Homeಮುಖಪುಟಹನುಮಧ್ವಜ ವಿವಾದ: ಪರಿಸ್ಥಿತಿ ಪ್ರಕ್ಷುಬ್ಧಗೊಳಿಸಿದ ಹಿಂದುತ್ವ ಕಾರ್ಯಕರ್ತರು; ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ

ಹನುಮಧ್ವಜ ವಿವಾದ: ಪರಿಸ್ಥಿತಿ ಪ್ರಕ್ಷುಬ್ಧಗೊಳಿಸಿದ ಹಿಂದುತ್ವ ಕಾರ್ಯಕರ್ತರು; ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ

- Advertisement -
- Advertisement -

ಮಂಡ್ಯ ಜಿಲ್ಲೆಯ ಕೆರಗೋಡಿನ ಸರ್ಕಾರಿ ಜಾಗದಲ್ಲಿ ನಿರ್ಮಿಸಿದ್ದ ಧ್ವಜಸ್ಥಂಬದಲ್ಲಿ, ನಿಯಮ ಮೀರಿ ಹನುಮಧ್ವಜ ಹಾರಿಸಿದ್ದನ್ನು ಅಧಿಕಾರಿಗಳು ತೆರವುಗೊಳಿಸಿದ್ದರು. ರಾಷ್ಟ್ರಧ್ವಜ ಮತ್ತು ಕನ್ನಡ ಧ್ವಜ ಹಾರಿಸಲು ಅನುಮತಿ ಪಡೆದಿದ್ದ ಶ್ರೀ ಗೌರಿ ಶಂಕರ ಸೇವಾ ಟ್ರಸ್ಟ್ ಪದಾಧಿಕಾರಿಗಳು ಕೇಸರಿ ಭಾವುಟ ಹಾರಿಸಿ ವಿವಾದ ಹುಟ್ಟುಹಾಕಿದ್ದಾರೆ.

ಹನುಮಧ್ವಜ ತೆರವುಗೊಳಿಸಿದ್ದನ್ನು ವಿರೋಧಿಸಿ ಬಿಜೆಪಿ-ಜೆಡಿಎಸ್ ನಾಯಕರು ಕೆರಗೋಡಿಗೆ ಲಗ್ಗೆ ಇಟ್ಟಿದ್ದು, ಗೌರಿ ಶಂಕರ ಸೇವಾ ಟ್ರಸ್ಟ್ ಕಾರ್ಯಕರ್ತರು ಮತ್ತು ಹಿಂದುತ್ವ ಕಾರ್ಯಕರ್ತರು ಮಂಡ್ಯವನ್ನು ಪ್ರಕ್ಷುಬ್ಧಗೊಳಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಧ್ವಸ್ಥಂಭದಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ.
ಹನುಮ ಧ್ವಜ ಕೆಳಗಿಳಿಸಿ, ರಾಷ್ಟ್ರಧ್ವಜ ಹಾರಿಸಿದ ತಾಲೂಕು ಅಧಿಕಾರಿಗಳ ನಡೆಗೆ ಭಾರೀ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಸದ್ಯಕ್ಕೆ ಮಂಡ್ಯದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂತಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಕೆರಗೋಡು ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಫೆ.9ರಂದು ಮಂಡ್ಯ ನಗರ ಬಂದ್‌ಗೆ ಹಿಂದೂ ಪರ ಸಂಘಟನೆಗಳು ಕರೆ ಕೊಟ್ಟಿದ್ದು, ಜನರ ಹೋರಾಟಕ್ಕೆ ಜೆಡಿಎಸ್-ಬಿಜೆಪಿ ಬೆಂಬಲ ಘೋಷಣೆ ಮಾಡಿರುವುದರಿಂದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಭಾನುವಾರ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ-ಜೆಡಿಎಸ್ ನಾಯಕರು ಭಾನುವಾರ ಕೆರಗೋಡಿನಲ್ಲಿ ಪ್ರತಿಭಟನೆ ನಡೆಸಿದರು. ಹನುಮಧ್ವಜ ಹಾರಿಸುವ ಉದ್ದೇಶದಿಂದ ಪೊಲೀಸ್ ಬ್ಯಾರಿಕೇಡ್ ಗಳನ್ನು ತಳ್ಳಿ ಮುನ್ನುಗ್ಗಿದಾಗ ಅಶೋಕ್ ಸೇರಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು, ನಂತರ ಬಿಡುಗಡೆಗೊಳಿಸಲಾಯಿತು.

