Homeಮುಖಪುಟರಾಜಸ್ಥಾನ: ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಭುಗಿಲೆದ್ದ ಹಿಜಾಬ್‌ ವಿವಾದ

ರಾಜಸ್ಥಾನ: ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಭುಗಿಲೆದ್ದ ಹಿಜಾಬ್‌ ವಿವಾದ

- Advertisement -
- Advertisement -

ಕರ್ನಾಟಕದಲ್ಲಿ ಬಸವರಾಜ್‌ ಬೊಮ್ಮಯಿ ನೇತೃತ್ವದ ಬಿಜೆಪಿ ಸರಕಾರದ ಅವಧಿಯಲ್ಲಿ ಹಿಜಾಬ್‌ ವಿವಾದ ಸೃಷ್ಟಿಯಾಗಿತ್ತು. ಇದೀಗ ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಅಲ್ಲೂ ಹಿಜಾಬ್‌ ವಿವಾದ ಭುಗಿಲೆದ್ದಿದೆ. ರಾಜಸ್ಥಾನದಲ್ಲಿ ಬಿಜೆಪಿಯ ಭಜನ್​ಲಾಲ್​ ಶರ್ಮಾ ಅಧಿಕಾರಕ್ಕೇರಿದ ಬಳಿಕ ಮುಸ್ಲಿಂ ವಿರೋಧಿ ನೀತಿಗಳನ್ನು ಜಾರಿಗೆ ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರಾಜಸ್ಥಾನದ ಸರ್ಕಾರಿ ಶಾಲೆಗಳಲ್ಲಿ ಮಾತ್ರವಲ್ಲದೆ ಖಾಸಗಿ ಶಾಲೆಗಳು ಮತ್ತು ಮದರಸಾಗಳಲ್ಲಿಯೂ ಹಿಜಾಬ್‌ನ್ನು ನಿಷೇಧಿಸಬೇಕು ಎಂದು ರಾಜಸ್ಥಾನದ ಹಿರಿಯ ಸಚಿವ ಕಿರೋರಿ ಲಾಲ್ ಮೀನಾ ಹೇಳಿದ್ದಾರೆ.

ಸಚಿವ ಕಿರೋರಿ ಲಾಲ್ ಮೀನಾ ಈ ಕುರಿತು ಮಾತನಾಡಿದ್ದು, ಶಾಲೆಗಳಲ್ಲಿ ಹಿಜಾಬ್ ಧರಿಸುವುದು ತಪ್ಪಾಗಿದೆ. ಶಾಲೆಗಳಲ್ಲಿ ಹಿಜಾಬ್ ಧರಿಸುವ ವಿಚಾರವನ್ನು ಬಿಜೆಪಿ ಶಾಸಕರು ಸರಿಯಾಗಿ ಪ್ರಸ್ತಾಪಿಸಿರುವುದರಿಂದ ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಹೇಳಿದ್ದಾರೆ. ಶಾಲೆಯಲ್ಲಿ ಎರಡು ಡ್ರೆಸ್ ಕೋಡ್‌ಗಳ ಬಗ್ಗೆ ಬಿಜೆಪಿ ಶಾಸಕ ಬಲ್ಮುಕುಂದ್ ಆಚಾರ್ಯ ವಿಚಾರಣೆ ನಡೆಸಿರುವುದರ ವಿರುದ್ಧ ಜೈಪುರದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಸಚಿವ ಕಿರೋರಿ ಲಾಲ್ ಮೀನಾ ಈ ಹೇಳಿಕೆಯನ್ನು ನೀಡಿದ್ದಾರೆ.

