Homeಮುಖಪುಟಲೋಕಸಭೆ ಚುನಾವಣೆಗೆ ಮೊದಲೇ ಅಸಂವಿಧಾನಿಕ CAA ಕಾಯ್ದೆ ಜಾರಿ?

ಲೋಕಸಭೆ ಚುನಾವಣೆಗೆ ಮೊದಲೇ ಅಸಂವಿಧಾನಿಕ CAA ಕಾಯ್ದೆ ಜಾರಿ?

- Advertisement -
- Advertisement -

ಲೋಕಸಭೆ ಚುನಾವಣೆಗೆ ಮೊದಲೇ ಅಸಂವಿಧಾನಿಕ ಸಿಎಎ (ಪೌರತ್ವ ತಿದ್ದುಪಡಿ) ಕಾಯ್ದೆ ಜಾರಿ ಸಾಧ್ಯತೆ ಇದೆ. 7 ದಿನಗಳಲ್ಲಿ ಸಿಎಎ ಕಾಯ್ದೆಯನ್ನು ರಾಷ್ಟ್ರವ್ಯಾಪಿ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ ಹೇಳಿದ್ದು, ವಿವಾದಾತ್ಮಕ ಕಾಯ್ದೆ ಮತ್ತೆ ಮುನ್ನೆಲೆಗೆ ಬಂದಿದೆ.

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಕೇಂದ್ರ ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ರಾಜ್ಯಸಚಿವ ಶಾಂತನು ಠಾಕೂರ್, ಅಯೋಧ್ಯೆಯಲ್ಲಿ ರಾಮಮಂದಿರ (ದೇವಾಲಯ) ಉದ್ಘಾಟನೆಯಾಗಿದೆ ಮತ್ತು ಮುಂದಿನ 7 ದಿನಗಳಲ್ಲಿ ಸಿಎಎ ದೇಶಾದ್ಯಂತ ಜಾರಿಗೆ ಬರಲಿದೆ. ಇದು ನನ್ನ ಗ್ಯಾರಂಟಿ. ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲ, ಭಾರತದ ಪ್ರತಿಯೊಂದು ರಾಜ್ಯದಲ್ಲೂ ಸಿಎಎಯನ್ನು ಒಂದು ವಾರದೊಳಗೆ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಮೋದಿ ಸರ್ಕಾರವು ಅಂಗೀಕರಿಸಿದ್ದ ಪೌರತ್ವ (ತಿದ್ದುಪಡಿ) ಕಾಯ್ದೆ ಅಥವಾ ಸಿಎಎ ಕಾಯ್ದೆಯು ಡಿಸೆಂಬರ್ 31, 2014ರೊಳಗೆ ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುತ್ತದೆ. CAA ಡಿಸೆಂಬರ್ 2019ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟಿದ್ದು, ಆ ಬಳಿಕ  ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದಿದೆ. ಈ ಅಸಂವಿಧಾನಿಕ ಕಾಯ್ದೆ ದೇಶದ ವಿವಿಧ ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು.

ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸಿಎಎ ಕಾಯ್ದೆ ಕುರಿತ ನಿಯಮಗಳನ್ನು ಲೋಕಸಭೆ ಚುನಾವಣೆ ಘೋಷಣೆಗೆ ಮೊದಲೇ ಸೂಚಿಸುವುದಾಗಿ ಹೇಳಿರುವ ಬಗ್ಗೆ ಪಿಟಿಐ ವರದಿ ಉಲ್ಲೇಖಿಸಿದೆ. ಜನವರಿ 3ರಂದು ಮಾತನಾಡಿದ್ದ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಸಂವಿಧಾನಿಕ ಎಂದು ಕರೆದಿದ್ದು, ಧರ್ಮದ ಆಧಾರದ ಮೇಲೆ ಕಾಯ್ದೆಯನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದರು.

ಕಳೆದ ಡಿಸೆಂಬರ್ 27ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ, ಸಿಎಎ ಅನುಷ್ಠಾನವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಏಕೆಂದರೆ ಇದು ದೇಶದ ಕಾನೂನಿನಂತೆ ನಿಂತಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ವಿಷಯದಲ್ಲಿ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದ್ದಾರೆ.  ಪ್ರತಿಪಕ್ಷಗಳ ಬಲವಾದ ವಿರೋಧದ ಮಧ್ಯೆ ಕೇಂದ್ರವು ಸಿಎಎ ಕುರಿತು ನಿಯಮವನ್ನು ರೂಪಿಸಲಿದೆ ಎಂದು ಹೇಳಿದ್ದರು.

ಸಂಸದೀಯ ಕಾರ್ಯವಿಧಾನಗಳ ಕೈಪಿಡಿಯ ಪ್ರಕಾರ, ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದ ಆರು ತಿಂಗಳೊಳಗೆ ಮಸೂದೆಯ ಶಾಸನಕ್ಕಾಗಿ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ನಿಯಮಗಳು ನಿರ್ದೇಶಿಸುತ್ತವೆ. ಇಲ್ಲದಿದ್ದರೆ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಅಧೀನ ಶಾಸನಗಳ ಸಮಿತಿಗಳಿಂದ ವಿಸ್ತರಣೆಯನ್ನು ಕೋರಬಹುದಾಗಿದೆ.

9 ರಾಜ್ಯಗಳಲ್ಲಿ 30ಕ್ಕೂ ಹೆಚ್ಚು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು ಗೃಹ ಕಾರ್ಯದರ್ಶಿಗಳಿಗೆ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಆಗಮಿಸುವ ಹಿಂದೂಗಳು, ಸಿಖ್‌ಗಳು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವ ಕಾಯ್ದೆಯ-1955ರಡಿಯಲ್ಲಿ ಭಾರತೀಯ ಪೌರತ್ವವನ್ನು ನೀಡಲು ಅಧಿಕಾರವನ್ನು ಪಡೆದಿದ್ದಾರೆ. 2021-22ರ ಗೃಹ ವ್ಯವಹಾರಗಳ ಸಚಿವಾಲಯದ ವಾರ್ಷಿಕ ವರದಿಯ ಪ್ರಕಾರ, ಏಪ್ರಿಲ್ 1, 2021 ರಿಂದ ಡಿಸೆಂಬರ್ 31, 2021ರ ನಡುವೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಬಂದ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳ ಒಟ್ಟು 1,414 ವ್ಯಕ್ತಿಗಳಿಗೆ ಪೌರತ್ವ ನೀಡಲಾಗಿದೆ.

 

ಇದನ್ನು ಓದಿ: ಮೈಸೂರು: ಅಂಬೇಡ್ಕರ್‌ ನಾಮಫಲಕ ಅಳವಡಿಕೆ ವಿಚಾರದಲ್ಲಿ ಘರ್ಷಣೆ: 30ಕ್ಕೂ ಅಧಿಕ ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...