ಮಂಡ್ಯ ಜಿಲ್ಲೆ ಕೆರಗೋಡು ಗ್ರಾಮಸ್ಥರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು 108 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ಹನುಮ ಧ್ವಜ ವನ್ನು ಹಾರಿಸಿದ್ದರು. ಈ ಧ್ವಜವನ್ನು ತೆರವುಗೊಳಿಸಿದ ಪೊಲೀಸರ ಕ್ರಮ ಈಗ ಟೀಕೆಗೆ ಒಳಗಾಗಿದ್ದು, ಪ್ರತಿಭಟನೆ ವ್ಯಕ್ತವಾಗುತ್ತಿದೆ.

ಬಿಜೆಪಿ-ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ-ಸಿಎಂ

‘ರಾಷ್ಟ್ರಧ್ವಜ ಹಾರಬೇಕಿದ್ದ ಜಾಗದಲ್ಲಿ ಹನುಮಧ್ವಜ ಹಾರಿಸಿರುವುದು, ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಈ ಯಾವುವೂ ಆಕಸ್ಮಿಕ ಅಲ್ಲ. ಈ ಘಟನೆ ಬಿಜೆಪಿ ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಮಂಡ್ಯ ತಾಲ್ಲೂಕು ಕೆರಗೋಡು ಗ್ರಾಮದ ಗೌರಿಶಂಕರ ಸೇವಾ ಟ್ರಸ್ಟ್ ನವರು ಕೆರಗೋಡು ರಂಗಮಂದಿರದ ಆವರಣದಲ್ಲಿ ಧ್ವಜಸ್ತಂಭ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕು, ಆ ಧ್ವಜಸ್ತಂಭವನ್ನು ಕರ್ನಾಟಕದ ಧ್ವಜ ಮತ್ತು ತ್ರಿವರ್ಣ ಧ್ವಜ ಹಾರಿಸುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡುತ್ತೇವೆ, ಜೊತೆಗೆ ಗ್ರಾಮ ಪಂಚಾಯತಿಯ ಷರತ್ತುಗಳಿಗೆ ಬದ್ಧರಾಗಿರುವುದಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದರು’ ಅವರ ಮನವಿಯ ಮೇರೆಗೆ ಗ್ರಾಮ ಪಂಚಾಯತಿಯವರು ಧ್ವಜಸ್ತಂಭ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆ. ಆ ನಂತರ ಅಲ್ಲಿ ಹಾರಿಸಲಾಗಿದ್ದ ರಾಷ್ಟ್ರಧ್ವಜವನ್ನು ಕೆಳಗಿಳಿಸಿ ಆ ಜಾಗದಲ್ಲಿ ಹನುಮಧ್ವಜವನ್ನು ಹಾರಿಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

