Homeಕರ್ನಾಟಕಕೆರಗೋಡು ಧ್ವಜ ವಿವಾದ: ಬಿಜೆಪಿ-ಆರ್‌ಎಸ್‌ಎಸ್‌ ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ ಎಂದ ಕಾಂಗ್ರೆಸ್

ಕೆರಗೋಡು ಧ್ವಜ ವಿವಾದ: ಬಿಜೆಪಿ-ಆರ್‌ಎಸ್‌ಎಸ್‌ ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ ಎಂದ ಕಾಂಗ್ರೆಸ್

- Advertisement -
- Advertisement -

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭುಗಿಲೆದ್ದಿರುವ ಧ್ವಜ ವಿವಾದವನ್ನು ಬಿಜೆಪಿ ನಾಯಕರು ರಾಜಕೀಯಗೊಳಿಸಿದ್ದು, ಬಿಜೆಪಿ-ಆರ್‌ಎಸ್‌ಎಸ್‌ ವಿರುದ್ಧ ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಬಿಜೆಪಿ-ಆರ್‌ಎಸ್‌ಎಸ್‌ ಅನ್ನು ದೇಶದ್ರೋಹಿಗಳು ಎಂಟು ಟೀಕಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಅಂತಹ ಬ್ರಿಟಿಷರನ್ನೇ ಹೆದರಿಸಿದ ಕಾಂಗ್ರೆಸ್ ಈ ಬಿಜೆಪಿ-ಆರ್‌ಎಸ್‌ಎಸ್‌ ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ. ಬ್ರಿಟಿಷರ ಗುಂಡಿಗೆ ಎದೆಗೊಟ್ಟು ತಿರಂಗಾ ಹಾರಿಸಿದ ವೀರ ಪರಂಪರೆ ನಮ್ಮದು, ಈ ಸಂಘಿ ಕ್ರಿಮಿ ಕೀಟಗಳು ನಮ್ಮನ್ನು ತಡೆಯಲು ಸಾಧ್ಯವೇ. ದೇಶದ ಘನತೆ, ಗೌರವವನ್ನು ಎತ್ತಿ ಹಿಡಿದಿದ್ದೇವೆ, ದೇಶದ್ರೋಹಿ ಬಿಜೆಪಿಗೆ ದಮ್ಮು ತಾಕತ್ತಿದ್ದರೆ ಈ ರಾಷ್ಟ್ರ ಧ್ವಜವನ್ನು ಕಿತ್ತು ಹಾಕುವ ಧೈರ್ಯ ತೋರಲಿ’ ಎಂದು ಕಿರಿಕಾರಿದೆ.

‘ಬಿಜೆಪಿಯ ಲೋಕಸಭಾ ಚುನಾವಣೆಯ ತಾಲೀಮು ಮಂಡ್ಯದಲ್ಲಿ ಶುರುವಾಗಿದೆ, ಇದಕ್ಕೆ ಸೋಕಾಲ್ಡ್ ಜಾತ್ಯತೀತ ಜನತಾ ದಳ ಪೂರ್ಣ ಸಹಕಾರ ನೀಡುತ್ತಿದೆ. ಆರ್ ಅಶೋಕ್ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ದಮ್ಮು ತಾಕತ್ತಿದ್ದರೆ ಈ ಪ್ರಶ್ನೆಗಳಿಗೆ ಉತ್ತರಿಸಲಿ. ಕೆರೆಗೋಡು ಗ್ರಾಮದಲ್ಲಿ ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ ನವರು ರಾಷ್ಟ್ರಧ್ವಜ ಹಾಗೂ ನಾಡ ಧ್ವಜ ಹಾರಿಸುವುದಕ್ಕಾಗಿ ಮಾತ್ರ ಧ್ವಜ ಸ್ಥಂಭ ಸ್ಥಾಪನೆಗೆ ಮುಚ್ಚಳಿಕೆ ಬರೆದುಕೊಟ್ಟು ಅನುಮತಿ ಪಡೆದಿದ್ದಾರೆ. ಬರೆದುಕೊಟ್ಟ ಮುಚ್ಚಳಿಕೆಯಂತೆ ಹಾಗೂ ಯಾವುದಕ್ಕೆ ಅನುಮತಿ ಪಡೆದಿದ್ದಾರೋ ಅದನ್ನ ಪಾಲಿಸಬೇಕೇ ಬೇಡವೇ’ ಎಂದು ಪ್ರಶ್ನಿಸಿದೆ.

‘ರಾಷ್ಟ್ರ ಧ್ವಜ ಹಾರಿಸುವ ಉದ್ದೇಶವನ್ನು ಹೈಜಾಕ್ ಮಾಡಿ ಮಂಡ್ಯದಲ್ಲಿ ಶಾಂತಿ ಕದಡಬೇಕು, ಸರ್ಕಾರಕ್ಕೆ ಸವಾಲು ಹಾಕಬೇಕು ಎನ್ನುವುದು ನಿಮ್ಮ ಪೂರ್ವಯೋಜಿತ ಹುನ್ನಾರವಾಗಿತ್ತಲ್ಲವೇ? ನಿಮ್ಮ ನಿಷ್ಠೆ ಸಂವಿಧಾನಕ್ಕೋ; ಮನುವಾದಕ್ಕೋ? ನಿಮ್ಮ ನಿಷ್ಠೆ ದೇಶಕ್ಕೋ, ದೇಶದ್ರೋಹಕ್ಕೋ? ನಿಮ್ಮ ನಿಷ್ಠೆ ರಾಷ್ಟ್ರ ಧ್ವಜಕ್ಕೋ , ಧಾರ್ಮಿಕ ಧ್ವಜಕ್ಕೋ? ಉತ್ತರ ನೀಡುವ ದಮ್ಮು ತಾಕತ್ತು ಇದೆಯೇ’ ಎಂದು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಸವಾಲು ಹಾಕಿದೆ.

