Homeಮುಖಪುಟಹನುಮಧ್ವಜ ವಿವಾದ: ಪರಿಸ್ಥಿತಿ ಪ್ರಕ್ಷುಬ್ಧಗೊಳಿಸಿದ ಹಿಂದುತ್ವ ಕಾರ್ಯಕರ್ತರು; ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ

ಹನುಮಧ್ವಜ ವಿವಾದ: ಪರಿಸ್ಥಿತಿ ಪ್ರಕ್ಷುಬ್ಧಗೊಳಿಸಿದ ಹಿಂದುತ್ವ ಕಾರ್ಯಕರ್ತರು; ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ

- Advertisement -
- Advertisement -

ಮಂಡ್ಯ ಜಿಲ್ಲೆಯ ಕೆರಗೋಡಿನ ಸರ್ಕಾರಿ ಜಾಗದಲ್ಲಿ ನಿರ್ಮಿಸಿದ್ದ ಧ್ವಜಸ್ಥಂಬದಲ್ಲಿ, ನಿಯಮ ಮೀರಿ ಹನುಮಧ್ವಜ ಹಾರಿಸಿದ್ದನ್ನು ಅಧಿಕಾರಿಗಳು ತೆರವುಗೊಳಿಸಿದ್ದರು. ರಾಷ್ಟ್ರಧ್ವಜ ಮತ್ತು ಕನ್ನಡ ಧ್ವಜ ಹಾರಿಸಲು ಅನುಮತಿ ಪಡೆದಿದ್ದ ಶ್ರೀ ಗೌರಿ ಶಂಕರ ಸೇವಾ ಟ್ರಸ್ಟ್ ಪದಾಧಿಕಾರಿಗಳು ಕೇಸರಿ ಭಾವುಟ ಹಾರಿಸಿ ವಿವಾದ ಹುಟ್ಟುಹಾಕಿದ್ದಾರೆ.

ಹನುಮಧ್ವಜ ತೆರವುಗೊಳಿಸಿದ್ದನ್ನು ವಿರೋಧಿಸಿ ಬಿಜೆಪಿ-ಜೆಡಿಎಸ್ ನಾಯಕರು ಕೆರಗೋಡಿಗೆ ಲಗ್ಗೆ ಇಟ್ಟಿದ್ದು, ಗೌರಿ ಶಂಕರ ಸೇವಾ ಟ್ರಸ್ಟ್ ಕಾರ್ಯಕರ್ತರು ಮತ್ತು ಹಿಂದುತ್ವ ಕಾರ್ಯಕರ್ತರು ಮಂಡ್ಯವನ್ನು ಪ್ರಕ್ಷುಬ್ಧಗೊಳಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಧ್ವಸ್ಥಂಭದಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ.
ಹನುಮ ಧ್ವಜ ಕೆಳಗಿಳಿಸಿ, ರಾಷ್ಟ್ರಧ್ವಜ ಹಾರಿಸಿದ ತಾಲೂಕು ಅಧಿಕಾರಿಗಳ ನಡೆಗೆ ಭಾರೀ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಸದ್ಯಕ್ಕೆ ಮಂಡ್ಯದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂತಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಕೆರಗೋಡು ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಫೆ.9ರಂದು ಮಂಡ್ಯ ನಗರ ಬಂದ್‌ಗೆ ಹಿಂದೂ ಪರ ಸಂಘಟನೆಗಳು ಕರೆ ಕೊಟ್ಟಿದ್ದು, ಜನರ ಹೋರಾಟಕ್ಕೆ ಜೆಡಿಎಸ್-ಬಿಜೆಪಿ ಬೆಂಬಲ ಘೋಷಣೆ ಮಾಡಿರುವುದರಿಂದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಭಾನುವಾರ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ-ಜೆಡಿಎಸ್ ನಾಯಕರು ಭಾನುವಾರ ಕೆರಗೋಡಿನಲ್ಲಿ ಪ್ರತಿಭಟನೆ ನಡೆಸಿದರು. ಹನುಮಧ್ವಜ ಹಾರಿಸುವ ಉದ್ದೇಶದಿಂದ ಪೊಲೀಸ್ ಬ್ಯಾರಿಕೇಡ್ ಗಳನ್ನು ತಳ್ಳಿ ಮುನ್ನುಗ್ಗಿದಾಗ ಅಶೋಕ್ ಸೇರಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು, ನಂತರ ಬಿಡುಗಡೆಗೊಳಿಸಲಾಯಿತು.

