Homeಫ್ಯಾಕ್ಟ್‌ಚೆಕ್Fact Check: ಬುರ್ಖಾಧಾರಿ ಮಹಿಳೆಯಿಂದ ಬಾಲಕನ ಅಪಹರಣವೆಂದು ಸುಳ್ಳು ವಿಡಿಯೋ ಹಂಚಿಕೆ

Fact Check: ಬುರ್ಖಾಧಾರಿ ಮಹಿಳೆಯಿಂದ ಬಾಲಕನ ಅಪಹರಣವೆಂದು ಸುಳ್ಳು ವಿಡಿಯೋ ಹಂಚಿಕೆ

- Advertisement -
- Advertisement -

ಬುರ್ಖಾಧಾರಿ ಮಹಿಳೆಯೊಬ್ಬರು ರಸ್ತೆ ಬದಿ ಕುಳಿತಿದ್ದ ಬಾಲಕನನ್ನು ಅಪಹರಿಸಿದ್ದಾರೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಸುಮಾರು 28 ಸೆಕೆಂಡ್‌ಗಳ ಈ ವಿಡಿಯೋದಲ್ಲಿ ಬುರ್ಖಾಧಾರಿ ಮಹಿಳೆ ಮತ್ತೊಬ್ಬನ ಸಹಾಯದೊಂದಿಗೆ ಬಾಲಕನನ್ನು ಎತ್ತಿ ಆಟೋದಲ್ಲಿ ಹಾಕಿಕೊಂಡು ಕರೆದೊಯ್ದ ದೃಶ್ಯವಿದೆ. ಇದನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ದ್ವೇಷ ಹರಡುವ ಪ್ರಯತ್ನ ಮಾಡಲಾಗಿದೆ.

‘ನಾವು ಎಲ್ಲಾ ಕಡೆಯಿಂದಲೂ ಎಚ್ಚರವಾಗಿರಬೇಕು’ ಎಂಬ ಶೀರ್ಷಿಕೆಯಲ್ಲಿ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗ್ತಿದೆ.

‘ಅಶುತೋಷ್ ಸಿಂಗ್ ಪಾಮರ್’ ಎಂಬ ಫೇಸ್‌ಬುಕ್ ಬಳಕೆದಾರ ಈ ವಿಡಿಯೋ ಹಂಚಿಕೊಂಡಿದ್ದು, ” ನಾವು ನಾಲ್ಕೂ ಕಡೆಗಳಿಂದ ಎಚ್ಚರವಾಗಿರಬೇಕು. ಅಪಾಯ ನಾವು ಊಹಿಸದಕ್ಕಿಂತ ದೊಡ್ಡದಾಗಿರುತ್ತದೆ” ಎಂದು ಬರೆದುಕೊಂಡಿದ್ದಾರೆ.

ಸದಾ ಕೋಮು ದ್ವೇಷದ ಸುದ್ದಿಗಳನ್ನೇ ಹರಡುವ ಸುದರ್ಶನ್‌ ನ್ಯೂಸ್‌ನ ಸಂತೋಷ್ ಚೌವ್ಹಾಣ್ ಕೂಡ ಈ ವಿಡಿಯೋ ಹಂಚಿಕೊಂಡಿದ್ದು, “ನಾವು ಇಂತಹ ವ್ಯಕ್ತಿಗಳಿಂದ ಮಕ್ಕಳ ಮೇಲೆ ನಿಗಾ ಇಡಬೇಕು” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಮೇಲೆ ತಿಳಿಸಿದ ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಅದರ ಮೂಲವನ್ನು ಹುಡುಕಾಡಿದ್ದೇವೆ. ಮೊದಲು ಗೂಗಲ್‌ನಲ್ಲಿ ಈ ರೀತಿಯ ಘಟನೆಯ ಸುದ್ದಿ ಪ್ರಕಟಗೊಂಡಿದೆಯೇ ಎಂದು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಜುಲೈ 7,2022ರಂದು ‘ದಿ ಕ್ವಿಂಟ್ ವೆಬ್‌ಸೈಟ್‌’ ಈ ಕುರಿತು ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ. “Video Showing Burqa-Clad Woman Kidnapping Child Is Staged and From Egypt” ಎಂಬ ಶೀರ್ಷಿಕೆಯ ಸುದ್ದಿಯಲ್ಲಿ, ಬುರ್ಖಾಧಾರಿ ಮಹಿಳೆ ಬಾಲಕನನ್ನು ಅಪಹರಿಸಿದ್ದಾರೆ ಎನ್ನಲಾದ ವಿಡಿಯೋ ಈಜಿಫ್ಟ್‌ ದೇಶದ್ದು ಮತ್ತು ಇದು ಸ್ಕ್ರಿಪ್ಟೆಡ್ ವಿಡಿಯೋ ಎಂದು ತಿಳಿಸಲಾಗಿದೆ.