ಸರ್ಕಾರಿ ಕಟ್ಟಡಗಳ ಮೇಲೆ ಧಮ್ಮ ಚಕ್ರ- ಜೈ ಭೀಮ್ ಧ್ವಜ ಹಾಕಬಹುದೇ?

‘ಅನುಮತಿಯಿಲ್ಲದೆ ನಾನು ನಾಳೆ ಸರ್ಕಾರಿ ಆಸ್ತಿ ಅಥವಾ ಕಟ್ಟಡಗಳ ಮೇಲೆ ಧಮ್ಮ ಚಕ್ರ, ಪಂಚಶೀಲ ಧ್ವಜ ಅಥವಾ ಜೈ ಭೀಮ್ ಧ್ವಜವನ್ನು ಹಾಕಬಹುದೇ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.

ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಅವರೇ, ನೀವು ಯಾಕೆ ಪ್ರತಿಭಟನೆ ಮಾಡುತ್ತಿದ್ದೀರಿ? ದಯವಿಟ್ಟು ಟ್ರಸ್ಟ್ ವಿನಂತಿಯನ್ನು ಮತ್ತು ನಂತರದ ಆದೇಶದ ಮರುಪರಿಶೀಲಿಸಿ. ವಿನಂತಿ/ಆದೇಶದ ಯಾವ ಭಾಗವು ಕಾನೂನಿಗೆ ವಿರುದ್ಧವಾಗಿದೆ ಎಂಬುದನ್ನು ದಯವಿಟ್ಟು ಕರ್ನಾಟಕದ ಜನತೆಗೆ ತಿಳಿಸಿ. ಅನುಮತಿಯಿಲ್ಲದೆ ನಾನು ನಾಳೆ ಸರ್ಕಾರಿ ಆಸ್ತಿ ಅಥವಾ ಕಟ್ಟಡಗಳ ಮೇಲೆ ಧಮ್ಮ ಚಕ್ರ, ಪಂಚಶೀಲ ಧ್ವಜ ಅಥವಾ ಜೈಭೀಮ್ ಧ್ವಜವನ್ನು ಹಾಕಬಹುದೇ? ಯಾವುದೇ ಧ್ವಜಕ್ಕಿಂತ ರಾಷ್ಟ್ರಧ್ವಜಕ್ಕೆ ಪ್ರಾಧಾನ್ಯತೆ ನೀಡಬೇಕಲ್ಲವೇ’ ಎಂದು ಹೇಳಿದ್ದಾರೆ.

ಶ್ರೀ ಗೌರಿಶಂಕರ್ ಸೇವಾ ಟ್ರಸ್ಟ್ ಭಾರತದ ಧ್ವಜ ಅಥವಾ ಕನ್ನಡ ಧ್ವಜವನ್ನು ಹಾರಿಸಲು ನಿರ್ದಿಷ್ಟವಾಗಿ ಧ್ವಜಸ್ತಂಭವನ್ನು ಕೇಳಿದೆ. ಅದಕ್ಕೆ ಪಂಚಾಯತ್ ಇಲಾಖೆ ಅನುಮತಿ ನೀಡಿರುವುದು ಸ್ಪಷ್ಟವಾಗಿದೆ. ಬಿಜೆಪಿ ಬೇರೆ ಯಾವುದಾದರೂ ಧ್ವಜವನ್ನು ಹಾರಿಸಲು ಒತ್ತಾಯಿಸುತ್ತೀರಾ? ನಿಮ್ಮ ಪಕ್ಷವನ್ನು ಯಾವಾಗಲೂ ಭಾರತೀಯ ಧ್ವಜವನ್ನು ವಿರೋಧಿಸುವ ರಾಷ್ಟ್ರೀಯ ವಿರೋಧಿ ಆರ್‌ಎಸ್‌ಎಸ್‌ನಿಂದ ಪೋಷಿಸಲಾಗಿದೆ. ‘ಆರ್‌ಎಸ್‌ಎಸ್‌ ಧ್ವಜ ಮುಂದೊಂದು ದಿನ ರಾಷ್ಟ್ರಧ್ವಜವಾಗುತ್ತದೆ’ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇತ್ತೀಚೆಗೆ ಪ್ರಸ್ತಾಪಿಸಿದ್ದನ್ನು ನೆನಪಿಸಿಕೊಳ್ಳಿ. ನೀವು ಸಹ ಇದನ್ನು ಹೇಗೆ ಒಪ್ಪುತ್ತೀರಿ? ನೀವು ಜವಾಬ್ದಾರಿಯುತವಾಗಿ ಸರ್ಕಾರವನ್ನು ನಡೆಸಲಿಲ್ಲ, ಕನಿಷ್ಠ ಜವಾಬ್ದಾರಿಯುತ ವಿರೋಧ ಪಕ್ಷದವರಾಗಿರಿ’ ಎಂದು ಪ್ರಿಯಾಂಕ್ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ; ಹನುಮಧ್ವಜ ವಿವಾದ: ಪರಿಸ್ಥಿತಿ ಪ್ರಕ್ಷುಬ್ಧಗೊಳಿಸಿದ ಹಿಂದುತ್ವ ಕಾರ್ಯಕರ್ತರು; ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...