ಶಾಲೆಗಳಲ್ಲಿ ಡ್ರೆಸ್ ಕೋಡ್‌ನ್ನು ಅನುಸರಿಸಬೇಕು, ಇಲ್ಲದಿದ್ದರೆ ಶಾಲೆಗಳಲ್ಲಿ ಯಾವುದೇ ಶಿಸ್ತು ಇರುವುದಿಲ್ಲ. ಡ್ರೆಸ್ ಕೋಡ್ ಅನುಸರಿಸದಿದ್ದರೆ ಪೊಲೀಸರೂ ಸಹ ಒಂದು ದಿನ ಧೋತಿಯಲ್ಲಿ ಬರಬಹುದು. ಅನೇಕ ದೇಶಗಳಲ್ಲಿ ಹಿಜಾಬ್‌ಗಳನ್ನು ನಿಷೇಧಿಸಲಾಗಿದೆ. ಮುಸ್ಲಿಮರ ಮೂಲಭೂತವಾದಿ ಧೋರಣೆ ಮತ್ತು ಕಾಂಗ್ರೆಸ್‌ನ ಮುಸ್ಲಿಮರ ಓಲೈಕೆ ನೀತಿ ಸಮುದಾಯವನ್ನು ಹಿಂದುಳಿದಂತೆ ಮಾಡಿದೆ. ಮುಸ್ಲಿಮರಲ್ಲಿ ಶಿಕ್ಷಣ ಮತ್ತು ಪ್ರಗತಿಪರ ಚಿಂತನೆಯ ಕೊರತೆಯಿದೆ. ಆದ್ದರಿಂದ ಅವರು ಅಪರಾಧದಲ್ಲಿ ಹೆಚ್ಚು ತೊಡಗುತ್ತಾರೆ ಎಂದು ಹೇಳಿದ್ದಾರೆ.

ಗಂಗಾಪೋಲ್ ಸರ್ಕಾರಿ ಬಾಲಕಿಯರ ಹಿರಿಯ ಮಾಧ್ಯಮಿಕ ಶಾಲೆಯ ಮುಸ್ಲಿಂ ವಿದ್ಯಾರ್ಥಿನಿಯರು ಶಾಲೆಯಲ್ಲಿ ಹಿಜಾಬ್  ಧರಿಸಿರುವುದನ್ನು ವಿರೋಧಿಸಿದ ಹವಾ ಮಹಲ್ ಶಾಸಕ ಆಚಾರ್ಯ ಬಲ್ಮುಕುಂದ್ ಅವರು ಕ್ಷಮೆಯಾಚಿಸುವಂತೆ ಒತ್ತಾಯಿಸಿ ಪೊಲೀಸ್ ಠಾಣೆಯ ಹೊರಗೆ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ‘ಹಿಜಾಬ್  ಮೈ ಐಡೆಂಟಿಟಿ ಮತ್ತು ಹಿಜಾಬ್ ಕೋ ಮಿಟವಾನೆ ವಾಲೇ ಮಿಟ್ಟಿ ಮಿ ಮಿಲ್ ಜಾಯೇಂಗೆ’ ಎಂಬ ಫಲಕಗಳೊಂದಿಗೆ ಪೊಲೀಸ್ ಠಾಣೆಗೆ ಘೇರಾವ್ ಹಾಕಿ, ಹಿಜಾಬ್ ಮತ್ತು ಬುರ್ಖಾ ಧರಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ. ಬಾಲ್ಮುಕುಂದ್ ಆಚಾರ್ಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಕೂಡ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಬಾಲ್ಮುಕುಂದ್ ಅವರು ಶಾಲೆಯೊಂದಕ್ಕೆ ಹೋಗಿದ್ದ ವಿಡಿಯೋ ವೈರಲ್‌ ಆಗಿತ್ತು.  ಹಿಜಾಬ್ ಮತ್ತು ಬುರ್ಖಾವನ್ನು ಧರಿಸಿರುವ ಮುಸ್ಲಿಂ ವಿದ್ಯಾರ್ಥಿನಿಯರನ್ನು ನೋಡಿ ಶಾಲೆಯ ಡ್ರೆಸ್ ಕೋಡ್ ಬಗ್ಗೆ ಪ್ರಿನ್ಸಿಪಾಲ್‌ಗೆ ಪ್ರಶ್ನಿಸಿದ್ದಾರೆ. ಶಾಲೆಯಲ್ಲಿ ಎರಡು ರೀತಿಯ ಡ್ರೆಸ್ ಕೋಡ್ ಇದೆಯೇ ಎಂದು ಪ್ರಾಂಶುಪಾಲರನ್ನು ಕೇಳಿದ್ದಾರೆ. ಒಂದು ಮುಸ್ಲಿಮರಿಗೆ ಮತ್ತು ಇನ್ನೊಂದು ಹಿಂದೂಗಳಿಗೆ ಬೇರೆ ಬೇರೆ ಡ್ರೆಸ್‌ ಕೋಡ್‌ ಇದೆಯಾ?  ಪ್ರಾಂಶುಪಾಲರು ಶಾಲೆಯಲ್ಲಿ ಒಂದೇ ಡ್ರೆಸ್ ಕೋಡ್ ಮಾತ್ರ ಇದೆ ಎಂದು ಹೇಳಿದ್ದು, ಕೆಲ ಬಾಲಕಿಯರು ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಹೇಳಿದ್ದಾರೆ.  ಶಾಲೆಗಳಲ್ಲಿ ಡ್ರೆಸ್ ಕೋಡ್ ಬಗ್ಗೆ ಚರ್ಚೆ ನಡೆಸಬೇಕಿದೆ ಎಂದು ಅವರು ಈ ವೇಳೆ ಹೇಳಿದ್ದಾರೆ.

