Homeಫ್ಯಾಕ್ಟ್‌ಚೆಕ್Fact Check: ಬುರ್ಖಾಧಾರಿ ಮಹಿಳೆಯಿಂದ ಬಾಲಕನ ಅಪಹರಣವೆಂದು ಸುಳ್ಳು ವಿಡಿಯೋ ಹಂಚಿಕೆ

Fact Check: ಬುರ್ಖಾಧಾರಿ ಮಹಿಳೆಯಿಂದ ಬಾಲಕನ ಅಪಹರಣವೆಂದು ಸುಳ್ಳು ವಿಡಿಯೋ ಹಂಚಿಕೆ

- Advertisement -
- Advertisement -

ಬುರ್ಖಾಧಾರಿ ಮಹಿಳೆಯೊಬ್ಬರು ರಸ್ತೆ ಬದಿ ಕುಳಿತಿದ್ದ ಬಾಲಕನನ್ನು ಅಪಹರಿಸಿದ್ದಾರೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಸುಮಾರು 28 ಸೆಕೆಂಡ್‌ಗಳ ಈ ವಿಡಿಯೋದಲ್ಲಿ ಬುರ್ಖಾಧಾರಿ ಮಹಿಳೆ ಮತ್ತೊಬ್ಬನ ಸಹಾಯದೊಂದಿಗೆ ಬಾಲಕನನ್ನು ಎತ್ತಿ ಆಟೋದಲ್ಲಿ ಹಾಕಿಕೊಂಡು ಕರೆದೊಯ್ದ ದೃಶ್ಯವಿದೆ. ಇದನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ದ್ವೇಷ ಹರಡುವ ಪ್ರಯತ್ನ ಮಾಡಲಾಗಿದೆ.

‘ನಾವು ಎಲ್ಲಾ ಕಡೆಯಿಂದಲೂ ಎಚ್ಚರವಾಗಿರಬೇಕು’ ಎಂಬ ಶೀರ್ಷಿಕೆಯಲ್ಲಿ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗ್ತಿದೆ.

‘ಅಶುತೋಷ್ ಸಿಂಗ್ ಪಾಮರ್’ ಎಂಬ ಫೇಸ್‌ಬುಕ್ ಬಳಕೆದಾರ ಈ ವಿಡಿಯೋ ಹಂಚಿಕೊಂಡಿದ್ದು, ” ನಾವು ನಾಲ್ಕೂ ಕಡೆಗಳಿಂದ ಎಚ್ಚರವಾಗಿರಬೇಕು. ಅಪಾಯ ನಾವು ಊಹಿಸದಕ್ಕಿಂತ ದೊಡ್ಡದಾಗಿರುತ್ತದೆ” ಎಂದು ಬರೆದುಕೊಂಡಿದ್ದಾರೆ.

ಸದಾ ಕೋಮು ದ್ವೇಷದ ಸುದ್ದಿಗಳನ್ನೇ ಹರಡುವ ಸುದರ್ಶನ್‌ ನ್ಯೂಸ್‌ನ ಸಂತೋಷ್ ಚೌವ್ಹಾಣ್ ಕೂಡ ಈ ವಿಡಿಯೋ ಹಂಚಿಕೊಂಡಿದ್ದು, “ನಾವು ಇಂತಹ ವ್ಯಕ್ತಿಗಳಿಂದ ಮಕ್ಕಳ ಮೇಲೆ ನಿಗಾ ಇಡಬೇಕು” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಮೇಲೆ ತಿಳಿಸಿದ ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಅದರ ಮೂಲವನ್ನು ಹುಡುಕಾಡಿದ್ದೇವೆ. ಮೊದಲು ಗೂಗಲ್‌ನಲ್ಲಿ ಈ ರೀತಿಯ ಘಟನೆಯ ಸುದ್ದಿ ಪ್ರಕಟಗೊಂಡಿದೆಯೇ ಎಂದು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಜುಲೈ 7,2022ರಂದು ‘ದಿ ಕ್ವಿಂಟ್ ವೆಬ್‌ಸೈಟ್‌’ ಈ ಕುರಿತು ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ. “Video Showing Burqa-Clad Woman Kidnapping Child Is Staged and From Egypt” ಎಂಬ ಶೀರ್ಷಿಕೆಯ ಸುದ್ದಿಯಲ್ಲಿ, ಬುರ್ಖಾಧಾರಿ ಮಹಿಳೆ ಬಾಲಕನನ್ನು ಅಪಹರಿಸಿದ್ದಾರೆ ಎನ್ನಲಾದ ವಿಡಿಯೋ ಈಜಿಫ್ಟ್‌ ದೇಶದ್ದು ಮತ್ತು ಇದು ಸ್ಕ್ರಿಪ್ಟೆಡ್ ವಿಡಿಯೋ ಎಂದು ತಿಳಿಸಲಾಗಿದೆ.

