Homeಫ್ಯಾಕ್ಟ್‌ಚೆಕ್Fact Check: ಬುರ್ಖಾಧಾರಿ ಮಹಿಳೆಯಿಂದ ಬಾಲಕನ ಅಪಹರಣವೆಂದು ಸುಳ್ಳು ವಿಡಿಯೋ ಹಂಚಿಕೆ

Fact Check: ಬುರ್ಖಾಧಾರಿ ಮಹಿಳೆಯಿಂದ ಬಾಲಕನ ಅಪಹರಣವೆಂದು ಸುಳ್ಳು ವಿಡಿಯೋ ಹಂಚಿಕೆ

- Advertisement -
- Advertisement -

ಬುರ್ಖಾಧಾರಿ ಮಹಿಳೆಯೊಬ್ಬರು ರಸ್ತೆ ಬದಿ ಕುಳಿತಿದ್ದ ಬಾಲಕನನ್ನು ಅಪಹರಿಸಿದ್ದಾರೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಸುಮಾರು 28 ಸೆಕೆಂಡ್‌ಗಳ ಈ ವಿಡಿಯೋದಲ್ಲಿ ಬುರ್ಖಾಧಾರಿ ಮಹಿಳೆ ಮತ್ತೊಬ್ಬನ ಸಹಾಯದೊಂದಿಗೆ ಬಾಲಕನನ್ನು ಎತ್ತಿ ಆಟೋದಲ್ಲಿ ಹಾಕಿಕೊಂಡು ಕರೆದೊಯ್ದ ದೃಶ್ಯವಿದೆ. ಇದನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ದ್ವೇಷ ಹರಡುವ ಪ್ರಯತ್ನ ಮಾಡಲಾಗಿದೆ.

‘ನಾವು ಎಲ್ಲಾ ಕಡೆಯಿಂದಲೂ ಎಚ್ಚರವಾಗಿರಬೇಕು’ ಎಂಬ ಶೀರ್ಷಿಕೆಯಲ್ಲಿ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗ್ತಿದೆ.

‘ಅಶುತೋಷ್ ಸಿಂಗ್ ಪಾಮರ್’ ಎಂಬ ಫೇಸ್‌ಬುಕ್ ಬಳಕೆದಾರ ಈ ವಿಡಿಯೋ ಹಂಚಿಕೊಂಡಿದ್ದು, ” ನಾವು ನಾಲ್ಕೂ ಕಡೆಗಳಿಂದ ಎಚ್ಚರವಾಗಿರಬೇಕು. ಅಪಾಯ ನಾವು ಊಹಿಸದಕ್ಕಿಂತ ದೊಡ್ಡದಾಗಿರುತ್ತದೆ” ಎಂದು ಬರೆದುಕೊಂಡಿದ್ದಾರೆ.

ಸದಾ ಕೋಮು ದ್ವೇಷದ ಸುದ್ದಿಗಳನ್ನೇ ಹರಡುವ ಸುದರ್ಶನ್‌ ನ್ಯೂಸ್‌ನ ಸಂತೋಷ್ ಚೌವ್ಹಾಣ್ ಕೂಡ ಈ ವಿಡಿಯೋ ಹಂಚಿಕೊಂಡಿದ್ದು, “ನಾವು ಇಂತಹ ವ್ಯಕ್ತಿಗಳಿಂದ ಮಕ್ಕಳ ಮೇಲೆ ನಿಗಾ ಇಡಬೇಕು” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಮೇಲೆ ತಿಳಿಸಿದ ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಅದರ ಮೂಲವನ್ನು ಹುಡುಕಾಡಿದ್ದೇವೆ. ಮೊದಲು ಗೂಗಲ್‌ನಲ್ಲಿ ಈ ರೀತಿಯ ಘಟನೆಯ ಸುದ್ದಿ ಪ್ರಕಟಗೊಂಡಿದೆಯೇ ಎಂದು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಜುಲೈ 7,2022ರಂದು ‘ದಿ ಕ್ವಿಂಟ್ ವೆಬ್‌ಸೈಟ್‌’ ಈ ಕುರಿತು ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ. “Video Showing Burqa-Clad Woman Kidnapping Child Is Staged and From Egypt” ಎಂಬ ಶೀರ್ಷಿಕೆಯ ಸುದ್ದಿಯಲ್ಲಿ, ಬುರ್ಖಾಧಾರಿ ಮಹಿಳೆ ಬಾಲಕನನ್ನು ಅಪಹರಿಸಿದ್ದಾರೆ ಎನ್ನಲಾದ ವಿಡಿಯೋ ಈಜಿಫ್ಟ್‌ ದೇಶದ್ದು ಮತ್ತು ಇದು ಸ್ಕ್ರಿಪ್ಟೆಡ್ ವಿಡಿಯೋ ಎಂದು ತಿಳಿಸಲಾಗಿದೆ.