ಪ್ರತಿಭಟನಾ ನಿರತ ಬಾಲಕಿಯರು ಈ ಪ್ರದೇಶದಲ್ಲಿ ರಸ್ತೆ ತಡೆ ನಡೆಸಿದ್ದಾರೆ. ಆದರ್ಶನಗರದ ಕಾಂಗ್ರೆಸ್ ಶಾಸಕ ರಫೀಕ್ ಖಾನ್ ಮಧ್ಯಸ್ಥಿಕೆ ವಹಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಿದ್ದಾರೆ. ಈ ವಿಚಾರದಲ್ಲಿ ವಿಧಾನಸೌಧದಲ್ಲೂ ವಿಷಯ ಪ್ರಸ್ತಾಪಿಸಲು ಅವರು ಯತ್ನಿಸಿದ್ದರು ಅದರೆ ಸ್ಪೀಕರ್ ಅದಕ್ಕೆ ಅವಕಾಶ ನೀಡಿರಲಿಲ್ಲ.

ಮೊದಲ ಬಾರಿಗೆ ಶಾಸಕರಾಗಿರುವ ಬಲ್ಮುಕುಂದ್ ಆಚಾರ್ಯ ಅವರು ಹವಾ ಮಹಲ್ ಸ್ಥಾನವನ್ನು ಪ್ರತಿನಿಧಿಸುತ್ತಿದ್ದಾರೆ. ಬಲ್ಮುಕುಂದ್ ಆಚಾರ್ಯ ಗೆಲವಿನ ಬಳಿಕ ಹಲವು ವಿವಾದವನ್ನು ಸೃಷ್ಟಿಸುತ್ತಿದ್ದಾರೆ. ಈ ಮೊದಲು ಮಾಂಸದ ವ್ಯಾಪಾರಿಗಳನ್ನು  ಭೇಟಿ ಮಾಡಿ ಅಗತ್ಯ ಪರವಾನಗಿ ಇಲ್ಲದೆ ಇದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಸಿದ್ದರು.

ಇದನ್ನು ಓದಿ: 2024ರ ಚುನಾವಣೆ ಪ್ರಜಾಪ್ರಭುತ್ವ ಉಳಿಸಲು ಜನರಿಗಿರುವ ಕೊನೆಯ ಅವಕಾಶ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...