ಮಂಡ್ಯ ಜಿಲ್ಲೆ ಕೆರಗೋಡು ಗ್ರಾಮಸ್ಥರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು 108 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ಹನುಮ ಧ್ವಜ ವನ್ನು ಹಾರಿಸಿದ್ದರು. ಈ ಧ್ವಜವನ್ನು ತೆರವುಗೊಳಿಸಿದ ಪೊಲೀಸರ ಕ್ರಮ ಈಗ ಟೀಕೆಗೆ ಒಳಗಾಗಿದ್ದು, ಪ್ರತಿಭಟನೆ ವ್ಯಕ್ತವಾಗುತ್ತಿದೆ.

ಬಿಜೆಪಿ-ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ-ಸಿಎಂ

‘ರಾಷ್ಟ್ರಧ್ವಜ ಹಾರಬೇಕಿದ್ದ ಜಾಗದಲ್ಲಿ ಹನುಮಧ್ವಜ ಹಾರಿಸಿರುವುದು, ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಈ ಯಾವುವೂ ಆಕಸ್ಮಿಕ ಅಲ್ಲ. ಈ ಘಟನೆ ಬಿಜೆಪಿ ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಮಂಡ್ಯ ತಾಲ್ಲೂಕು ಕೆರಗೋಡು ಗ್ರಾಮದ ಗೌರಿಶಂಕರ ಸೇವಾ ಟ್ರಸ್ಟ್ ನವರು ಕೆರಗೋಡು ರಂಗಮಂದಿರದ ಆವರಣದಲ್ಲಿ ಧ್ವಜಸ್ತಂಭ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕು, ಆ ಧ್ವಜಸ್ತಂಭವನ್ನು ಕರ್ನಾಟಕದ ಧ್ವಜ ಮತ್ತು ತ್ರಿವರ್ಣ ಧ್ವಜ ಹಾರಿಸುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡುತ್ತೇವೆ, ಜೊತೆಗೆ ಗ್ರಾಮ ಪಂಚಾಯತಿಯ ಷರತ್ತುಗಳಿಗೆ ಬದ್ಧರಾಗಿರುವುದಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದರು’ ಅವರ ಮನವಿಯ ಮೇರೆಗೆ ಗ್ರಾಮ ಪಂಚಾಯತಿಯವರು ಧ್ವಜಸ್ತಂಭ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆ. ಆ ನಂತರ ಅಲ್ಲಿ ಹಾರಿಸಲಾಗಿದ್ದ ರಾಷ್ಟ್ರಧ್ವಜವನ್ನು ಕೆಳಗಿಳಿಸಿ ಆ ಜಾಗದಲ್ಲಿ ಹನುಮಧ್ವಜವನ್ನು ಹಾರಿಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