ದಿ ಕ್ವಿಂಟ್ ಸುದ್ದಿ ಲಿಂಕ್ 

ನಾವು ಇನ್ನಷ್ಟು ಸುದ್ದಿ ಮೂಲಗಳನ್ನು ಹುಡುಕಿದಾಗ, ಈಜಿಫ್ಟ್‌ನ ಮಾಧ್ಯಮಗಳು ಈ ವಿಡಿಯೋ ಕುರಿತು ಸುದ್ದಿ ಮಾಡಿರುವುದು ಕಂಡು ಬಂದಿದೆ.

ಈಜಿಫ್ಟ್‌ನ ‘El Watan’ಎಂಬ ವೆಬ್‌ಸೈಟ್‌ 28 ಜೂನ್‌ 2022ರಂದು ಈ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿದ್ದು, ಈಜಿಫ್ಟ್‌ನ ಸೋಹಾಗ್‌ ಗೌವರ್ನರೇಟ್‌ ಬುರ್ಖಾಧಾರಿ ಮಹಿಳೆ ಬಾಲಕನನ್ನು ಅಪಹರಿಸಿದ ರೀತಿಯ ವಿಡಿಯೋ ಕ್ರಿಯೇಟ್‌ ಮಾಡಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಲ್ಲಿ ಬರೆಯಲಾಗಿದೆ.

ಅಲ್‌ ವತನ್ ಸುದ್ದಿಯ ಲಿಂಕ್ 

ಈಜಿಫ್ಟ್‌ನ ಆಂತರಿಕ ವ್ಯವಹಾರಗಳ ಸಚಿವಾಲಯ 29 ಜೂನ್ 2022ರಂದು ವೈರಲ್‌ ವಿಡಿಯೋವನ್ನು ಹಂಚಿಕೊಂಡಿದ್ದು, ಸೋಹಾಗ್‌ ಗೌವರ್ನರೇಟ್‌ನಲ್ಲಿ ಬುರ್ಖಾಧಾರಿ ಮಹಿಳೆಯೊಬ್ಬರು ಚುಚ್ಚುಮದ್ದು ಚುಚ್ಚಿ ಬಾಲಕನನ್ನು ಅಪಹರಿಸಿದ್ದಾರೆ ಎಂಬ ವಿಡಿಯೋ ಹರಿದಾಡುತ್ತಿದೆ. ಈ ಕುರಿತು ಪರಿಶೀಲನೆ ನಡೆಸಿದಾಗ ಇದು ಕ್ರಿಯೇಟೆಡ್ ವಿಡಿಯೋ ಎಂದು ಗೊತ್ತಾಗಿದೆ. ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಬುರ್ಖಾಧಾರಿ ಮಹಿಳೆ ಎನ್ನಲಾದ ವ್ಯಕ್ತಿಯನ್ನು ನೀವು ವಿಡಿಯೋದಲ್ಲಿ ನೋಡಬಹುದು ಎಂದು ತಿಳಿಸಿದೆ.

ಈಜಿಫ್ಟ್‌ ಆಂತರಿಕ ವ್ಯವಹಾರಗಳ ಸಚಿವಾಲಯದ ಇನ್‌ಸ್ಟಾಗ್ರಾಂ ಲಿಂಕ್ 

ಲಭ್ಯ ಮೂಲಗಳ ಮೂಲಕ ನಾವು ನಡೆಸಿದ ಪರಿಶೀಲನೆಯಲ್ಲಿ ವೈರಲ್ ವಿಡಿಯೋ ಭಾರತದಲ್ಲ ಈಜಿಫ್ಟ್‌ನದ್ದು. ಸಾಮಾಜಿಕ ಜಾಲತಾಣದ ಲೈಕ್‌, ಕಮೆಂಟ್‌ಗೋಸ್ಕರ ಈಜಿಫ್ಟ್‌ನ ಸೋಹಾಗ್‌ ಗೌವರ್ನರೇಟ್‌ನ ನಾಲ್ವರು ಯುವಕರು ಸೃಷ್ಟಿಸಿದ ವಿಡಿಯೋ ಇದು ಎಂದು ತಿಳಿದು ಬಂದಿದೆ. ಅಲ್ಲದೆ, ಈ ವಿಡಿಯೋ ಈ ಹಿಂದೆಯೇ ಸುಳ್ಳು ಹೆಸರಿನಲ್ಲಿ ವೈರಲ್ ಆಗಿತ್ತು. ಈಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿ: Fact Check: ನೌಕಾಪಡೆ ಸಿಬ್ಬಂದಿ ನೀರಿನಾಳದಲ್ಲಿ ಕೇಸರಿ ಧ್ವಜ ಹಾರಿಸಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....