ಲಿ ವಂಚನೆ, ಹಣಕಾಸು ಆಯೋಗದ ಅನುದಾನದಲ್ಲಿ ಮೋಸ, ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಹಣ ನೀಡದೆ ಅನ್ಯಾಯ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಒಂದೇ ಎರಡೇ? ಹೀಗಿದ್ದರೂ ರಾಜ್ಯದ 25 ಬಿಜೆಪಿ ಲೋಕಸಭಾ ಸದಸ್ಯರು ಬಾಯಿಗೆ ಬೀಗ ಹಾಕಿ ಕೂತಿದ್ದಾರೆ. ಇವರೆಲ್ಲ ಯಾವ ಮುಖ ಹೊತ್ತು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ ಕೇಳಲು ಜನರ ಬಳಿ ಹೋಗುತ್ತಾರೆ? ಇಂತಹವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆಯೇ ತಕ್ಕ ಪಾಠ ಕಲಿಸುತ್ತಾರೆ. ರೈತರಿಗೆ ದ್ರೋಹ ಬಗೆದರೆ ಯಾವ ಶ್ರೀರಾಮಚಂದ್ರನೂ ಕಾಪಾಡಲಾರ ತಿಳಿದಿರಲಿ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ; ‘ಕಾಂತರಾಜು ಆಯೋಗದ ವರದಿ ಸ್ವೀಕರಿಸುತ್ತೇನೆ…’; ಶೋಷಿತರ ಜಾಗೃತಿ ಸಮಾವೇಶದಲ್ಲಿ ಸಿಎಂ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...