‘ನಿಯಮ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಧ್ವಜ ಇಳಿಸುವಂತೆ ಜನರಿಗೆ ತಿಳಿ ಹೇಳಿದ್ದಾರೆ. ಆದರೆ ಸ್ಥಳೀಯರು ಪೊಲೀಸರ ಹಾಗೂ ಜಿಲ್ಲಾಡಳಿತದ ಮನವಿಯನ್ನು ತಿರಸ್ಕರಿಸಿ, ಪ್ರತಿಭಟನೆ, ಸಂಘರ್ಷಕ್ಕೆ ಇಳಿಯುವ ಮೂಲಕ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವಂತೆ ಮಾಡಿದ್ದಾರೆ. ರಾಷ್ಟ್ರಧ್ವಜ ಹಾರಬೇಕಿದ್ದ ಜಾಗದಲ್ಲಿ ಹನುಮಧ್ವಜ ಹಾರಿಸಿರುವುದು, ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಈ ಯಾವುವೂ ಆಕಸ್ಮಿಕ ಅಲ್ಲ. ಈ ಘಟನೆ ಬಿಜೆಪಿ ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ. ರಾಜ್ಯ ಸರ್ಕಾರದ ವಿರುದ್ಧ ವ್ಯವಸ್ಥಿತವಾಗಿ ಜನರನ್ನು ಎತ್ತಿಕಟ್ಟುವ ಉದ್ದೇಶದಿಂದಲೇ ಇಂತಹದ್ದೊಂದು ಸ್ಥಿತಿ ನಿರ್ಮಾಣ ಮಾಡಲಾಗಿದೆ. ಮಂಡ್ಯದಲ್ಲಿ ಕೋಮುಗಲಭೆ ಎಬ್ಬಿಸುವ ಸಂಚು ರೂಪಿಸಿರುವುದು ಬಿಜೆಪಿ ನಾಯಕರು ಲೋಕಸಭಾ ಚುನಾವಣೆಗೆ ನಡೆಸಿರುವ ತಯಾರಿಯಾಗಿದೆ ಎಂಬುದರಲ್ಲಿ ಅನುಮಾನವೇ ಇಲ್ಲ’ ಎಂದು ಹೇಳಿದ್ದಾರೆ.

‘ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ನಾವು ಯಾವುದೇ ನಿರ್ದಿಷ್ಟ ಜಾತಿ, ಧರ್ಮ, ಸಮುದಾಯದ ವಿರುದ್ಧವಿಲ್ಲ, ನಮ್ಮದು ಸಂವಿಧಾನಪರವಾದ ನಿಲುವು. ಬಿಜೆಪಿ ನಾಯಕರ ಮಾತುಗಳಿಗೆ ಮರುಳಾಗಿ, ಕಾನೂನು ಕೈಗೆತ್ತಿಕೊಳ್ಳುವ ತಪ್ಪನ್ನು ಜನತೆ ಮಾಡಬಾರದು. ಸಂವಿಧಾನ, ಕಾನೂನಿಗೆ ಗೌರವ ಕೊಡಬೇಕಿರುವುದು ನಮ್ಮೆಲ್ಲರ ಕರ್ತವ್ಯ. ಚುನಾವಣೆ ಇನ್ನಷ್ಟು ಸಮೀಪಿಸುತ್ತಿದ್ದಂತೆ ಬಿಜೆಪಿ ಗಲಭೆ ಸೃಷ್ಟಿಸುವ, ಶಾಂತಿಗೆ ಭಂಗ ತರುವ ಪ್ರಯತ್ನವನ್ನು ಖಂಡಿತಾ ಮಾಡಲಿದೆ. ಪ್ರಜ್ಞಾವಂತ ಕನ್ನಡಿಗರು ಶಾಂತಿ, ಸಂಯಮದ ಮೂಲಕ ಕೋಮುವಾದಿಗಳ ಷಡ್ಯಂತ್ರವನ್ನು ವಿಫಲಗೊಳಿಸಬೇಕು ಎಂದು ಮನವಿ ಮಾಡುತ್ತೇನೆ’ ಎಂದಿದ್ದಾರೆ.

ಇದನ್ನೂ ಓದಿ; ರೈತ ವಿರೋಧಿ ಬಿಜೆಪಿ ನಾಯಕರು ಸುರಿಸುವ ಕಣ್ಣೀರು ಮೊಸಳೆಯದ್ದು: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...