Homeಮುಖಪುಟ2024ರ ಚುನಾವಣೆ ಪ್ರಜಾಪ್ರಭುತ್ವ ಉಳಿಸಲು ಜನರಿಗಿರುವ ಕೊನೆಯ ಅವಕಾಶ: ಮಲ್ಲಿಕಾರ್ಜುನ ಖರ್ಗೆ

2024ರ ಚುನಾವಣೆ ಪ್ರಜಾಪ್ರಭುತ್ವ ಉಳಿಸಲು ಜನರಿಗಿರುವ ಕೊನೆಯ ಅವಕಾಶ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

2024ರ ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಜನರಿಗೆ ಕೊನೆಯ ಅವಕಾಶವಾಗಿದೆ, ಮುಂಬರುವ ಚುನಾವಣೆಯಲ್ಲಿ ಎನ್‌ಡಿಎ ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಕ್ಕೆ ಆದ್ಯತೆ ನೀಡುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬಿಜೆಪಿ ಮತ್ತು ಅದರ ಸಿದ್ಧಾಂತವಾದಿ ಆರೆಸ್ಸೆಸ್‌ ವಿಷ ಇದ್ದಂತೆ ಜನರು ಅದರಿಂದ ದೂರವಿರಬೇಕು ಎಂದು ಹೇಳಿದ ಮಲ್ಲಿಕಾರ್ಜುನ ಖರ್ಗೆ, ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ಇದು ಜನರಿಗೆ ಇರುವ ಕೊನೆಯ ಅವಕಾಶವಾಗಿದೆ. ನರೇಂದ್ರ ಮೋದಿ ಮತ್ತೊಂದು ಚುನಾವಣೆಯಲ್ಲಿ ಗೆದ್ದರೆ, ದೇಶದಲ್ಲಿ ಸರ್ವಾಧಿಕಾರ ನೆಲೆಯೂರಲಿದೆ. ರಷ್ಯಾದಲ್ಲಿ ಪುಟಿನ್ ಆಳ್ವಿಕೆ ನಡೆಸಿದಂತೆ ಬಿಜೆಪಿ ಭಾರತವನ್ನು ಆಳ್ವಿಕೆ ನಡೆಸಲಿದೆ ಎಂದು  ಹೇಳಿದ್ದಾರೆ.

ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಖರ್ಗೆ, ಪ್ರಧಾನಿ ಮೋದಿ ನೇತೃತ್ವದ ಪ್ರಸ್ತುತ ಸರ್ಕಾರವು, ಪ್ರತಿಪಕ್ಷಗಳ ನಾಯಕರನ್ನು ಬೆದರಿಸುವ ಮೂಲಕ ಆಳ್ವಿಕೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ನಮ್ಮ ನಾಯಕರಿಗೆ ಇಡಿ ಮತ್ತು ಆದಾಯ ತೆರಿಗೆ ಅಧಿಕಾರಿಗಲ ಮೂಲಕ ನೋಟಿಸ್ ಜಾರಿ ಮಾಡಲಾಗುತ್ತಿದ್ದು, ಇಡಿ ಮತ್ತು ಆದಾಯ ತೆರಿಗೆ ರಾಜಕೀಯ ವಿರೋಧಿಗಳನ್ನು ಮೆಟ್ಟಿ ನಿಲ್ಲುವ ಅಸ್ತ್ರಗಳಾಗಿ ಮಾರ್ಪಟ್ಟಿವೆ. ಬಿಜೆಪಿ ಮತ್ತು ಆರೆಸ್ಸೆಸ್ ಸಿದ್ಧಾಂತಗಳ ಬಗ್ಗೆ ಜನತೆ ಜಾಗೃತರಾಗಿರಬೇಕು. ಬಿಜೆಪಿ ಮತ್ತು ಆರೆಸ್ಸೆಸ್‌ ಸಿದ್ಧಾಂತಗಳನ್ನು ವಿರೋಧಿಸಿದರೆ ಪಕ್ಷ, ಮೈತ್ರಿ ತೊರೆಯಲು ನಾಯಕರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಆರೆಸ್ಸೆಸ್‌ನ್ನು ವಿರೋಧಿಸುತ್ತಿರುವ ರಾಹುಲ್ ಗಾಂಧಿಗೆ ಪದೇ ಪದೇ ಬೆದರಿಕೆ ಹಾಕಲಾಗುತ್ತಿದೆ. ಆದರೆ ರಾಹುಲ್ ಗಾಂಧಿ ಅವರ ಒತ್ತಡಕ್ಕೆ ಒಳಗಾಗಲಿಲ್ಲ ಮತ್ತು ರಾಷ್ಟ್ರವನ್ನು ವಿಭಜಿಸಲು ಹೊರಟಿರುವ ಇಂತಹ ಶಕ್ತಿಗಳ ವಿರುದ್ಧ ಹೋರಾಟವನ್ನು ಮುಂದುವರೆಸಿದ್ದಾರೆ.  ಇಂದಿಗೂ ಮಣಿಪುರದಲ್ಲಿ ಜನರ ಹತ್ಯೆ, ಮಹಿಳೆಯರ ಮೇಲೆ ಅತ್ಯಾಚಾರ, ನೂರಾರು ಮನೆಗಳು, ಕಾರುಗಳಿಗೆ ಬೆಂಕಿ ಹಚ್ಚಲಾಗುತ್ತಿದೆ. ಮೋದಿಜೀ ಎಲ್ಲಿದ್ದಾರೆ, ಬಿಜೆಪಿ ಎಲ್ಲಿದೆ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಮಣಿಪುರ ಮತ್ತು ನಾಗಾಲ್ಯಾಂಡ್‌ಗೆ ಹೋಗಿ ಅಲ್ಲಿನ ಜನರಿಗೆ ನಿಮ್ಮ ಮುಖವನ್ನು ತೋರಿಸಿ, ಶಾಂತಿಯನ್ನು ಕಾಪಾಡುವುದು ಎಷ್ಟು ಕಷ್ಟ ಎಂದು ನಿಮಗೆ ಅರ್ಥವಾಗುತ್ತದೆ. ರಾಷ್ಟ್ರವನ್ನು ಒಗ್ಗೂಡಿಸಲು ನಾವು ತ್ಯಾಗ ಮಾಡಬೇಕಾಗುತ್ತದೆ. ನಿಮಗೆ ಆ ಧೈರ್ಯವಿಲ್ಲ. ಇಂದಿರಾ ಗಾಂಧಿಯವರು ತನ್ನ ಪ್ರಾಣದ ಅಪಾಯದ ಬಗ್ಗೆ ಅರಿವಿತ್ತು. ಇಂದಿರಾಜಿ ಒಡಿಶಾದಲ್ಲಿ ತಮ್ಮ ಕೊನೆಯ ಭಾಷಣದಲ್ಲಿ ತಮ್ಮ ಜೀವಕ್ಕೆ ಅಪಾಯದ ಬಗ್ಗೆ ಸೂಚಿಸಿದ್ದರು. ಆಕೆ ಮಾಡಿದ ತಪ್ಪೇನು, ಯಾರನ್ನಾದರೂ ಲೂಟಿ ಮಾಡಿದ್ದೀರಾ? ಇಲ್ಲ, ಅವರು ದೇಶವನ್ನು ಒಗ್ಗೂಡಿಸಲು ಶ್ರಮಿಸುತ್ತಿದ್ದರು. ಆದರೆ ಕೆಲವರು ಅವರನ್ನು ಕೊಂದರು. ರಾಜೀವ್ ಗಾಂಧಿಯವರು ತಮ್ಮ ತಾಯಿಯ ಹಾದಿಯಲ್ಲೇ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಎನ್‌ಡಿಎಗೆ ಮರಳಿರುವುದು ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಒಬ್ಬ ವ್ಯಕ್ತಿ ಮಹಾಘಟಬಂಧನ್ ತ್ಯಜಿಸುವುದರಿಂದ ನಮ್ಮನ್ನು  ದುರ್ಬಲಗೊಳಿಸುವುದಿಲ್ಲ, ನಾವು ಬಿಜೆಪಿಯನ್ನು ಸೋಲಿಸುತ್ತೇವೆ. ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಮತ್ತು ಪ್ರತಿಯೊಬ್ಬ ಭಾರತೀಯರ ಬ್ಯಾಂಕ್ ಖಾತೆಯಲ್ಲಿ 15 ಲಕ್ಷ ಹಣವನ್ನು ಭರವಸೆ ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಅವರು ಪ್ರಧಾನಿ ಮೋದಿಯನ್ನು ಸಾಮಾನ್ಯ ಸುಳ್ಳುಗಾರ ಎಂದು ಬಣ್ಣಿಸಿದ್ದಾರೆ.

