Homeಮುಖಪುಟಲೋಕಸಭೆ ಚುನಾವಣೆಗೆ ಮೊದಲೇ ಅಸಂವಿಧಾನಿಕ CAA ಕಾಯ್ದೆ ಜಾರಿ?

ಲೋಕಸಭೆ ಚುನಾವಣೆಗೆ ಮೊದಲೇ ಅಸಂವಿಧಾನಿಕ CAA ಕಾಯ್ದೆ ಜಾರಿ?

- Advertisement -
- Advertisement -

ಲೋಕಸಭೆ ಚುನಾವಣೆಗೆ ಮೊದಲೇ ಅಸಂವಿಧಾನಿಕ ಸಿಎಎ (ಪೌರತ್ವ ತಿದ್ದುಪಡಿ) ಕಾಯ್ದೆ ಜಾರಿ ಸಾಧ್ಯತೆ ಇದೆ. 7 ದಿನಗಳಲ್ಲಿ ಸಿಎಎ ಕಾಯ್ದೆಯನ್ನು ರಾಷ್ಟ್ರವ್ಯಾಪಿ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ ಹೇಳಿದ್ದು, ವಿವಾದಾತ್ಮಕ ಕಾಯ್ದೆ ಮತ್ತೆ ಮುನ್ನೆಲೆಗೆ ಬಂದಿದೆ.

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಕೇಂದ್ರ ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ರಾಜ್ಯಸಚಿವ ಶಾಂತನು ಠಾಕೂರ್, ಅಯೋಧ್ಯೆಯಲ್ಲಿ ರಾಮಮಂದಿರ (ದೇವಾಲಯ) ಉದ್ಘಾಟನೆಯಾಗಿದೆ ಮತ್ತು ಮುಂದಿನ 7 ದಿನಗಳಲ್ಲಿ ಸಿಎಎ ದೇಶಾದ್ಯಂತ ಜಾರಿಗೆ ಬರಲಿದೆ. ಇದು ನನ್ನ ಗ್ಯಾರಂಟಿ. ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲ, ಭಾರತದ ಪ್ರತಿಯೊಂದು ರಾಜ್ಯದಲ್ಲೂ ಸಿಎಎಯನ್ನು ಒಂದು ವಾರದೊಳಗೆ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಮೋದಿ ಸರ್ಕಾರವು ಅಂಗೀಕರಿಸಿದ್ದ ಪೌರತ್ವ (ತಿದ್ದುಪಡಿ) ಕಾಯ್ದೆ ಅಥವಾ ಸಿಎಎ ಕಾಯ್ದೆಯು ಡಿಸೆಂಬರ್ 31, 2014ರೊಳಗೆ ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುತ್ತದೆ. CAA ಡಿಸೆಂಬರ್ 2019ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟಿದ್ದು, ಆ ಬಳಿಕ  ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದಿದೆ. ಈ ಅಸಂವಿಧಾನಿಕ ಕಾಯ್ದೆ ದೇಶದ ವಿವಿಧ ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು.

ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸಿಎಎ ಕಾಯ್ದೆ ಕುರಿತ ನಿಯಮಗಳನ್ನು ಲೋಕಸಭೆ ಚುನಾವಣೆ ಘೋಷಣೆಗೆ ಮೊದಲೇ ಸೂಚಿಸುವುದಾಗಿ ಹೇಳಿರುವ ಬಗ್ಗೆ ಪಿಟಿಐ ವರದಿ ಉಲ್ಲೇಖಿಸಿದೆ. ಜನವರಿ 3ರಂದು ಮಾತನಾಡಿದ್ದ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಸಂವಿಧಾನಿಕ ಎಂದು ಕರೆದಿದ್ದು, ಧರ್ಮದ ಆಧಾರದ ಮೇಲೆ ಕಾಯ್ದೆಯನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದರು.

ಕಳೆದ ಡಿಸೆಂಬರ್ 27ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ, ಸಿಎಎ ಅನುಷ್ಠಾನವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಏಕೆಂದರೆ ಇದು ದೇಶದ ಕಾನೂನಿನಂತೆ ನಿಂತಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ವಿಷಯದಲ್ಲಿ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದ್ದಾರೆ.  ಪ್ರತಿಪಕ್ಷಗಳ ಬಲವಾದ ವಿರೋಧದ ಮಧ್ಯೆ ಕೇಂದ್ರವು ಸಿಎಎ ಕುರಿತು ನಿಯಮವನ್ನು ರೂಪಿಸಲಿದೆ ಎಂದು ಹೇಳಿದ್ದರು.

ಸಂಸದೀಯ ಕಾರ್ಯವಿಧಾನಗಳ ಕೈಪಿಡಿಯ ಪ್ರಕಾರ, ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದ ಆರು ತಿಂಗಳೊಳಗೆ ಮಸೂದೆಯ ಶಾಸನಕ್ಕಾಗಿ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ನಿಯಮಗಳು ನಿರ್ದೇಶಿಸುತ್ತವೆ. ಇಲ್ಲದಿದ್ದರೆ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಅಧೀನ ಶಾಸನಗಳ ಸಮಿತಿಗಳಿಂದ ವಿಸ್ತರಣೆಯನ್ನು ಕೋರಬಹುದಾಗಿದೆ.

9 ರಾಜ್ಯಗಳಲ್ಲಿ 30ಕ್ಕೂ ಹೆಚ್ಚು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು ಗೃಹ ಕಾರ್ಯದರ್ಶಿಗಳಿಗೆ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಆಗಮಿಸುವ ಹಿಂದೂಗಳು, ಸಿಖ್‌ಗಳು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವ ಕಾಯ್ದೆಯ-1955ರಡಿಯಲ್ಲಿ ಭಾರತೀಯ ಪೌರತ್ವವನ್ನು ನೀಡಲು ಅಧಿಕಾರವನ್ನು ಪಡೆದಿದ್ದಾರೆ. 2021-22ರ ಗೃಹ ವ್ಯವಹಾರಗಳ ಸಚಿವಾಲಯದ ವಾರ್ಷಿಕ ವರದಿಯ ಪ್ರಕಾರ, ಏಪ್ರಿಲ್ 1, 2021 ರಿಂದ ಡಿಸೆಂಬರ್ 31, 2021ರ ನಡುವೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಬಂದ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳ ಒಟ್ಟು 1,414 ವ್ಯಕ್ತಿಗಳಿಗೆ ಪೌರತ್ವ ನೀಡಲಾಗಿದೆ.

 

ಇದನ್ನು ಓದಿ: ಮೈಸೂರು: ಅಂಬೇಡ್ಕರ್‌ ನಾಮಫಲಕ ಅಳವಡಿಕೆ ವಿಚಾರದಲ್ಲಿ ಘರ್ಷಣೆ: 30ಕ್ಕೂ ಅಧಿಕ ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....