‘ನಿಯಮ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಧ್ವಜ ಇಳಿಸುವಂತೆ ಜನರಿಗೆ ತಿಳಿ ಹೇಳಿದ್ದಾರೆ. ಆದರೆ ಸ್ಥಳೀಯರು ಪೊಲೀಸರ ಹಾಗೂ ಜಿಲ್ಲಾಡಳಿತದ ಮನವಿಯನ್ನು ತಿರಸ್ಕರಿಸಿ, ಪ್ರತಿಭಟನೆ, ಸಂಘರ್ಷಕ್ಕೆ ಇಳಿಯುವ ಮೂಲಕ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವಂತೆ ಮಾಡಿದ್ದಾರೆ. ರಾಷ್ಟ್ರಧ್ವಜ ಹಾರಬೇಕಿದ್ದ ಜಾಗದಲ್ಲಿ ಹನುಮಧ್ವಜ ಹಾರಿಸಿರುವುದು, ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಈ ಯಾವುವೂ ಆಕಸ್ಮಿಕ ಅಲ್ಲ. ಈ ಘಟನೆ ಬಿಜೆಪಿ ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ. ರಾಜ್ಯ ಸರ್ಕಾರದ ವಿರುದ್ಧ ವ್ಯವಸ್ಥಿತವಾಗಿ ಜನರನ್ನು ಎತ್ತಿಕಟ್ಟುವ ಉದ್ದೇಶದಿಂದಲೇ ಇಂತಹದ್ದೊಂದು ಸ್ಥಿತಿ ನಿರ್ಮಾಣ ಮಾಡಲಾಗಿದೆ. ಮಂಡ್ಯದಲ್ಲಿ ಕೋಮುಗಲಭೆ ಎಬ್ಬಿಸುವ ಸಂಚು ರೂಪಿಸಿರುವುದು ಬಿಜೆಪಿ ನಾಯಕರು ಲೋಕಸಭಾ ಚುನಾವಣೆಗೆ ನಡೆಸಿರುವ ತಯಾರಿಯಾಗಿದೆ ಎಂಬುದರಲ್ಲಿ ಅನುಮಾನವೇ ಇಲ್ಲ’ ಎಂದು ಹೇಳಿದ್ದಾರೆ.

‘ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ನಾವು ಯಾವುದೇ ನಿರ್ದಿಷ್ಟ ಜಾತಿ, ಧರ್ಮ, ಸಮುದಾಯದ ವಿರುದ್ಧವಿಲ್ಲ, ನಮ್ಮದು ಸಂವಿಧಾನಪರವಾದ ನಿಲುವು. ಬಿಜೆಪಿ ನಾಯಕರ ಮಾತುಗಳಿಗೆ ಮರುಳಾಗಿ, ಕಾನೂನು ಕೈಗೆತ್ತಿಕೊಳ್ಳುವ ತಪ್ಪನ್ನು ಜನತೆ ಮಾಡಬಾರದು. ಸಂವಿಧಾನ, ಕಾನೂನಿಗೆ ಗೌರವ ಕೊಡಬೇಕಿರುವುದು ನಮ್ಮೆಲ್ಲರ ಕರ್ತವ್ಯ. ಚುನಾವಣೆ ಇನ್ನಷ್ಟು ಸಮೀಪಿಸುತ್ತಿದ್ದಂತೆ ಬಿಜೆಪಿ ಗಲಭೆ ಸೃಷ್ಟಿಸುವ, ಶಾಂತಿಗೆ ಭಂಗ ತರುವ ಪ್ರಯತ್ನವನ್ನು ಖಂಡಿತಾ ಮಾಡಲಿದೆ. ಪ್ರಜ್ಞಾವಂತ ಕನ್ನಡಿಗರು ಶಾಂತಿ, ಸಂಯಮದ ಮೂಲಕ ಕೋಮುವಾದಿಗಳ ಷಡ್ಯಂತ್ರವನ್ನು ವಿಫಲಗೊಳಿಸಬೇಕು ಎಂದು ಮನವಿ ಮಾಡುತ್ತೇನೆ’ ಎಂದಿದ್ದಾರೆ.

ಇದನ್ನೂ ಓದಿ; ರೈತ ವಿರೋಧಿ ಬಿಜೆಪಿ ನಾಯಕರು ಸುರಿಸುವ ಕಣ್ಣೀರು ಮೊಸಳೆಯದ್ದು: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...