ದಿ ಕ್ವಿಂಟ್ ಸುದ್ದಿ ಲಿಂಕ್ 

ನಾವು ಇನ್ನಷ್ಟು ಸುದ್ದಿ ಮೂಲಗಳನ್ನು ಹುಡುಕಿದಾಗ, ಈಜಿಫ್ಟ್‌ನ ಮಾಧ್ಯಮಗಳು ಈ ವಿಡಿಯೋ ಕುರಿತು ಸುದ್ದಿ ಮಾಡಿರುವುದು ಕಂಡು ಬಂದಿದೆ.

ಈಜಿಫ್ಟ್‌ನ ‘El Watan’ಎಂಬ ವೆಬ್‌ಸೈಟ್‌ 28 ಜೂನ್‌ 2022ರಂದು ಈ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿದ್ದು, ಈಜಿಫ್ಟ್‌ನ ಸೋಹಾಗ್‌ ಗೌವರ್ನರೇಟ್‌ ಬುರ್ಖಾಧಾರಿ ಮಹಿಳೆ ಬಾಲಕನನ್ನು ಅಪಹರಿಸಿದ ರೀತಿಯ ವಿಡಿಯೋ ಕ್ರಿಯೇಟ್‌ ಮಾಡಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಲ್ಲಿ ಬರೆಯಲಾಗಿದೆ.

ಅಲ್‌ ವತನ್ ಸುದ್ದಿಯ ಲಿಂಕ್ 

ಈಜಿಫ್ಟ್‌ನ ಆಂತರಿಕ ವ್ಯವಹಾರಗಳ ಸಚಿವಾಲಯ 29 ಜೂನ್ 2022ರಂದು ವೈರಲ್‌ ವಿಡಿಯೋವನ್ನು ಹಂಚಿಕೊಂಡಿದ್ದು, ಸೋಹಾಗ್‌ ಗೌವರ್ನರೇಟ್‌ನಲ್ಲಿ ಬುರ್ಖಾಧಾರಿ ಮಹಿಳೆಯೊಬ್ಬರು ಚುಚ್ಚುಮದ್ದು ಚುಚ್ಚಿ ಬಾಲಕನನ್ನು ಅಪಹರಿಸಿದ್ದಾರೆ ಎಂಬ ವಿಡಿಯೋ ಹರಿದಾಡುತ್ತಿದೆ. ಈ ಕುರಿತು ಪರಿಶೀಲನೆ ನಡೆಸಿದಾಗ ಇದು ಕ್ರಿಯೇಟೆಡ್ ವಿಡಿಯೋ ಎಂದು ಗೊತ್ತಾಗಿದೆ. ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಬುರ್ಖಾಧಾರಿ ಮಹಿಳೆ ಎನ್ನಲಾದ ವ್ಯಕ್ತಿಯನ್ನು ನೀವು ವಿಡಿಯೋದಲ್ಲಿ ನೋಡಬಹುದು ಎಂದು ತಿಳಿಸಿದೆ.

ಈಜಿಫ್ಟ್‌ ಆಂತರಿಕ ವ್ಯವಹಾರಗಳ ಸಚಿವಾಲಯದ ಇನ್‌ಸ್ಟಾಗ್ರಾಂ ಲಿಂಕ್ 

ಲಭ್ಯ ಮೂಲಗಳ ಮೂಲಕ ನಾವು ನಡೆಸಿದ ಪರಿಶೀಲನೆಯಲ್ಲಿ ವೈರಲ್ ವಿಡಿಯೋ ಭಾರತದಲ್ಲ ಈಜಿಫ್ಟ್‌ನದ್ದು. ಸಾಮಾಜಿಕ ಜಾಲತಾಣದ ಲೈಕ್‌, ಕಮೆಂಟ್‌ಗೋಸ್ಕರ ಈಜಿಫ್ಟ್‌ನ ಸೋಹಾಗ್‌ ಗೌವರ್ನರೇಟ್‌ನ ನಾಲ್ವರು ಯುವಕರು ಸೃಷ್ಟಿಸಿದ ವಿಡಿಯೋ ಇದು ಎಂದು ತಿಳಿದು ಬಂದಿದೆ. ಅಲ್ಲದೆ, ಈ ವಿಡಿಯೋ ಈ ಹಿಂದೆಯೇ ಸುಳ್ಳು ಹೆಸರಿನಲ್ಲಿ ವೈರಲ್ ಆಗಿತ್ತು. ಈಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿ: Fact Check: ನೌಕಾಪಡೆ ಸಿಬ್ಬಂದಿ ನೀರಿನಾಳದಲ್ಲಿ ಕೇಸರಿ ಧ್ವಜ ಹಾರಿಸಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...