ದಿ ಕ್ವಿಂಟ್ ಸುದ್ದಿ ಲಿಂಕ್ 

ನಾವು ಇನ್ನಷ್ಟು ಸುದ್ದಿ ಮೂಲಗಳನ್ನು ಹುಡುಕಿದಾಗ, ಈಜಿಫ್ಟ್‌ನ ಮಾಧ್ಯಮಗಳು ಈ ವಿಡಿಯೋ ಕುರಿತು ಸುದ್ದಿ ಮಾಡಿರುವುದು ಕಂಡು ಬಂದಿದೆ.

ಈಜಿಫ್ಟ್‌ನ ‘El Watan’ಎಂಬ ವೆಬ್‌ಸೈಟ್‌ 28 ಜೂನ್‌ 2022ರಂದು ಈ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿದ್ದು, ಈಜಿಫ್ಟ್‌ನ ಸೋಹಾಗ್‌ ಗೌವರ್ನರೇಟ್‌ ಬುರ್ಖಾಧಾರಿ ಮಹಿಳೆ ಬಾಲಕನನ್ನು ಅಪಹರಿಸಿದ ರೀತಿಯ ವಿಡಿಯೋ ಕ್ರಿಯೇಟ್‌ ಮಾಡಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಲ್ಲಿ ಬರೆಯಲಾಗಿದೆ.

ಅಲ್‌ ವತನ್ ಸುದ್ದಿಯ ಲಿಂಕ್ 

ಈಜಿಫ್ಟ್‌ನ ಆಂತರಿಕ ವ್ಯವಹಾರಗಳ ಸಚಿವಾಲಯ 29 ಜೂನ್ 2022ರಂದು ವೈರಲ್‌ ವಿಡಿಯೋವನ್ನು ಹಂಚಿಕೊಂಡಿದ್ದು, ಸೋಹಾಗ್‌ ಗೌವರ್ನರೇಟ್‌ನಲ್ಲಿ ಬುರ್ಖಾಧಾರಿ ಮಹಿಳೆಯೊಬ್ಬರು ಚುಚ್ಚುಮದ್ದು ಚುಚ್ಚಿ ಬಾಲಕನನ್ನು ಅಪಹರಿಸಿದ್ದಾರೆ ಎಂಬ ವಿಡಿಯೋ ಹರಿದಾಡುತ್ತಿದೆ. ಈ ಕುರಿತು ಪರಿಶೀಲನೆ ನಡೆಸಿದಾಗ ಇದು ಕ್ರಿಯೇಟೆಡ್ ವಿಡಿಯೋ ಎಂದು ಗೊತ್ತಾಗಿದೆ. ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಬುರ್ಖಾಧಾರಿ ಮಹಿಳೆ ಎನ್ನಲಾದ ವ್ಯಕ್ತಿಯನ್ನು ನೀವು ವಿಡಿಯೋದಲ್ಲಿ ನೋಡಬಹುದು ಎಂದು ತಿಳಿಸಿದೆ.

ಈಜಿಫ್ಟ್‌ ಆಂತರಿಕ ವ್ಯವಹಾರಗಳ ಸಚಿವಾಲಯದ ಇನ್‌ಸ್ಟಾಗ್ರಾಂ ಲಿಂಕ್ 

ಲಭ್ಯ ಮೂಲಗಳ ಮೂಲಕ ನಾವು ನಡೆಸಿದ ಪರಿಶೀಲನೆಯಲ್ಲಿ ವೈರಲ್ ವಿಡಿಯೋ ಭಾರತದಲ್ಲ ಈಜಿಫ್ಟ್‌ನದ್ದು. ಸಾಮಾಜಿಕ ಜಾಲತಾಣದ ಲೈಕ್‌, ಕಮೆಂಟ್‌ಗೋಸ್ಕರ ಈಜಿಫ್ಟ್‌ನ ಸೋಹಾಗ್‌ ಗೌವರ್ನರೇಟ್‌ನ ನಾಲ್ವರು ಯುವಕರು ಸೃಷ್ಟಿಸಿದ ವಿಡಿಯೋ ಇದು ಎಂದು ತಿಳಿದು ಬಂದಿದೆ. ಅಲ್ಲದೆ, ಈ ವಿಡಿಯೋ ಈ ಹಿಂದೆಯೇ ಸುಳ್ಳು ಹೆಸರಿನಲ್ಲಿ ವೈರಲ್ ಆಗಿತ್ತು. ಈಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿ: Fact Check: ನೌಕಾಪಡೆ ಸಿಬ್ಬಂದಿ ನೀರಿನಾಳದಲ್ಲಿ ಕೇಸರಿ ಧ್ವಜ ಹಾರಿಸಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...