ಮೋದಿ ಗುಜರಾತ್‌ನ ಮುಖ್ಯಮಂತ್ರಿಯಾಗಿ ಈಗ ಪ್ರಧಾನಿಯಾಗಿದ್ದೀರಿ ಏಕೆಂದರೆ ಕಾಂಗ್ರೆಸ್ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಎತ್ತಿ  ಹಿಡಿದಿದೆ. ಆದರೆ ನೀವು ಈಗ  ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೂಲಗಳನ್ನು ನಾಶ ಮಾಡುತ್ತಿದ್ದೀರಿ, ಸಂವಿಧಾನವನ್ನು ಸರಿಯಾಗಿ ಜಾರಿಗೊಳಿಸುವ ಮೂಲಕ ಮಹಿಳೆಯರು, ದಲಿತರು, ಬುಡಕಟ್ಟು ಜನಾಂಗದವರು ಮತ್ತು ದೀನದಲಿತರಿಗೆ ಹಕ್ಕುಗಳನ್ನು ಕಾಂಗ್ರೆಸ್ ನೀಡಿದೆ ಎಂದು ಅವರು ಹೇಳಿದ್ದಾರೆ.

ಒಡಿಶಾದ ಆಡಳಿತಾರೂಢ ಬಿಜೆಡಿ ಮತ್ತು ಪ್ರತಿಪಕ್ಷ ಬಿಜೆಪಿ ಪ್ರೇಮ ವಿವಾಹವನ್ನು ಮಾಡಿಕೊಂಡಿವೆ ಎಂದು ಹೇಳಿರುವ ಖರ್ಗೆ, ಎರಡು ಪಕ್ಷಗಳು ಒಡಿಶಾವನ್ನು ಲೂಟಿ ಮಾಡಿ ರಾಜ್ಯದ ಬಡ ಜನರನ್ನು ದಬ್ಬಾಳಿಕೆ ಮಾಡುತ್ತಿವೆ. ಬಿಜೆಪಿ ಮತ್ತು ಬಿಜೆಡಿ ಕೇವಲ ಶ್ರೀಮಂತರ ಜೊತೆಗಿದ್ದರೆ, ಕಾಂಗ್ರೆಸ್ ಯಾವಾಗಲೂ ಬಡವರ ಪರವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೈಸೂರು: ಅಂಬೇಡ್ಕರ್‌ ನಾಮಫಲಕ ಅಳವಡಿಕೆ ವಿಚಾರದಲ್ಲಿ ಘರ್ಷಣೆ: 30ಕ್ಕೂ ಅಧಿಕ ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...