Homeಫ್ಯಾಕ್ಟ್‌ಚೆಕ್Fact Check: ಬುರ್ಖಾಧಾರಿ ಮಹಿಳೆಯಿಂದ ಬಾಲಕನ ಅಪಹರಣವೆಂದು ಸುಳ್ಳು ವಿಡಿಯೋ ಹಂಚಿಕೆ

Fact Check: ಬುರ್ಖಾಧಾರಿ ಮಹಿಳೆಯಿಂದ ಬಾಲಕನ ಅಪಹರಣವೆಂದು ಸುಳ್ಳು ವಿಡಿಯೋ ಹಂಚಿಕೆ

- Advertisement -
- Advertisement -

ಬುರ್ಖಾಧಾರಿ ಮಹಿಳೆಯೊಬ್ಬರು ರಸ್ತೆ ಬದಿ ಕುಳಿತಿದ್ದ ಬಾಲಕನನ್ನು ಅಪಹರಿಸಿದ್ದಾರೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಸುಮಾರು 28 ಸೆಕೆಂಡ್‌ಗಳ ಈ ವಿಡಿಯೋದಲ್ಲಿ ಬುರ್ಖಾಧಾರಿ ಮಹಿಳೆ ಮತ್ತೊಬ್ಬನ ಸಹಾಯದೊಂದಿಗೆ ಬಾಲಕನನ್ನು ಎತ್ತಿ ಆಟೋದಲ್ಲಿ ಹಾಕಿಕೊಂಡು ಕರೆದೊಯ್ದ ದೃಶ್ಯವಿದೆ. ಇದನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ದ್ವೇಷ ಹರಡುವ ಪ್ರಯತ್ನ ಮಾಡಲಾಗಿದೆ.

‘ನಾವು ಎಲ್ಲಾ ಕಡೆಯಿಂದಲೂ ಎಚ್ಚರವಾಗಿರಬೇಕು’ ಎಂಬ ಶೀರ್ಷಿಕೆಯಲ್ಲಿ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗ್ತಿದೆ.

‘ಅಶುತೋಷ್ ಸಿಂಗ್ ಪಾಮರ್’ ಎಂಬ ಫೇಸ್‌ಬುಕ್ ಬಳಕೆದಾರ ಈ ವಿಡಿಯೋ ಹಂಚಿಕೊಂಡಿದ್ದು, ” ನಾವು ನಾಲ್ಕೂ ಕಡೆಗಳಿಂದ ಎಚ್ಚರವಾಗಿರಬೇಕು. ಅಪಾಯ ನಾವು ಊಹಿಸದಕ್ಕಿಂತ ದೊಡ್ಡದಾಗಿರುತ್ತದೆ” ಎಂದು ಬರೆದುಕೊಂಡಿದ್ದಾರೆ.

ಸದಾ ಕೋಮು ದ್ವೇಷದ ಸುದ್ದಿಗಳನ್ನೇ ಹರಡುವ ಸುದರ್ಶನ್‌ ನ್ಯೂಸ್‌ನ ಸಂತೋಷ್ ಚೌವ್ಹಾಣ್ ಕೂಡ ಈ ವಿಡಿಯೋ ಹಂಚಿಕೊಂಡಿದ್ದು, “ನಾವು ಇಂತಹ ವ್ಯಕ್ತಿಗಳಿಂದ ಮಕ್ಕಳ ಮೇಲೆ ನಿಗಾ ಇಡಬೇಕು” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಮೇಲೆ ತಿಳಿಸಿದ ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಅದರ ಮೂಲವನ್ನು ಹುಡುಕಾಡಿದ್ದೇವೆ. ಮೊದಲು ಗೂಗಲ್‌ನಲ್ಲಿ ಈ ರೀತಿಯ ಘಟನೆಯ ಸುದ್ದಿ ಪ್ರಕಟಗೊಂಡಿದೆಯೇ ಎಂದು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಜುಲೈ 7,2022ರಂದು ‘ದಿ ಕ್ವಿಂಟ್ ವೆಬ್‌ಸೈಟ್‌’ ಈ ಕುರಿತು ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ. “Video Showing Burqa-Clad Woman Kidnapping Child Is Staged and From Egypt” ಎಂಬ ಶೀರ್ಷಿಕೆಯ ಸುದ್ದಿಯಲ್ಲಿ, ಬುರ್ಖಾಧಾರಿ ಮಹಿಳೆ ಬಾಲಕನನ್ನು ಅಪಹರಿಸಿದ್ದಾರೆ ಎನ್ನಲಾದ ವಿಡಿಯೋ ಈಜಿಫ್ಟ್‌ ದೇಶದ್ದು ಮತ್ತು ಇದು ಸ್ಕ್ರಿಪ್ಟೆಡ್ ವಿಡಿಯೋ ಎಂದು ತಿಳಿಸಲಾಗಿದೆ.

ದಿ ಕ್ವಿಂಟ್ ಸುದ್ದಿ ಲಿಂಕ್ 

ನಾವು ಇನ್ನಷ್ಟು ಸುದ್ದಿ ಮೂಲಗಳನ್ನು ಹುಡುಕಿದಾಗ, ಈಜಿಫ್ಟ್‌ನ ಮಾಧ್ಯಮಗಳು ಈ ವಿಡಿಯೋ ಕುರಿತು ಸುದ್ದಿ ಮಾಡಿರುವುದು ಕಂಡು ಬಂದಿದೆ.

ಈಜಿಫ್ಟ್‌ನ ‘El Watan’ಎಂಬ ವೆಬ್‌ಸೈಟ್‌ 28 ಜೂನ್‌ 2022ರಂದು ಈ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿದ್ದು, ಈಜಿಫ್ಟ್‌ನ ಸೋಹಾಗ್‌ ಗೌವರ್ನರೇಟ್‌ ಬುರ್ಖಾಧಾರಿ ಮಹಿಳೆ ಬಾಲಕನನ್ನು ಅಪಹರಿಸಿದ ರೀತಿಯ ವಿಡಿಯೋ ಕ್ರಿಯೇಟ್‌ ಮಾಡಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಲ್ಲಿ ಬರೆಯಲಾಗಿದೆ.

ಅಲ್‌ ವತನ್ ಸುದ್ದಿಯ ಲಿಂಕ್ 

ಈಜಿಫ್ಟ್‌ನ ಆಂತರಿಕ ವ್ಯವಹಾರಗಳ ಸಚಿವಾಲಯ 29 ಜೂನ್ 2022ರಂದು ವೈರಲ್‌ ವಿಡಿಯೋವನ್ನು ಹಂಚಿಕೊಂಡಿದ್ದು, ಸೋಹಾಗ್‌ ಗೌವರ್ನರೇಟ್‌ನಲ್ಲಿ ಬುರ್ಖಾಧಾರಿ ಮಹಿಳೆಯೊಬ್ಬರು ಚುಚ್ಚುಮದ್ದು ಚುಚ್ಚಿ ಬಾಲಕನನ್ನು ಅಪಹರಿಸಿದ್ದಾರೆ ಎಂಬ ವಿಡಿಯೋ ಹರಿದಾಡುತ್ತಿದೆ. ಈ ಕುರಿತು ಪರಿಶೀಲನೆ ನಡೆಸಿದಾಗ ಇದು ಕ್ರಿಯೇಟೆಡ್ ವಿಡಿಯೋ ಎಂದು ಗೊತ್ತಾಗಿದೆ. ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಬುರ್ಖಾಧಾರಿ ಮಹಿಳೆ ಎನ್ನಲಾದ ವ್ಯಕ್ತಿಯನ್ನು ನೀವು ವಿಡಿಯೋದಲ್ಲಿ ನೋಡಬಹುದು ಎಂದು ತಿಳಿಸಿದೆ.

ಈಜಿಫ್ಟ್‌ ಆಂತರಿಕ ವ್ಯವಹಾರಗಳ ಸಚಿವಾಲಯದ ಇನ್‌ಸ್ಟಾಗ್ರಾಂ ಲಿಂಕ್ 

ಲಭ್ಯ ಮೂಲಗಳ ಮೂಲಕ ನಾವು ನಡೆಸಿದ ಪರಿಶೀಲನೆಯಲ್ಲಿ ವೈರಲ್ ವಿಡಿಯೋ ಭಾರತದಲ್ಲ ಈಜಿಫ್ಟ್‌ನದ್ದು. ಸಾಮಾಜಿಕ ಜಾಲತಾಣದ ಲೈಕ್‌, ಕಮೆಂಟ್‌ಗೋಸ್ಕರ ಈಜಿಫ್ಟ್‌ನ ಸೋಹಾಗ್‌ ಗೌವರ್ನರೇಟ್‌ನ ನಾಲ್ವರು ಯುವಕರು ಸೃಷ್ಟಿಸಿದ ವಿಡಿಯೋ ಇದು ಎಂದು ತಿಳಿದು ಬಂದಿದೆ. ಅಲ್ಲದೆ, ಈ ವಿಡಿಯೋ ಈ ಹಿಂದೆಯೇ ಸುಳ್ಳು ಹೆಸರಿನಲ್ಲಿ ವೈರಲ್ ಆಗಿತ್ತು. ಈಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿ: Fact Check: ನೌಕಾಪಡೆ ಸಿಬ್ಬಂದಿ ನೀರಿನಾಳದಲ್ಲಿ ಕೇಸರಿ ಧ್ವಜ ಹಾರಿಸಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...